ರಾಮ ಜನ್ಮಭೂಮಿ ಟ್ರಸ್ಟ್ ಅಧ್ಯಕ್ಷ ಮಹಂತ ನೃತ್ಯ ಗೋಪಾಲ ದಾಸ್ ಆಸ್ಪತ್ರೆಗೆ ದಾಖಲು

ಲಕ್ನೋ : ಶ್ರೀ ರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್‌ನ ಅಧ್ಯಕ್ಷ ಮಹಂತ ನೃತ್ಯ ಗೋಪಾಲ ದಾಸ್ (89) ಅವರಿಗೆ ಮೂತ್ರನಾಳದ ಸೋಂಕು (ಯೂರಿನರಿ ಟ್ರ್ಯಾಕ್ಟ್ ಇನ್ಫೆಕ್ಷನ್–ಯುಟಿಐ) ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಲಕ್ನೋದ ಖಾಸಗಿ ಮೆದಾಂತ ಆಸ್ಪತ್ರೆಗೆ ದಾಖಲಿಸಲಾಗಿದ್ದು, ತೀವ್ರ ನಿಗಾ ಘಟಕದಲ್ಲಿ (ಐಸಿಯು) ಚಿಕಿತ್ಸೆ ನೀಡಲಾಗುತ್ತಿದೆ. ಬುಧವಾರ ಮೆದಾಂತ ಆಸ್ಪತ್ರೆ ಬಿಡುಗಡೆ ಮಾಡಿದ ವೈದ್ಯಕೀಯ ಪ್ರಕಟಣೆಯ … Continued

ಭೀಕರ ಅಗ್ನಿ ದುರಂತ : ಕೋಚಿಂಗ್ ಸೆಂಟರ್‌ನಲ್ಲಿ 14 ಮಂದಿ ಸಜೀವ ದಹನ

ಲಕ್ನೋ: ಉತ್ತರ ಪ್ರದೇಶದ ರಾಜಧಾನಿ ಲಕ್ನೋದಲ್ಲಿ ಸೋಮವಾರ ಮಧ್ಯಾಹ್ನ ಭೀಕರ ಅಗ್ನಿ ಅವಘಡ ಸಂಭವಿಸಿದ್ದು, ವಾಣಿಜ್ಯ ಸಂಕೀರ್ಣವೊಂದರಲ್ಲಿ ಕಾಣಿಸಿಕೊಂಡ ಭಾರೀ ಬೆಂಕಿ ಅವಘಡದಲ್ಲಿ ಕನಿಷ್ಠ 14 ಜನರು ಸಾವಿಗೀಡಾಗಿದ್ದಾರೆ ಎಂದು ವರದಿಯಾಗಿದೆ. ಬೆಂಕಿ ಅನಾಹುತದಲ್ಲಿ ಸಿಲುಕಿರುವವರನ್ನು ರಕ್ಷಿಸಲು ಮತ್ತು ಬೆಂಕಿ ನಂದಿಸಲು ಹರಸಾಹಸ ಪಡಲಾಗುತ್ತಿದ್ದು, ಬೃಹತ್ ರಕ್ಷಣಾ ಕಾರ್ಯಾಚರಣೆ ಮುಂದುವರಿದಿದೆ. ಫೈರ್ ಬ್ರಿಗೇಡ್ ಇಲಾಖೆಯ ಮಾಹಿತಿ … Continued

ಮುಲಾಯಂ ಸಿಂಗ್ ಯಾದವ್ ಕಿರಿಯ ಪುತ್ರ, ಅಖಿಲೇಶ ಮಲಸಹೋದರ ಪ್ರತೀಕ ಯಾದವ್ ನಿಧನ

ಲಕ್ನೋ: ಸಮಾಜವಾದಿ ಪಕ್ಷದ ಸಂಸ್ಥಾಪಕ ದಿವಂಗತ ಮುಲಾಯಂ ಸಿಂಗ್ ಯಾದವ್ ಅವರ ಕಿರಿಯ ಪುತ್ರ ಹಾಗೂ ಎಸ್‌ಪಿ ಮುಖ್ಯಸ್ಥ ಅಖಿಲೇಶ ಯಾದವ್ ಅವರ ಸಹೋದರ ಪ್ರತೀಕ ಯಾದವ್ (38) ಅವರು ಬುಧವಾರ ಲಕ್ನೋದಲ್ಲಿ ನಿಧನರಾಗಿದ್ದಾರೆ. ಪ್ರತೀಕ್ ಅವರು ಬಿಜೆಪಿ ನಾಯಕಿ ಅಪರ್ಣಾ ಯಾದವ್ ಅವರ ಪತಿ. ಮೂಲಗಳ ಪ್ರಕಾರ, ಪ್ರತೀಕ ಅವರನ್ನು ಬುಧವಾರ ಮುಂಜಾನೆ ಸುಮಾರು … Continued

ರಾಹುಲ್ ಗಾಂಧಿ ಪೌರತ್ವ ವಿವಾದ: ಅರ್ಜಿದಾರರ ನಡವಳಿಕೆಗೆ ಅಲಹಾಬಾದ್ ಹೈಕೋರ್ಟ್ ತರಾಟೆ; ವಿಚಾರಣೆಯಿಂದ ಹಿಂದೆ ಸರಿದ ನ್ಯಾಯಮೂರ್ತಿಗಳು

ಲಕ್ನೋ: ಲೋಕಸಭೆಯ ವಿಪಕ್ಷದ ನಾಯಕ ರಾಹುಲ್ ಗಾಂಧಿ ಅವರ ಬ್ರಿಟಿಷ್ ಪೌರತ್ವದ ಆರೋಪಕ್ಕೆ ಸಂಬಂಧಿಸಿದಂತೆ ಎಫ್‌ಐಆರ್ ದಾಖಲಿಸುವಂತೆ ಕೋರಿ ಬಿಜೆಪಿ ಕಾರ್ಯಕರ್ತರೊಬ್ಬರು ಸಲ್ಲಿಸಿದ್ದ ಅರ್ಜಿಯ ವಿಚಾರಣೆಯ ವೇಳೆ, ಅಲಹಾಬಾದ್ ಹೈಕೋರ್ಟ್ ಸೋಮವಾರ ಅರ್ಜಿದಾರರ ವಿರುದ್ಧ ತೀವ್ರ ಅಸಮಾಧಾನ ವ್ಯಕ್ತಪಡಿಸಿದೆ. ನ್ಯಾಯಾಲಯದ ಕಾರ್ಯವೈಖರಿಯ ಬಗ್ಗೆ ಸಾಮಾಜಿಕ ಜಾಲತಾಣಗಳಲ್ಲಿ ಪೋಸ್ಟ್‌ಗಳನ್ನು ಹಾಕುವ ಮೂಲಕ ನ್ಯಾಯಾಲಯದ ಘನತೆಗೆ ಚ್ಯುತಿ ತರಲಾಗಿದೆ … Continued

ರಾಹುಲ್ ಗಾಂಧಿಗೆ ಸಂಕಷ್ಟ : ಬ್ರಿಟಿಷ್ ಪೌರತ್ವ ಆರೋಪ ; ಎಫ್‌ಐಆರ್ ದಾಖಲಿಸಲು ಅಲಹಾಬಾದ್ ಹೈಕೋರ್ಟ್ ಆದೇಶ

ಲಕ್ನೋ : ಲೋಕಸಭೆಯ ವಿಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ದೊಡ್ಡ ಸಂಕಷ್ಟ ಎದುರಾಗಿದೆ. ರಾಹುಲ್ ಗಾಂಧಿ ಅವರು ಬ್ರಿಟಿಷ್ ಪ್ರಜೆಯಾಗಿದ್ದು, ಬ್ರಿಟನ್ ಪಾಸ್‌ಪೋರ್ಟ್ ಹೊಂದಿದ್ದಾರೆ ಎಂಬ ಗಂಭೀರ ಆರೋಪಕ್ಕೆ ಸಂಬಂಧಿಸಿದಂತೆ ಅವರ ವಿರುದ್ಧ ತಕ್ಷಣವೇ ಎಫ್‌ಐಆರ್ (FIR) ದಾಖಲಿಸುವಂತೆ ಅಲಹಾಬಾದ್ ಹೈಕೋರ್ಟ್ ಶುಕ್ರವಾರ ಮಹತ್ವದ ಆದೇಶ ನೀಡಿದೆ. ಅಲಹಾಬಾದ್ ಹೈಕೋರ್ಟ್‌ನ ಏಕಸದಸ್ಯ ಪೀಠದ ನ್ಯಾಯಮೂರ್ತಿ … Continued

ನೀಟ್ ಪರೀಕ್ಷೆ ಬರೆ ಎಂದಿದ್ದಕ್ಕೆ ತಂದೆಯನ್ನೇ ಕೊಂದ ಮಗ…! ತಂಗಿಯ ಎದುರೇ ದೇಹ ಕತ್ತರಿಸಿ ಡ್ರಮ್‌ನಲ್ಲಿ ಅಡಗಿಸಿಟ್ಟಿದ್ದ…!

ಲಕ್ನೋ: ತಂದೆಯ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ 21 ವರ್ಷದ ಯುವಕನೊಬ್ಬನನ್ನು ಲಕ್ನೋ ಪೊಲೀಸರು ಬಂಧಿಸಿದ್ದಾರೆ. ಲಕ್ನೋ ನಗರದ ಆಶಿಯಾನಾ ಪ್ರದೇಶದಲ್ಲಿ ಈ ಘಟನೆ ನಡೆದಿದ್ದು, ಮೃತರನ್ನು ಸ್ಥಳೀಯ ಉದ್ಯಮಿ ಮಾನ್ವೇಂದ್ರ ಪ್ರತಾಪ್ ಸಿಂಗ್ ಎಂದು ಗುರುತಿಸಲಾಗಿದೆ. ಫೆಬ್ರವರಿ 20 ರಿಂದ ಮಾನ್ವೇಂದ್ರ ಅವರು ನಾಪತ್ತೆಯಾಗಿದ್ದರು. ಪೊಲೀಸರ ತೀವ್ರ ಶೋಧದ ನಂತರ ಅವರ ಮೃತದೇಹ ಪತ್ತೆಯಾಗಿದ್ದು, ಮಗ … Continued

ಪತಿಯನ್ನು ಜೈಲಿಗೆ ಕಳುಹಿಸಿ ವಿಚ್ಛೇದನ ಪಡೆಯಲು ಪತ್ನಿಯಿಂದ ಪ್ರಿಯಕರನ ಜೊತೆ ಸೇರಿ ‘ಗೋಮಾಂಸ’ದ ಸಂಚು…!

ಲಕ್ನೋ: ಸಿನಿಮೀಯ ಶೈಲಿಯಲ್ಲಿ ಪತಿಯನ್ನು ಸುಳ್ಳು ಪ್ರಕರಣದಲ್ಲಿ ಸಿಲುಕಿಸಲು ಪತ್ನಿಯೊಬ್ಬಳು ತನ್ನ ಪ್ರಿಯಕರನೊಂದಿಗೆ ಸೇರಿ ನಡೆಸಿದ ಭೀಕರ ಸಂಚನ್ನು ಪೊಲೀಸರು ಬಯಲಿಗೆಳೆದಿದ್ದಾರೆ. ಗೋಮಾಂಸ ಸಾಗಾಟದ ಆರೋಪ ಹೊರಿಸಿ ಪತಿಯನ್ನು ಜೈಲಿಗೆ ಅಟ್ಟಲು ಸಂಚು ನಡೆಸಿದ ಪತ್ನಿಯ ಕೃತ್ಯ ಈಗ ಬೆಳಕಿಗೆ ಬಂದಿದೆ. ಜನವರಿ 14 ರಂದು  ಉತ್ತರ ಪ್ರದೇಶದ ಲಕ್ನೋದ ಕಾಕೋರಿ ಪ್ರದೇಶದಲ್ಲಿ ಬಜರಂಗದಳದ ಕಾರ್ಯಕರ್ತರು … Continued

ವೀಡಿಯೊ…| ಸ್ಕೂಟರಿಗೆ ಡಿಕ್ಕಿ ಹೊಡೆದ ನಂತರ ಅದನ್ನು 11 ಕಿಮೀ ಎಳೆದೊಯ್ದ ಕಾರು ; ರಸ್ತೆಯಲ್ಲಿ ಕಿಡಿಯೋ ಕಿಡಿ…

ಲಕ್ನೋ: ವೇಗವಾಗಿ ಬಂದ ಎಸ್ ಯುವಿ ಡಿಕ್ಕಿ ಹೊಡೆದ ನಂತರ ಸ್ಕೂಟರ್ ಅನ್ನು ಎಳೆದುಕೊಂಡು ಹೋಗುತ್ತಿರುವ ಆಘಾತಕಾರಿ ವೀಡಿಯೊ ಅಂತರ್ಜಾಲದಲ್ಲಿ ಸದ್ದು ಮಾಡುತ್ತಿದೆ. ವೀಡಿಯೊದಲ್ಲಿ ಕಾರು ಸ್ಕೂಟರ್‌ ಅನ್ನು ಎಳೆದೊಯ್ಯುತ್ತಿರುವಾಗ ಕಿಡಿಯನ್ನು ಹೊರಸೂಸುತ್ತಿರುವುದನ್ನು ಕಾಣಬಹುದು. ಘಟನೆ ಭಾನುವಾರ ನಡೆದಿದ್ದು, ಕಾರು ಚಲಾಯಿಸುತ್ತಿದ್ದ ವ್ಯಕ್ತಿಯನ್ನು ವಾರಾಣಸಿ ನಿವಾಸಿಯಾಗಿರುವ ಇಂಜಿನಿಯರ್ ಬ್ರಜೇಶ್ ಸಿಂಗ್ ಎಂದು ಗುರುತಿಸಲಾಗಿದೆ. ಈ ಘಟನೆ … Continued

ಬೆಚ್ಚಿಬೀಳಿಸುವ ವೀಡಿಯೊ…| ಕಾರಿಗೆ ಬೈಕ್ ಡಿಕ್ಕಿ ಹೊಡೆದ ನಂತರ ಗಾಳಿಯಲ್ಲಿ ಎಸೆಯಲ್ಪಟ್ಟ ಬೈಕ್‌ ಸವಾರ….!

ಲಕ್ನೋ : ಲಕ್ನೋದ ಇಂದಿರಾ ನಗರದಲ್ಲಿ ಸಂಭವಿಸಿದ ಬೆಚ್ಚಿಬೀಳುವ ಘಟನೆಯೊಂದರ ಸಿಸಿಟಿವಿ ದೃಶ್ಯಾವಳಿಗಳುವೈರಲ್ ಆಗಿದ್ದು, ಕಾರು ಹಾಗೂ ಮೋಟರ್‌ ಸೈಕಲ್‌ ಡಿಕ್ಕಿಯ ಸಮಯದಲ್ಲಿ ಮೋಟಾರ್‌ ಸೈಕ್ಲಿಸ್ಟ್‌ ಗಾಳಿಯಲ್ಲಿ ಹಾರಿಬಿದ್ದ ದೃಶ್ಯ ಸೆರೆಯಾಗಿದೆ. ಲಕ್ನೋದ ಇಂದಿರಾ ನಗರದ ಸೆಕ್ಟರ್ 13 ರಲ್ಲಿನ ತಿರುವಿನಲ್ಲಿ ರಾಪಿಡೊ ಚಾಲಕನು ಸ್ವಿಫ್ಟ್ ಕಾರಿಗೆ ಡಿಕ್ಕಿ ಹೊಡೆದ ನಂತರ ಗಾಳಿಯಲ್ಲಿ ಚಿಮ್ಮಿ ನಂತರ … Continued

ಹೊಸ ವರ್ಷದ ಮೊದಲ ದಿನವೇ ಹೊಟೇಲ್‌ ನಲ್ಲಿ ತಾಯಿ, ನಾಲ್ವರು ಸಹೋದರಿಯರನ್ನು ಕೊಲೆ ಮಾಡಿದ ವ್ಯಕ್ತಿ…!

ಲಕ್ನೋ: ದುರಂತ ಘಟನೆಯೊಂದರಲ್ಲಿ ವ್ಯಕ್ತಿಯೊಬ್ಬ ಹೊಸ ವರ್ಷದ ದಿನವೇ ಲಕ್ನೋದ ಹೋಟೆಲ್‌ನಲ್ಲಿ ತನ್ನ ತಾಯಿ ಮತ್ತು ನಾಲ್ವರು ಸಹೋದರಿಯರನ್ನು ಕೊಂದಿದ್ದು, ಆರೋಪಿಯನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಪೋಲೀಸರ ಪ್ರಕಾರ, ಅರ್ಷದ್ (24) ಆಗ್ರಾ ಮೂಲದವನಾಗಿದ್ದು, ಕೌಟುಂಬಿಕ ಕಲಹದ ಕಾರಣದಿಂದ ಹೀಗೆ ಮಾಡಿರುವುದಾಗಿ ಪ್ರಾಥಮಿಕ ವಿಚಾರಣೆಯ ವೇಳೆ ತಿಳಿದುಬಂದಿದೆ. ಮೃತರನ್ನು ಅರ್ಷದ್‌ ಸಹೋದರಿಯರಾದ ಅಲಿಯಾ (9), … Continued