ʼಕ್ಯಾಶ್ ಆನ್ ಡೆಲಿವರಿʼ ಮಾಡುವುದಾಗಿ ಆನ್ಲೈನ್‌ ನಲ್ಲಿ ಐಫೋನ್ ಆರ್ಡರ್ ; ಹಣ ಕೊಡಬೇಕಲ್ಲ ಎಂದು ಡೆಲಿವರಿ ಏಜೆಂಟನನ್ನು ಕೊಂದೇಬಿಟ್ಟರು…!

ಲಕ್ನೋ: ಆನ್ಲೈನ್‌ನಲ್ಲಿ ಆರ್ಡರ್‌ ಮಾಡಿದ್ದ ₹ 1.5 ಲಕ್ಷ ಬೆಲೆಬಾಳುವ ಐ ಫೋನ್‌ ಅನ್ನು ತಲುಪಿಸಲು ಹೋದ 30 ವರ್ಷದ ವ್ಯಕ್ತಿ ಡೆಲಿವರಿ ಏಜೆಂಟ್‌ ನನ್ನು ಇಬ್ಬರು ಸೇರಿ ಕೊಂದಿರುವ ಘಟನೆ ಉತ್ತರ ಪ್ರದೇಶದ ರಾಜಧಾನಿ ಲಕ್ನೋನಲ್ಲಿ ನಡೆದಿದೆ ಎಂದು ಪೊಲೀಸರು ಸೋಮವಾರ ತಿಳಿಸಿದ್ದಾರೆ. ಡೆಲಿವರಿ ಏಜೆಂಟನ ಮೃತದೇಹವನ್ನು ಇಂದಿರಾ ಕಾಲುವೆಗೆ ಎಸೆಯಲಾಗಿದ್ದು, ಅದನ್ನು ಪತ್ತೆ … Continued

ಐಪಿಎಸ್ ಅಧಿಕಾರಿಯ ಮಗಳು ಹಾಸ್ಟೆಲ್ ಕೊಠಡಿಯಲ್ಲಿ ಶವವಾಗಿ ಪತ್ತೆ

ಲಕ್ನೋ: ಉತ್ತರ ಪ್ರದೇಶದ ಲಕ್ನೋದ ಡಾ.ರಾಮ್ ಮನೋಹರ್ ಲೋಹಿಯಾ ಕಾನೂನು ವಿಶ್ವವಿದ್ಯಾಲಯದಲ್ಲಿ ಭಾನುವಾರ (ಸೆಪ್ಟೆಂಬರ್ 1) 19 ವರ್ಷದ ವಿದ್ಯಾರ್ಥಿನಿ ಶವವಾಗಿ ಪತ್ತೆಯಾಗಿದ್ದಾಳೆ. ಅನಿಕಾ ರಸ್ತೋಗಿ ಎಂಬ ವಿದ್ಯಾರ್ಥಿನಿಯನ್ನು ಪ್ರಜ್ಞಾಹೀನ ಸ್ಥಿತಿಯಲ್ಲಿ ಆಸ್ಪತ್ರೆಗೆ ಕರೆದೊಯ್ಯಲಾಯಿತು, ಅಲ್ಲಿ ವೈದ್ಯರು ವಿದ್ಯಾರ್ಥಿನಿ ಮೃತಪಟ್ಟಿದ್ದಾಳೆ ಎಂದು ಘೋಷಿಸಿದರು. ವರದಿಗಳ ಪ್ರಕಾರ, ವಿದ್ಯಾರ್ಥಿನಿಯು ಹಾಸ್ಟೆಲ್‌ನ ತನ್ನ ಕೊಠಡಿಯ ಬಾಗಿಲು ತೆರೆಯದ ಕಾರಣ … Continued

ಕಳ್ಳತನ ಮಾಡಲು ಹೋಗಿ ಎಸಿ ಕೆಳಗೆ ನಿದ್ದೆಗೆ ಜಾರಿದ ಕಳ್ಳ ; ಪೊಲೀಸರು ಬಂದು ಎಬ್ಬಿಸಿದಾಗ ಬೆಚ್ಚಿಬಿದ್ದ…!

ಉತ್ತರ ಪ್ರದೇಶದ ರಾಜಧಾನಿ ಲಕ್ನೋದಲ್ಲಿ ನಡೆದ ವಿಚಿತ್ರ ಘಟನೆಯೊಂದರಲ್ಲಿ, ಕಳ್ಳತನ ಮಾಡಲು ಮನೆಗೆ ನುಗ್ಗಿದ ಕಳ್ಳನೊಬ್ಬ, ಹವಾನಿಯಂತ್ರಣದ (ಎಸಿ) ಅಡಿಯಲ್ಲಿ ನಿದ್ದೆಗೆ ಜಾರಿದ ನಂತರ ಪೊಲೀಸರ ಕೈಗೆ ಸಿಕ್ಕಿಬಿದ್ದ ಅಸಮಾಮಾನ್ಯ ಘಟನೆ ವರದಿಯಾಗಿದೆ. ಈತನ ಜೊತೆಗೆ ಬಂದಿದ್ದ ಉಳಿದ ಕಳ್ಳರು ಈತನನ್ನು ಗಾಢವಾದ ನಿದ್ರೆಯಿಂದ ಎಚ್ಚರಗೊಳಿಸಲು ವಿಫಲವಾಗಿ ಆತನನ್ನು ಮನೆಯಲ್ಲಿಯೇ ಬಿಟ್ಟುಹೋಗಿದ್ದಾರೆ. ಲಭ್ಯ ಮಾಹಿತಿ ಪ್ರಕಾರ … Continued

ವೀಡಿಯೊ..| ಮಧ್ಯರಸ್ತೆಯಲ್ಲೇ ವ್ಯಕ್ತಿಯೊಬ್ಬನಿಗೆ ಪಿಸ್ತೂಲ್ ತೊರಿಸಿ ಹಲ್ಲೆ ಮಾಡಿದ ಅಂತಾರಾಷ್ಟ್ರೀಯ ಮಟ್ಟದ ಶೂಟರ್ ; ಬಂಧನ

ಲಕ್ನೋ: ಉತ್ತರ ಪ್ರದೇಶದ ಲಕ್ನೋದಲ್ಲಿ ವ್ಯಕ್ತಿಯೊಬ್ಬ ಒಂದು ಕೈಯಲ್ಲಿ ಪಿಸ್ತೂಲ್ ಹಿಡಿದುಕೊಂಡು ಮತ್ತೊಬ್ಬನಿಗೆ ಬೆದರಿಕೆ ಹಾಕಿರುವ ಘಟನೆ ರಸ್ತೆಯಲ್ಲಿ ನಡೆದಿದೆ. ಲಕ್ನೋದ ವೆಬ್ ಮಾಲ್ ಪ್ರದೇಶದ ರಸ್ತೆಯಲ್ಲಿ ಕಾರಿಗೆ ಡಿಕ್ಕಿ ಹೊಡೆದ ನಂತರ ಉಂಟಾದ ವಿವಾದದಿಂದ ರಸ್ತೆಯಲ್ಲಿ ಗಲಾಟೆಯಾಗಿದೆ. ಅಂತಾರಾಷ್ಟ್ರೀಯ ಮಟ್ಟದ ಪಿಸ್ತೂಲ್ ಶೂಟರ್ ವಿನೋದ ಮಿಶ್ರಾ ಎಂಬವರು ಮತ್ತೊಂದು ವಾಹನದ ಚಾಲಕ ರಂಜೀತ್ ಎಂಬವರ … Continued

ಪತ್ನಿ, ಇಬ್ಬರು ಪುಟ್ಟ ಮಕ್ಕಳನ್ನು ಕೊಂದು ಶವಗಳ ಜೊತೆ 3 ದಿನ ಕಳೆದ ವ್ಯಕ್ತಿ…!

ಲಕ್ನೋ : ಉತ್ತರ ಪ್ರದೇಶದ ಲಕ್ನೋದಲ್ಲಿ 32 ವರ್ಷದ ವ್ಯಕ್ತಿಯೊಬ್ಬ ತನ್ನ ಹೆಂಡತಿ ಮತ್ತು ಇಬ್ಬರು ಮಕ್ಕಳನ್ನು ಕೊಂದು, ಅವರ ಶವಗಳ ಜೊತೆಯೇ ಮೂರು ರಾತ್ರಿಗಳನ್ನು ಕಳೆದ ಆಘಾತಕಾರಿ ಘಟನೆ ನಡೆದಿರುವುದು ವರದಿಯಾಗಿದೆ. ಮೃತದೇಹಗಳು ಕೊಳೆತು ವಾಸನೆ ಬರುವವರೆಗೂ ಆತ ಅವುಗಳ ಜೊತೆಯೇ ಕಳೆದಿದ್ದಾನೆ ಎಂದು ಪೊಲೀಸರು ಭಾನುವಾರ ತಿಳಿಸಿದ್ದಾರೆ. ಪತ್ನಿ ಜ್ಯೋತಿ (30) ಅನೈತಿಕ … Continued

ಆಸ್ಪತ್ರೆಯಲ್ಲಿ ಬೆಡ್‌ ಸಿಗದೆ ಬಿಜೆಪಿ ಮಾಜಿ ಸಂಸದರ ಪುತ್ರ ಸಾವು…!

ಲಕ್ನೋ : ಲಕ್ನೋದ ಎಸ್‌ಜಿಪಿಜಿಐ ಆಸ್ಪತ್ರೆಯ ತುರ್ತು ವಾರ್ಡ್‌ನಲ್ಲಿ ಹಾಸಿಗೆಗಳ ಕೊರತೆ ಹಾಗೂ ವೈದ್ಯರ ನಿರ್ಲಕ್ಷ್ಯದಿಂದಾಗಿ ತನ್ನ ಮಗ ಮೃತಪಟ್ಟಿದ್ದಾನೆ ಎಂದು ಬಿಜೆಪಿಯ ಮಾಜಿ ಸಂಸದರೊಬ್ಬರು ಆರೋಪಿಸಿದ್ದಾರೆ ಹಾಗೂ ಸರ್ಕಾರ ವೈದ್ಯರನ್ನು ಅಮಾನತುಗೊಳಿಸುವ ವರೆಗೆ ಮತ್ತು ಮುಂದಿನ ಕ್ರಮದ ಭರವಸೆ ನೀಡುವವರೆಗೆ ಸ್ಥಳದಿಂದ ಕದಲುವುದಿಲ್ಲ ಎಂದು ಪಟ್ಟು ಹಿಡಿದು ಮಗನ ಮೃತದೇಹದೊಂದಿಗೆ ವಾರ್ಡ್‌ ಮುಂದೆ ಪ್ರತಿಭಟನೆ … Continued

ಶಾಲೆಯಲ್ಲಿ ವಿದ್ಯಾರ್ಥಿಗಳಿಂದ ನಮಾಜ್ : ಪ್ರಾಂಶುಪಾಲರು ಅಮಾನತು

ಲಕ್ನೋ : ಉತ್ತರ ಪ್ರದೇಶದ ಲಕ್ನೋದ ಠಾಕೂರ್‌ಗಂಜ್ ಪ್ರದೇಶದ ಪ್ರಾಥಮಿಕ ಶಾಲೆಯೊಂದರಲ್ಲಿ ಕೆಲವು ವಿದ್ಯಾರ್ಥಿಗಳು ಶಾಲೆಯಲ್ಲಿ ನಮಾಜ್ ಮಾಡಿದ ಆರೋಪಿತ ಪ್ರಕರಣದಲ್ಲಿ ಶಾಲೆಯ ಪ್ರಾಂಶುಪಾಲರನ್ನು ಅಮಾನತುಗೊಳಿಸಲಾಗಿದೆ ಎಂದು ವರದಿಗಳು ತಿಳಿಸಿವೆ. ಶಾಲೆಯ ಪ್ರಾಂಶುಪಾಲರಾದ ಮೀರಾ ಯಾದವ್ ಅವರನ್ನು ಉತ್ತರ ಪ್ರದೇಶ ಸರ್ಕಾರಿ ನೌಕರ (ಶಿಸ್ತು ಮತ್ತು ಮೇಲ್ಮನವಿ) ನಿಯಮಗಳು-1999 ರ ಅಡಿಯಲ್ಲಿ ಶನಿವಾರ ತಕ್ಷಣದಿಂದಲೇ ಜಾರಿಗೆ … Continued

ವೀಡಿಯೊ…| ಉತ್ತರ ಪ್ರದೇಶ ಸಿಎಂ ಯೋಗಿ ಆದಿತ್ಯನಾಥ ಪಾದಕ್ಕೆರಗಿ ನಮಸ್ಕರಿಸಿದ ಸೂಪರ್‌ ಸ್ಟಾರ್‌ ರಜನಿಕಾಂತ

ಲಕ್ನೋ : ಸೂಪರ್‌ ಸ್ಟಾರ್‌ ನಟ ರಜನಿಕಾಂತ ಅವರು ಶನಿವಾರ (ಆಗಸ್ಟ್ 20 ) ಲಕ್ನೋದಲ್ಲಿ ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ ಅವರನ್ನು ಭೇಟಿ ಆಗಿದ್ದಾರೆ. ರಜನಿಕಾಂತ ನಟನೆಯ ‘ಜೈಲರ್’ ಸಿನಿಮಾವನ್ನು ಯೋಗಿ ಆದಿತ್ಯನಾಥ ಅವರು ರಜನಿಕಾಂತ ಅವರ ಜೊತೆ ವೀಕ್ಷಣೆ ಮಾಡಲಿದ್ದಾರೆ ಎಂದು ವರದಿಯಾಗಿದೆ. ಭೇಟಿ ವೇಳೆ ಯೋಗಿ ಆದಿತ್ಯನಾಥ ಅವರ ಕಾಲಿಗೆ … Continued

ಶಾರುಖ್ ಖಾನ್ ಪತ್ನಿ ಗೌರಿ ಖಾನ್, ಇತರರ ವಿರುದ್ಧ ಲಕ್ನೋದಲ್ಲಿ ದೂರು ದಾಖಲು

ನವದೆಹಲಿ: ಶಾರುಖ್ ಖಾನ್ ಪತ್ನಿ ಗೌರಿ ಖಾನ್ ವಿರುದ್ಧ ಲಕ್ನೋದಲ್ಲಿ ಎಫ್‌ಐಆರ್ ದಾಖಲಾಗಿದೆ. ಗೌರಿ ವಿರುದ್ಧ ಭಾರತೀಯ ದಂಡ ಸಂಹಿತೆಯ ಸೆಕ್ಷನ್ 409 (ಕ್ರಿಮಿನಲ್ ನಂಬಿಕೆ ಉಲ್ಲಂಘನೆ) ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಮುಂಬೈನ ನಿವಾಸಿ ಜಸ್ವಂತ್ ಷಾ ಎಂಬವರು ದೂರು ಸಲ್ಲಿಸಿದ್ದು, ಗೌರಿ ಬ್ರಾಂಡ್ ಅಂಬಾಸಿಡರ್ ಆಗಿರುವ ಕಂಪನಿಯು 86 ಲಕ್ಷ ರೂಪಾಯಿ ಶುಲ್ಕ ಪಾವತಿಸಿದ್ದರೂ … Continued

ಮದುವೆ ಹಾರ ಬದಲಾಯಿಸಿದ ಕ್ಷಣಾರ್ಧದಲ್ಲಿ ಮಂಟಪದಲ್ಲೇ ಕುಸಿದುಬಿದ್ದು ಮದುಮಗಳು ಸಾವು

ಲಕ್ನೋ: ಶನಿವಾರ(ಡಿಸೆಂಬರ್ 3)ದಂದು ಲಕ್ನೋದ ಮಲಿಹಾಬಾದ್‌ನಲ್ಲಿ 21 ವರ್ಷದ ವಧು ವೇದಿಕೆಯಲ್ಲಿ ಹಾರ ವಿನಿಮಯದ ವೇಳೆ ಕುಸಿದುಬಿದ್ದು ಮೃತಪಟ್ಟ ಘಟನೆ ವರದಿಯಾಗಿದೆ. ಹೃದಯಾಘಾತದಿಂದ ವಧು ಮೃತಪಟ್ಟಿದ್ದಾಳೆ ಎಂದು ಪ್ರಾಥಮಿಕ ವರದಿಗಳು ಸೂಚಿಸಿವೆ. ಶುಕ್ರವಾರ ಸಂಜೆ ಲಕ್ನೋದ ಹೊರವಲಯದಲ್ಲಿರುವ ಮಲಿಹಾಬಾದ್‌ನ ಭದ್ವಾನಾ ಗ್ರಾಮದಲ್ಲಿ ಈ ಘಟನೆ ನಡೆದಿದ್ದು, ವರದಿಗಳ ಪ್ರಕಾರ, ರಾಜ್‌ಪಾಲ್ ಅವರ ಮಗಳು 21 ವರ್ಷದ … Continued