ರಾಹುಲ್ ಗಾಂಧಿ ಶ್ರೀರಾಮನ ಹಾದಿಯಲ್ಲಿ ಸಾಗುತ್ತಿದ್ದಾರೆ ಎಂದ ನಾನಾ ಪಟೋಲೆ ; ಇದು “ಅತಿರೇಕದ ಚಮಚಾಗಿರಿ” ಎಂದ ಬಿಜೆಪಿ

ನವದೆಹಲಿ : ಕಾಂಗ್ರೆಸ್ ನಾಯಕ ನಾನಾ ಪಟೋಲೆ ಅವರು ರಾಹುಲ್ ಗಾಂಧಿ ಅವರನ್ನು ಭಗವಾನ್ ಶ್ರೀರಾಮನಿಗೆ ಹೋಲಿಸಿರುವುದು ಇದೀಗ ರಾಜಕೀಯ ಸಂಘರ್ಷಕ್ಕೆ ಕಾರಣವಾಗಿದೆ. ಪಟೋಲೆ ಅವರ ಈ ಹೇಳಿಕೆಯನ್ನು ಬಿಜೆಪಿ “ಅತಿರೇಕದ ಚಮಚಾಗಿರಿ” (Sycophancy Pro Max) ಎಂದು ಟೀಕಿಸಿದೆ. ಅಯೋಧ್ಯೆಯ ರಾಮ ಮಂದಿರ ಉದ್ಘಾಟನೆಯಾದ ನಂತರ ರಾಹುಲ್ ಗಾಂಧಿ ಅವರು ಅಲ್ಲಿಗೆ ಭೇಟಿ ನೀಡದಿರುವ … Continued

ಅಯೋಧ್ಯೆಯ ʼಭಗವಾನ್‌ ರಾಮಲಲ್ಲಾʼನ ಚಿತ್ರ ಇರುವ ವಿಶ್ವದ ಮೊದಲ ಅಂಚೆ ಚೀಟಿ ಬಿಡುಗಡೆ ಮಾಡಿದ ಲಾವೋಸ್‌ ದೇಶ…!

ನವದೆಹಲಿ : ಅಯೋಧ್ಯೆಯ ಶ್ರೀರಾಮ ಲಲ್ಲಾ ಒಳಗೊಂಡ ಅಂಚೆ ಚೀಟಿಯನ್ನು ಲಾವೊ ಪೀಪಲ್ಸ್ ಡೆಮಾಕ್ರಟಿಕ್ ರಿಪಬ್ಲಿಕ್ (ಲಾವೊ ಪಿಡಿಆರ್) ಬಿಡುಗಡೆ ಮಾಡಿದ್ದು, ಹಿಂದೂ ದೇವರನ್ನು ಒಳಗೊಂಡ ಅಂಚೆಚೀಟಿ ಬಿಡುಗಡೆ ಮಾಡಿದ ವಿಶ್ವದ ಮೊದಲ ದೇಶವಾಗಿದೆ. ಭಾರತದ ವಿದೇಶಾಂಗ ವ್ಯವಹಾರಗಳ ಸಚಿವ ಡಾ ಎಸ್ ಜೈಶಂಕರ ಅವರು ಲಾವೋಸ್‌ ದೇಶಕ್ಕೆ ಭೇಟಿ ನೀಡಿದ ಸಂದರ್ಭದಲ್ಲಿ ಭಾರತ ಮತ್ತು … Continued

‘ಬಿಜೆಪಿ ದುರಹಂಕಾರ’ ಹೇಳಿಕೆಯ ಕೋಲಾಹಲದ ನಂತರ ಯೂ-ಟರ್ನ್ ಹೊಡೆದ ಆರ್‌ ಎಸ್‌ ಎಸ್ ನಾಯಕ

ನವದೆಹಲಿ : 2024ರ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿಯ ಸಾಧನೆ ಕುರಿತು ವಿವಾದಾತ್ಮಕ ಹೇಳಿಕೆ ನೀಡಿದ ಬಳಿಕ ಆರ್‌ಎಸ್‌ಎಸ್‌ ಪ್ರಮುಖ ಇಂದ್ರೇಶಕುಮಾರ ಅವರು ತಮ್ಮ ಹೇಳಿಕೆಗೆ ಸ್ಪಷ್ಟನೆ ನೀಡಿದ್ದಾರೆ. ಭಗವಾನ್‌ ರಾಮನ ಮಹಿಮೆ ಮರುಸ್ಥಾಪನೆಯ ಗುರಿಯ ಹೊಂದಿದ್ದವರು ಅಧಿಕಾರಕ್ಕೆ ಬಂದಿದ್ದಾರೆ. ಭಗವಾನ್‌ ರಾಮನನ್ನು ವಿರೋಧಿಸಿದವರು ಸೋತಿದ್ದಾರೆ ಎಂದು ಹೇಳಿದ್ದಾರೆ. . ಜೈಪುರ ಬಳಿ ಗುರುವಾರ ನಡೆದ ಕಾರ್ಯಕ್ರಮವೊಂದರಲ್ಲಿ … Continued

ಮಂಗಳೂರು : ಶ್ರೀರಾಮನಿಗೆ ಅವಹೇಳನ ಮಾಡಿದ ಆರೋಪ ; ಸಂತ ಜೆರೋಸಾ ಶಾಲಾ ಶಿಕ್ಷಕಿ ಅಮಾನತು

ಮಂಗಳೂರು: ಭಗವಾನ್‌ ಶ್ರೀರಾಮನಿಗೆ ಅವಹೇಳನ ಮಾಡಿದ ಆರೋಪಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಸಂತ ಜೆರೋಸಾ ಶಾಲೆಯ ಶಿಕ್ಷಕಿ ಸಿಸ್ಟರ್ ಪ್ರಭಾ ಅವರನ್ನು ಆಡಳಿತ ಮಂಡಳಿ ಅಮಾನತು ಮಾಡಿದೆ ಎಂದು ವರದಿಯಾಗಿದೆ. ಘಟನೆ ಖಂಡಿಸಿ ಬಿಜೆಪಿ ಶಾಸಕ ವೇದವ್ಯಾಸ್ ಕಾಮತ್ ನೇತೃತ್ವದಲ್ಲಿ ಇಂದು, ಸೋಮವಾರ ಪೋಷಕರು ಶಾಲೆಗೆ ಮುತ್ತಿಗೆ ಹಾಕಲು ಯತ್ನಿಸಿದರು. ಈ ವೇಳೆ ಸ್ಥಳಕ್ಕಾಗಮಿಸಿದ ಆಡಳಿತ ಮಂಡಳಿ … Continued

ಶ್ರೀರಾಮನ ವಿಚಾರದಲ್ಲಿ ಯಾವುದೇ ರಾಜಿ ಇಲ್ಲ : ಕಾಂಗ್ರೆಸ್ಸಿಗೆ ಆಚಾರ್ಯ ಪ್ರಮೋದ್ ಕೃಷ್ಣಂ ತಿರುಗೇಟು

ಲಕ್ನೋ : ಪಕ್ಷ ವಿರೋಧಿ ಚಟುವಟಿಕೆ ಆರೋಪದ ಮೇರೆಗೆ 6 ವರ್ಷಗಳ ಕಾಲ ಪಕ್ಷದಿಂದ ಉಚ್ಚಾಟನೆ ಮಾಡಿರುವ ಕಾಂಗ್ರೆಸ್ ಕ್ರಮಕ್ಕೆ ತಿರುಗೇಟು ನೀಡಿರುವ ಉತ್ತರ ಪ್ರದೇಶ ಕಾಂಗ್ರೆಸ್ ನಾಯಕ ಆಚಾರ್ಯ ಪ್ರಮೋದ್ ಕೃಷ್ಣಂ ಪಕ್ಷವು ತನ್ನನ್ನು ‘ಬಿಡುಗಡೆʼ ಮಾಡಿದ್ದಕ್ಕೆ ಧನ್ಯವಾದ ಹೇಳಿದ್ದಾರೆ. ಕಾಂಗ್ರೆಸ್ ಪಕ್ಷದಿಂದ ಉಚ್ಚಾಟನೆ ಮಾಡಿದ ಬೆನ್ನಲ್ಲೇ ಈ ಕುರಿತು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, … Continued

ಅಯೋಧ್ಯೆ ರಾಮಮಂದಿರದ ರಾಮಲಲ್ಲಾ ವಿಗ್ರಹದ ಮೇಲೆ ಯಾವೆಲ್ಲ ಆಭರಣಗಳಿವೆ…?

ಅಯೋಧ್ಯೆ: ರಾಮ ಮಂದಿರದಲ್ಲಿ ಭಗವಾನ್‌ ರಾಮ ಲಲ್ಲಾ ವಿಗ್ರಹ ‘ಪ್ರಾಣ ಪ್ರತಿಷ್ಠೆ’ ಕಾರ್ಯಕ್ರಮವನ್ನು ಪ್ರಧಾನಿ ನರೇಂದ್ರ ಮೋದಿ ಸೋಮವಾರ ಅದ್ಧೂರಿ ಸಮಾರಂಭದಲ್ಲಿ ನೆರವೇರಿಸಿದರು. ಅಯೋಧ್ಯೆಯ ರಾಮಜನ್ಮಭೂಮಿಯಲ್ಲಿ ನಡೆದ ಐತಿಹಾಸಿಕ ಕಾರ್ಯಕ್ರಮದಲ್ಲಿ ಸಾವಿರಾರು ಸಂತರು, ಕಲಾವಿದರು, ಸೆಲೆಬ್ರಿಟಿಗಳು, ಉದ್ಯಮಿಗಳು, ರಾಜಕಾರಣಿಗಳು ಸೇರಿದಂತೆ ಏಳು ಸಾವಿರಕ್ಕೂ ಹೆಚ್ಚು ವಿಶೇಷ ಆಹ್ವಾನಿತರು ಭಾಗವಹಿಸಿದ್ದರು. ಜನವರಿ 23 ರಿಂದ ಭಕ್ತರಿಗಾಗಿ ದೇವಾಲಯವನ್ನು … Continued

ಕುಮಟಾ: ಅಯೋಧ್ಯೆಯಲ್ಲಿ ರಾಮ ಮಂದಿರ ಉದ್ಘಾಟನೆ ಸಂಭ್ರಮ, ಕಡ್ಲೆ ಕಡಲತೀರದ ಮರಳಿನಲ್ಲಿ ಮೂಡಿದ ಶ್ರೀರಾಮ…

ಕುಮಟಾ : ಉತ್ತರ ಕನ್ನಡ ಜಿಲ್ಲೆಯ ಕುಮಟಾ ತಾಲೂಕಿನ ಅರಬ್ಬಿ ಸಮುದ್ರದ ಕಡ್ಲೆಯ ತೀರದ ಮರಳಿನಲ್ಲಿ ವಿನಾಯಕ ಆಚಾರಿ ಎಂಬವರು ಶ್ರೀರಾಮನನ್ನು ಅರಳಿಸಿದ್ದಾರೆ. ಅಯೋಧ್ಯೆಯಲ್ಲಿ ಜನವರಿ 22ರಂದು ಸೋಮವಾರ ಬಾಲರಾಮನ ಮೂರ್ತಿಯ ಪ್ರತಿಷ್ಠಾಪನೆ ನಿಮಿತ್ತ ದೇಶಾದ್ಯಂತ ಸಂಭ್ರಮ ಮನೆ ಮಾಡಿದೆ. ಕಡ್ಲೆಯ ಜಟ್ಟಿ ಆಚಾರಿ ಕುಟುಂಬದ ವಿನಾಯಕ ಆಚಾರಿ ಸಮುದ್ರ ತೀರಕ್ಕೆ ಬಂದಾಗ ಮುಸ್ಸಂಜೆ ಹೊತ್ತಲ್ಲಿ … Continued

ಅಯೋಧ್ಯೆ ರಾಮಮಂದಿರದ ಪ್ರಾಣ ಪ್ರತಿಷ್ಠೆ ಸಮಾರಂಭಕ್ಕೂ ಮುನ್ನ ರಾಮ ಲಲ್ಲಾ ವಿಗ್ರಹದ ಮುಖದ ಫೋಟೋ ಬಿಡುಗಡೆ

ನವದೆಹಲಿ : ಅಯೋಧ್ಯೆ ರಾಮಮಂದಿರದ ಪ್ರಾಣ ಪ್ರತಿಷ್ಠಾಪನೆ ಜನವರಿ 22 ರಂದು ನಡೆಯಲಿದ್ದು, ರಾಮ ಮಂದಿರದ ಗರ್ಭಗುಡಿಯಲ್ಲಿ ಇರಿಸಲಾಗಿರುವ ರಾಮನ ವಿಗ್ರಹವನ್ನು ಸಮಾರಂಭಕ್ಕೆ ಕೆಲವು ದಿನಗಳ ಮುಂಚಿತವಾಗಿ ಶುಕ್ರವಾರ ಬಹಿರಂಗಪಡಿಸಲಾಗಿದೆ. ವಿಗ್ರಹವು ಭಗವಾನ್ ರಾಮನನ್ನು ಐದು ವರ್ಷದ ಮಗುವಿನಂತೆ ಚಿತ್ರಿಸಿದ್ದು, ಚಿನ್ನದ ಬಿಲ್ಲು ಮತ್ತು ಬಾಣವನ್ನು ಹಿಡಿದು ನಿಂತಿರುವ ಭಂಗಿಯಲ್ಲಿದೆ.ಮೈಸೂರು ಮೂಲದ ಕಲಾವಿದ ಅರುಣ ಯೋಗಿರಾಜ … Continued

ʼಭಗವಾನ್ ರಾಮನು ಮಾಂಸಾಹಾರಿ’ : ರಾಮ ಮಂದಿರ ಉದ್ಘಾಟನೆಗೆ ಮುನ್ನ ವಿವಾದ ಸೃಷ್ಟಿಸಿದ ಎನ್‌ಸಿಪಿ ನಾಯಕ ಜಿತೇಂದ್ರ ಅವ್ಹಾದ್ ಹೇಳಿಕೆ

ಮುಂಬೈ : ಅಯೋಧ್ಯೆಯಲ್ಲಿ ಬೃಹತ್ ರಾಮ ಮಂದಿರದ ಉದ್ಘಾಟನೆ ಸಮಾರಂಭ ನಡೆಯುವ ಕೆಲವು ದಿನಗಳ ಮೊದಲು, ರಾಷ್ಟ್ರೀಯವಾದಿ ಕಾಂಗ್ರೆಸ್ ಪಕ್ಷದ (ಎನ್‌ಸಿಪಿ) ನಾಯಕ ಜಿತೇಂದ್ರ ಅವ್ಹಾದ್ ಅವರು “ಭಗವಾನ್ ರಾಮನು ಮಾಂಸಾಹಾರಿ” ಎಂದು ಹೇಳಿಕೆ ನೀಡಿರುವುದು ವಿವಾದಕ್ಕೆ ಕಾರಣವಾಗಿದೆ. ಎನ್‌ಸಿಪಿಯ ಶರದ್ ಪವಾರ ಬಣಕ್ಕೆ ಸೇರಿದ ಜಿತೇಂದ್ರ ಅವ್ಹಾದ್ ಅವರು ಬುಧವಾರ ಮಹಾರಾಷ್ಟ್ರದ ಶಿರಡಿಯಲ್ಲಿ ನಡೆದ … Continued

ಅನೇಕ ಕಾಂಗ್ರೆಸ್ ನಾಯಕರು ಭಗವಾನ್ ರಾಮ, ‘ಹಿಂದೂ’ ಎಂಬ ಪದವನ್ನು ದ್ವೇಷಿಸುತ್ತಾರೆ ; ಕಾಂಗ್ರೆಸ್‌ ನಾಯಕ ಆಚಾರ್ಯ ಪ್ರಮೋದ್ ಕೃಷ್ಣಂ

ನವದೆಹಲಿ: ಕಾಂಗ್ರೆಸ್ ನಾಯಕ ಆಚಾರ್ಯ ಪ್ರಮೋದ ಕೃಷ್ಣಂ ಅವರು ಶುಕ್ರವಾರ ತಮ್ಮ ಪಕ್ಷದಲ್ಲಿ ಶ್ರೀರಾಮನನ್ನು ಮತ್ತು ‘ಹಿಂದೂ’ ಪದವನ್ನು ದ್ವೇಷಿಸುವ ಅನೇಕ ನಾಯಕರು ಇದ್ದಾರೆ ಎಂದು ಹೇಳಿದ್ದಾರೆ. “ಕಾಂಗ್ರೆಸ್‌ನಲ್ಲಿ ರಾಮನನ್ನು ದ್ವೇಷಿಸುವ ಕೆಲವು ನಾಯಕರಿದ್ದಾರೆ ಎಂದು ನನಗೆ ಅನಿಸಿದೆ, ಈ ನಾಯಕರೂ ಹಿಂದೂ ಪದವನ್ನು ದ್ವೇಷಿಸುತ್ತಾರೆ, ಅವರು ಹಿಂದೂ ಧಾರ್ಮಿಕ ಗುರುಗಳನ್ನು ಅವಮಾನಿಸಲು ಬಯಸುತ್ತಾರೆ, ಪಕ್ಷದಲ್ಲಿ … Continued