ನಿಮ್ಮವನಾಗಿದ್ದೆ…ಯಾವಾಗಲೂ ನಿಮ್ಮವನಾಗಿಯೇ ಇರ್ತೇನೆ..: ಬಿಜೆಪಿ ಟಿಕೆಟ್ ನಿರಾಕರಣೆ ನಂತ್ರ ಪಿಲಿಭಿತ್‌ ಜನತೆಗೆ ʼಹೃದಯಸ್ಪರ್ಶಿʼ ಪತ್ರ ಬರೆದ ವರುಣ ಗಾಂಧಿ

ನವದೆಹಲಿ : ಮುಂಬರುವ ಲೋಕಸಭೆ ಚುನಾವಣೆಗೆ ಪಿಲಿಭಿತ್‌ನಿಂದ ಸ್ಪರ್ಧಿಸಲು ಬಿಜೆಪಿ ತಮಗೆ ಟಿಕೆಟ್ ನಿರಾಕರಿಸಿದ ಕೆಲವೇ ದಿನಗಳಲ್ಲಿ ಪಿಲಿಭಿತ್‌ ಹಾಲಿ ಸಂಸದ ವರುಣ ಗಾಂಧಿ ಅವರು ತಮ್ಮ ಕ್ಷೇತ್ರದ ಜನರಿಗೆ ಭಾವನಾತ್ಮಕ ಬರೆದಿದ್ದಾರೆ. “ನನ್ನ ಅಧಿಕಾರಾವಧಿ ಕೊನೆಗೊಳ್ಳುತ್ತಿದ್ದರೂ … ನನ್ನ ಸಂಬಂಧ (ನಿಮ್ಮೊಂದಿಗೆ) ನನ್ನ ಕೊನೆಯ ಉಸಿರು ಇರುವವರೆಗೂ ಕೊನೆಗೊಳ್ಳುವುದಿಲ್ಲ. ನಾನು ನಿಮ್ಮವನಾಗಿದ್ದೆ…ಯಾವಾಗಲೂ ನಿಮ್ಮವನಾಗಿಯೇ ಇರುತ್ತೇನೆ … Continued

ಲೋಕಸಭೆ ಚುನಾವಣೆಗೆ ಸ್ಪರ್ಧಿಸಲು ನನ್ನ ಬಳಿ ಹಣವಿಲ್ಲ : ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್

ನವದೆಹಲಿ : ಲೋಕಸಭೆ ಚುನಾವಣೆಗೆ ಸ್ಪರ್ಧಿಸಲು ಅಗತ್ಯವಿರುವ ‘ನಿಧಿ’ ನನ್ನ ಬಳಿ ಇಲ್ಲ ಎಂದು ಚುನಾವಣೆಯಲ್ಲಿ ಸ್ಪರ್ಧಿಸುವಂತೆ ಬಿಜೆಪಿ ನೀಡಿದ್ದ ಪ್ರಸ್ತಾಪವನ್ನು ನಿರಾಕರಿಸಿದ್ದೇನೆ ಎಂದು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಹೇಳಿದ್ದಾರೆ. ಬಿಜೆಪಿ ಅಧ್ಯಕ್ಷ ಜೆ.ಪಿ. ನಡ್ಡಾ ಅವರು ಆಂಧ್ರಪ್ರದೇಶ ಅಥವಾ ತಮಿಳುನಾಡಿನಿಂದ ಸ್ಪರ್ಧಿಸುವಂತೆ ನನಗೆ ಆಯ್ಕೆ ನೀಡಿದ್ದರು ಎಂದು ಅವರು ಹೇಳಿದರು. “ಒಂದು … Continued

ಲೋಕಸಭೆ ಚುನಾವಣೆ 2024 : 6ನೇ ಪಟ್ಟಿ ಬಿಡುಗಡೆ ಮಾಡಿದ ಕಾಂಗ್ರೆಸ್

ನವದೆಹಲಿ : ಲೋಕಸಭೆ ಚುನಾವಣೆಗೆ ಅಭ್ಯರ್ಥಿಗಳ ಆರನೇ ಪಟ್ಟಿಯನ್ನು ಕಾಂಗ್ರೆಸ್ ಸೋಮವಾರ (ಮಾರ್ಚ್ 25) ಬಿಡುಗಡೆ ಮಾಡಿದೆ. ಪಕ್ಷವು ರಾಜಸ್ಥಾನದ ನಾಲ್ವರು ಮತ್ತು ತಮಿಳುನಾಡಿಗೆ ಒಬ್ಬ ಅಭ್ಯರ್ಥಿಯ ಹೆಸರನ್ನು ಪ್ರಕಟಿಸಿದೆ. ರಾಜಸ್ಥಾನದ ಅಜ್ಮೀರ್‌ನಿಂದ ರಾಮಚಂದ್ರ ಚೌಧರಿ, ರಾಜಸಮಂದ್‌ನಿಂದ ಸುದರ್ಶನ ರಾವತ್ ಮತ್ತು ಭಿಲ್ವಾರದಿಂದ ಡಾ.ದಾಮೋದರ ಗುರ್ಜರ್ ಅವರನ್ನು ಪಕ್ಷದ ಅಭ್ಯರ್ಥಿಗಳಾಗಿದ್ದಾರೆ. ಇತ್ತೀಚೆಗೆ ಕಾಂಗ್ರೆಸ್‌ಗೆ ಸೇರ್ಪಡೆಗೊಂಡ ಬಿಜೆಪಿಯ … Continued

ಲೋಕಸಭೆ ಚುನಾವಣೆ 2024 : 57 ಅಭ್ಯರ್ಥಿಗಳ 3ನೇ ಪಟ್ಟಿ ಬಿಡುಗಡೆ ಮಾಡಿದ ಕಾಂಗ್ರೆಸ್ ; ಸಂಪೂರ್ಣ ಪಟ್ಟಿ ಇಲ್ಲಿದೆ…

ನವದೆಹಲಿ : ಮುಂಬರುವ ಲೋಕಸಭೆ ಚುನಾವಣೆಗೆ ಕಾಂಗ್ರೆಸ್‌ 57 ಅಭ್ಯರ್ಥಿಗಳ ತನ್ನ ಮೂರನೇ ಪಟ್ಟಿಯನ್ನು ಬಿಡುಗಡೆ ಮಾಡಿದೆ. 57 ಅಭ್ಯರ್ಥಿಗಳ ಪಟ್ಟಿಯು ಕರ್ನಾಟಕ, ತೆಲಂಗಾಣ, ಪಶ್ಚಿಮ ಬಂಗಾಳ, ರಾಜಸ್ಥಾನ, ಮಹಾರಾಷ್ಟ್ರ, ಅರುಣಾಚಲ ಪ್ರದೇಶ ಮತ್ತು ಗುಜರಾತ್‌ನ ಕ್ಷೇತ್ರಗಳನ್ನು ಒಳಗೊಂಡಿದೆ. ಪುದುಚೇರಿಯಲ್ಲಿ ಹಾಲಿ ಸಂಸದ ವಿ ವೈತಿಲಿಂಗಂ ಅವರನ್ನು ಕಣಕ್ಕಿಳಿಸಲು ಕಾಂಗ್ರೆಸ್‌ ನಿರ್ಧರಿಸಿದೆ. ಪಶ್ಚಿಮ ಬಂಗಾಳದ ಬರ್ಹಮ್‌ಪುರ … Continued

ಲೋಕಸಭೆ ಚುನಾವಣೆ ಮೊದಲ ಹಂತದ ನಾಮಪತ್ರ ಸಲ್ಲಿಕೆ ಪ್ರಕ್ರಿಯೆ ಆರಂಭ

ನವದೆಹಲಿ : ಏಪ್ರಿಲ್ 19 ರಂದು ಲೋಕಸಭೆ ಚುನಾವಣೆಯ ಮೊದಲ ಹಂತದಲ್ಲಿ ಮತದಾನ ನಡೆಯಲಿರುವ 21 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ 102 ಲೋಕಸಭಾ ಕ್ಷೇತ್ರಗಳಿಗೆ ನಾಮಪತ್ರಿಕೆ ಸಲ್ಲಿಕೆ ಪ್ರಕ್ರಿಯೆ ಆರಂಭವಾಗಿದ್ದು, ಬುಧವಾರ ಅಧಿಸೂಚನೆ ಹೊರಡಿಸಲಾಗಿದೆ. ಅರುಣಾಚಲ ಪ್ರದೇಶ, ಅಸ್ಸಾಂ, ಬಿಹಾರ, ಛತ್ತೀಸ್‌ಗಢ, ಮಧ್ಯಪ್ರದೇಶ, ಮಹಾರಾಷ್ಟ್ರ, ರಾಜಸ್ಥಾನ, ತಮಿಳುನಾಡು, ಉತ್ತರ ಪ್ರದೇಶ, ಪಶ್ಚಿಮ ಬಂಗಾಳ, ಜಮ್ಮು … Continued

ವೀಡಿಯೊ…| ಚುನಾವಣಾ ರ‍್ಯಾಲಿಯಲ್ಲಿ ಬಿಜೆಪಿ ನಾಯಕನ ನೆನೆದು ಕಣ್ಣೀರಿಟ್ಟ ಪ್ರಧಾನಿ ಮೋದಿ ; ಭಾಷಣ ಕೆಲಕಾಲ ಸ್ಥಗಿತ

ಸೇಲಂ: ಪ್ರಧಾನಿ ನರೇಂದ್ರ ಮೋದಿ ಅವರು ಮಂಗಳವಾರ ತಮಿಳುನಾಡಿನ ಸೇಲಂನಲ್ಲಿ ರ್ಯಾಲಿಯನ್ನುದ್ದೇಶಿಸಿ ಮಾತನಾಡುತ್ತಿದ್ದಾಗ 2013 ರಲ್ಲಿ ತಮಿಳುನಾಡಿನ ಸೇಲಂನಲ್ಲಿ ಹತ್ಯೆಗೀಡಾದ ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ‘ಆಡಿಟರ್‌’ ವಿ ರಮೇಶ ಅವರನ್ನು ನೆನಪಿಸಿಕೊಂಡು ಕಣ್ಣೀರು ಹಾಕಿದ ಪ್ರಸಂಗ ನಡೆಯಿತು. “ಇಂದು, ನಾನು ಆಡಿಟರ್ ರಮೇಶ ಅವರನ್ನು ನೆನಪಿಸಿಕೊಳ್ಳುತ್ತೇನೆ” ಎಂದು ಹೇಳಿದ ಪ್ರಧಾನಿ ಮೋದಿ ಭಾವುಕರಾಗಿ ಒಂದು … Continued

ಲೋಕಸಭೆ ಚುನಾವಣೆ: ತಮಿಳುನಾಡಿನಲ್ಲಿ ಎನ್‌ಡಿಎ ಸೀಟು ಹಂಚಿಕೆ ಅಂತಿಮ ; ಪಿಎಂಕೆಗೆ 10 ಸ್ಥಾನಗಳು

ಚೆನ್ನೈ: ಮುಂಬರುವ ಲೋಕಸಭೆ ಚುನಾವಣೆಗೆ ತಮಿಳುನಾಡಿನ ಪಟ್ಟಾಲಿ ಮಕ್ಕಳ್ ಕಚ್ಚಿ (ಪಿಎಂಕೆ) ಪಕ್ಷದ ಜೊತೆ ಬಿಜೆಪಿ ಮಂಗಳವಾರ ತನ್ನ ಚುನಾವಣಾ ಪೂರ್ವ ಮೈತ್ರಿಯನ್ನು ಅಂತಿಮಗೊಳಿಸಿದೆ. ಮೈತ್ರಿಯ ಸೀಟು ಹಂಚಿಕೆಯ ಸೂತ್ರದ ಪ್ರಕಾರ, ಪಿಎಂಕೆಗೆ ತಮಿಳುನಾಡಿನಲ್ಲಿ 10 ಲೋಕಸಭಾ ಸ್ಥಾನಗಳನ್ನು ನೀಡಲಾಗಿದೆ.. ಪಿಎಂಕೆ ಪಕ್ಷವು ಬಿಜೆಪಿ ನೇತೃತ್ವದ ರಾಷ್ಟ್ರೀಯ ಪ್ರಜಾಸತ್ತಾತ್ಮಕ ಮೈತ್ರಿಕೂಟ(ಎನ್‌ಡಿಎ)ಕ್ಕೆ ಸೇರ್ಪಡೆಗೊಳ್ಳುವ ಮತ್ತು ರಾಜ್ಯದಲ್ಲಿ ಸಂಸತ್ತಿನ … Continued

ತೆಲಂಗಾಣ ರಾಜ್ಯಪಾಲರ ಹುದ್ದೆಗೆ ತಮಿಳಿಸೈ ಸೌಂದರರಾಜನ್ ರಾಜೀನಾಮೆ

ಹೈದರಾಬಾದ್‌ : ಲೋಕಸಭೆ ಚುನಾವಣೆಗೆ ಮುನ್ನ ತೆಲಂಗಾಣ ರಾಜ್ಯಪಾಲ ಮತ್ತು ಪುದುಚೇರಿ ಲೆಫ್ಟಿನೆಂಟ್ ಗವರ್ನರ್ ಹುದ್ದೆಗೆ ತಮಿಳಿಸೈ ಸೌಂದರರಾಜನ್ ಸೋಮವಾರ ರಾಜೀನಾಮೆ ಸಲ್ಲಿಸಿದ್ದಾರೆ. ಈ ಬೆಳವಣಿಗೆಯನ್ನು ಪುದುಚೇರಿ ರಾಜಭವನ ಖಚಿತಪಡಿಸಿದೆ. ವರದಿಗಳ ಪ್ರಕಾರ ಅವರು ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧಿಸುವ ಸಾಧ್ಯತೆಯಿದೆ. “ತೆಲಂಗಾಣದ ಗೌರವಾನ್ವಿತ ರಾಜ್ಯಪಾಲರು ಮತ್ತು ಪುದುಚೇರಿಯ ಲೆಫ್ಟಿನೆಂಟ್ ಗವರ್ನರ್ ಡಾ ತಮಿಳಿಸೈ ಸೌಂದರರಾಜನ್ … Continued

ಲೋಕಸಭಾ ಚುನಾವಣೆ ಘೋಷಣೆ : 7 ಹಂತಗಳಲ್ಲಿ ಮತದಾನ ; ಜೂನ್‌ 4ಕ್ಕೆ ಫಲಿತಾಂಶ

ನವದೆಹಲಿ: ಲೋಕಸಭೆಗೆ ಚುನಾವಣೆಗೆ ದಿನಾಂಕ ಘೋಷಣೆಯಾಗಿದೆ. ದೇಶದಾದ್ಯಂತ 543 ಲೋಕಸಭಾ ಕ್ಷೇತ್ರಗಳಲ್ಲಿ ಏಪ್ರಿಲ್‌ 19ರಿಂದ ಜೂನ್‌ 1ರವರೆಗೆ 7 ಹಂತಗಳಲ್ಲಿ ಮತದಾನ ನಡೆಯಲಿದೆ. ಜೂನ್‌ 4ರಂದು ಫಲಿತಾಂಶ ಪ್ರಕಟವಾಗಲಿದೆ. ಕರ್ನಾಟಕದಲ್ಲಿ ಎರಡು ಹಂತದಲ್ಲಿ ಮತದಾನ ನಡೆಯಲಿದೆ. ದೆ. ಚುನಾವಣಾ ಮಾದರಿ ನೀತಿ ಸಂಹಿತೆ (Model Code of Conduct) ಕೂಡ ಇಂದಿನಿಂದಲೇ ಜಾರಿಗೆ ಬರಲಿದೆ. ದೇಶದಲ್ಲಿ … Continued

ಲೋಕಸಭೆ ಚುನಾವಣೆ: ಬಿಡುಗಡೆಯಾದ ಬಿಜೆಪಿ 267 ಬಿಜೆಪಿಯ ಅಭ್ಯರ್ಥಿಗಳ ಪಟ್ಟಿಯಲ್ಲಿ 24%ರಷ್ಟು ಹಾಲಿ ಸಂಸದರಿಗೆ ಕೈತಪ್ಪಿದ ಟಿಕೆಟ್‌…!

ನವದೆಹಲಿ: ಬಿಜೆಪಿ ಇದುವರೆಗೆ ಬಿಡುಗಡೆ ಮಾಡಿರುವ ಎರಡು ಪಟ್ಟಿಗಳಲ್ಲಿ ಲೋಕಸಭೆ ಚುನಾವಣೆಗೆ ಪಕ್ಷವು 267 ಅಭ್ಯರ್ಥಿಗಳನ್ನು ಹೆಸರಿಸಿದೆ. ಅದರಲ್ಲಿ ಸುಮಾರು 24%ರಷ್ಟು ಹಾಲಿ ಸಂಸದರಿಗೆ ಟಿಕೆಟ್‌ ನೀಡಿಲ್ಲ ಎಂದು ವರದಿಯೊಂದು ಹೇಳಿದೆ. ಅವರ ಕ್ಷೇತ್ರದಲ್ಲಿ ಸಂಭಾವ್ಯ ವಿರೋಧಿ ಅಲೆಯನ್ನು ಗಮನದಲ್ಲಿಟ್ಟುಕೊಂಡು ಕಾರ್ಯತಂತ್ರವನ್ನು ವಿನ್ಯಾಸಗೊಳಿಸಲಾಗಿದೆ ಮತ್ತು ಪಕ್ಷವು ತಳಮಟ್ಟದಿಂದ ಪಡೆದ ಪ್ರತಿಕ್ರಿಯೆಯನ್ನು ಆಧರಿಸಿ ನಿರ್ಧಾರಗಳನ್ನು ತೆಗೆದುಕೊಳ್ಳಲಾಗಿದೆ ಎಂದು … Continued