ಭೋಜಶಾಲಾ–ಕಮಾಲ್ ಮೌಲಾ ಪ್ರಕರಣ: ಶುಕ್ರವಾರದ ನಮಾಜ್‌ಗೆ ಮುಸ್ಲಿಮರಿಗೆ ಪ್ರತ್ಯೇಕ ಸ್ಥಳ ಕಲ್ಪಿಸಲು ಸುಪ್ರೀಂ ಕೋರ್ಟ್ ನಿರ್ದೇಶನ

ನವದೆಹಲಿ : ಮಧ್ಯಪ್ರದೇಶದ ಧಾರ್ ಜಿಲ್ಲೆಯ ಭೋಜಶಾಲಾ–ಕಮಾಲ್ ಮೌಲಾ ಮಸೀದಿ ಸಂಕೀರ್ಣವನ್ನು ಹಿಂದೂ ದೇವಾಲಯವೆಂದು ಘೋಷಿಸಿದ್ದ ಮಧ್ಯಪ್ರದೇಶ ಹೈಕೋರ್ಟ್‌ನ ಮೇ 15ರ ತೀರ್ಪನ್ನು ಪ್ರಶ್ನಿಸಿ ಮುಸ್ಲಿಮ್‌ ಪಕ್ಷದವರು ಸಲ್ಲಿಸಿದ್ದ ಅರ್ಜಿಯ ವಿಚಾರಣೆಯಲ್ಲಿ ಸುಪ್ರೀಂ ಕೋರ್ಟ್ ಮಂಗಳವಾರ ಸೀಮಿತ ಮಧ್ಯಂತರ ಪರಿಹಾರ ನೀಡಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯಕಾಂತ ನೇತೃತ್ವದ, ನ್ಯಾಯಮೂರ್ತಿಗಳಾದ ಜಾಯ್‌ಮಲ್ಯ ಬಾಗ್ಚಿ ಮತ್ತು ವಿ. ಮೋಹನ … Continued

ಮೀನಾಕ್ಷಿ ನಟರಾಜನ್ ನಾಮಪತ್ರ ವಿವಾದ ನಡುವೆಯೇ ಬಿಜೆಪಿಯ ಮೂರೂ ಅಭ್ಯರ್ಥಿಗಳು ಅವಿರೋಧ ಆಯ್ಕೆ

ಭೋಪಾಲ್: ಮಧ್ಯಪ್ರದೇಶದ ರಾಜ್ಯಸಭಾ ಚುನಾವಣೆಯಲ್ಲಿ ಆಡಳಿತರೂಢ ಬಿಜೆಪಿ ಮೂರು ಸ್ಥಾನಗಳಲ್ಲಿ ಅವಿರೋಧವಾಗಿ ಆಯ್ಕೆಯಾಗಿದೆ.  ಬಿಜೆಪಿಯ ರಜನೀಶ್ ಅಗರ್ವಾಲ್, ತರುಣ ಚುಗ್ ಮತ್ತು ಮಹೇಶ ಕೇವತ್ ಅವರ ಅವಿರೋಧ ಆಯ್ಕೆಯನ್ನು ದೃಢೀಕರಿಸಿ ಚುನಾವಣಾ ಆಯೋಗವು (EC) ಪ್ರಮಾಣಪತ್ರಗಳನ್ನು ವಿತರಿಸಿದೆ. ಕಾಂಗ್ರೆಸ್ ಪಕ್ಷವು ಈ ಚುನಾವಣಾ ಫಲಿತಾಂಶವನ್ನು ತಡೆಯಲು ರಾಜಕೀಯವಾಗಿ ಮತ್ತು ಕಾನೂನುಬದ್ಧವಾಗಿ ತೀವ್ರ ಪ್ರಯತ್ನಗಳನ್ನು ನಡೆಸಿತಾದರೂ ಅಂತಿಮವಾಗಿ … Continued

ರಾಜ್ಯಸಭಾ ಚುನಾವಣೆ : ನಾಮಪತ್ರ ತಿರಸ್ಕಾರ ಪ್ರಶ್ನಿಸಿ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಕಾಂಗ್ರೆಸ್ ನಾಯಕಿ ಮೀನಾಕ್ಷಿ ನಟರಾಜನ್

ನವದೆಹಲಿ: ಮಧ್ಯಪ್ರದೇಶದಿಂದ ರಾಜ್ಯಸಭಾ ಚುನಾವಣೆಗೆ ಸಲ್ಲಿಕೆಯಾಗಿದ್ದ ತಮ್ಮ ನಾಮಪತ್ರ ತಿರಸ್ಕಾರಗೊಂಡಿರುವುದನ್ನು ಪ್ರಶ್ನಿಸಿ ಕಾಂಗ್ರೆಸ್ ನಾಯಕಿ ಮೀನಾಕ್ಷಿ ನಟರಾಜನ್ ಅವರು ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ್ದಾರೆ. ತೆಲಂಗಾಣದಲ್ಲಿ ಬಾಕಿ ಇರುವ ಕ್ರಿಮಿನಲ್ ಪ್ರಕರಣವೊಂದರ ವಿವರಗಳನ್ನು ನಾಮಪತ್ರದಲ್ಲಿ “ಮುಚ್ಚಿಟ್ಟಿದ್ದಾರೆ” ಎಂಬ ಆರೋಪದ ಹಿನ್ನೆಲೆಯಲ್ಲಿ, ಚುನಾವಣಾ ಅಧಿಕಾರಿ (ರಿಟರ್ನಿಂಗ್ ಆಫೀಸರ್) ಮೀನಾಕ್ಷಿ ನಟರಾಜನ್ ಅವರ ನಾಮಪತ್ರವನ್ನು ತಿರಸ್ಕರಿಸಿದ್ದರು. ತಮ್ಮ ನಾಮಪತ್ರ ಅನರ್ಹಗೊಳಿಸಿದ … Continued

ರಾಜ್ಯಸಭಾ ಚುನಾವಣೆ : ಕಾಂಗ್ರೆಸ್ ಅಭ್ಯರ್ಥಿ ಮೀನಾಕ್ಷಿ ನಾಮಪತ್ರ ರದ್ದು ; ಕೈ ನಾಯಕರ ಪ್ರತಿಭಟನೆ

ಭೋಪಾಲ ; ಮಧ್ಯಪ್ರದೇಶದ ರಾಜ್ಯಸಭಾ ಚುನಾವಣಾ ಕಣದಲ್ಲಿ ಭಾರಿ ರಾಜಕೀಯ ಹೈಡ್ರಾಮಾ ನಡೆದಿದೆ. ಕಾಂಗ್ರೆಸ್ ಅಭ್ಯರ್ಥಿ ಮೀನಾಕ್ಷಿ ನಟರಾಜನ್ ಅವರ ನಾಮಪತ್ರ ತಿರಸ್ಕೃತಗೊಂಡಿದ್ದು, ಇದು ಕಾಂಗ್ರೆಸ್‌ಗೆ ದೊಡ್ಡ ಹಿನ್ನಡೆಯಾಗಿ ಪರಿಣಮಿಸಿದೆ. ಅವರು ತಮ್ಮ ಚುನಾವಣಾ ಪ್ರಮಾಣಪತ್ರದಲ್ಲಿ (ಅಫಿಡವಿಟ್) ಪ್ರಕರಣವೊಂದರ ಮಾಹಿತಿಯನ್ನು ಮರೆಮಾಚಿದ್ದಾರೆ ಎಂಬ ಆರೋಪದ ಹಿನ್ನೆಲೆಯಲ್ಲಿ ಚುನಾವಣಾಧಿಕಾರಿಗಳು ಈ ಕ್ರಮ ಕೈಗೊಂಡಿದ್ದಾರೆ. ಭಾರತೀಯ ಜನತಾ ಪಾರ್ಟಿ … Continued

ಜೈಲಿನಲ್ಲೇ ಚಿಗುರೊಡೆದ ಪ್ರೇಮ ; ಜೀವಾವಧಿ ಶಿಕ್ಷೆಗೆ ಒಳಗಾಗಿದ್ದ ಮಾಜಿ ಕೈದಿಯ ಮದುವೆಯಾದ ಮಹಿಳಾ ಪೊಲೀಸ್‌ ಅಧಿಕಾರಿ…!

ಭೋಪಾಲ : ಮಧ್ಯಪ್ರದೇಶದ ಸತ್ನಾ ಜಿಲ್ಲೆಯಲ್ಲಿ ಅಪರೂಪದ ಹಾಗೂ ಅಚ್ಚರಿಯ ಪ್ರೇಮಕಥೆಯೊಂದು ಮದುವೆಯಲ್ಲಿ ಅಂತ್ಯಗೊಂಡಿದೆ. ಕೊಲೆ ಪ್ರಕರಣವೊಂದರಲ್ಲಿ ಜೀವಾವಧಿ ಶಿಕ್ಷೆ ಅನುಭವಿಸಿ ಬಿಡುಗಡೆಯಾಗಿದ್ದ ಮಾಜಿ ಕೈದಿಯನ್ನು, ಅದೇ ಜೈಲಿನ ಮಹಿಳಾ ಅಧಿಕಾರಿಯೊಬ್ಬರು ಅಂತರ್ಧರ್ಮೀಯ ವಿವಾಹವಾಗಿದ್ದಾರೆ. ಸತ್ನಾ ಕೇಂದ್ರ ಕಾರಾಗೃಹದಲ್ಲಿ ಸಹಾಯಕ ಅಧೀಕ್ಷಕಿಯಾಗಿ (Assistant Superintendent) ಸೇವೆ ಸಲ್ಲಿಸುತ್ತಿರುವ ಫಿರೋಜಾ ಖಾತೂನ್, ಅಲ್ಲಿಯೇ ಶಿಕ್ಷೆ ಅನುಭವಿಸುತ್ತಿದ್ದ ಧರ್ಮೇಂದ್ರ … Continued

ಪತ್ನಿ ಕೊಲೆ ಪ್ರಕರಣ : 4 ವರ್ಷದಿಂದ ತಲೆಮರೆಸಿಕೊಂಡಿದ್ದ ಮಾಜಿ ಸೇನಾಧಿಕಾರಿ ಸಿಕ್ಕಿಬಿದ್ದಿದ್ದೇ ರೋಚಕ ; ಮುಳುವಾಯ್ತು ಗ್ಯಾಸ್ ಬುಕ್ಕಿಂಗ್…!

ಭೋಪಾಲ: ತನ್ನ ಪತ್ನಿಯನ್ನೇ ಹತ್ಯೆಗೈದು, ಶಿಕ್ಷೆಯಿಂದ ತಪ್ಪಿಸಿಕೊಳ್ಳಲು ಕಳೆದ ನಾಲ್ಕು ವರ್ಷಗಳಿಂದ ತಲೆಮರೆಸಿಕೊಂಡು ಬೇರೆ ಬೇರೆ ರಾಜ್ಯಗಳಲ್ಲಿ ಅಲೆದಾಡುತ್ತಿದ್ದ ಮಾಜಿ ಸೇನಾ ಕ್ಯಾಪ್ಟನ್ ಸಂದೀಪ ತೋಮರ್ ಎಂಬಾತ ಅಂತಿಮವಾಗಿ ಪೊಲೀಸರ ಬಲೆಗೆ ಬಿದ್ದಿದ್ದಾನೆ. ಮಧ್ಯಪ್ರದೇಶದ ಪಾಂಡುರ್ನಾ ಜಿಲ್ಲೆಯಲ್ಲಿ ಸ್ಥಳೀಯ ಪೊಲೀಸರು ಮತ್ತು ರಾಷ್ಟ್ರೀಯ ಗುಪ್ತಚರ ಗ್ರಿಡ್ (NATGRID) ಜಂಟಿ ಕಾರ್ಯಾಚರಣೆ ನಡೆಸಿ ಈತನನ್ನು ಬಂಧಿಸಿವೆ. ಎಲ್‌ಪಿಜಿ … Continued

1917ರಲ್ಲಿ ಭಾರತದ ಉದ್ಯಮಿಯಿಂದ 35000 ರೂ. ಸಾಲ ಪಡೆದಿದ್ದ ಬ್ರಿಟಿಷ್‌ ಸರ್ಕಾರ ; 109 ವರ್ಷಗಳ ಬಳಿಕ ವಾಪಸ್ ಕೇಳಿದ ಮೊಮ್ಮಗ…!

ಭೋಪಾಲ್: ಒಂದು ಕಾಲದಲ್ಲಿ ಬ್ರಿಟಿಷ್ ಸಾಮ್ರಾಜ್ಯವನ್ನು ಸೂರ್ಯ ಮುಳುಗದ ಸಾಮ್ರಾಜ್ಯ ಎಂದುಕರೆಯಲಾಗುತ್ತಿತ್ತು. ಆದರೆ, ಅದೇ ಬ್ರಿಟಿಷ್ ಸಾಮ್ರಾಜ್ಯಕ್ಕೆ ಒಂದು ಕಾಲದಲ್ಲಿ ಭಾರತದ ಸಾಮಾನ್ಯ ಉದ್ಯಮಿಯೊಬ್ಬರು ಸಾಲ ನೀಡಿದ್ದರು ಎಂದರೆ ನಂಬಲು ಅಸಾಧ್ಯ. ಮಧ್ಯಪ್ರದೇಶದ ಸೆಹೋರ್ ಪಟ್ಟಣದ ಶ್ರೀಮಂತ ಉದ್ಯಮಿಯೊಬ್ಬರು ಬ್ರಿಟಿಷರಿಗೆ ನೀಡಿದ್ದ ಸಾಲದ ವಿಚಾರ ಈಗ ಒಂದು ಶತಮಾನದ ನಂತರ ಮುನ್ನೆಲೆಗೆ ಬಂದಿದೆ. ಸುಮಾರು 109 … Continued

ಇಂದೋರದ ಈ ಕೋಟ್ಯಧಿಪತಿ ‘ಭಿಕ್ಷುಕನ ಆಸ್ತಿ ಕೇಳಿದ್ರೆ ದಂಗಾಗೋದು ಗ್ಯಾರಂಟಿ : 3 ಮನೆಗಳು, 3 ಆಟೋಗಳು, ಕಾರು….

ಇಂದೋರ್: ಕೈಯಲ್ಲಿ ಹರಿದ ಚೀಲ, ಕಾಲಿಗೆ ಚಪ್ಪಲಿ ಹಾಕುವ ಬದಲು ಕೈಗೆ ಹಾಕಿಕೊಂಡು, ಕಬ್ಬಿಣದ ಸಣ್ಣ ಗಾಡಿಯ ಮೇಲೆ ಕುಳಿತು ಜನರಲ್ಲಿ ಅನುಕಂಪ ಮೂಡಿಸುವ ಈ ವ್ಯಕ್ತಿಯನ್ನು ನೋಡಿದರೆ ಯಾರಿಗಾದರೂ ಅಯ್ಯೋ ಅನ್ನಿಸದೇ ಇರದು. ಆದರೆ, ಈತನ ನಿಜವಾದ ಮುಖವಾಡ ಕಳಚಿದಾಗ ಇಡೀ ಇಂದೋರ ನಗರವೇ ಬೆಚ್ಚಿಬಿದ್ದಿದೆ. ಏಕೆಂದರೆ, ಈತ ಸಾಮಾನ್ಯ ಭಿಕ್ಷುಕನಲ್ಲ, ಬದಲಿಗೆ ಮೂರು … Continued

ವೈದ್ಯಕೀಯ ಲೋಕಕ್ಕೆ ಅಚ್ಚರಿ…: ಕಳೆದ 50 ವರ್ಷಗಳಿಂದ ನಿದ್ದೆಯನ್ನೇ ಮಾಡಿಲ್ಲ ಈ ವ್ಯಕ್ತಿ…!

ವೈದ್ಯಕೀಯ ವಿಜ್ಞಾನದ ಪ್ರಕಾರ ಆರೋಗ್ಯವಂತ ಮನುಷ್ಯನಿಗೆ ದಿನಕ್ಕೆ ಕನಿಷ್ಠ 6 ರಿಂದ 8 ಗಂಟೆಗಳ ನಿದ್ರೆ ಅತ್ಯಗತ್ಯ. ನಿದ್ರೆಯಿಲ್ಲದಿದ್ದರೆ ದೈಹಿಕ ಮತ್ತು ಮಾನಸಿಕ ಆರೋಗ್ಯದ ಮೇಲೆ ಗಂಭೀರ ಪರಿಣಾಮ ಬೀರುತ್ತದೆ. ಆದರೆ, ಮಧ್ಯಪ್ರದೇಶದ 75 ವರ್ಷದ ವೃದ್ಧರೊಬ್ಬರ ಪ್ರಕರಣವು ಈಗ ವೈದ್ಯಕೀಯ ಲೋಕವನ್ನೇ ಅಚ್ಚರಿಗೊಳಿಸಿದೆ.  ಮಧ್ಯಪ್ರದೇಶದ ರೇವಾ ಜಿಲ್ಲೆಯ ಚಾಣಕ್ಯಪುರಿ ಕಾಲೋನಿಯ ನಿವಾಸಿ ಮೋಹನಲಾಲ ದ್ವಿವೇದಿ … Continued

ಹುಷಾರ್‌… ನಿಮ್ಮ ಸಂಬಂಧಿಕರ ಧ್ವನಿಯನ್ನೇ ಅನುಕರಿಸಿ ಮೋಸ ಮಾಡುತ್ತಾರೆ ಸೈಬರ್‌ ವಂಚಕರು…!

ಇಂದೋರ್ : ಕೃತಕ ಬುದ್ಧಿಮತ್ತೆ (AI) ತಂತ್ರಜ್ಞಾನವನ್ನು ಬಳಸಿಕೊಂಡು ಧ್ವನಿಯನ್ನು ಅನುಕರಿಸಿ (Voice Cloning) ಹಣ ದೋಚುವ ಹೊಸ ಮಾದರಿಯ ಸೈಬರ್ ವಂಚನೆಗೆ ಇಂದೋರ್‌ನ ಶಾಲಾ ಶಿಕ್ಷಕಿಯೊಬ್ಬರು ಬಲಿಯಾಗಿದ್ದಾರೆ. ಇದು ಮಧ್ಯಪ್ರದೇಶದ ಮೊದಲ ಎಐ ಆಧಾರಿತ ಧ್ವನಿ ಬದಲಾವಣೆ (Voice-modulation) ವಂಚನೆ ಎಂದು ಪೊಲೀಸರು ಶಂಕಿಸಿದ್ದಾರೆ. ಇಂದೋರ್ ನಿವಾಸಿ ಸ್ಮಿತಾ ಎಂಬ ಶಾಲಾ ಶಿಕ್ಷಕಿಗೆ ಜನವರಿ … Continued