ತಮಿಳುನಾಡಿನ ಉಪಮುಖ್ಯಮಂತ್ರಿಯಾಗಿ ಪುತ್ರ ಉದಯನಿಧಿಯನ್ನು ನೇಮಕ ಮಾಡಿದ ಸಿಎಂ ಎಂ.ಕೆ.ಸ್ಟಾಲಿನ್‌

ಚೆನ್ನೈ: ಇತ್ತೀಚಿನ ಬೆಳವಣಿಗೆಯಲ್ಲಿ ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರ ಪುತ್ರ ಉದಯನಿಧಿ ಸ್ಟಾಲಿನ್ ಅವರನ್ನು ತಮಿಳುನಾಡಿನ ಉಪ ಮುಖ್ಯಮಂತ್ರಿಯಾಗಿ ನೇಮಕ ಮಾಡಲಾಗಿದೆ. ಭಾನುವಾರ ಮಧ್ಯಾಹ್ನ 3:30ಕ್ಕೆ ರಾಜಭವನದಲ್ಲಿ ಅವರ ಪ್ರಮಾಣ ವಚನ ಸ್ವೀಕಾರ ಸಮಾರಂಭ ನಡೆಯಲಿದೆ. ಉದಯನಿಧಿ ಅವರಿಗೆ ಉಪಮುಖ್ಯಮಂತ್ರಿ (DCM) ಹುದ್ದೆ ಜೊತೆಗೆ ಯೋಜನೆ ಮತ್ತು ಅಭಿವೃದ್ಧಿ ಖಾತೆಯನ್ನು ನೀಡಲಾಗಿದೆ. ಅವರ ಬಳಿ … Continued

ಸಚಿವರಾಗಿ ಪೊನ್ಮುಡಿ ನೇಮಿಸಲು ರಾಜ್ಯಪಾಲ ಆರ್.ಎನ್.ರವಿ ನಿರಾಕರಣೆ ; ಸುಪ್ರೀಂ ಕೋರ್ಟ್‌ ಮೆಟ್ಟಿಲೇರಿದ ತಮಿಳುನಾಡು ಸರ್ಕಾರ

ನವದೆಹಲಿ: ತಮಿಳುನಾಡು ಮುಖ್ಯಮಂತ್ರಿ ಎಂ.ಕೆ.ಸ್ಟಾಲಿನ್ ಅವರ ಶಿಫಾರಸಿನಂತೆ ಡಿಎಂಕೆಯ ಹಿರಿಯ ನಾಯಕ ಕೆ ಪೊನ್ಮುಡಿ ಅವರನ್ನು ಸಚಿವರನ್ನಾಗಿ ನೇಮಿಸಲು ರಾಜ್ಯಪಾಲ ಆರ್.ಎನ್. ರವಿ ಅವರು ನಿರಾಕರಿಸಿದ್ದು, ಇದನ್ನು ಪ್ರಶ್ನಿಸಿ ತಮಿಳುನಾಡು ಸರ್ಕಾರ ಸಲ್ಲಿಸಿರುವ ಮನವಿಯನ್ನು ಪರಿಗಣಿಸಲು ಸುಪ್ರೀಂ ಕೋರ್ಟ್‌ ಸೋಮವಾರ ಸಮ್ಮತಿಸಿದೆ. ರಾಜ್ಯಪಾಲರು ಇತ್ತೀಚೆಗೆ ಮಾಜಿ ಉನ್ನತ ಶಿಕ್ಷಣ ಸಚಿವರ ಪೊನ್ಮುಡಿ ಅವರನ್ನು ರಾಜ್ಯ ಸಚಿವ … Continued

ತಮಿಳುನಾಡು: ಎಂ.ಕೆ. ಸ್ಟಾಲಿನ್ ಅಳಿಯನ ಮನೆ ಮೇಲೆ ಐಟಿ ದಾಳಿ

ಚೆನ್ನೈ, ಡಿಎಂಕೆ ನಾಯಕ ಎಂ.ಕೆ. ಸ್ಟಾಲಿನ್ ಅಳಿಯನ ಮನೆ ಮೇಲೆ ಶುಕ್ರವಾರ (ಏ.೨)ಆದಾಯ ತೆರಿಗೆ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಶಬರೀಶನ್ ಒಡೆತನದ ನಾಲ್ಕು ಕಡೆಗಳಲ್ಲಿ ಬೆಳಗ್ಗೆಯಿಂದ ಪರಿಶೀಲನೆ ನಡೆಯುತ್ತಿದೆ. ದಾಳಿ ಮಾಡಲಾದ ಸ್ಥಳಗಳಲ್ಲಿ ನೀಲಂಗರೈನಲ್ಲಿರುವ ಮನೆಯು ಕೂಡ ಒಂದು. ಅಲ್ಲಿ ಸ್ಟಾಲಿನ್ ಪುತ್ರಿ ಹಾಗೂ ಆಕೆಯ ಪತಿ ಶಬರೀಶನ್ ಅವರೊಂದಿಗೆ ವಾಸವಾಗಿದ್ದಾರೆ. ಏಪ್ರಿಲ್ 6 ರಂದು … Continued