ಡಿವೈಡರ್​ಗೆ ಡಿಕ್ಕಿಯಾಗಿ ಕಾರಿಗೆ ಬೆಂಕಿ ; ಲೋಕಾಯುಕ್ತ ಇನ್ಸ್​ಪೆಕ್ಟರ್ ಸಾವು

ಧಾರವಾಡ:  ಜಿಲ್ಲೆಯ ಅಣ್ಣಿಗೇರಿ ಪಟ್ಟಣದ ಹೊರವಲಯದಲ್ಲಿ ಕಾರು ಡಿವೈಡರ್‌ಗೆ ಡಿಕ್ಕಿ ಹೊಡೆದು ಬೆಂಕಿ ಹೊತ್ತಿಕೊಂಡ ಪರಿಣಾಮ ಲೋಕಾಯುಕ್ತ ಪೊಲೀಸ್ ಇನ್ಸ್‌ಪೆಕ್ಟರ್ ಜೀವಂತವಾಗಿ ದಹನವಾದ ಘಟನೆ ನಡೆದಿದೆ ಎಂದು ವರದಿಯಾಗಿದೆ. ಮೃತರನ್ನು  ಪಂಚಾಕ್ಷರಿ ಸಾಲಿಮಠ ಎಂದು ಗುರುತಿಸಲಾಗಿದ್ದು, ಅವರು ಹಾವೇರಿಯಲ್ಲಿನ ಲೋಕಾಯುಕ್ತ ಕಚೇರಿಯಲ್ಲಿ ಲೋಕಾಯುಕ್ತ ಇನ್ಸ್​​ಪೆಕ್ಟರ್ ಆಗಿ ಸೇವೆ ಸಲ್ಲಿಸುತ್ತಿದ್ದರು. ಅವರು ಶುಕ್ರವಾರ ರಾತ್ರಿ ಐ20 ಕಾರಿನಲ್ಲಿ … Continued

ಮುಡಾ ಪ್ರಕರಣ: ತನಿಖೆ ಮುಂದುವರಿಸಲು ಲೋಕಾಯುಕ್ತ ಪೊಲೀಸರಿಗೆ ವಿಶೇಷ ನ್ಯಾಯಾಲಯ ಅನುಮತಿ

ಬೆಂಗಳೂರು : ಮುಡಾ ಪ್ರಕರಣದಲ್ಲಿ ಮುಂದುವರಿದ ತನಿಖೆ ನಡೆಸಿ, ನಿರ್ಣಾಯಕ ವರದಿ ಸಲ್ಲಿಸಲು ಮೇ 7ಕ್ಕೆ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯವು ಲೋಕಾಯುಕ್ತ ಪೊಲೀಸರಿಗೆ ಗಡುವು ನೀಡಿದೆ. ದೂರುದಾರ ಸ್ನೇಹಮಯಿ ಕೃಷ್ಣ ಸಲ್ಲಿಸಿದ್ದ ಪ್ರತಿಭಟನಾ ಅರ್ಜಿ ಹಾಗೂ ಮುಡಾ ಪ್ರಕರಣದಲ್ಲಿ ಪ್ರತಿಭಟನಾ ಅರ್ಜಿ ಸಲ್ಲಿಸಲು ತನಗೂ ಅನುಮತಿಸುವಂತೆ ಕೋರಿ ಜಾರಿ ನಿರ್ದೇಶನಾಲಯ ಸಲ್ಲಿಸಿರುವ ಅರ್ಜಿಗೆ ಸಂಬಂಧಿಸಿದ ವಿಚಾರಣೆಯನ್ನು … Continued

ಮುಡಾ ಹಗರಣ : ಸತತ ಎರಡು ಗಂಟೆಗಳ ಕಾಲ ಸಿಎಂ ಸಿದ್ದರಾಮಯ್ಯ ವಿಚಾರಣೆ ನಡೆಸಿದ ಲೋಕಾಯುಕ್ತ ಪೊಲೀಸರು

ಮೈಸೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ(MUDA) ಹಗರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಇಂದು, ಬುಧವಾರ ಲೋಕಾಯುಕ್ತ ಅಧಿಕಾರಿಗಳು ವಿಚಾರಣೆಗೆ ಒಳಪಡಿಸಿದರು. ಲೋಕಾಯುಕ್ತ ಪೊಲೀಸರು ಸತತ 2 ತಾಸುಗಳ ಕಾಲ ಸಿದ್ದರಾಮಯ್ಯ ಅವರನ್ನು ವಿಚಾರಣೆ ನಡೆಸಿದ್ದು, ಅವರಿಗೆ ಸುಮಾರು 40 ಕ್ಕೂ ಹೆಚ್ಚು ಪ್ರಶ್ನೆಗಳನ್ನು ಕೇಳಲಾಯಿತು ಎಂದು ಹೇಳಲಾಗಿದೆ. ಸಿದ್ದರಾಮಯ್ಯ ಅವರು ಲೋಕಾಯುಕ್ತ ತನಿಖೆ ಎದುರಿಸುತ್ತಿರುವ ಕರ್ನಾಟಕದ … Continued