ಲೋಕಸಭೆ ಚುನಾವಣೆ: ಕಾಂಗ್ರೆಸ್‌ 2ನೇ ಪಟ್ಟಿ ಬಿಡುಗಡೆ ; ಮೂರು ಮಾಜಿ ಸಿಎಂ ಮಕ್ಕಳಿಗೆ ಟಿಕೆಟ್‌

ನವದೆಹಲಿ: ಮುಂಬರುವ ಲೋಕಸಭೆ ಚುನಾವಣೆಗೆ ಕಾಂಗ್ರೆಸ್ 43 ಅಭ್ಯರ್ಥಿಗಳ ಎರಡನೇ ಪಟ್ಟಿಯನ್ನು ಮಂಗಳವಾರ ಬಿಡುಗಡೆ ಮಾಡಿದೆ. ಕಮಲನಾಥ ಮತ್ತು ಅಶೋಕ ಗೆಹ್ಲೋಟ್ ಸೇರಿದಂತೆ ಹಿರಿಯ ಕಾಂಗ್ರೆಸ್ ನಾಯಕರ ಪುತ್ರರಿಗೆ ಟಿಕೆಟ್‌ ನೀಡಲಾಗಿದೆ. ಮಧ್ಯಪ್ರದೇಶದ ಮಾಜಿ ಮುಖ್ಯಮಂತ್ರಿ ಕಮಲನಾಥ ಅವರ ಪುತ್ರರಾಗಿರುವ ನಕುಲನಾಥ ಅವರನ್ನು ಮಧ್ಯಪ್ರದೇಶದ ಚಿಂದ್ವಾರದಿಂದ ಕಣಕ್ಕಿಳಿಸಲಾಗಿದೆ. ಅವರು ಕ್ಷೇತ್ರದಿಂದ ಹಾಲಿ ಸಂಸದರಾಗಿದ್ದಾರೆ. ರಾಜಸ್ಥಾನದ ಮಾಜಿ … Continued

ಸಂವಿಧಾನ ತಿದ್ದುಪಡಿ ಹೇಳಿಕೆ ಸಂಸದ ಅನಂತರಕುಮಾರ ಹೆಗಡೆ ವೈಯಕ್ತಿಕ ಅಭಿಪ್ರಾಯ, ಇದು ಪಕ್ಷದ ನಿಲುವಲ್ಲ: ಬಿಜೆಪಿ ಸ್ಪಷ್ಟನೆ

ಬೆಂಗಳೂರು: ಲೋಕಸಭಾ ಚುನಾವಣೆಯಲ್ಲಿ 400 ಸ್ಥಾನ ಗೆದ್ದರೆ ಸಂವಿಧಾನ ತಿದ್ದುಪಡಿ ಮಾಡಬಹುದು ಎಂಬ ಉತ್ತರಕನ್ನಡ ಸಂಸದ ಅನಂತಕುಮಾರ ಹೆಗಡೆ (Anantkumar Hegde) ಹೇಳಿಕೆಗೆ ಬಿಜೆಪಿ ಸ್ಪಷ್ಟನೆ ನೀಡಿದ್ದು, ಅದು ಸಂಸದ ಅನಂತಕುಮಾರ ಹೆಗಡೆ ಅವರ ವೈಯಕ್ತಿಕ ಅಭಿಪ್ರಾಯವಾಗಿದೆಯೇ ಹೊರತು ಪಕ್ಷದ ಅಭಿಪ್ರಾಯವಲ್ಲ ಎಂದು ಸ್ಪಷ್ಟ ಪಡಿಸಿದೆ. ಈ ಸಂಬಂಧ ಎಕ್ಸ್ ನಲ್ಲಿ ಬಿಜೆಪಿ ಸ್ಪಷ್ಟನೆ ನೀಡಿದೆ. … Continued

ಲೋಕಸಭೆ ಚುನಾವಣೆ : ಬಂಗಾಳದಲ್ಲಿ ಇಂಡಿಯಾ ಮೈತ್ರಿಕೂಟವಿಲ್ಲ ; ಎಲ್ಲ 42 ಸ್ಥಾನಗಳಿಗೆ ಅಭ್ಯರ್ಥಿಗಳ ಹೆಸರು ಘೋಷಿಸಿದ ಟಿಎಂಸಿ, ಮಾಜಿ ಕ್ರಿಕೆಟಿಗ ಯೂಸುಫ್ ಪಠಾಣಗೆ ಟಿಕೆಟ್‌

ಕೋಲ್ಕತ್ತಾ: ಮುಂಬರುವ ಲೋಕಸಭೆ ಚುನಾವಣೆಗೆ ಪಶ್ಚಿಮ ಬಂಗಾಳದಲ್ಲಿ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ ಪಕ್ಷವು ರಾಜ್ಯದ ಎಲ್ಲ 42 ಲೋಕಸಭಾ ಸ್ಥಾನಗಳಿಗೆ ಅಭ್ಯರ್ಥಿಗಳ ಹೆಸರುಗಳನ್ನು ಭಾನುವಾರ ಪ್ರಕಟಿಸಿದೆ. ಬ್ರೀಗ್ರೇಡ್ ಗ್ರೌಂಡ್ ಸಮಾವೇಶದಲ್ಲಿ ಡೈಮಂಡ್ ಹಾರ್ಬರ್ ಕ್ಷೇತ್ರದಿಂದ ಸ್ಪರ್ಧಿಸಲಿರುವ ಅಭಿಷೇಕ್ ಬ್ಯಾನರ್ಜಿ ಅವರು ಹೆಸರುಗಳನ್ನು ಪ್ರಕಟಿಸಿದರು. ಮಾಜಿ ಕ್ರಿಕೆಟಿಗ ಯೂಸುಫ್ ಪಠಾಣ್ ಅವರು ಬಹರಂಪುರದಿಂದ ತೃಣಮೂಲ ಅಭ್ಯರ್ಥಿಯಾಗಿ ಲೋಕಸಭೆ … Continued

ಲೋಕಸಭೆ ಚುನಾವಣೆಯಲ್ಲಿ ಟಿಕೆಟ್ ನಿರಾಕರಣೆ : ರಾಜಕೀಯಕ್ಕೆ ವಿದಾಯ ಹೇಳಿದ ಡಾ.ಹರ್ಷವರ್ಧನ್

ನವದೆಹಲಿ : ಮಾಜಿ ಕೇಂದ್ರ ಸಚಿವ ಡಾ.ಹರ್ಷವರ್ಧನ್ ಅವರು ತಮ್ಮ ಮೂರು ದಶಕಗಳ ರಾಜಕೀಯ ಜೀವನಕ್ಕೆ ವಿದಾಯ ಹೇಳಿದ್ದಾರೆ. ಹಾಲಿ ಬಿಜೆಪಿ ಸಂಸದ ಹರ್ಷವರ್ಧನ್ ಅವರು ರಾಜಕೀಯ ತ್ಯಜಿಸುವ ನಿರ್ಧಾರವನ್ನು ಭಾನುವಾರ ಪ್ರಕಟಿಸಿದ್ದಾರೆ. ಬಿಜೆಪಿ ತನ್ನ ಲೋಕಸಭಾ ಚುನಾವಣಾ ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಬಿಡುಗಡೆ ಮಾಡಿದ ಒಂದು ದಿನದ ನಂತರ ಅವರ ಈ ನಿರ್ಧಾರ ಬಂದಿದೆ. … Continued

ಗೌತಮ ಗಂಭೀರ ನಂತರ ಲೋಕಸಭೆ ಚುನಾವಣೆಗೆ ಸ್ಪರ್ಧಿಸುವುದಿಲ್ಲ ಎಂದು ಪ್ರಕಟಿಸಿದ ಮತ್ತೊಬ್ಬ ಬಿಜೆಪಿ ಸಂಸದ

ನವದೆಹಲಿ: ಬಿಜೆಪಿ ಸಂಸದ ಜಯಂತ ಸಿನ್ಹಾ ಅವರನ್ನು ಚುನಾವಣಾ ಕರ್ತವ್ಯದಿಂದ ಮುಕ್ತಗೊಳಿಸಬೇಕು ಎಂದು ಪಕ್ಷಕ್ಕೆ ಕೇಳಿಕೊಂಡಿದ್ದಾರೆ. ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಟಿಕೆಟ್ ಬಯಸುವುದಿಲ್ಲ ಎಂದು ಅವರು ಹೇಳಿದ್ದಾರೆ. ಪಕ್ಷದ ಮತ್ತೊಬ್ಬ ನಾಯಕ ಗೌತಮ ಗಂಭೀರ ಅವರು ಚುನಾವಣಾ ರಾಜಕೀಯದಿಂದ ನಿರ್ಗಮಿಸುವ ಸುಳಿವು ನೀಡಿದ ಕೆಲವೇ ಗಂಟೆಗಳ ನಂತರ ಜಯಂತ ಸಿನ್ಹಾ ಅವರ ಘೋಷಣೆ ಹೊರಬಿದ್ದಿದೆ.ಇಬ್ಬರೂ ಸಂಸದರು … Continued

ಲೋಕಸಭೆ ಚುನಾವಣೆ : ಮಹಾರಾಷ್ಟ್ರದಲ್ಲಿ ಬಿಜೆಪಿ-ರಾಜ್‌ ಠಾಕ್ರೆ ಎಂಎನ್‌ಎಸ್‌ ಮೈತ್ರಿ..?

ಮುಂಬೈ : ಮುಂಬೈ ಬಿಜೆಪಿ ಮುಖ್ಯಸ್ಥ ಆಶಿಶ್ ಶೆಲಾರ್‌ ಸೋಮವಾರ ಮಹಾರಾಷ್ಟ್ರ ನಿರ್ಮಾಣ ಸೇನೆ (MNS) ಅಧ್ಯಕ್ಷ ರಾಜ್ ಠಾಕ್ರೆ ಅವರನ್ನು ಭೇಟಿ ಮಾಡಿದ್ದು, ಇದು ಬಿಜೆಪಿ-ಎಂಎನ್‌ಎಸ್‌ ಪಕ್ಷಗಳ ನಡುವಿನ ಸಂಭವನೀಯ ಚುನಾವಣಾ ಮೈತ್ರಿ ಕುರಿತ ಊಹಾಪೋಹಗಳಿಗೆ ಕಾರಣವಾಗಿದೆ. ಹಳೆಯ ಸ್ನೇಹಿತರ ನಡುವೆ ಸಭೆಗಳು ನಡೆಯುತ್ತವೆ ಎಂದು ಶೆಲಾರ್ ಹೇಳಿದ್ದಾರೆ. ಆದಾಗ್ಯೂ, “ವಿವರಗಳನ್ನು ಸೂಕ್ತ ಸಮಯದಲ್ಲಿ … Continued

ಲೋಕಸಭೆ ಚುನಾವಣೆ ಸ್ಪರ್ಧಾ ಕಣಕ್ಕೆ ಪ್ರಿಯಾಂಕಾ ಗಾಂಧಿ ಎಂಟ್ರಿ..? ಮಗಳಿಗಾಗಿ ರಾಯ್ಬರೇಲಿ ಕ್ಷೇತ್ರ ಬಿಟ್ಕೊಟ್ಟು ರಾಜ್ಯಸಭೆಗೆ ಸ್ಪರ್ಧೆ ಮಾಡ್ತಾರಾ ಸೋನಿಯಾ ಗಾಂಧಿ..?!

ನವದೆಹಲಿ: ಕಾಂಗ್ರೆಸ್ ವರಿಷ್ಠೆ ಸೋನಿಯಾ ಗಾಂಧಿ ಅವರು ರಾಜಸ್ಥಾನದಿಂದ ರಾಜ್ಯಸಭಾ ಚುನಾವಣೆಗೆ ಸ್ಪರ್ಧಿಸಬಹುದು ಎಂದು ಮೂಲಗಳು ತಿಳಿಸಿವೆ. ಪ್ರಸ್ತುತ, ಅವರು ರಾಯ್‌ಬರೇಲಿ ಕ್ಷೇತ್ರದ ಲೋಕಸಭಾ ಸದಸ್ಯರಾಗಿದ್ದಾರೆ. ಬಿಹಾರದಿಂದ ಕಾಂಗ್ರೆಸ್ ಅಭ್ಯರ್ಥಿಯಾಗಿ ರಾಜ್ಯಸಭಾ ಸಂಸದ ಅಖಿಲೇಶ್ ಪ್ರಸಾದ್ ಸಿಂಗ್ ನಾಮನಿರ್ದೇಶನಗೊಳ್ಳಬಹುದು. ರಾಜ್ಯಸಭಾ ಚುನಾವಣೆಗೆ ಕಾಂಗ್ರೆಸ್ ನಿಂದ ಕಣಕ್ಕಿಳಿಯುವ ಸಾಧ್ಯತೆಯಿರುವ ಇತರ ನಾಯಕರಲ್ಲಿ ಅಭಿಷೇಕ್ ಮನು ಸಿಂಘ್ವಿ ಮತ್ತು … Continued

ನಡ್ಡಾ, ಬಿ.ಎಲ್‌. ಸಂತೋಷ ಭೇಟಿ ನಂತರ ಪ್ರಧಾನಿ ಮೋದಿ ಭೇಟಿ ಮಾಡಿದ ಸುಮಲತಾ ಅಂಬರೀಷ : ಮಂಡ್ಯ ಟಿಕೆಟ್‌ ಬಗ್ಗೆ ಚರ್ಚೆ..?

ನವದೆಹಲಿ : ಗುರುವಾರ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಹಾಗೂ ಪಕ್ಷದ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿ.ಎಲ್‌. ಸಂತೋಷ ಅವರನ್ನು ಭೇಟಿಯಾಗಿದ್ದ ಸುಮಲತಾ ಶುಕ್ರವಾರ ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದ್ದಾರೆ. ಈ ವೇಳೆ ಮಂಡ್ಯ ಟಿಕೆಟ್‌ ಬಗ್ಗೆ ಮೋದಿ ಅವರ ಜೊತೆ ಸುಮಲತಾ ಚರ್ಚೆ ನಡೆಸಿದ್ದು, ಪ್ರಧಾನಿ ಟಿಕೆಟ್‌ ಭರವಸೆ … Continued

ಈಗಲೇ ಲೋಕಸಭೆ ಚುನಾವಣೆ ನಡೆದರೆ ಕರ್ನಾಟಕದಲ್ಲಿ ಬಿಜೆಪಿ – ಜೆಡಿಎಸ್‌ ಮೈತ್ರಿ 24 ಸ್ಥಾನಗಳಲ್ಲಿ ಗೆಲ್ಲಬಹುದು.; ಮೂಡ್ ಆಫ್ ದಿ ನೇಷನ್ ಸಮೀಕ್ಷೆ

ನವದೆಹಲಿ: ಈಗಲೇ ಲೋಕಸಭೆ ಚುನಾವಣೆಯಲ್ಲಿ ಕರ್ನಾಟಕದ 28 ಲೋಕಸಭಾ ಸ್ಥಾನಗಳಲ್ಲಿ ಬಿಜೆಪಿ-ಜೆಡಿಎಸ್‌ ಮೈತ್ರಿಯ ಎನ್‌ಡಿಎ 24 ಸ್ಥಾನಗಳನ್ನು ಗಳಿಸುವ ನಿರೀಕ್ಷೆಯಿದೆ ಎಂದು ಖಾಸಗಿ ಸುದ್ದಿವಾಹಿನಿ ಇಂಡಿಯಾ ಟುಡೇ ‘ಮೂಡ್ ಆಫ್ ದಿ ನೇಷನ್‌ ಸಮೀಕ್ಷೆ’ ತಿಳಿಸಿದೆ. ರಾಜ್ಯದ ಲೋಕಸಭಾ ಕ್ಷೇತ್ರಗಳಲ್ಲಿ 2023 ಡಿಸೆಂಬರ್ 15 ರಿಂದ 2024 ಜನವರಿ 28 ರ ನಡುವೆ ನಡೆಸಿದ ಚುನಾವಣಾ … Continued

ಹೈಕಮಾಂಡ್‌ ಹೇಳಿದಂತೆ ಕೇಳಲು ನಾನೇನು ಫುಟ್‌ಬಾಲ್‌ ಚೆಂಡಾ : ಪ್ರಕಾಶ ಹುಕ್ಕೇರಿ

ಬೆಳಗಾವಿ : ‘ನಾನು ಚಿಕ್ಕೋಡಿ ಕ್ಷೇತ್ರದಿಂದ ಲೋಕಸಭೆಗೆ ಸ್ಪರ್ಧೆ ಮಾಡುವುದಿಲ್ಲ. ವಿಧಾನ ಪರಿಷತ್ ಸದಸ್ಯನಾಗಿ ಮುಂದುವರೆಯುತ್ತೇನೆ. ಹೈಕಮಾಂಡ್‌ ಹೇಳಿದಂತೆ ಕೇಳಲು ನಾನೇನು ಫುಟ್‌ಬಾಲಾ?’ ಎಂದು ಕಾಂಗ್ರೆಸ್‌ ನಾಯಕ ಪ್ರಕಾಶ ಹುಕ್ಕೇರಿ ಹೇಳಿದ್ದಾರೆ. ಜಿಲ್ಲೆಯ ಚಿಕ್ಕೋಡಿ ತಾಲೂಕಿನ ಕೇರೂರು ಗ್ರಾಮದಲ್ಲಿ ಗುರುವಾರ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ‘ಹೈಕಮಾಂಡ್‌ ಹೇಳಿದರೂ ಸ್ಪರ್ಧಿಸುವುದಿಲ್ಲ. ಹೈಕಮಾಂಡ್‌ ಹೇಳಿದ ತಕ್ಷಣ ಹೋಗಲು ಇದೇನು … Continued