ಬಿಜೆಪಿ ಅಭ್ಯರ್ಥಿಗಳ 7ನೇ ಪಟ್ಟಿ ಪ್ರಕಟ : ಚಿತ್ರದುರ್ಗದಲ್ಲಿ ಹಾಲಿ ಸಂಸದರಿಗೆ ಕೊಕ್, ಯಡಿಯೂರಪ್ಪ ಆಪ್ತನಿಗೆ ಟಿಕೆಟ್‌

ನವದೆಹಲಿ: ಭಾರತೀಯ ಜನತಾ ಪಕ್ಷ (ಬಿಜೆಪಿ) 2024ರ ಲೋಕಸಭೆ ಚುನಾವಣೆಗೆ ತನ್ನ ಏಳನೇ ಅಭ್ಯರ್ಥಿ ಪಟ್ಟಿಯನ್ನು ಬುಧವಾರ ಬಿಡುಗಡೆ ಮಾಡಿದೆ. ಏಳನೇ ಪಟ್ಟಿಯಲ್ಲಿ ಮಹಾರಾಷ್ಟ್ರದ ಅಮರಾವತಿ ಮತ್ತು ಕರ್ನಾಟಕದ ಚಿತ್ರದುರ್ಗ ಎರಡು ಮೀಸಲು ಕ್ಷೇತ್ರದಿಂದ ಇಬ್ಬರು ಅಭ್ಯರ್ಥಿಗಳ ಹೆಸರನ್ನು ಪ್ರಕಟಿಸಲಾಗಿದೆ. ಬಿಜೆಪಿಯು ಪಕ್ಷವು ಕರ್ನಾಟಕದ ಚಿತ್ರದುರ್ಗ ಮೀಸಲು ಕ್ಷೇತ್ರದಿಂದ (SC) ಮಾಜಿ ಸಚಿವ ಗೋವಿಂದ ಕಾರಜೋಳ … Continued

ಕೋಲಾರದಲ್ಲಿ ಕಾಂಗ್ರೆಸ್‌ ಬಣಗಳ ತಿಕ್ಕಾಟ ತಾರಕಕ್ಕೆ : ಐವರು ಶಾಸಕರಿಂದ ರಾಜೀನಾಮೆ ಬೆದರಿಕೆ; ರಾಜೀನಾಮೆ ಪತ್ರ ತೋರಿಸಿ ಎಂಎಲ್‌ ಸಿಗಳಿಂದ ಹೈಡ್ರಾಮಾ…!

ಬೆಂಗಳೂರು : ಕೋಲಾರ ಕಾಂಗ್ರೆಸ್‌ನ ಹಿರಿಯ ನಾಯಕರಾದ ಕೆ.ಎಚ್‌. ಮುನಿಯಪ್ಪ ಹಾಗೂ ಮಾಜಿ ಸ್ಪೀಕರ್‌ ಕೆ.ಆರ್‌. ರಮೇಶಕುಮಾರ ಬಣಗಳ ನಡುವಿನ ತಿಕ್ಕಾಟ ತಾರಕಕ್ಕೇರಿದ್ದು,ಸಚಿವ ಕೆ.ಎಚ್‌. ಮುನಿಯಪ್ಪ ಅವರ ಅಳಿಯ ಪೆದ್ದಚಿಕ್ಕಣ್ಣಗೆ ಟಿಕೆಟ್‌ ಬಹುತೇಕ ಖಚಿತವಾಗುತ್ತಿದ್ದಂತೆ ಕಾಂಗ್ರೆಸ್‌ ಶಾಸಕರ ರಾಜೀನಾಮೆ ನೀಡಲು ಮುಂದಾದ ವಿದ್ಯಮಾನ ನಡೆದಿದೆ. ನಂತರ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ ಅವರ … Continued

ಲೋಕಸಭೆ ಚುನಾವಣೆ : ಮೂರು ಕ್ಷೇತ್ರಗಳಿಗೆ ಜೆಡಿಎಸ್‌ ಅಭ್ಯರ್ಥಿಗಳು ಅಂತಿಮ

ಹಾಸನ/ಬೆಂಗಳೂರು : ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ ಜೊತೆಗೆ ಮೈತ್ರಿ ಮಾಡಿಕೊಂಡಿರುವ ಜೆಡಿಎಸ್‌ ಕೊನೆಗೂ ಅಭ್ಯರ್ಥಿಗಳ ಆಯ್ಕೆ ಅಂತಿಮ ಮಾಡಿದೆ. ತಮಗೆ ನೀಡಿರುವ ಮೂರು ಕ್ಷೇತ್ರಗಳಾದ ಹಾಸನ, ಮಂಡ್ಯ ಹಾಗೂ ಕೋಲಾರ ಕ್ಷೇತ್ರಗಳಿಗೆ ಅಭ್ಯರ್ಥಿಗಳು ಯಾರೆಂದು ಜೆಡಿಎಸ್‌ ವರಿಷ್ಠ ಹೆಚ್‌.ಡಿ.ದೇವೇಗೌಡ ಅವರು ಹಾಸನದಲ್ಲಿ ಪ್ರಕಟಿಸಿದ್ದಾರೆ. ಹಾಸನದಿಂದ ಪ್ರಜ್ವಲ ರೇವಣ್ಣ, ಮಂಡ್ಯದಿಂದ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಹಾಗೂ ಕೋಲಾರದಿಂದ … Continued

ಲೋಕಸಭೆ ಚುನಾವಣೆಗೂ ಮುನ್ನ ಕಾಂಗ್ರೆಸ್ಸಿಗೆ ಆಘಾತ: ಲೂಧಿಯಾನದ ಕಾಂಗ್ರೆಸ್ ಸಂಸದ ಬಿಜೆಪಿ ಸೇರ್ಪಡೆ

ನವದೆಹಲಿ : ಲೋಕಸಭೆ ಚುನಾವಣೆಗೂ ಮುನ್ನ ಪಂಜಾಬಿನ ಲೂಧಿಯಾನದ ಕಾಂಗ್ರೆಸ್ ಸಂಸದ ರವನೀತ್ ಸಿಂಗ್ ಬಿಟ್ಟು ಅವರು ಮಂಗಳವಾರ ಬಿಜೆಪಿಗೆ ಸೇರ್ಪಡೆಯಾಗಿದ್ದಾರೆ. ಅವರು ಪಂಜಾಬ್ ಮಾಜಿ ಮುಖ್ಯಮಂತ್ರಿ ಬಿಯಾಂತ್ ಸಿಂಗ್ ಅವರ ಮೊಮ್ಮಗ. “ನಾನು ಪ್ರಧಾನಿ ನರೇಂದ್ರ ಮೋದಿಯವರಿಗೆ ಕೃತಜ್ಞನಾಗಿದ್ದೇನೆ…ಪ್ರಧಾನಿ ಮೋದಿ ಮತ್ತು ಕೇಂದ್ರ ಗೃಹ ಸಚಿವ ಅಮಿತ್ ಶಾ ಪಂಜಾಬ್‌ನ ಬಗ್ಗೆ ಬಹಳಷ್ಟು ಪ್ರೀತಿಯನ್ನು … Continued

ಲೋಕಸಭೆ ಚುನಾವಣೆ : ಕೈತಪ್ಪಿದ ಬಿಜೆಪಿ ಟಿಕೆಟ್ ; ಭಾವನಾತ್ಮಕ ಪತ್ರ ಬರೆದ ಸಂಸದ ಅನಂತಕುಮಾರ ಹೆಗಡೆ

ಶಿರಸಿ : ಲೋಕಸಭೆ ಚುನಾವಣೆಗೆ 111 ಅಭ್ಯರ್ಥಿಗಳ ಬಿಜೆಪಿಯ ಐದನೇ ಪಟ್ಟಿ ಬಿಡುಗಡೆಯಾಗಿದ್ದು, ಉತ್ತರ ಕನ್ನಡ ಕ್ಷೇತ್ರದಲ್ಲಿ ಹಾಲಿ ಸಂಸದರಾಗಿರುವ ಅನಂತಕುಮಾರ ಹೆಗಡೆ ಅವರಿಗೆ ಟಿಕೆಟ್‌ ತಪ್ಪಿದೆ. ಅವರ ಬದಲಿಗೆ ವಿಧಾನಸಭೆ ಮಾಜಿ ಸ್ಪೀಕರ್‌ ವಿಶ್ವೇಶ್ವರ ಹೆಗಡೆ ಕಾಗೇರಿ ಅವರಿಗೆ ಟಿಕೆಟ್‌ ನೀಡಲಾಗಿದೆ. ಇದರ ಬೆನ್ನಲ್ಲೇ ಅನಂತಕುಮಾರ ಹೆಗಡೆ ಅವರು ಭಾವುಕ ಪತ್ರ ಬರೆದಿದ್ದು, ಸೇವೆ … Continued

ಲೋಕಸಭೆ ಚುನಾವಣೆ: ಬಿಜೆಪಿಯ 5ನೇ ಪಟ್ಟಿ ಬಿಡುಗಡೆ, ಕರ್ನಾಟಕದ 4 ಕ್ಷೇತ್ರಗಳಿಗೆ ಟಿಕೆಟ್‌ ಘೋಷಣೆ, ಅನಂತಕುಮಾರ ಹೆಗಡೆಗೆ ತಪ್ಪಿದ ಟಿಕೆಟ್‌

ಬೆಂಗಳೂರು : ಲೋಕಸಭಾ ಚುನಾವಣೆಗೆ ಬಿಜೆಪಿ ತನ್ನ 5ನೇ ಪಟ್ಟಿಯನ್ನು ಭಾನುವಾರ ಬಿಡುಗಡೆ ಮಾಡಿದ್ದು, ಕರ್ನಾಟಕ ಸೇರಿದಂತೆ 8 ರಾಜ್ಯಗಳ ಪಟ್ಟಿಯನ್ನು ಬಿಡುಗಡೆ ಮಾಡಲಾಗಿದೆ. ಕರ್ನಾಟಕದ ನಾಲ್ಕು ಲೋಕಸಭಾ ಕ್ಷೇತ್ರಗಳಿಗೆ ಟಿಕೆಟ್‌ ಘೋಷಣೆ ಮಾಡಲಾಗಿದೆ. ಉತ್ತರ ಕನ್ನಡ ಸಂಸದ ಅನಂತಕುಮಾರ ಹೆಗಡೆಗೆ ಟಿಕೆಟ್ ಕೈತಪ್ಪಿದ್ದು, ಮಾಜಿ ಸ್ಪೀಕರ್‌ ವಿಶ್ವೇಶ್ವರ ಹೆಗಡೆ ಕಾಗೇರಿ ಅವರಿಗೆ ಟಿಕೆಟ್‌ ನೀಡಲಾಗಿದೆ. … Continued

ಕರ್ನಾಟಕದ ರಾಜಕೀಯದಲ್ಲಿ ಭಾರೀ ಬೆಳವಣಿಗೆ : ಬಿಜೆಪಿ ಸೇರುವುದಾಗಿ ಘೋಷಿಸಿದ ಜನಾರ್ದನ ರೆಡ್ಡಿ, ಕೆಆರ್‌ಪಿಪಿ ಪಕ್ಷವೂ ಬಿಜೆಪಿಯಲ್ಲಿ ವಿಲೀನ..!

ಬೆಂಗಳೂರು: ಲೋಕಸಭಾ ಚುನಾವಣೆ ಸಮೀಪಿಸುತ್ತಿರುವ ಹೊತ್ತಿನಲ್ಲೇ ಕರ್ನಾಟಕದ ರಾಜಕೀಯದಲ್ಲಿ ಭಾರೀ ಬೆಳವಣಿಗೆಯಾಗಿದ್ದು, ಕಲ್ಯಾಣ ರಾಜ್ಯ ಪ್ರಗತಿ ಪಕ್ಷದ (Kalyana Rajya Pragati Party) ಸಂಸ್ಥಾಪಕ ಹಾಗೂ ಶಾಸಕ ಗಾಲಿ ಜನಾರ್ದನ ರೆಡ್ಡಿ (Gali Janardhan Reddy) ಅವರು ಬಿಜೆಪಿ ಸೇರ್ಪಡೆಯಾಗುವುದಾಗಿ ಘೋಷಣೆ ಮಾಡಿದ್ದಾರೆ. ಅಲ್ಲದೆ,‌ ತಮ್ಮ ಪಕ್ಷವನ್ನು ಬಿಜೆಪಿ ಜತೆ ವಿಲೀನ ಮಾಡುವುದಾಗಿ ಹೇಳಿದ್ದಾರೆ. ಬಳ್ಳಾರಿ, … Continued

ಬಿಜೆಪಿ ಮೂರನೇ ಪಟ್ಟಿ ಪ್ರಕಟ; ಮಾಜಿ ರಾಜ್ಯಪಾಲೆ ತಮಿಳಿಸೈ ಸೌಂದರರಾಜನ್, ಅಣ್ಣಾಮಲೈ ಸೇರಿದಂತೆ ಪ್ರಮುಖರಿಗೆ ಟಿಕೆಟ್

ನವದೆಹಲಿ: ಭಾರತೀಯ ಜನತಾ ಪಕ್ಷ (ಬಿಜೆಪಿ) ಲೋಕಸಭೆ ಅಭ್ಯರ್ಥಿಗಳ ತನ್ನ ಮೂರನೇ ಪಟ್ಟಿಯನ್ನು ಗುರುವಾರ ಪ್ರಕಟಿಸಿದೆ. ತೆಲಂಗಾಣ ಮಾಜಿ ರಾಜ್ಯಪಾಲರಾದ ತಮಿಳಿಸೈ ಸೌಂದರರಾಜನ್ ಹಾಗೂ ತಮಿಳುನಾಡು ಬಿಜೆಪಿ ಅಧ್ಯಕ್ಷ ಕೆ.ಅಣ್ಣಾಮಲೈ ಅವರಿಗೆ ಟಿಕೆಟ್‌ ನೀಡಲಾಗಿದೆ. ಆದರೆ ಮೂರನೇ ಪಟ್ಟಿಯಲ್ಲಿ ಕರ್ನಾಟಕದ ಯಾವ ಅಭ್ಯರ್ಥಿಯನ್ನೂ ಪ್ರಕಟಿಸಲಾಗಿಲ್ಲ. ತಮಿಳಿಸೈ ಸೌಂದರರಾಜನ್ ಚೆನ್ನೈ ದಕ್ಷಿಣದಿಂದ ಚುನಾವಣೆಗೆ ಸ್ಪರ್ಧಿಸಲಿದ್ದಾರೆ. ಕೊಯಮತ್ತೂರಿನಿಂದ ತಮಿಳುನಾಡು … Continued

ಶಿವಮೊಗ್ಗ ಕ್ಷೇತ್ರದಿಂದ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸ್ತೇನೆ ಎಂದು ಈಶ್ವರಪ್ಪ ಘೋಷಣೆ : ಯಡಿಯೂರಪ್ಪ ವಿರುದ್ಧ ತೊಡೆತಟ್ಟಿದ ಬಿಜೆಪಿ ನಾಯಕ

ಶಿವಮೊಗ್ಗ: ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಶಿವಮೊಗ್ಗ ಲೋಕಸಭಾ ಕ್ಷೇತ್ರದಲ್ಲಿ ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯುವುದಾಗಿ ಮಾಜಿ ಸಚಿವ ಕೆ.ಎಸ್. ಈಶ್ವರಪ್ಪ ಶುಕ್ರವಾರ ( ಮಾರ್ಚ್‌ 15) ಘೋಷಿಸಿದ್ದಾರೆ. ತಮ್ಮ ಪುತ್ರನಿಗೆ ಬಿಜೆಪಿಯಿಂದ ಟಿಕೆಟ್ ಸಿಗದ ಕಾರಣ ಪಕ್ಷದ ರಾಜ್ಯ ನಾಯಕರ ವಿರುದ್ಧ ಮುನಿಸಿಕೊಂಡಿರುವ ಈಶ್ವರಪ್ಪ ಸ್ವತಂತ್ರವಾಗಿ ಸ್ಪರ್ಧಿಸುವ ಘೋಷಣೆ ಮಾಡಿದ್ದಾರೆ. ಪುತ್ರ ಕಾಂತೇಶ ಅವರಿಗೆ ಟಿಕೆಟ್ ಸಿಗದ … Continued

ಬಿಜೆಪಿ ಲೋಕಸಭೆ ಅಭ್ಯರ್ಥಿಯಾಗಿ ರಾಜಕೀಯಕ್ಕೆ ಪದಾರ್ಪಣೆ ಮಾಡಿದ ಖ್ಯಾತ ಹೃದ್ರೋಗ ತಜ್ಞ, ದೇವೇಗೌಡರ ಅಳಿಯ ಪದ್ಮಶ್ರೀ ಡಾ ಸಿ.ಎನ್. ಮಂಜುನಾಥ

ಬೆಂಗಳೂರು : ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡರ ಅಳಿಯ ಹಾಗೂ ಬೆಂಗಳೂರಿನ ಜಯದೇವ ಆಸ್ಪತ್ರೆ ನಿರ್ದೇಶಕ ಡಾ ಸಿ.ಎನ್. ಮಂಜುನಾಥ ಅವರು ರಾಜಕೀಯ ಪ್ರವೇಶಿಸಿದ್ದಾರೆ. ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದಿಂದ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ ಅವರ ಸಹೋದರ ಡಿ.ಕೆ. ಸುರೇಶ ವಿರುದ್ಧ ಡಾ ಮಂಜುನಾಥ ಅವರನ್ನು ಬಿಜೆಪಿ ಕಣಕ್ಕಿಳಿಸಿದೆ. ಬೆಂಗಳೂರು ಗ್ರಾಮಾಂತರ ಕ್ಷೇತ್ರವನ್ನು ಶಿವಕುಮಾರ ಸಹೋದರರ … Continued