ಕರ್ನಾಟಕದ ಸೋಲಿನ ನಂತರ ಚುನಾವಣೆ ಸನಿಹದಲ್ಲಿರುವ 4 ರಾಜ್ಯಗಳಲ್ಲಿ ಕಾರ್ಯತಂತ್ರ ಬದಲಿಸಲಿರುವ ಬಿಜೆಪಿ

ನವದೆಹಲಿ : ಕರ್ನಾಟಕದ ವಿಧಾನಸಭೆ ಚುನಾವಣೆ ಫಲಿತಾಂಶವು ಈ ವರ್ಷಾಂತ್ಯದಲ್ಲಿ ನಡೆಯಲಿರುವ ಕೆಲ ರಾಜ್ಯಗಳ ವಿಧಾನಸಭೆ ಚುನಾವಣೆಗೆ ಬಿಜೆಪಿ ತನ್ನ ಪ್ರಚಾರದ ಕಾರ್ಯತಂತ್ರ ವನ್ನು ಬದಲಾಯಿಸುವಂತೆ ಮಾಡಿದೆ ಎಂದು ವರದಿಯೊಂದು ಹೇಳಿದೆ. ನಾಲ್ಕು ಪ್ರಮುಖ ರಾಜ್ಯಗಳಾದ ಮಧ್ಯಪ್ರದೇಶ, ರಾಜಸ್ಥಾನ, ತೆಲಂಗಾಣ ಮತ್ತು ಛತ್ತೀಸ್‌ಗಢದಲ್ಲಿ ವಿಧಾನಸಭೆ ಚುನಾವಣೆಗಳು ವರ್ಷಾಂತ್ಯದ ಸಮಯದಲ್ಲಿ ನಡೆಯಲಿವೆ. ಇವುಗಳಲ್ಲಿ, ಮಧ್ಯಪ್ರದೇಶದಲ್ಲಿ ಮಾತ್ರ ಬಿಜೆಪಿ … Continued

ಸೇತುವೆಯಿಂದ ಬಸ್ ಬಿದ್ದು 22 ಮಂದಿ ಸಾವು, ಹಲವರಿಗೆ ಗಾಯ

ಭೋಪಾಲ್: ಮಧ್ಯಪ್ರದೇಶದ ಖಾರ್ಗೋನೆಯಲ್ಲಿ ಇಂದು, ಮಂಗಳವಾರ ಬಸ್ ಸೇತುವೆಯಿಂದ ಕೆಳಗೆ ಬಿದ್ದು ಕನಿಷ್ಠ 22 ಜನರು ಸಾವಿಗೀಡಾಗಿದ್ದಾರೆ ಮತ್ತು ಹಲವರು ಗಾಯಗೊಂಡಿದ್ದಾರೆ ಎಂದು ರಾಜ್ಯ ಗೃಹ ಸಚಿವ ನರೋತ್ತಮ ಮಿಶ್ರಾ ಹೇಳಿದ್ದಾರೆ. 50 ಜನರಿದ್ದ ಬಸ್ ಇಂದೋರ್‌ಗೆ ತೆರಳುತ್ತಿದ್ದಾಗ ಖಾರ್ಗೋನ್‌ನ ದಸಂಗ ಗ್ರಾಮದಲ್ಲಿ ಸೇತುವೆಯಿಂದ ಕೆಳಗೆ ಬಿದ್ದಿದೆ. ಸ್ಥಳೀಯ ಗ್ರಾಮಸ್ಥರ ಸಹಾಯದಿಂದ ತುರ್ತು ಸೇವೆಗಳು ರಕ್ಷಣಾ … Continued

ನಮೀಬಿಯಾದಿಂದ ತಂದಿದ್ದ ಒಂದು ಚೀತಾ ಸಾವು

ಭೋಪಾಲ್‌: ನಮೀಬಿಯಾದಿಂದ (Namibia) ಭಾರತಕ್ಕೆ ಕರೆತಂದಿದ್ದ ಎಂಟು ಚೀತಾಗಳ ಪೈಕಿ ಒಂದು ಸಾವಿಗೀಡಾಗಿದೆ. ಜನವರಿಯಲ್ಲಿ ಇದಕ್ಕೆ ಮೂತ್ರಪಿಂಡದ ಸೋಂಕು ಉಂಟಾಗಿದ್ದು ಸೋಮವಾರ ಮೃತಪಟ್ಟಿದೆ. ಇದು ಭಾರತಕ್ಕೆ ಬರುವಾಗಲೇ ಕಿಡ್ನಿ ತೊಂದರೆಯಿಂದ ಬಳಲುತ್ತಿತ್ತು ಎಂದು ಹೇಳಲಾಗಿದೆ. ಮಧ್ಯಪ್ರದೇಶದ ಕುನೋ ರಾಷ್ಟ್ರೀಯ ಉದ್ಯಾನವನಕ್ಕೆ ಬಂದ ನಂತರ ಕೆಲ ಸಮಯದಲ್ಲಿಯೇ ಈ ಹೆಣ್ಣು ಚೀತಾ ಸಾಶಾ ಆಯಾಸ ಮತ್ತು ದೌರ್ಬಲ್ಯದ … Continued

ಬಸ್ ನಿಲ್ದಾಣದಲ್ಲಿ ನಿಂತಿದ್ದ ಜನರ ಮೇಲೆ ನುಗ್ಗಿದ ಟ್ರಕ್: 6 ಜನರು ಸಾವು, 12 ಜನರಿಗೆ ಗಾಯ

ರತ್ಲಂ: ಮಧ್ಯಪ್ರದೇಶದ ರತ್ಲಂ ಜಿಲ್ಲೆಯಲ್ಲಿ ಭಾನುವಾರ ಸಂಭವಿಸಿದ ರಸ್ತೆ ಅಪಘಾತದಲ್ಲಿ ಆರು ಜನರು ಸಾವಿಗೀಡಾಗಿದ್ದಾರೆ ಮತ್ತು ಹಲವರು ಗಾಯಗೊಂಡಿದ್ದಾರೆ. ರತ್ಲಂ ಜಿಲ್ಲೆಯಿಂದ ಸುಮಾರು 35 ಕಿಮೀ ದೂರದಲ್ಲಿರುವ ರತ್ಲಾಮ್-ಲೆಬಾದ್ ರಸ್ತೆಯಲ್ಲಿರುವ ಸತ್ರುಂಡಾ ಗ್ರಾಮದ ಬಳಿಯ ಟ್ರಾಫಿಕ್ ಛೇದಕದಲ್ಲಿ ಈ ಅಪಘಾತ ಸಂಭವಿಸಿದೆ. ಟ್ರಕ್ ರತ್ಲಾಮ್‌ನಿಂದ ಬದ್ನಾವರ್‌ಗೆ ಪ್ರಯಾಣಿಸುತ್ತಿದ್ದಾಗ ಅದರ ಟೈರ್ ಒಡೆದು, ವೇಗವಾಗಿ ಬಂದ ವಾಹನವು … Continued

ಬರಿಕೈಯಿಂದ ಶಾಲಾ ಶೌಚಾಲಯ ಸ್ವಚ್ಛಗೊಳಿಸಿದ ಬಿಜೆಪಿ ಸಂಸದ | ವೀಡಿಯೊ ವೈರಲ್‌

ಭೋಪಾಲ: ಬಿಜೆಪಿ ಸಂಸದ ಜನಾರ್ದನ್ ಮಿಶ್ರಾ ಅವರು ಮಧ್ಯಪ್ರದೇಶದ ರೇವಾ ಜಿಲ್ಲೆಯ ಬಾಲಕಿಯರ ಶಾಲೆಯಲ್ಲಿ ಕೊಳಕು ಶೌಚಾಲಯವನ್ನು ಬರಿಗೈಯಲ್ಲಿ ಸ್ವಚ್ಛಗೊಳಿಸುತ್ತಿರುವುದನ್ನು ಸಂಸದರ ಟ್ವಿಟರ್ ಹ್ಯಾಂಡಲ್‌ನಲ್ಲಿ ಹಂಚಿಕೊಂಡ ವೀಡಿಯೊದಲ್ಲಿ ಕಂಡುಬಂದಿದೆ. ಯುವ ಮೋರ್ಚಾದ ಸೇವಾ ಪಖವಾಡ ಅಭಿಯಾನದ ಅಂಗವಾಗಿ ಬಿಜೆಪಿ ಯುವ ಘಟಕದ ಸದಸ್ಯರು ಖತ್ಖಾರಿ ಬಾಲಕಿಯರ ಶಾಲೆಯ ಶೌಚಾಲಯಗಳನ್ನು ಸ್ವಚ್ಛಗೊಳಿಸಿದ್ದಾರೆ ಎಂದು ಸಂಸದ ಜನಾರ್ದನ್ ಮಿಶ್ರಾ … Continued

ನಮೀಬಿಯಾದಿಂದ ಬಂದ ಚಿರತೆಗಳು ಕುನೊ ರಾಷ್ಟ್ರೀಯ ಉದ್ಯಾನವನದಲ್ಲಿ ಕಾಲಿಡುತ್ತಿದ್ದಂತೆ ಮಧ್ಯಪ್ರದೇಶದ ಈ ಹಳ್ಳಿಗಳಲ್ಲಿ ಭೂಮಿ ಬೆಲೆ ಗಗನಕ್ಕೆ…!

ಭೋಪಾಲ್: ಭಾರತ, ನಮೀಬಿಯಾ ಮತ್ತು ದಕ್ಷಿಣ ಆಫ್ರಿಕಾ ಮೂರು ದೇಶಗಳನ್ನು ಒಳಗೊಂಡಿರುವ ಏಶಿಯಾಟಿಕ್‌ ಚಿರತೆಗಳ ಮೊದಲ ಅಂತರ್-ಖಂಡಾಂತರ ಸ್ಥಳಾಂತರ ಯೋಜನೆ ಮೂಲಕ ತಂದಿದ್ದರಿಂದ ಭಾರತವನ್ನು ವಿಶ್ವ ಭೂಪಟದಲ್ಲಿ ಮತ್ತೊಮ್ಮೆ ಬಂದಿದೆ. ನಮೀಬಿಯಾದಿಂದ ಎಂಟು ಚಿರತೆಗಳು ಆಗಮಿಸಿದ್ದು, ಉಳಿದ 12 ಚಿರತೆಗಳನ್ನು ಮುಂದಿನ ತಿಂಗಳು ದಕ್ಷಿಣ ಆಫ್ರಿಕಾದಿಂದ ಇಲ್ಲಿಗೆ ಸ್ಥಳಾಂತರಿಸಲಾಗುತ್ತದೆ. ಪ್ರಧಾನಿ ನರೇಂದ್ರ ಮೋದಿ ಅವರು ಚಿರತೆಗಳನ್ನು … Continued

ಪಂಚಾಯತ್ ಚುನಾವಣೆಗಳಲ್ಲಿ ಗೆದ್ದಿದ್ದು ಮಹಿಳೆಯರು.. ಆದರೆ ಪ್ರಮಾಣ ವಚನ ಸ್ವೀಕರಿಸಿದ್ದು ಗಂಡಂದಿರು, ಸಂಬಂಧಿಕರು…!

ದಾಮೋಹ್ (ಮಧ್ಯಪ್ರದೇಶ): ಹಲವು ಪ್ರಶ್ನೆಗಳಿಗೆ ಕಾರಣವಾಗಿರುವ ಘಟನೆಯೊಂದರಲ್ಲಿ, ಮಧ್ಯಪ್ರದೇಶದ ದಾಮೋಹ್ ಜಿಲ್ಲೆಯ ಗ್ರಾಮ ಪಂಚಾಯತದಲ್ಲಿ ಹೊಸದಾಗಿ ಆಯ್ಕೆಯಾದ ಮಹಿಳಾ ಸರಪಂಚ್‌ ಅವರ ಪತಿ ತನ್ನ ಪತ್ನಿಯ ಬದಲಿಗೆ ಪ್ರಮಾಣ ವಚನ ಸ್ವೀಕರಿಸಿದ ಆರೋಪದ ಮೇಲೆ ಈ ಬಗ್ಗೆ ವರದಿ ನೀಡುವಂತೆ ಜಿಲ್ಲಾ ಅಧಿಕಾರಿಗಳು ವಿವರ ಕೋರಿದ್ದಾರೆ. . ಈ ವಿಷಯವು ದಾಮೋಹ್ ಜಿಲ್ಲೆಯ ಗೈಸಾಬಾದ್ ಪಂಚಾಯತ್‌ಗೆ … Continued

ಪುಣೆಗೆ ತೆರಳುತ್ತಿದ್ದ ಬಸ್ ನರ್ಮದಾ ನದಿಗೆ ಬಿದ್ದು 13 ಸಾವು, 13 ಜನರ ರಕ್ಷಣೆ

ಧಾರ್ (ಮಧ್ಯಪ್ರದೇಶ): ಮಹಾರಾಷ್ಟ್ರದ ಸರ್ಕಾರಿ ಬಸ್ಸೊಂದು ಇಂದು, ಸೋಮವಾರ ಮಧ್ಯಪ್ರದೇಶದಲ್ಲಿ ನರ್ಮದಾ ನದಿಗೆ ಉರುಳಿದ ಪರಿಣಾಮ 13 ಮಂದಿ ಮೃತಪಟ್ಟಿದ್ದಾರೆ ಹಾಗೂ 13 ಜನರನ್ನು ರಕ್ಷಿಸಲಾಗಿದೆ. ಇಂದೋರ್‌ನಿಂದ ಪುಣೆಗೆ ತೆರಳುತ್ತಿದ್ದ ಈ ಬಸ್ ಆಗ್ರಾ-ಮುಂಬೈ ಹೆದ್ದಾರಿಯಲ್ಲಿ ಮಧ್ಯಪ್ರದೇಶದ ಧಾರ್ ಜಿಲ್ಲೆಯ ಖಾಲ್‌ಘಾಟ್ ಪ್ರದೇಶದಲ್ಲಿ ಸೇತುವೆಯೊಂದರ ಹಳಿ ಮುರಿದು ರಸ್ತೆಯಿಂದ ಜಾರಿ ನದಿಗೆ ಬಿದ್ದಿದೆ. ಬಸ್ ಇಂದೋರ್ … Continued

ಚುನಾವಣೆಯಲ್ಲಿ ಸೋತ ನಂತರ ಹೃದಯಾಘಾತದಿಂದ ಸಾವಿಗೀಡಾದ ಕಾಂಗ್ರೆಸ್ ಅಭ್ಯರ್ಥಿ

ರೇವಾ: ಮಧ್ಯಪ್ರದೇಶದ ರೇವಾದಲ್ಲಿ ಮುನ್ಸಿಪಲ್ ಕೌನ್ಸಿಲ್‌ಗೆ ಚುನಾವಣೆಗೆ ಸ್ಪರ್ಧಿಸಿದ್ದ ಕಾಂಗ್ರೆಸ್ ಮುಖಂಡ ಹರಿನಾರಾಯಣ ಗುಪ್ತಾ ಅವರು ಭಾನುವಾರ ಫಲಿತಾಂಶ ಪ್ರಕಟವಾದಾಗ ತಾವು ಸೋತ ಸುದ್ದಿ ತಿಳಿದ ನಂತರ ಹೃದಯಾಘಾತದಿಂದ ನಿಧನರಾಗಿದ್ದಾರೆ. ರೇವಾ ಅವರ ಹನುಮಾನ ಪ್ರದೇಶದ ಪುರಸಭೆಯ ವಾರ್ಡ್ ನಂ.9 ಕ್ಕೆ ಕಾಂಗ್ರೆಸ್ ಟಿಕೆಟ್‌ನಲ್ಲಿ ಹರಿನಾರಾಯಣ ಗುಪ್ತಾ ಕಣದಲ್ಲಿದ್ದರು.9ನೇ ವಾರ್ಡ್ ಫಲಿತಾಂಶ ತೀವ್ರ ಜಿದ್ದಾಜಿದ್ದಿನಿಂದ ಕೂಡಿತ್ತು. … Continued

ಕುಡಿದ ಮತ್ತಿನಲ್ಲಿ ಕ್ಯಾಮರಾ ಮುಂದೆಯೇ ತನ್ನನ್ನು ತಾನೇ ಇರಿದುಕೊಂಡ ಯುವಕ-ಸಾವು

ಇಂದೋರ್: ಮಧ್ಯಪ್ರದೇಶದ ಇಂದೋರ್ ಜಿಲ್ಲೆಯ ಬಂಗಂಗಾ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಯುವಕನೊಬ್ಬ ಕಂಠಪೂರ್ತಿ ಕುಡಿದು ಕೈಯ್ಯಲ್ಲಿ ಚಾಕು ಹಿಡಿದುಕೊಂಡು ಹೋಳಿ ನೃತ್ಯ ಮಾಡುತ್ತ ತನಗೆ ತಾನೇ ಚಾಕು ಇರಿದುಕೊಂಡಿದ್ದು, ಗಾಯಗೊಂಡ ಆತನನ್ನು ಕೂಡಲೇ ಆಸ್ಪತ್ರೆಗೆ ಕರೆದೊಯ್ದರೂ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾನೆ. ಘಟನೆಯ ವೀಡಿಯೋದಲ್ಲಿ ಕಂಠಪೂರ್ತಿ ಕುಡಿದಿರುವ ಗೋಪಾಲ (38) ಎಂಬಾತ ತನ್ನ ಸ್ನೇಹಿತರೊಂದಿಗೆ ಹೋಳಿ ಪೈರಿನ … Continued