ಗಡಿ ವಿವಾದ: ಕರ್ನಾಟಕಕ್ಕೆ ನೀರು ಹರಿಸುವುದನ್ನು ಮರುಪರಿಶೀಲಿಸಬೇಕಾಗುತ್ತದೆ ಎಂದು ಎಚ್ಚರಿಸಿದ ಮಹಾರಾಷ್ಟ್ರ ಸಚಿವ

ನಾಗ್ಪುರ : ಗಡಿ ವಿವಾದಕ್ಕೆ ಸಂಬಂಧಿಸಿ ಕರ್ನಾಟಕ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ವಿರುದ್ಧ ಬುಧವಾರ ವಾಗ್ದಾಳಿ ನಡೆಸಿದ ಮಹಾರಾಷ್ಟ್ರ ಸಚಿವ ಶಂಭುರಾಜ್‌ ದೇಸಾಯಿ, ಬೊಮ್ಮಾಯಿ ಅವರು ಬೇಜವಾಬ್ದಾರಿಯುತ ಹೇಳಿಕೆಗಳನ್ನು ನೀಡುವುದನ್ನು ನಿಲ್ಲಿಸದಿದ್ದರೆ ಕರ್ನಾಟಕಕ್ಕೆ ನದಿ ನೀರು ಪೂರೈಕೆ ಮಾಡುವ ಬಗ್ಗೆ ಮ=ಹಾರಾಷ್ಟ್ರ ಮರುಪರಿಶೀಲನೆ ಮಾಡಬೇಕಾಗುತ್ತದೆ ಎಂದು ಎಚ್ಚರಿಸಿದ್ದಾರೆ. ಸುದ್ದಿಗಾರರ ಜೊತೆ ಮಾತನಾಡಿದ ಅವರು, ಮಹಾರಾಷ್ಟ್ರಕ್ಕೆ … Continued