ಭ್ರಷ್ಟಾಚಾರ ನಿಗ್ರಹ ಸಂಸ್ಥೆ ಲೋಕಪಾಲಕ್ಕೆ ಐಷಾರಾಮಿ ಕಾರುಗಳ ಖರೀದಿ ನಿರ್ಧಾರ ಟೀಕಿಸಿದ ಕಾಂಗ್ರೆಸ್‌

ನವದೆಹಲಿ: ಲೋಕಪಾಲ (ಭ್ರಷ್ಟಾಚಾರ ನಿಗ್ರಹ ಸಂಸ್ಥೆ) ತನ್ನ ಸದಸ್ಯರಿಗಾಗಿ ತಲಾ ಸುಮಾರು ₹ 70 ಲಕ್ಷ ಮೌಲ್ಯದ ಏಳು ಬಿಎಂಡಬ್ಲ್ಯೂ ಕಾರುಗಳನ್ನು ಖರೀದಿಸಲು ನಿರ್ಧರಿಸಿದೆ ಎಂಬ ವರದಿಯು ತೀವ್ರ ಟೀಕೆಗೆ ಗುರಿಯಾಗಿದೆ. ಸಮಗ್ರತೆ ಮತ್ತು ಭ್ರಷ್ಟಾಚಾರದ ವಿರುದ್ಧ ಹೋರಾಡುವ ಸಂಸ್ಥೆಗೆ ಇದು ” ವಿಪರ್ಯಾಸ” ಎಂದು ಕಾಂಗ್ರೆಸ್ ನಾಯಕರು ಹೇಳಿದ್ದಾರೆ. ಲೋಕಪಾಲ ಕುರಿತ ಸಂಸದೀಯ ಸಮಿತಿಯ … Continued

ಮಹುವಾ ಮೊಯಿತ್ರಾ ವಿರುದ್ಧ ಸಿಬಿಐ ತನಿಖೆ ನಡೆಸಲು ʼಲೋಕಪಾಲʼ ಆದೇಶ

ನವದೆಹಲಿ: ತೃಣಮೂಲ ಕಾಂಗ್ರೆಸ್ ನಾಯಕಿ ಮಹುವಾ ಮೊಯಿತ್ರಾ ವಿರುದ್ಧ ಭ್ರಷ್ಟಾಚಾರ ತಡೆ ಕಾಯಿದೆಯಡಿ (ಪಿಸಿಎ) ಪ್ರಕರಣ ದಾಖಲಿಸಿ ತನಿಖೆ ನಡೆಸುವಂತೆ ಲೋಕಪಾಲವು ಮಂಗಳವಾರ ಸಿಬಿಐಗೆ ನಿರ್ದೇಶನ ನೀಡಿದೆ. ಮಹುವಾ ಮೊಯಿತ್ರಾ ವಿರುದ್ಧದ ಆರೋಪಗಳು ಗಂಭೀರವಾಗಿದ್ದು ಬಲವಾದ ಪುರಾವೆಗಳಿವೆ ಎಂದು ನ್ಯಾಯಾಂಗ ಸದಸ್ಯೆ ನ್ಯಾ. ಅಭಿಲಾಷಾ ಕುಮಾರಿ, ಸದಸ್ಯರಾದ ಅರ್ಚನಾ ರಾಮಸುಂದರಂ ಹಾಗೂ ಮಹೇಂದರ್ ಸಿಂಗ್ ಅವರನ್ನೊಳಗೊಂಡ … Continued

ಲೋಕಪಾಲದ ಮುಖ್ಯಸ್ಥರಾಗಿ ಸುಪ್ರೀಂ ಕೋರ್ಟ್‌ನ ನಿವೃತ್ತ ನ್ಯಾಯಮೂರ್ತಿ ಎ.ಎಂ.ಖಾನ್ವಿಲ್ಕರ ನೇಮಕ

ನವದೆಹಲಿ : ಸುಪ್ರೀಂ ಕೋರ್ಟ್ ನ್ಯಾಯಾಧೀಶರಾಗಿ ನಿವೃತ್ತರಾದ ಸುಮಾರು 19 ತಿಂಗಳ ನಂತರ, ನ್ಯಾಯಮೂರ್ತಿ ಎ.ಎಂ. ಖಾನ್ವಿಲ್ಕರ್ ಅವರನ್ನು ಭ್ರಷ್ಟಾಚಾರ ವಿರೋಧಿ ಒಂಬುಡ್ಸ್‌ಮನ್ ಲೋಕಪಾಲದ ಅಧ್ಯಕ್ಷರನ್ನಾಗಿ ನೇಮಿಸಲಾಗಿದೆ. ಸುಮಾರು ಎರಡು ವರ್ಷಗಳಿಂದ ಹುದ್ದೆ ಖಾಲಿ ಇತ್ತು. ನ್ಯಾಯಮೂರ್ತಿ ಅಜಯ ಮಾಣಿಕ್‌ ರಾವ್‌ ಖಾನ್ವಿಲ್ಕರ್ ಅವರನ್ನು ಲೋಕಪಾಲ್ ಅಧ್ಯಕ್ಷರನ್ನಾಗಿ ನೇಮಿಸಲು ರಾಷ್ಟ್ರಪತಿ ದ್ರೌಪದಿ ಮುರ್ಮು ಸಂತಸ ವ್ಯಕ್ತಪಡಿಸಿದ್ದಾರೆ” … Continued

ಮುಂದಿನ ಲೋಕಪಾಲ ಹುದ್ದೆಗೆ ಸುಪ್ರೀಂ ಕೋರ್ಟ್ ನಿವೃತ್ತ ನ್ಯಾಯಮೂರ್ತಿ ಎ ಎಂ ಖಾನ್ವಿಲ್ಕರ್ ಆಗುವ ಸಾಧ್ಯತೆ

ನವದೆಹಲಿ: ಸುಪ್ರೀಂ ಕೋರ್ಟ್ ನಿವೃತ್ತ ನ್ಯಾಯಮೂರ್ತಿ ಎ.ಎಂ. ಖಾನ್ವಿಲ್ಕರ್ ಅವರನ್ನು ಮುಂದಿನ ಲೋಕಪಾಲರನ್ನಾಗಿ ನೇಮಕ ಮಾಡುವ ಸಾಧ್ಯತೆ ಇದೆ ಎಂದು ಮಾಧ್ಯಮದ ವರದಿಗಳು ತಿಳಿಸಿವೆ. ಪ್ರಧಾನಿ ನರೇಂದ್ರ ಮೋದಿ, ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿ ಡಿ.ವೈ. ಚಂದ್ರಚೂಡ ಹಾಗೂ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಅವರನ್ನೊಳಗೊಂಡ ಉನ್ನತ ಮಟ್ಟದ ಸಮಿತಿ ಬುಧವಾರ ನಡೆಸಿದ ಸಭೆಯ … Continued

ಪ್ರಶ್ನೆಗಾಗಿ ನಗದು ಪ್ರಕರಣ :ಲೋಕಪಾಲ ನಿರ್ದೇಶನದ ಮೇರೆಗೆ ಟಿಎಂಸಿ ಸಂಸದೆ ಮಹುವಾ ಮೊಯಿತ್ರಾ ವಿರುದ್ಧ ತನಿಖೆ ಆರಂಭಿಸಿದ ಸಿಬಿಐ ; ವರದಿ

ನವದೆಹಲಿ : ಸಂಸತ್ತಿನಲ್ಲಿ ಪ್ರಶ್ನೆಗಾಗಿ ಹಣದ ಪ್ರಕರಣಕ್ಕೆ ಸಂಬಂಧಿಸಿದಂತೆ ಲೋಕಪಾಲ ನಿರ್ದೇಶನದ ಮೇರೆಗೆ ಕೇಂದ್ರೀಯ ತನಿಖಾ ದಳ (ಸಿಬಿಐ) ಶನಿವಾರ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದೆ ಮಹುವಾ ಮೊಯಿತ್ರಾ ಅವರ ವಿರುದ್ಧ ಪ್ರಾಥಮಿಕ ವಿಚಾರಣೆಯನ್ನು ದಾಖಲಿಸಿದೆ ಎಂದು ವರದಿಯಾಗಿದೆ. ಸಂಸತ್ತಿನಲ್ಲಿ ಪ್ರಶ್ನೆಗಳನ್ನು ಕೇಳಿದ್ದಕ್ಕಾಗಿ “ಪ್ರಶ್ನೆಗಾಗಿ ಲಂಚ” ಆರೋಪದ ತನಿಖೆಗಾಗಿ ಕೇಂದ್ರ ತನಿಖಾ ಸಂಸ್ಥೆ ಮಹುವಾ ಮೊಯಿತ್ರಾ … Continued