ಹೊರಬಿತ್ತು ಮತ್ತೊಂದು ಸಮೀಕ್ಷೆ : ಕರ್ನಾಟಕದಲ್ಲಿ ಬಿಜೆಪಿ-ಜೆಡಿಎಸ್‌ ಮೈತ್ರಿಗೆ ಹೆಚ್ಚಿನ ಸ್ಥಾನ-ಎಬಿಪಿ ನ್ಯೂಸ್-ಸಿ ವೋಟರ್ ಸಮೀಕ್ಷೆ ಭವಿಷ್ಯ

ನವದೆಹಲಿ :  ಲೋಕಸಭಾ ಚುನಾವಣೆಗಳು ಹತ್ತಿರವಾಗುತ್ತಿದ್ದು, ಯಾವುದೇ ಸಮಯದಲ್ಲಿಯೂ ಚುನಾವಣೆ ಘೋಷಣೆಯಾಗಬಹುದಾಗಿದೆ. ರಾಜಕೀಯ ಪಕ್ಷಗಳು ತಮ್ಮ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡುತ್ತಿವೆ. ಲೋಕಸಭೆ ಚುನಾವಣೆಗೂ ಮುನ್ನ ಎಬಿಪಿ ನ್ಯೂಸ್-ಸಿ ವೋಟರ್ಸ್ ಚುನಾವಣಾ ಪೂರ್ವ ಒಪಿನಿಯನ್‌ ಪೋಲ್‌ ನಡೆಸಿದ್ದು, ಕರ್ನಾಟಕದಲ್ಲಿ ಬಿಜೆಪಿ ನೇತೃತ್ವದ ಎನ್‌ಡಿಎ ಭರ್ಜರಿ ಜಯ ಸಾಧಿಸಲಿದೆ ಎಂಬುದು ಸಮೀಕ್ಷೆಯಲ್ಲಿ ಕಂಡುಬಂದಿದೆ. ಎಬಿಪಿ ನ್ಯೂಸ್-ಸಿವೋಟರ್ ಒಪಿನಿಯನ್ … Continued

ಲೋಕಸಭೆ ಚುನಾವಣೆ 2024 : ಬಿಜೆಪಿಯಿಂದ 72 ಅಭ್ಯರ್ಥಿಗಳ 2ನೇ ಪಟ್ಟಿ ಬಿಡುಗಡೆ ; ಸಂಪೂರ್ಣ ಪಟ್ಟಿ ಇಲ್ಲಿದೆ….

ನವದೆಹಲಿ: ಭಾರತೀಯ ಜನತಾ ಪಕ್ಷ (ಬಿಜೆಪಿ) ಲೋಕಸಭೆ ಚುನಾವಣೆಗೆ ತನ್ನ 72 ಅಭ್ಯರ್ಥಿಗಳ ಎರಡನೇ ಪಟ್ಟಿಯನ್ನು ಬುಧವಾರ ಬಿಡುಗಡೆ ಮಾಡಿದೆ. ಬಿಜೆಪಿ ತನ್ನ ಎರಡನೇ ಪಟ್ಟಿಯಲ್ಲಿ ಮಹಾರಾಷ್ಟ್ರ, ಕರ್ನಾಟಕ, ಉತ್ತರಾಖಂಡ, ಗುಜರಾತ್, ಹಿಮಾಚಲ ಪ್ರದೇಶ, ತ್ರಿಪುರ, ತೆಲಂಗಾಣ, ದೆಹಲಿ, ಹರಿಯಾಣ ಮತ್ತು ಮಧ್ಯಪ್ರದೇಶದಿಂದ ಅಭ್ಯರ್ಥಿಗಳನ್ನು ಘೋಷಿಸಿದೆ. ಬಿಜೆಪಿಯು ಪಕ್ಷವು ನಾಗ್ಪುರದಿಂದ ಕೇಂದ್ರ ಸಚಿವರಾದ ನಿತಿನ್ ಗಡ್ಕರಿ, … Continued

ಲೋಕಸಭೆ ಚುನಾವಣೆಗೂ ಮುನ್ನ ಕಾಂಗ್ರೆಸ್ಸಿಗೆ ಮತ್ತೊಂದು ಹಿನ್ನಡೆ : ಮಹಾರಾಷ್ಟ್ರದ ಹಿರಿಯ ನಾಯಕ ಬಿಜೆಪಿಗೆ ಸೇರ್ಪಡೆ

ಮುಂಬೈ: ಮುಂಬರುವ ಲೋಕಸಭೆ ಚುನಾವಣೆಗೆ ಮುನ್ನ ಕಾಂಗ್ರೆಸ್ಸಿಗೆ ಮಹಾರಾಷ್ಟ್ರದಲ್ಲಿ ಮತ್ತೊಂದು ಹಿನ್ನಡೆಯಾಗಿದ್ದು, ಪಕ್ಷದ ಹಿರಿಯ ನಾಯಕ ಹಾಗೂ ಮಾಜಿ ಸಚಿವ ಪದ್ಮಾಕರ ವಾಲ್ವಿ ಬುಧವಾರ ಭಾರತೀಯ ಜನತಾ ಪಕ್ಷಕ್ಕೆ (ಬಿಜೆಪಿ) ಸೇರ್ಪಡೆಗೊಂಡಿದ್ದಾರೆ. ಮುಂಬೈನಲ್ಲಿ ಮಹಾರಾಷ್ಟ್ರ ಬಿಜೆಪಿ ಅಧ್ಯಕ್ಷ ಅಧ್ಯಕ್ಷ ಚಂದ್ರಶೇಖರ ಬವಾಂಕುಲೆ ಮತ್ತು ಪಕ್ಷದ ಮುಖಂಡ ಅಶೋಕ ಚವ್ಹಾಣ ಅವರ ಸಮ್ಮುಖದಲ್ಲಿ ಅವರು ಬಿಜೆಪಿಗೆ ಸೇರ್ಪಡೆಯಾಗಿದ್ದಾರೆ. … Continued

ಲೋಕಸಭೆ ಚುನಾವಣೆ: ಕರ್ನಾಟಕದ ಅಭ್ಯರ್ಥಿಗಳ ಪಟ್ಟಿ ಅಂತಿಮಗೊಳಿಸಲು ಬಿಜೆಪಿಯಲ್ಲಿ ಕಸರತ್ತು

ನವದೆಹಲಿ: ಮುಂಬರುವ ಲೋಕಸಭೆ ಚುನಾವಣೆಗೆ ಅಭ್ಯರ್ಥಿಗಳ ಎರಡನೇ ಪಟ್ಟಿಯನ್ನು ನಿರ್ಧರಿಸಲು ಬಿಜೆಪಿಯ ಕೇಂದ್ರ ಚುನಾವಣಾ ಸಮಿತಿ (ಸಿಇಸಿ) ಸೋಮವಾರ ತನ್ನ ಎರಡನೇ ಸಭೆ ನಡೆಸಿತು. ಬಿಜೆಪಿ ಅಧ್ಯಕ್ಷ ಜೆ.ಪಿ.ನಡ್ಡಾ ಅಧ್ಯಕ್ಷತೆಯಲ್ಲಿ ನಡೆದ ಕೇಂದ್ರ ಚುನಾವಣಾ ಸಮಿತಿ ಸಭೆಯಲ್ಲಿ ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಗೃಹ ಸಚಿವ ಅಮಿತ್ ಶಾ ಮತ್ತಿತರರು ಭಾಗಿಯಾದರು.ಪಕ್ಷದ ಎರಡನೇ ಪಟ್ಟಿಯನ್ನು ಮಂಗಳವಾರ … Continued

ತಮಿಳುನಾಡು: ಬಿಜೆಪಿ ಸೇರಿದ ನಟ ರಜನಿಕಾಂತ ಅಭಿಮಾನಿಗಳು

ಚೆನ್ನೈ: ಲೋಕಸಭಾ ಚುನಾವಣಾ ಚುನಾವಣೆ ಸಮೀಪಿಸುತ್ತಿದ್ದಂತೆಯೇ ತಮಿಳುನಾಡಲ್ಲಿ ಬಿಜೆಪಿ ಪಕ್ಷವನ್ನು ಬಲವರ್ಧನೆ ಮಾಡುತ್ತಿದೆ. ಮಹತ್ವದ ಬೆಳವಣಿಗೆಯೊಂದರಲ್ಲಿ ಸೂಪರ್ ಸ್ಟಾರ್ ರಜನಿಕಾಂತ ಅಭಿಮಾನಿ ಸಂಘದ ಸದಸ್ಯರು ಬಿಜೆಪಿ(BJP)ಗೆ ಸೇರ್ಪಡೆಯಾಗಿದ್ದಾರೆ. ಚೆನ್ನೈನಲ್ಲಿ ಸೋಮವಾರ ಅಣ್ಣಾಮಲೈ ನೇತೃತ್ವದಲ್ಲಿ ರಜನಿ ಅಭಿಮಾನಿ ಸಂಘದ (Rajini fans club) ಸದಸ್ಯರು ಬಿಜೆಪಿ ತಮಿಳುನಾಡು ರಾಜ್ಯ ಘಟಕದ ಅಧ್ಯಕ್ಷ ಕೆ. ಅಣ್ಣಾಮಲೈ ಅವರ ಸಮ್ಮುಖದಲ್ಲಿ … Continued

ಬಿಜೆಪಿಗೆ ರಾಜೀನಾಮೆ ನೀಡಿ ಕಾಂಗ್ರೆಸ್ಸಿಗೆ ಸೇರ್ಪಡೆಯಾದ ರಾಜಸ್ಥಾನ ಸಂಸದ

ನವದೆಹಲಿ: ಮುಂಬರುವ ಲೋಕಸಭೆ ಚುನಾವಣೆಗೆ ಟಿಕೆಟ್ ನಿರಾಕರಿಸಿದ ನಂತರ, ರಾಜಸ್ಥಾನದಿಂದ ಎರಡು ಬಾರಿಗೆ ಸಂಸದರಾಗಿ ಆಯ್ಕೆಯಾಗಿರುವ ಚುರು ಸಂಸದ ರಾಹುಲ್ ಕಸ್ವಾನ್ ಸೋಮವಾರ (ಮಾರ್ಚ್ 11) ಬಿಜೆಪಿ ಪ್ರಾಥಮಿಕ ಸದಸ್ಯತ್ವ ಮತ್ತು ಸಂಸದ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ನಂತರ ಅವರು ನವದೆಹಲಿಯಲ್ಲಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ಸಮ್ಮುಖದಲ್ಲಿ ಕಾಂಗ್ರೆಸ್ ಸೇರಿದ್ದಾರೆ. ಬಿಜೆಪಿಯು ರಾಹುಲ್‌ ಕಸ್ವಾನ್ … Continued

ಲೋಕಸಭೆ ಚುನಾವಣೆ : ಈ ಕ್ಷೇತ್ರದಲ್ಲಿ ವಿಚ್ಛೇದಿತ ದಂಪತಿ ಮಧ್ಯೆಯೇ ನಡೆಯಲಿದೆ ಸ್ಪರ್ಧೆ…!

ಕೋಲ್ಕತ್ತಾ: ವಿಚ್ಛೇದಿತ ದಂಪತಿ ಪಶ್ಚಿಮ ಬಂಗಾಳದಲ್ಲಿ ಲೋಕಸಭೆ ಚುನಾವಣೆಯಲ್ಲಿ ಪರಸ್ಪರ ಒಬ್ಬರ ವಿರುದ್ಧ ಮತ್ತೊಬ್ಬರು ಕಣಕ್ಕೆ ಇಳಿಯಲಿದ್ದಾರೆ…! ಆಡಳಿತಾರೂಢ ತೃಣಮೂಲ ಕಾಂಗ್ರೆಸ್ ಭಾನುವಾರ ತನ್ನ ಅಭ್ಯರ್ಥಿಗಳ ಪಟ್ಟಿ ಪ್ರಕಟಿಸುತ್ತಿದ್ದಂತೆ ಪಶ್ಚಿಮ ಬಂಗಾಳದಲ್ಲಿ ಇದು ಚರ್ಚೆಯ ವಿಷಯವಾಗಿದೆ. ಸುಜಾತಾ ಮೊಂಡಲ್ ಅವರು ತಮ್ಮ ಮಾಜಿ ಪತಿ ಸೌಮಿತ್ರಾ ಖಾನ್ ವಿರುದ್ಧ ಬಂಡಾಲ್‌ನ ಬಂಕುರಾ ಜಿಲ್ಲೆಯ ಬಿಷ್ಣುಪುರ ಕ್ಷೇತ್ರದಿಂದ … Continued

ಬೈಕಿನಲ್ಲಿ ಬಂದ ದುಷ್ಕರ್ಮಿಗಳಿಂದ ಬಿಜೆಪಿ ನಾಯಕನ ಗುಂಡಿಕ್ಕಿ ಹತ್ಯೆ

ಲಕ್ನೋ : ಉತ್ತರ ಪ್ರದೇಶದ ಜೌನ್‌ಪುರದ ಬೋಧಾಪುರ ಗ್ರಾಮದಲ್ಲಿ ಗುರುವಾರ ಬೈಕ್‌ನಲ್ಲಿ ಬಂದ ಮೂವರು ದುಷ್ಕರ್ಮಿಗಳು ಭಾರತೀಯ ಜನತಾ ಪಕ್ಷದ ನಾಯಕ ಪ್ರಮೋದ ಯಾದವ್ ಅವರನ್ನು ಗುಂಡಿಕ್ಕಿ ಕೊಂದಿದ್ದಾರೆ. ಗುಂಡೇಟಿನಿಂದ ಗಂಭೀರವಾಗಿ ಗಾಯಗೊಂಡ ಬಿಜೆಪಿ ನಾಯಕನನ್ನು ಗಂಭೀರ ಸ್ಥಿತಿಯಲ್ಲಿ ಆಸ್ಪತ್ರೆಗೆ ಕೊಂಡೊಯ್ಯಲಾಯಿತು ಆದರೆ ಅವರು ಮಾರ್ಗದ ಮಧ್ಯೆಯೇ ಮೃತಪಟ್ಟಿದ್ದಾರೆ ವೈದ್ಯರು ಪ್ರಕಟಿಸಿದರು. ಪ್ರಮೋದಯಾದವ್ ಅವರು 2012 … Continued

ಲೋಕಸಭೆ ಚುನಾವಣೆ : ತಮಿಳುನಾಡಿನಲ್ಲಿ ನಟ ಶರತ್ ಕುಮಾರ ನೇತೃತ್ವದ ಎಐಎಸ್‌ಎಂಕೆ-ಬಿಜೆಪಿ ಮೈತ್ರಿ

ಚೆನ್ನೈ : ಖ್ಯಾತ ನಟ ಆರ್ ಶರತ್ ಕುಮಾರ ನೇತೃತ್ವದ ಅಖಿಲ ಭಾರತ ಸಮತುವ ಮಕ್ಕಳ್ ಕಚ್ಚಿ (ಎಐಎಸ್‌ಎಂಕೆ) ಪಕ್ಷವು ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಭಾರತೀಯ ಜನತಾ ಪಕ್ಷ (ಬಿಜೆಪಿ) ನೇತೃತ್ವದ ರಾಷ್ಟ್ರೀಯ ಪ್ರಜಾಸತ್ತಾತ್ಮಕ ಒಕ್ಕೂಟ (ಎನ್‌ಡಿಎ) ಗೆ ಬೆಂಬಲ ನೀಡುವುದಾಗಿ ಘೋಷಿಸಿದೆ. ಬಿಜೆಪಿಯೊಂದಿಗೆ ಮೈತ್ರಿ ಮಾತುಕತೆಯನ್ನು ಪೂರ್ಣಗೊಳಿಸಲಾಗಿದೆ ಮತ್ತು ತಮಿಳುನಾಡಿನಲ್ಲಿ ಬಿಜೆಪಿಯೊಂದಿಗೆ ‘ಜಂಟಿಯಾಗಿ’ ಕೆಲಸ … Continued

ಹೋಗಿ…ಗೆದ್ದು ಬನ್ನಿ…ಶೀಘ್ರದಲ್ಲೇ ನಿಮ್ಮನ್ನು ನೋಡುತ್ತೇನೆ…: ಲೋಕಸಭೆ ಚುನಾವಣೆಗೂ ಮುನ್ನ ಸಚಿವರಿಗೆ ಸಂದೇಶ ನೀಡಿದ ಪ್ರಧಾನಿ ಮೋದಿ

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ತಮ್ಮ ಸಚಿವ ಸಂಪುಟದೊಂದಿಗೆ ನಡೆದ ಒಂದು ದಿನದ ಸಭೆಯ ನೇತೃತ್ವ ವಹಿಸಿದ್ದರು. ಈ ಸಭೆಯಲ್ಲಿ ಅವರು, ಮುಂಬರುವ ಲೋಕಸಭೆ ಚುನಾವಣೆ ಘೋಷಣೆಗೆ ಮುಂಚಿತವಾಗಿಯೇ ತಮ್ಮ ಸಚಿವರಿಗೆ “ಹೋಗಿ, ಗೆದ್ದುಬನ್ನಿ, ನಾನು ಶೀಘ್ರದಲ್ಲೇ ನಿಮ್ಮನ್ನು ನೋಡುತ್ತೇನೆ” ಎಂದು ಸಂದೇಶ ನೀಡಿದ್ದಾರೆ. ನಿರ್ಣಾಯಕ ಸಭೆಯಲ್ಲಿ ವಿಷನ್ ಡಾಕ್ಯುಮೆಂಟ್ ‘ವಿಕಸಿತ ಭಾರತ 2047’ … Continued