ವೀಡಿಯೊ..| ಲೋಕಸಭಾ ಚುನಾವಣೆ : ಮತಗಟ್ಟೆಯಲ್ಲಿ ಮತದಾರನ ಕೆನ್ನೆಗೆ ಬಾರಿಸಿದ ಶಾಸಕ ; ತಿರುಗಿ ಬಾರಿಸಿದ ಮತದಾರ…ಮುಂದಾಗಿದ್ದೇನೆಂದರೆ….

ಹೈದರಾಬಾದ್: ವಿಐಪಿ ಸಂಸ್ಕೃತಿಯ ಅಣಕು  ಪ್ರದರ್ಶನದಲ್ಲಿ ಇಂದು, ಸೋಮವಾರ ಬೆಳಗ್ಗೆ ಗುಂಟೂರು ಜಿಲ್ಲೆಯ ಮತಗಟ್ಟೆಯಲ್ಲಿ ಶಾಸಕರು ಸರತಿ ಸಾಲಿನಲ್ಲಿ ನಿಲ್ಲದೆ ಅದನ್ನು ಬ್ರೇಕ್‌ ಮಾಡಿ ಮುಂದೆ ಹೋಗಿದ್ದನ್ನು ಪ್ರಶ್ನಿಸಿದ ಮತದಾರರೊಬ್ಬರಿಗೆ ಆಂಧ್ರಪ್ರದೇಶದ ಶಾಸಕರೊಬ್ಬರು ಹಲ್ಲೆ ನಡೆಸಿದ ಘಟನೆ ವರದಿಯಾಗಿದೆ. ಇದೀಗ ವೈರಲ್ ಆಗಿರುವ ವಿಡಿಯೋದಲ್ಲಿ ತೆನಾಲಿಯ ವೈಎಸ್‌ಆರ್ ಕಾಂಗ್ರೆಸ್ ಪಕ್ಷದ ಶಾಸಕ ಎ. ಶಿವಕುಮಾರ ಅವರು … Continued

ಪತಿ ಸಾವಿನ ಸುದ್ದಿ ತಿಳಿದ ನಂತರವೂ ಮತಗಟ್ಟೆಗೆ ಬಂದು ಮತ ಚಲಾಯಿಸಿದ ಪತ್ನಿ

ಶಿವಮೊಗ್ಗ: ಪತಿ ನಿಧನರಾದ ಸುದ್ದಿ ತಿಳಿದ ನಂತರವೂ ಮಂಗಳವಾರ ಮತಕೇಂದ್ರಕ್ಕೆ ತೆರಳಿ ಪತ್ನಿ ಮತ ಚಲಾಯಿಸಿದ್ದಾರೆ ಎಂದು ವರದಿಯಾಗಿದೆ. ಆ ಮೂಲಕ ಪ್ರಜಾಪ್ರಭುತ್ವದ ಬಲಪಡಿಸುವ ಆಶಯದಲ್ಲಿ ಅವರು ಪಾಲ್ಗೊಂಡಿದ್ದಾರೆ. ತಾಲೂಕಿನ ಗುಡ್ಡೇಕೊಪ್ಪ ಗ್ರಾಪಂ ವ್ಯಾಪ್ತಿಯ ಆಡುಗೋಡು ಗ್ರಾಮದ ಕಲಾವತಿ ಎಂಬ ಮಹಿಳೆ ತನ್ನ ಗಂಡನ ಕಳೆದುಕೊಂಡ ದುಃಖದ ನಡುವೆಯೂ ಮತಚಲಾಯಿಸಿದ್ದಾರೆ. ನಾಲ್ಕೈದು ದಿನಗಳ ಅನಾರೋಗ್ಯದ ಹಿನ್ನೆಲೆಯಲ್ಲಿ … Continued

ಲೋಕಸಭೆ ಚುನಾವಣೆ ; ಮತ್ತೊಂದು ಕ್ಷೇತ್ರದಿಂದಲೂ ರಾಹುಲ್‌ ಗಾಂಧಿ ಸ್ಪರ್ಧೆ

ನವದೆಹಲಿ : ರಾಹುಲ್‌ ಗಾಂಧಿ ಅಮೇಥಿಯನ್ನು ಮರಳಿ ಗೆಲ್ಲಲು ಸಂಪೂರ್ಣ ಪ್ರಯತ್ನ ನಡೆಸಲಿದ್ದಾರೆ ಎಂದು ನಿರೀಕ್ಷಿಸಲಾಗಿತ್ತು. ಆದರೆ ಕಾಂಗ್ರೆಸ್‌ ಪಕ್ಷವು ರಾಹುಲ್ ಗಾಂಧಿ ಅವರನ್ನು ರಾಯ್ಬರೇಲಿಯಿಂದ ಕಣಕ್ಕಿಳಿಸುವುದಾಗಿ ಪ್ರಕಟಿಸಿದೆ. ಕಾಂಗ್ರೆಸ್ ಶುಕ್ರವಾರ ತನ್ನ ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆ ಮಾಡಿದ್ದು, ರಾಯ್ಬರೇಲಿಯಿಂದ ರಾಹುಲ್ ಗಾಂಧಿ ಮತ್ತು ಅಮೇಥಿಯಿಂದ ಕಿಶೋರಿ ಲಾಲ್ ಶರ್ಮಾ ಅವರನ್ನು ಕಣಕ್ಕಿಳಿಸಿದೆ. ಉತ್ತರ ಪ್ರದೇಶದ … Continued

ಐಟಿ ಅಧಿಕಾರಿಗಳ ದಾಳಿ, ಕಲಬುರಗಿ ರೈಲ್ವೆ ನಿಲ್ದಾಣದ ಬಳಿ ಕಾರಿನಲ್ಲಿದ್ದ 2 ಕೋಟಿ ರೂ. ವಶಕ್ಕೆ

ಕಲಬುರಗಿ: ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ಶನಿವಾರ ಕಲಬುರಗಿಯ ರೈಲು ನಿಲ್ದಾಣದ ಬಳಿ ದಾಳಿ ನಡೆಸಿದ ಐಟಿ ಅಧಕಾರಿಗಳು ಎರಡು ಕೋಟಿ ರೂಪಾಯಿ ನಗದು ಜಪ್ತಿ ಮಾಡಿದ್ದಾರೆ. ವ್ಯಕ್ತಿಯೊಬ್ಬರು ರೈಲಿನಿಂದ ಇಳಿದು ಕಾರನ್ನು ಏರಿ ತೆರಳುವ ವೇಳೆ ಐಟಿ ಅಧಿಕಾರಿಗಳು ದಾಳಿ ನಡೆಸಿದ್ದು, ಈ ವೇಳೆ ಎರಡು ಕೋಟಿ ರೂಪಾಯಿ ನಗದು ಪತ್ತೆಯಾಗಿದೆ ಎಂದು ವರದಿಯಾಗಿದೆ. ಸದ್ಯ … Continued

ಮುಂಬೈ ನಾರ್ತ್ ಸೆಂಟ್ರಲ್ ಕ್ಷೇತ್ರದಿಂದ ಮುಂಬೈ 26/11 ಭಯೋತ್ಪಾದಕ ದಾಳಿ ಪ್ರಕರಣದಲ್ಲಿ ವಾದಿಸಿದ್ದ ಉಜ್ವಲ್ ನಿಕಮ್ ಕಣಕ್ಕಿಳಿಸಿದ ಬಿಜೆಪಿ

ಮುಂಬೈ : ಭಾರತೀಯ ಜನತಾ ಪಕ್ಷ (ಬಿಜೆಪಿ) ಶನಿವಾರ (ಏಪ್ರಿಲ್ 27) ಲೋಕಸಭೆ ಚುನಾವಣೆಗೆ ಮುಂಬೈ ಉತ್ತರ ಸೆಂಟ್ರಲ್ ಕ್ಷೇತ್ರದಿಂದ ಹಾಲಿ ಸಂಸದೆ ಪೂನಂ ಮಹಾಜನ್ ಅವರನ್ನು ಕೈಬಿಟ್ಟು ಪ್ರಮುಖ ಕಾನೂನು ವಿದ್ವಾಂಸ ಉಜ್ವಲ್ ನಿಕಮ್ ಅವರನ್ನು ಕಣಕ್ಕಿಳಿಸಿದೆ. ವಕೀಲ ಉಜ್ವಲ್ ನಿಕಮ್ ಅವರು 26/11 ಮುಂಬೈ ಭಯೋತ್ಪಾದನಾ ದಾಳಿ ಪ್ರಕರಣದಲ್ಲಿ ಸರ್ಕಾರದ ಪರವಾಗಿ ವಾದಿಸಿದ್ದು … Continued

ಕಾಂಗ್ರೆಸ್ಸಿಗೆ ಮುಸ್ಲಿಂ ಮತಗಳು ಬೇಕು, ಆದರೆ ಟಿಕೆಟ್‌ ಕೊಡಲ್ಲ : ಕಾಂಗ್ರೆಸ್‌ ಬಗ್ಗೆ ನಸೀಂ ಖಾನ್ ತೀವ್ರ ಅಸಮಾಧಾನ, ಹುದ್ದೆಗೆ ರಾಜೀನಾಮೆ

ನವದೆಹಲಿ: ಮಹಾರಾಷ್ಟ್ರ ಕಾಂಗ್ರೆಸ್ ನಾಯಕ ಮುಹಮ್ಮದ್ ಆರಿಫ್ ನಸೀಮ್ ಖಾನ್ ಅವರು ಪಕ್ಷದ ಪ್ರಚಾರ ಸಮಿತಿಗೆ ರಾಜೀನಾಮೆ ನೀಡಿದ್ದು ಮಹಾರಾಷ್ಟ್ರದಲ್ಲಿ ಯಾವುದೇ ಮುಸ್ಲಿಂ ಅಭ್ಯರ್ಥಿಗೆ ಕಾಂಗ್ರೆಸ್‌ ಪಕ್ಷವು ಟಿಕೆಟ್‌ ನೀಡಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ವಿರೋಧ ಪಕ್ಷದ ಮಹಾ ವಿಕಾಸ್ ಅಘಾಡಿ (ಎಂವಿಎ) ಮೈತ್ರಿಕೂಟವು ಒಬ್ಬರೇ ಒಬ್ಬ ಮುಸ್ಲಿಂ ಅಭ್ಯರ್ಥಿಯನ್ನು ಕಣಕ್ಕಿಳಿಸದ ಕಾರಣ ಲೋಕಸಭೆ ಚುನಾವಣೆಗೆ … Continued

ರಾಯಬರೇಲಿಯಿಂದ ಅಕ್ಕನ ವಿರುದ್ಧ ಸ್ಪರ್ಧಿಸಲು ಬಿಜೆಪಿ ನೀಡಿದ್ದ ಆಫರ್‌ ತಿರಸ್ಕರಿಸಿದರೇ ವರುಣ್‌ ಗಾಂಧಿ..?

ನವದೆಹಲಿ: ಕಾಂಗ್ರೆಸ್ ನಾಯಕರಾದ ರಾಹುಲ್ ಮತ್ತು ಪ್ರಿಯಾಂಕಾ ಗಾಂಧಿ ಅವರ ಚಿಕ್ಕಪ್ಪನ ಮಗ ಹಾಗೂ ಬಿಜೆಪಿ ನಾಯಕ ವರುಣ್ ಗಾಂಧಿ ಅವರು ಉತ್ತರ ಪ್ರದೇಶದ ಗಾಂಧಿ ಮನೆತನದ ಭದ್ರಕೋಟೆ ರಾಯ್ ಬರೇಲಿ ಕ್ಷೇತ್ರದಿಂದ ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧಿಸುವಂತೆ ತಮ್ಮ ಪಕ್ಷ ನೀಡಿದ್ದ ಪ್ರಸ್ತಾಪವನ್ನು ತಿರಸ್ಕರಿಸಿದ್ದಾರೆ ಎಂದು ವರದಿಯಾಗಿದೆ. ಬಿಜೆಪಿಯು ಪ್ರಸ್ತಾವನೆ ಮುಂದಿಟ್ಟ ನಂತರ ಒಂದು ವಾರದವರೆಗೆ … Continued

ವೀಡಿಯೊ..| ರಾಷ್ಟ್ರದ ಸಂಪತ್ತಿನಲ್ಲಿ ಮುಸ್ಲಿಮರಿಗೆ ಮೊದಲ ಆದ್ಯತೆ ; ಮನಮೋಹನ ಸಿಂಗ್ ಹಳೆಯ ವೀಡಿಯೊ ಮೂಲಕ ಕಾಂಗ್ರೆಸ್ಸಿಗೆ ತಿರುಗೇಟು ನೀಡಿದ ಬಿಜೆಪಿ

ನವದೆಹಲಿ: ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಕಾಂಗ್ರೆಸ್‌ ಪಕ್ಷದ ಪ್ರಣಾಳಿಕೆಯ ಬಗ್ಗೆ ಚರ್ಚಿಸಲು ಸಮಯ ಕೋರಿ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಬಹಿರಂಗ ಪತ್ರ ಬರೆದ ಒಂದು ದಿನದ ನಂತರ, ಬಿಜೆಪಿ ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರ ಹಳೆಯ ವೀಡಿಯೊವನ್ನು ಹಂಚಿಕೊಳ್ಳುವ ಮೂಲಕ ಕಾಂಗ್ರೆಸ್ಸಿಗೆ ತಿರುಗೇಟು ನೀಡಿದೆ. ಬಿಜೆಪಿಯ ಪ್ರಕಾರ, ಏಪ್ರಿಲ್ 2009 … Continued

ಮತಗಟ್ಟೆ ಬಳಿ ಮಹಿಳೆಗೆ ಹೃದಯಾಘಾತ ; ತಕ್ಷಣವೇ ಸಿಪಿಆರ್‌ ಮಾಡಿ ಜೀವ ಉಳಿಸಿದ ಮತದಾನ ಮಾಡಲು ಬಂದಿದ್ದ ವೈದ್ಯ

ಬೆಂಗಳೂರು : ಕರ್ನಾಟಕದಲ್ಲಿ ಲೋಕಸಭೆ ಚುನಾವಣೆಗೆ ಮೊದಲ ಹಂತದ ಮತದಾನ ನಡೆಯುತ್ತಿದ್ದು, ಬೆಂಗಳೂರಿನ ಮತಗಟ್ಟೆಯಲ್ಲಿ ವೈದ್ಯರ ಸಮಯ ಪ್ರಜ್ಞೆಯಿಂದ ಮಹಿಳೆಯೊಬ್ಬರ ಜೀವ ಉಳಿದಿದೆ. ಬೆಂಗಳೂರಿನಲ್ಲಿ ಮತದಾನ ಮಾಡಲು ಬಂದಾಗ ಹೃದಯಾಘಾತದಿಂದ ಕುಸಿದುಬಿದ್ದ ಮಹಿಳೆಗೆ ತ್ವರಿತಗತಿಯಲ್ಲಿ ವೈದ್ಯರು ಸ್ಪಂದಿಸಿದ್ದರಿಂದ ಅಪಾಯದಿಂದ ಪಾರಾಗಿದ್ದಾರೆ. ಬೆಂಗಳೂರಿನ ಜೆ.ಪಿ.ನಗರ 8ನೇ ಹಂತದ ಜಂಬೂಸವಾರಿ ದಿನ್ನೆಯಲ್ಲಿ ಮತದಾನ ಮಾಡಲು ಮಹಿಳೆ ಆಗಮಿಸಿದ್ದರು. ವೈದ್ಯರು … Continued

ಲೋಕಸಭೆ ಚುನಾವಣೆ 2ನೇ ಹಂತದ ಮತದಾನ : ಶ್ರೀಮಂತ ಅಭ್ಯರ್ಥಿ ₹ 622 ಕೋಟಿ ಒಡೆಯ, ಅತ್ಯಂತ ಬಡ ಅಭ್ಯರ್ಥಿ ಬಳಿ ಇರುವುದು ಕೇವಲ…

ನವದೆಹಲಿ: ಲೋಕಸಭೆ ಚುನಾವಣೆಯ ಎರಡನೇ ಹಂತದ ಮತದಾನವು ಶುಕ್ರವಾರ 13 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿನ 88 ಸ್ಥಾನಗಳಲ್ಲಿ ನಡೆಯುತ್ತಿದೆ. ಕೇರಳದ ಎಲ್ಲಾ 20 ಲೋಕಸಭಾ ಸ್ಥಾನಗಳು, ಕರ್ನಾಟಕದ 28 ಸ್ಥಾನಗಳಲ್ಲಿ 14, ರಾಜಸ್ಥಾನದಲ್ಲಿ 13, ಮಹಾರಾಷ್ಟ್ರ ಮತ್ತು ಉತ್ತರ ಪ್ರದೇಶದಲ್ಲಿ ತಲಾ 8, ಮಧ್ಯಪ್ರದೇಶದ 6, ಅಸ್ಸಾಂ ಮತ್ತು ಬಿಹಾರದ ತಲಾ 5 ಕ್ಷೇತ್ರಗಳು, … Continued