ಲೋಕಸಭೆ ಚುನಾವಣೆ : ಕೈತಪ್ಪಿದ ಬಿಜೆಪಿ ಟಿಕೆಟ್ ; ಭಾವನಾತ್ಮಕ ಪತ್ರ ಬರೆದ ಸಂಸದ ಅನಂತಕುಮಾರ ಹೆಗಡೆ

ಶಿರಸಿ : ಲೋಕಸಭೆ ಚುನಾವಣೆಗೆ 111 ಅಭ್ಯರ್ಥಿಗಳ ಬಿಜೆಪಿಯ ಐದನೇ ಪಟ್ಟಿ ಬಿಡುಗಡೆಯಾಗಿದ್ದು, ಉತ್ತರ ಕನ್ನಡ ಕ್ಷೇತ್ರದಲ್ಲಿ ಹಾಲಿ ಸಂಸದರಾಗಿರುವ ಅನಂತಕುಮಾರ ಹೆಗಡೆ ಅವರಿಗೆ ಟಿಕೆಟ್‌ ತಪ್ಪಿದೆ. ಅವರ ಬದಲಿಗೆ ವಿಧಾನಸಭೆ ಮಾಜಿ ಸ್ಪೀಕರ್‌ ವಿಶ್ವೇಶ್ವರ ಹೆಗಡೆ ಕಾಗೇರಿ ಅವರಿಗೆ ಟಿಕೆಟ್‌ ನೀಡಲಾಗಿದೆ. ಇದರ ಬೆನ್ನಲ್ಲೇ ಅನಂತಕುಮಾರ ಹೆಗಡೆ ಅವರು ಭಾವುಕ ಪತ್ರ ಬರೆದಿದ್ದು, ಸೇವೆ … Continued

ಲೋಕಸಭೆ ಚುನಾವಣೆ: ಬಿಜೆಪಿಯ 5ನೇ ಪಟ್ಟಿ ಬಿಡುಗಡೆ, ಕರ್ನಾಟಕದ 4 ಕ್ಷೇತ್ರಗಳಿಗೆ ಟಿಕೆಟ್‌ ಘೋಷಣೆ, ಅನಂತಕುಮಾರ ಹೆಗಡೆಗೆ ತಪ್ಪಿದ ಟಿಕೆಟ್‌

ಬೆಂಗಳೂರು : ಲೋಕಸಭಾ ಚುನಾವಣೆಗೆ ಬಿಜೆಪಿ ತನ್ನ 5ನೇ ಪಟ್ಟಿಯನ್ನು ಭಾನುವಾರ ಬಿಡುಗಡೆ ಮಾಡಿದ್ದು, ಕರ್ನಾಟಕ ಸೇರಿದಂತೆ 8 ರಾಜ್ಯಗಳ ಪಟ್ಟಿಯನ್ನು ಬಿಡುಗಡೆ ಮಾಡಲಾಗಿದೆ. ಕರ್ನಾಟಕದ ನಾಲ್ಕು ಲೋಕಸಭಾ ಕ್ಷೇತ್ರಗಳಿಗೆ ಟಿಕೆಟ್‌ ಘೋಷಣೆ ಮಾಡಲಾಗಿದೆ. ಉತ್ತರ ಕನ್ನಡ ಸಂಸದ ಅನಂತಕುಮಾರ ಹೆಗಡೆಗೆ ಟಿಕೆಟ್ ಕೈತಪ್ಪಿದ್ದು, ಮಾಜಿ ಸ್ಪೀಕರ್‌ ವಿಶ್ವೇಶ್ವರ ಹೆಗಡೆ ಕಾಗೇರಿ ಅವರಿಗೆ ಟಿಕೆಟ್‌ ನೀಡಲಾಗಿದೆ. … Continued

ಕರ್ನಾಟಕದ ರಾಜಕೀಯದಲ್ಲಿ ಭಾರೀ ಬೆಳವಣಿಗೆ : ಬಿಜೆಪಿ ಸೇರುವುದಾಗಿ ಘೋಷಿಸಿದ ಜನಾರ್ದನ ರೆಡ್ಡಿ, ಕೆಆರ್‌ಪಿಪಿ ಪಕ್ಷವೂ ಬಿಜೆಪಿಯಲ್ಲಿ ವಿಲೀನ..!

ಬೆಂಗಳೂರು: ಲೋಕಸಭಾ ಚುನಾವಣೆ ಸಮೀಪಿಸುತ್ತಿರುವ ಹೊತ್ತಿನಲ್ಲೇ ಕರ್ನಾಟಕದ ರಾಜಕೀಯದಲ್ಲಿ ಭಾರೀ ಬೆಳವಣಿಗೆಯಾಗಿದ್ದು, ಕಲ್ಯಾಣ ರಾಜ್ಯ ಪ್ರಗತಿ ಪಕ್ಷದ (Kalyana Rajya Pragati Party) ಸಂಸ್ಥಾಪಕ ಹಾಗೂ ಶಾಸಕ ಗಾಲಿ ಜನಾರ್ದನ ರೆಡ್ಡಿ (Gali Janardhan Reddy) ಅವರು ಬಿಜೆಪಿ ಸೇರ್ಪಡೆಯಾಗುವುದಾಗಿ ಘೋಷಣೆ ಮಾಡಿದ್ದಾರೆ. ಅಲ್ಲದೆ,‌ ತಮ್ಮ ಪಕ್ಷವನ್ನು ಬಿಜೆಪಿ ಜತೆ ವಿಲೀನ ಮಾಡುವುದಾಗಿ ಹೇಳಿದ್ದಾರೆ. ಬಳ್ಳಾರಿ, … Continued

ಬಿಜೆಪಿ ಮೂರನೇ ಪಟ್ಟಿ ಪ್ರಕಟ; ಮಾಜಿ ರಾಜ್ಯಪಾಲೆ ತಮಿಳಿಸೈ ಸೌಂದರರಾಜನ್, ಅಣ್ಣಾಮಲೈ ಸೇರಿದಂತೆ ಪ್ರಮುಖರಿಗೆ ಟಿಕೆಟ್

ನವದೆಹಲಿ: ಭಾರತೀಯ ಜನತಾ ಪಕ್ಷ (ಬಿಜೆಪಿ) ಲೋಕಸಭೆ ಅಭ್ಯರ್ಥಿಗಳ ತನ್ನ ಮೂರನೇ ಪಟ್ಟಿಯನ್ನು ಗುರುವಾರ ಪ್ರಕಟಿಸಿದೆ. ತೆಲಂಗಾಣ ಮಾಜಿ ರಾಜ್ಯಪಾಲರಾದ ತಮಿಳಿಸೈ ಸೌಂದರರಾಜನ್ ಹಾಗೂ ತಮಿಳುನಾಡು ಬಿಜೆಪಿ ಅಧ್ಯಕ್ಷ ಕೆ.ಅಣ್ಣಾಮಲೈ ಅವರಿಗೆ ಟಿಕೆಟ್‌ ನೀಡಲಾಗಿದೆ. ಆದರೆ ಮೂರನೇ ಪಟ್ಟಿಯಲ್ಲಿ ಕರ್ನಾಟಕದ ಯಾವ ಅಭ್ಯರ್ಥಿಯನ್ನೂ ಪ್ರಕಟಿಸಲಾಗಿಲ್ಲ. ತಮಿಳಿಸೈ ಸೌಂದರರಾಜನ್ ಚೆನ್ನೈ ದಕ್ಷಿಣದಿಂದ ಚುನಾವಣೆಗೆ ಸ್ಪರ್ಧಿಸಲಿದ್ದಾರೆ. ಕೊಯಮತ್ತೂರಿನಿಂದ ತಮಿಳುನಾಡು … Continued

ಶಿವಮೊಗ್ಗ ಕ್ಷೇತ್ರದಿಂದ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸ್ತೇನೆ ಎಂದು ಈಶ್ವರಪ್ಪ ಘೋಷಣೆ : ಯಡಿಯೂರಪ್ಪ ವಿರುದ್ಧ ತೊಡೆತಟ್ಟಿದ ಬಿಜೆಪಿ ನಾಯಕ

ಶಿವಮೊಗ್ಗ: ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಶಿವಮೊಗ್ಗ ಲೋಕಸಭಾ ಕ್ಷೇತ್ರದಲ್ಲಿ ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯುವುದಾಗಿ ಮಾಜಿ ಸಚಿವ ಕೆ.ಎಸ್. ಈಶ್ವರಪ್ಪ ಶುಕ್ರವಾರ ( ಮಾರ್ಚ್‌ 15) ಘೋಷಿಸಿದ್ದಾರೆ. ತಮ್ಮ ಪುತ್ರನಿಗೆ ಬಿಜೆಪಿಯಿಂದ ಟಿಕೆಟ್ ಸಿಗದ ಕಾರಣ ಪಕ್ಷದ ರಾಜ್ಯ ನಾಯಕರ ವಿರುದ್ಧ ಮುನಿಸಿಕೊಂಡಿರುವ ಈಶ್ವರಪ್ಪ ಸ್ವತಂತ್ರವಾಗಿ ಸ್ಪರ್ಧಿಸುವ ಘೋಷಣೆ ಮಾಡಿದ್ದಾರೆ. ಪುತ್ರ ಕಾಂತೇಶ ಅವರಿಗೆ ಟಿಕೆಟ್ ಸಿಗದ … Continued

ಬಿಜೆಪಿ ಲೋಕಸಭೆ ಅಭ್ಯರ್ಥಿಯಾಗಿ ರಾಜಕೀಯಕ್ಕೆ ಪದಾರ್ಪಣೆ ಮಾಡಿದ ಖ್ಯಾತ ಹೃದ್ರೋಗ ತಜ್ಞ, ದೇವೇಗೌಡರ ಅಳಿಯ ಪದ್ಮಶ್ರೀ ಡಾ ಸಿ.ಎನ್. ಮಂಜುನಾಥ

ಬೆಂಗಳೂರು : ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡರ ಅಳಿಯ ಹಾಗೂ ಬೆಂಗಳೂರಿನ ಜಯದೇವ ಆಸ್ಪತ್ರೆ ನಿರ್ದೇಶಕ ಡಾ ಸಿ.ಎನ್. ಮಂಜುನಾಥ ಅವರು ರಾಜಕೀಯ ಪ್ರವೇಶಿಸಿದ್ದಾರೆ. ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದಿಂದ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ ಅವರ ಸಹೋದರ ಡಿ.ಕೆ. ಸುರೇಶ ವಿರುದ್ಧ ಡಾ ಮಂಜುನಾಥ ಅವರನ್ನು ಬಿಜೆಪಿ ಕಣಕ್ಕಿಳಿಸಿದೆ. ಬೆಂಗಳೂರು ಗ್ರಾಮಾಂತರ ಕ್ಷೇತ್ರವನ್ನು ಶಿವಕುಮಾರ ಸಹೋದರರ … Continued

ಲೋಕಸಭೆ ಚುನಾವಣೆ : ಬಿಜೆಪಿಯ ಎರಡನೇ ಪಟ್ಟಿಯಲ್ಲಿ ತ್ರಿಪುರ, ಮೈಸೂರಿನ ರಾಜವಂಶಸ್ಥರು…

ನವದೆಹಲಿ: ಲೋಕಸಭೆ ಚುನಾವಣೆಗೆ ಬಿಜೆಪಿಯ ಎರಡನೇ ಅಭ್ಯರ್ಥಿಗಳ ಪಟ್ಟಿಯಲ್ಲಿ ಇಬ್ಬರು ರಾಜವಂಶಸ್ಥರು ಸ್ಥಾನ ಪಡೆದಿದ್ದಾರೆ. ತ್ರಿಪುರಾದಿಂದ ಮಹಾರಾಣಿ ಕೃತಿ ಸಿಂಗ್ ದೇಬ್‌ಬರ್ಮಾ ಮತ್ತು ಹಿಂದಿನ ಮೈಸೂರು ರಾಜಮನೆತನದ ಮುಖ್ಯಸ್ಥ ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್ ಅವರು ಬಿಜೆಪಿ ಎರಡನೇ ಪಟ್ಟಿಯ 72 ಅಭ್ಯರ್ಥಿಗಳಲ್ಲಿ ಸೇರಿದ್ದಾರೆ. ಕೃತಿ ಸಿಂಗ್ ದೇಬ್‌ಬರ್ಮಾ ಅವರಿಗೆ ತ್ರಿಪುರ ಪೂರ್ವ ಕ್ಷೇತ್ರದಿಂದ ಸ್ಪರ್ಧಿಸಲು … Continued

ಲೋಕಸಭಾ ಚುನಾವಣೆ : ಬಿಜೆಪಿಯ 2ನೇ ಪಟ್ಟಿ ಪ್ರಕಟ ; 20 ಕ್ಷೇತ್ರಗಳಿಗೆ ಅಭ್ಯರ್ಥಿಗಳು ಪ್ರಕಟ, ಹಲವು ಹಾಲಿ ಸಂಸದರಿಗೆ ಕೈತಪ್ಪಿದ ಟಿಕೆಟ್‌

ನವದೆಹಲಿ : ಲೋಕಸಭಾ ಚುನಾವಣೆಗೆ ಬಿಜೆಪಿಯ ಎರಡನೇ ಪಟ್ಟಿ ಪ್ರಕಟವಾಗಿದ್ದು, ಕರ್ನಾಟಕದ 28 ಕ್ಷೇತ್ರಗಳ ಪೈಕಿ 20 ಕ್ಷೇತ್ರಗಳಿಗೆ ಅಭ್ಯರ್ಥಿಯನ್ನು ಘೋಷಣೆ ಮಾಡಲಾಗಿದೆ. ಎಂಟು ಹಾಲಿ ಸಂಸದರಿಗೆ ಟಿಕೆಟ್​ ಕೈತಪ್ಪಿದ್ದು ಬಿಜೆಪಿ ಹೈಕಮಾಂಡ್‌ ಹೊಸ ಮುಖಗಳಿಗೆ ಮಣೆ ಹಾಕಿದೆ. ಟಿಕೆಟ್ ಮಿಸ್ ಆಗಿದ್ದು, ಆರು ಹೊಸ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗಿದೆ. ಮೈಸೂರು-ಪ್ರತಾಪ ಸಿಂಹ, ಬೆಂಗಳೂರು ಉತ್ತರ- … Continued

ತನ್ನ ಸಹೋದರನ ಜೊತೆ ಸಂಬಂಧ ಕಡಿದುಕೊಂಡ ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ…! ಕಾರಣವೇನೆಂದರೆ…

ಕೋಲ್ಕತ್ತಾ: ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಹೌರಾ ಲೋಕಸಭಾ ಕ್ಷೇತ್ರಕ್ಕೆ ಪ್ರಸೂನ್ ಬ್ಯಾನರ್ಜಿ ಅವರಿಗೆ ಪುನಃ ಟಿಕೆಟ್‌ ನೀಡಿರುವ ತೃಣಮೂಲ ಕಾಂಗ್ರೆಸ್‌ನ ನಿರ್ಧಾರದ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ ತಮ್ಮ ಸಹೋದರ ಬಾಬುನ್ ಬ್ಯಾನರ್ಜಿ ಅವರ ಜೊತೆಗಿನ ಸಂಬಂಧವನ್ನು ಕೊನೆಗೊಳಿಸುವುದಾಗಿ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಬುಧವಾರ ಹೇಳಿದ್ದಾರೆ. “ನನ್ನ ಕುಟುಂಬ ಮತ್ತು ನಾನು ಬಬುನ್ ಜೊತೆಗಿನ … Continued

ಬಿಜೆಪಿಯ ಮೂವರು ಹಾಲಿ ಸಂಸದರು ನಮ್ಮ ಸಂಪರ್ಕದಲ್ಲಿದ್ದಾರೆ : ಚುನಾವಣೆ ಸನಿಹದಲ್ಲಿ ಡಿಕೆ ಶಿವಕುಮಾರ ಅಚ್ಚರಿಯ ಹೇಳಿಕೆ

ಕಲಬುರಗಿ : ಬಿಜೆಪಿಯ ಮೂವರು ಹಾಲಿ ಸಂಸದರು ನಮ್ಮ ಸಂಪರ್ಕದಲ್ಲಿದ್ದು, ಕಾಂಗ್ರೆಸ್‌ ಪಕ್ಷಕ್ಕೆ ಸೇರ್ಪಡೆಯಾಗುವುದರ ಬಗ್ಗೆ ಮಾತನಾಡಿದ್ದಾರೆ ಎಂದು ಉಪಮುಖ್ಯಮಂತ್ರಿ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ ಸ್ಫೋಟಕ ಹೇಳಿಕೆ ನೀಡಿದ್ದಾರೆ. ಕಲ್ಬುರಗಿಯಲ್ಲಿ ಮಾಧ್ಯಮದವರ ಜೊತೆ ಮಾತನಾಡಿದ ಅವರು, ನಮ್ಮ ಜೊತೆ ಯಾವ್ಯಾವ ಸಂಸದರು ಸಂಪರ್ಕದಲ್ಲಿದ್ದಾರೆ ಎಂಬ ಬಗ್ಗೆ ನಾನು ಈಗಲೇ ಮಾಹಿತಿ ಬಹಿರಂಗಪಡಿಸುವುದಿಲ್ಲ. ನಮ್ಮ … Continued