ಕಸದ ರಾಶಿಯ ಮಧ್ಯೆ ಕ್ಯಾನ್ಸರ್ ಪೀಡಿತ ವೃದ್ಧ ಮಹಿಳೆ ಪತ್ತೆ : ಮೊಮ್ಮಗ ನನ್ನನ್ನು ಇಲ್ಲಿ ಬಿಟ್ಟು ಹೋದ ಎಂದ ವೃದ್ಧೆ…!

ಮುಂಬೈ: ಮುಂಬೈನಲ್ಲಿ ಕಸದ ರಾಶಿಗಳ ಮೇಲೆ ಬಿದ್ದಿದ್ದ ವೃದ್ಧ ಮಹಿಳೆಯೊಬ್ಬರ ದಯನೀಯ ಸ್ಥಿತಿಯ ಪ್ರಕರಣವೊಂದು ಬೆಳಕಿಗೆ ಬಂದಿದೆ. ಕ್ಯಾನ್ಸರ್ ನಿಂದ ಬಳಲುತ್ತಿದ್ದ ಮಹಿಳೆಯನ್ನು ಅವರ ಮೊಮ್ಮಗ ಕಸ ಎಸೆಯುವ ಜಾಗದಲ್ಲಿ ಬಿಟ್ಟು ಹೋಗಿದ್ದಾರೆ ಎಂದು ಆರೋಪಿಸಲಾಗಿದೆ. ಪೊಲೀಸರು ತನಿಖೆ ಆರಂಭಿಸಿ, ಮಹಿಳೆಯ ಕುಟುಂಬಕ್ಕಾಗಿ ಹುಡುಕಾಟ ನಡೆಸಿದ್ದಾರೆ. ಶನಿವಾರ ಮುಂಬೈ ಪೊಲೀಸರು ನಗರದ ಆರೆ ಕಾಲೋನಿಯ ರಸ್ತೆಯಲ್ಲಿರುವ … Continued

ವೀಡಿಯೊಗಳು…| ಪುಣೆ : ಇಂದ್ರಯಾಣಿ ನದಿ ಪ್ರವಾಸಿ ಸೇತುವೆ ಕುಸಿತ ; ಹಲವರು ನೀರಿನಲ್ಲಿ ಕೊಚ್ಚಿ ಹೋಗಿರುವ ಶಂಕೆ

ಪುಣೆ: ಭಾನುವಾರ ಮಧ್ಯಾಹ್ನ ಪುಣೆ ಜಿಲ್ಲೆಯ ದೇಹುವಿನ ಕುಂಡ್ಮಲ ಪ್ರದೇಶದಲ್ಲಿ ಇಂದ್ರಯಾಣಿ ನದಿಗೆ ಅಡ್ಡಲಾಗಿ ನಿರ್ಮಿಸಲಾದ ಪಾದಾಚಾರಿ ಸೇತುವೆ ಕುಸಿದು ಹಲವಾರು ಜನರು ನದಿಯ ರಭಸದ ಪ್ರವಾಹಕ್ಕೆ ಸಿಲುಕಿ ಮುಳುಗಿದ್ದಾರೆ ಎಂದು ವರದಿಯಾಗಿದೆ. ಈ ಘಟನೆ ಮಧ್ಯಾಹ್ನ 3:30 ರ ಸುಮಾರಿಗೆ ಸಂಭವಿಸಿದ್ದು, ಕನಿಷ್ಠ ಇಬ್ಬರು ಸಾವಿಗೀಡಾಗಿರುವುದು ಎಂದು ದೃಢಪಟ್ಟಿದೆ, ಆದರೆ ಇನ್ನೂ ಅನೇಕರು ಕಾಣೆಯಾಗಿದ್ದಾರೆ. … Continued

ವೀಡಿಯೊ..| ಕಾಲೇಜಿನ ಸಮಾರಂಭದಲ್ಲಿ ಭಾಷಣ ಮಾಡುತ್ತಿರುವಾಗಲೇ ಕುಸಿದು ಬಿದ್ದು ವಿದ್ಯಾರ್ಥಿನಿ ಸಾವು

ಮುಂಬೈ: ಮಹಾರಾಷ್ಟ್ರದ ಧಾರಶಿವ ನಗರದಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಭಾಷಣ ಮಾಡುತ್ತಿದ್ದ 20 ವರ್ಷದ ಕಾಲೇಜು ವಿದ್ಯಾರ್ಥಿನಿಯೊಬ್ಬಳು ಭಾಷಣ ಮಾಡುತ್ತಿದ್ದಾಗಲೇ ಕುಸಿದುಬಿದ್ದು ಸಾವಿಗೀಡಾಗಿದ್ದಾಳೆ. ಕುಸಿದುಬಿದ್ದ ವಿದ್ಯಾರ್ಥಿನಿಯನ್ನು ತಕ್ಷಣವೇ ಹತ್ತಿರದ ಆಸ್ಪತ್ರೆಗೆ ಸಾಗಿಸಲಾಯಿತು, ಆದರೆ ವೈದ್ಯರು ಮೃತಪಟ್ಟಿರುವುದಾಗಿ ಘೋಷಿಸಿದರು ಎಂದು ಹೇಳಲಾಗಿದೆ. ಈ ಘಟನೆಯ ವೀಡಿಯೊ ವೈರಲ್ ಆಗಿದ್ದು, ಪರಂದ ತಾಲೂಕಿನ ಮಹರ್ಷಿ ಗುರುವರ್ಯ ಆರ್.ಜಿ.ಶಿಂಧೆ ಮಹಾವಿದ್ಯಾಲಯದಲ್ಲಿ ಈ … Continued

ವೀಡಿಯೊ..| ಎರಡು ಕುಟುಂಬಗಳ ನಡುವೆ ಜಗಳ ನಡೆಯುವಾಗ ಕುಸಿದ ಛಾವಣಿ ; ಕೆಲವರಿಗೆ ಗಾಯ

ಮಹಾರಾಷ್ಟ್ರದ (Maharashtra) ಥಾಣೆಯ ಭಿವಾಂಡಿಯ ದೇನೆನಗರದಲ್ಲಿ ಎರಡು ಕುಟುಂಬಗಳ ನಡುವೆ ನಡೆದ ಹಿಂಸಾತ್ಮಕ ಜಗಳದ ವೇಳೆ ಮನೆಯ ಛಾವಣಿ ಕುಸಿದು ಬಿದ್ದಿದೆ. ಈ ವೇಳೆ ಮೇಲಿನ ಮಹಡಿಯಿಂದ ಕೆಳಗಿನ ಮಹಡಿಗೆ ಕೆಲವರು ಉರುಳಿಬಿದ್ದಿದ್ದು, ಅವರಿಗೆ ಗಾಯಗಳಾಗಿವೆ ಎಂದು ಹೇಳಲಾಗಿದೆ.. ಸಣ್ಣ ಕಾರಣಕ್ಕೆ ದೊಡ್ಡ ಜಗಳ ನಡೆದ ನಂತರ ಈ ಆಘಾತಕಾರಿ ಘಟನೆಯನ್ನು ವೀಡಿಯೊದಲ್ಲಿ ಸೆರೆಹಿಡಿಯಲಾಗಿದೆ. ವೈರಲ್ … Continued

ಮಹಾರಾಷ್ಟ್ರ ಡಿಸಿಎಂ ಏಕನಾಥ ಶಿಂಧೆ ವಿರುದ್ಧ ವಿವಾದಾತ್ಮಕ ಹೇಳಿಕೆ ; ಕುನಾಲ್ ಕಾಮ್ರಾಗೆ ಮುಂಬೈ ಪೊಲೀಸರಿಂದ ಸಮನ್ಸ್

ಮುಂಬೈ: ಮಹಾರಾಷ್ಟ್ರ ಉಪಮುಖ್ಯಮಂತ್ರಿ ಏಕನಾಥ ಶಿಂಧೆ ವಿರುದ್ಧ ವಿವಾದಾತ್ಮಕ ಹೇಳಿಕೆ ನೀಡಿದ ನಂತರ ಮುಂಬೈನ ಖಾರ್ ಪೊಲೀಸರು ಹಾಸ್ಯನಟ ಕುನಾಲ್ ಕಮ್ರಾ ಅವರಿಗೆ ತನಿಖೆಗೆ ಸಂಬಂಧಿಸಿದಂತೆ ವಿಚಾರಣೆಗೆ ಹಾಜರಾಗುವಂತೆ ಸಮನ್ಸ್ ಜಾರಿ ಮಾಡಿದ್ದಾರೆ. ಸದ್ಯ ಕಾಮ್ರಾ ಮಹಾರಾಷ್ಟ್ರದ ಹೊರಗಿರುವ ಕಾರಣ ಬೆಳಗ್ಗೆ 11 ಗಂಟೆಗೆ ಹೇಳಿಕೆ ದಾಖಲಿಸಿಕೊಳ್ಳುವಂತೆ ವಾಟ್ಸಾಪ್‌ನಲ್ಲಿ ಸಮನ್ಸ್‌ ಕಳುಹಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. … Continued

ಶಾಸಕರ ಒಟ್ಟು ಆಸ್ತಿ | ಕರ್ನಾಟಕವೇ ನಂ.1 ; ದೇಶದ ಟಾಪ್ 10 ಶ್ರೀಮಂತ ಶಾಸಕರಲ್ಲಿ ಡಿಕೆ ಶಿವಕುಮಾರಗೆ ಎಷ್ಟನೇ ಸ್ಥಾನ ಗೊತ್ತೆ..? ಪಟ್ಟಿ ಇಲ್ಲಿದೆ…

ನವದೆಹಲಿ: ಅಸೋಸಿಯೇಷನ್ ​​ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್ (ADR) ಬಿಡುಗಡೆ ಮಾಡಿದ ವರದಿಯ ಪ್ರಕಾರ ಮುಂಬೈನ ಘಾಟಕೋಪಾರ ಪೂರ್ವ ಕ್ಷೇತ್ರವನ್ನು ಪ್ರತಿನಿಧಿಸುವ ಬಿಜೆಪಿಯ ಶಾಸಕ ಪರಾಗ್ ಶಾ ಅವರು ಭಾರತದ ಶ್ರೀಮಂತ ಶಾಸಕರಾಗಿದ್ದಾರೆ ಹಾಗೂ ಕರ್ನಾಟಕ ಉಪಮುಖ್ಯಮಂತ್ರಿ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ ದೇಶದ ಎರಡನೇ ಶ್ರೀಮಂತ ಶಾಸಕರಾಗಿದ್ದಾರೆ. ಮುಂಬೈನ ಶಾಸಕ ಪರಾಗ್ ಶಾ ಸುಮಾರು 3,400 … Continued

ಮಹಾರಾಷ್ಟ್ರ : ಜಾತ್ರೆಯಲ್ಲಿ ಕೇಂದ್ರ ಸಚಿವರ ಮಗಳಿಗೆ ಕೆಲವರಿಂದ ಕಿರುಕುಳ : ಓರ್ವನ ಬಂಧನ

ಮುಂಬೈ: ಮಹಾರಾಷ್ಟ್ರದ ಜಲಗಾಂವ್ ಜಿಲ್ಲೆಯ ಜಾತ್ರೆಯಲ್ಲಿ ತನ್ನ ಅಪ್ರಾಪ್ತ ಮಗಳಿಗೆ ಕೆಲವರು ಕಿರುಕುಳ ನೀಡಿದ ನಂತರ ಕೇಂದ್ರ ಸಚಿವರೊಬ್ಬರು ಈ ಸಂಬಂಧ ದೂರು ನೀಡಿದ್ದಾರೆ. ಕೇಂದ್ರ ಯುವಜನ ವ್ಯವಹಾರ ಮತ್ತು ಕ್ರೀಡಾ ಖಾತೆ ರಾಜ್ಯ ಸಚಿವೆ ಮತ್ತು ಬಿಜೆಪಿ ನಾಯಕಿ ರಕ್ಷಾ ಖಡ್ಸೆ ಭಾನುವಾರ ಈ ಸಂಬಂಧ ದೂರು ನೀಡಲು ಪೊಲೀಸ್ ಠಾಣೆಗೆ ಆಗಮಿಸಿದ್ದರು. ಪ್ರತಿ … Continued

ಇದೆಂಥ ಮೂಢನಂಬಿಕೆ | ಅನಾರೋಗ್ಯವೆಂದು ಕೇವಲ 22 ದಿನಗಳ ಹಸುಳೆಗೆ 65 ಕಡೆ ಬರೆ ಹಾಕಿದರು…!

ಅಮರಾವತಿ: ಮೂಢನಂಬಿಕೆಯ ಅತಿರೇಕದ ಪ್ರಕರಣವೊಂದರಲ್ಲಿ 22 ದಿನಗಳ ಹಸುಳೆಗೆ 65 ಬಾರಿ ಬರೆ ಹಾಕಿದ ಪ್ರಕರಣವೊಂದು ಬೆಳಕಿಗೆ ಬಂದಿದೆ…!! ಈ ಘಟನೆ ಮಂಗಳವಾರ ಮಹಾರಾಷ್ಟ್ರದ ಅಮರಾವತಿಯ ಚಿಕಲ್ದಾರ ತಾಲೂಕಿನ ಸೀಮೋರಿ ಗ್ರಾಮದಲ್ಲಿ ನಡೆದಿದ್ದು, ಉಸಿರಾಟದ ತೊಂದರೆಗೆ ಸಾಂಪ್ರದಾಯಿಕ ಚಿಕಿತ್ಸೆ ನೀಡುವ ಹೆಸರಿನಲ್ಲಿ ಕುಡುಗೋಲು ಬಿಸಿ ಮಾಡಿ 65 ಬಾರಿ ಬರೆ ಹಾಕಲಾಗಿದೆ. ಈ ಅಮಾನವೀಯ ಕೃತ್ಯದಿಂದ … Continued

ಮಹಾರಾಷ್ಟ್ರ- ಕರ್ನಾಟಕದ ನಡುವೆ ಬಸ್‌ ಸಂಚಾರ ಸ್ಥಗಿತ

ಬೆಳಗಾವಿ : ಕನ್ನಡದಲ್ಲಿ ಮಾತನಾಡಿ ಎಂದು ಹೇಳಿದ್ದಕ್ಕೆ ಬಸ್ ನಿರ್ವಾಹಕನ ಮೇಲೆ ಕೆಲವು ಮರಾಠಿ ಭಾಷಿಕರು ಹಲ್ಲೆ ನಡೆಸಿದ ಪ್ರಕರಣ ತೀವ್ರ ಸ್ವರೂಪ ಪಡೆದುಕೊಂಡಿದ್ದು, ಕಂಡಕ್ಟರ್ ವಿರುದ್ಧ ಪೋಕ್ಸೋ ಪ್ರಕರಣ ದಾಖಲಿಸಲಾಗಿದೆ. ಇದು ರಾಜಕೀಯ ಪ್ರೇರಿತವಾದದ್ದು, ಕೂಡಲೇ ಈ ಕೇಸನ್ನು ವಾಪಸ್ ಪಡೆಯಬೇಕೆಂದು ಕನ್ನಡಪರ ಸಂಘಟನೆಗಳು ಪ್ರತಿಭಟನೆ ನಡೆಸಿವೆ. ಮಹಾರಾಷ್ಟ್ರದ ಕೊಲ್ಲಾಪುರದಲ್ಲಿ ಶಿವಸೇನೆ ಪ್ರತಿಭಟನೆ ಮಾಡುತ್ತಿದೆ. … Continued

ವೀಡಿಯೊ…| ಪಂದ್ಯ ಸೋತ ನಂತರ ರೆಫರಿ ಎದೆಗೆ ಒದ್ದ ಕುಸ್ತಿಪಟು….! ವೀಡಿಯೊ ವೈರಲ್‌

ಮುಂಬೈ : 67ನೇ ‘ಮಹಾರಾಷ್ಟ್ರ ಕೇಸರಿ’ ಕುಸ್ತಿ ಸ್ಪರ್ಧೆಯ ಅಂತಿಮ ಪಂದ್ಯವು ಆಘಾತಕಾರಿ ಘಟನೆಗೆ ಸಾಕ್ಷಿಯಾಗಿದೆ. ಸೋತ ಕುಸ್ತಿಪಟು ರೆಫರಿಯ ಎದೆಯ ಮೇಲೆ ಒದ್ದ ಘಟನೆ ನಡೆದಿದೆ. ಮತ್ತು ಇನ್ನೊಬ್ಬ ಕುಸ್ತಿಪಟು ಅಂಕಗಳನ್ನು ಕಳೆದುಕೊಂಡಿದ್ದಕ್ಕಾಗಿ ರೆಫರಿಯನ್ನು ನಿಂದಿಸಿದ ವಿದ್ಯಮಾನವೂ ನಡೆದಿದೆ. ಮಹಾರಾಷ್ಟ್ರ ಉಪಮುಖ್ಯಮಂತ್ರಿ ಅಜಿತ ಪವಾರ್ ಮತ್ತು ಕೇಂದ್ರ ಸಚಿವ ಮುರಳೀಧರ ಮೊಹೋಲ್ ಅವರ ಸಮ್ಮುಖದಲ್ಲಿ … Continued