ಅಕ್ರಮ ಹಣ ವರ್ಗಾವಣೆ ಪ್ರಕರಣ: ಬಂಧನಕ್ಕೊಳಗಾದ ಮಹಾರಾಷ್ಟ್ರ ನವಾಬ್ ಮಲಿಕ್ ಅವರನ್ನು ಮಾರ್ಚ್ 3ರ ವರೆಗೆ ಇಡಿ ವಶಕ್ಕೆ ನೀಡಿದ ಕೋರ್ಟ್‌

ಮುಂಬೈ: ಪರಾರಿಯಾಗಿರುವ ಭೂಗತ ಪಾತಕಿ ದಾವೂದ್ ಇಬ್ರಾಹಿಂಗೆ ಸಂಬಂಧಿಸಿದ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬುಧವಾರ ಬಂಧನಕ್ಕೊಳಗಾಗಿರುವ ಮಹಾರಾಷ್ಟ್ರ ಸಚಿವ ಮತ್ತು ಎನ್‌ಸಿಪಿ ವಕ್ತಾರ ನವಾಬ್ ಮಲಿಕ್ ಅವರನ್ನು ಮುಂಬೈ ವಿಶೇಷ ಕೋರ್ಟ್‌ ಮಾರ್ಚ್ 3ರ ವರೆಗೆ ಜಾರಿ ನಿರ್ದೇಶನಾಲಯದ ವಶಕ್ಕೆ ನೀಡಲಾಗಿದೆ. ನವಾಬ್ ಮಲಿಕ್ ಅವರನ್ನು ಬುಧವಾರ ಬೆಳಗ್ಗೆ ದಕ್ಷಿಣ ಮುಂಬೈನಲ್ಲಿರುವ ಇಡಿ ಕಚೇರಿಗೆ … Continued