ವೀಡಿಯೊ…| ದುರಂತವಾಗಿ ಮಾರ್ಪಟ್ಟ ರೀಲಿಗಾಗಿ ಮಾಡಿದ ಸಾಹಸ ; 300 ಅಡಿ ಆಳದ ಕಂದಕಕ್ಕೆ ಬಿದ್ದ ಕಾರು…!

ಮುಂಬೈ: ಮಹಾರಾಷ್ಟ್ರದ ಸತಾರಾ ಜಿಲ್ಲೆಯಲ್ಲಿ ಕಾರಿನಲ್ಲಿ ಸಾಹಸ ಪ್ರದರ್ಶಿಸಲು ಹೋಗಿ ಯುವಕನೊಬ್ಬ ಭಾರೀ ಬೆಲೆ ತೆರಬೇಕಾದ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ. ರೀಲ್ಸ್‌ಗಾಗಿ ಕಾರಿನಲ್ಲಿ ಸ್ಟಂಟ್‌ ಪ್ರದರ್ಶನ ಮಾಡುವಾಗ, ಕಾರು ನಿಯಂತ್ರಣ ತಪ್ಪಿ, ಕಾರು ಮತ್ತು ಯುವಕ ಇಬ್ಬರೂ 300 ಅಡಿ ಆಳದ ಪ್ರಪಾತಕ್ಕೆ ಉರುಳಿದ್ದಾರೆ. ಇದರ ನಾಟಕೀಯ ಕ್ಷಣವನ್ನು ಸೆರೆಹಿಡಿದ ವಿಡಿಯೋವೊಂದು ಸಾಮಾಜಿಕ ಮಾಧ್ಯಮದಲ್ಲಿ … Continued

ಶಾಲೆಯ ಟಾಯ್ಲೆಟ್ಟಿನಲ್ಲಿ ರಕ್ತದ ಕಲೆ ಕಂಡುಬಂದಿದ್ದಕ್ಕೆ ಮುಟ್ಟಾದ ಹುಡುಗಿಯ ಪತ್ತೆಗೆ ವಿದ್ಯಾರ್ಥಿನಿಯರ ಬಟ್ಟೆ ಬಿಚ್ಚಿಸಿದರು…!!

ಥಾಣೆ : ಋತುಮತಿಯಾದ (Periods) ವಿದ್ಯಾರ್ಥಿನಿಯನ್ನು ಪತ್ತೆ ಹಚ್ಚುವ ಸಲುವಾಗಿ ಶಿಕ್ಷಕರು 5ರಿಂದ 10ನೇ ತರಗತಿಯ ವಿದ್ಯಾರ್ಥಿನಿಯರ ಬಟ್ಟೆ, ಒಳಉಡುಪುಗಳನ್ನು ಬಿಚ್ಚಿಸಿರುವ ಆಘಾತಕಾರಿ ಘಟನೆ ಮಹಾರಾಷ್ಟ್ರದ (Maharastra) ಥಾಣೆಯ ಶಹಪೂರದ ಶಾಲೆಯೊಂದರಲ್ಲಿ ನಡೆದಿದೆ. ಈ ಸಂಬಂಧ ಥಾಣೆಯಲ್ಲಿರುವ ಖಾಸಗಿ ಶಾಲೆಯ ಪ್ರಾಂಶುಪಾಲರು ಮತ್ತು ಇನ್ನೊಬ್ಬ ಸಿಬ್ಬಂದಿಯನ್ನು ಪೊಲೀಸರು ಬಂಧಿಸಿದ್ದಾರೆ ಎಂದು ಅಧಿಕಾರಿಗಳು ಗುರುವಾರ (ಜುಲೈ 10) … Continued

ವೀಡಿಯೊ..| ಕಳಪೆ ಗುಣಮಟ್ಟದ ಆಹಾರ ನೀಡಿದ್ದಾರೆಂದು ಕ್ಯಾಂಟೀನ್ ಮ್ಯಾನೇಜರ್‌ ಮುಖಕ್ಕೆ ಗುದ್ದಿದ ಶಿವಸೇನೆ ಶಾಸಕ…!

ಮುಂಬೈ: ಮುಂಬೈನ ಆಕಾಶವಾಣಿ ಶಾಸಕರ ನಿವಾಸದಲ್ಲಿ ಶಾಸಕ ಸಂಜಯ ಗಾಯಕ್ವಾಡ್, ತಮಗೆ ನೀಡಲಾದ ಆಹಾರದ ಗುಣಮಟ್ಟದ ಬಗ್ಗೆ ಅಸಮಾಧಾನಗೊಂಡು ಕ್ಯಾಂಟೀನ್ ಮ್ಯನೇಜರ್‌ ಅವರನ್ನು ಥಳಿಸುತ್ತಿರುವ ವೀಡಿಯೊವೊಂದು ವೈರಲ್ ಆಗಿದೆ. ಬುಲ್ದಾನಾ ಕ್ಷೇತ್ರ ಪ್ರತಿನಿಧಿಸುವ ಶಾಸಕ ಸಂಜಯ ಗಾಯಕವಾಡ್ ಅವರು ಶಾಸಕರ ಅತಿಥಿ ಗೃಹ ಕ್ಯಾಂಟೀನ್‌ನಲ್ಲಿ ನೀಡಲಾಗುವ ಆಹಾರದ ಗುಣಮಟ್ಟ ಕಳಪೆಯಾಗಿರುವ ಬಗ್ಗೆ ತೀವ್ರ ಅಸಮಾಧಾನಗೊಂಡಿದ್ದರು ಎಂದು … Continued

ರಾಜ್ ಠಾಕ್ರೆ ಸಂಕಲ್ಪ, ಉದ್ಧವರಿಂದ ದೊಡ್ಡ ಸುಳಿವು : 20 ವರ್ಷಗಳ ನಂತರ ಠಾಕ್ರೆ ಸಹೋದರರ ಪುನರ್ಮಿಲನ

ಮುಂಬೈ: ರಾಜಕೀಯದಲ್ಲಿ ಎರಡು ದಶಕಗಳಿಂದ ಬೇರೆಬೇರೆಯಾಗಿದ್ದ ಸೋದರಸಂಬಂಧಿಗಳಾದ ಉದ್ಧವ್ ಠಾಕ್ರೆ ಮತ್ತು ರಾಜ ಠಾಕ್ರೆ ಇಂದು, ಶನಿವಾರ ಮುಂಬೈನಲ್ಲಿ ನಡೆದ ಸಾರ್ವಜನಿಕ ರ್ಯಾಲಿಯಲ್ಲಿ ಮತ್ತೆ ಒಂದಾಗಿದ್ದಾರೆ. ‘ಅವಾಜ್ ಮರಾಠಿಚಾ’ (ಮರಾಠಿಯ ಧ್ವನಿ) ಎಂಬ ಶೀರ್ಷಿಕೆಯ ಈ ಕಾರ್ಯಕ್ರಮವನ್ನು ಶಿವಸೇನೆ (ಉದ್ಧವ್ ಬಾಳಾಸಾಹೇಬ್ ಠಾಕ್ರೆ) ಮತ್ತು ಮಹಾರಾಷ್ಟ್ರ ನವನಿರ್ಮಾಣ ಸೇನೆ (ಎಂಎನ್‌ಎಸ್) ಜಂಟಿಯಾಗಿ ಆಯೋಜಿಸಿದ್ದು, 2005 ರ … Continued

ನೀಟ್ ಅಣಕು ಪರೀಕ್ಷೆಯಲ್ಲಿ ಕಡಿಮೆ ಅಂಕ ಪಡೆದಿದ್ದಕ್ಕೆ 17 ವರ್ಷದ ಮಗಳನ್ನು ಹೊಡೆದು ಕೊಂದ ಶಿಕ್ಷಕ…!

ಸಾಂಗ್ಲಿ : ವಿದ್ಯಾರ್ಥಿನಿ ತನ್ನ 10 ನೇ ತರಗತಿಯ ಬೋರ್ಡ್ ಪರೀಕ್ಷೆಯಲ್ಲಿ ಶೇ. 92.60 ಅಂಕಗಳನ್ನು ಗಳಿಸಿದ್ದಾಳೆ. ಆದರೆ ಒಂದು ವರ್ಷದ ನಂತರ,  ಅಣಕು ಪರೀಕ್ಷೆ(mock test)ಯಲ್ಲಿ ಕಡಿಮೆ ಅಂಕಗಳನ್ನು ಗಳಿಸಿದ ಕಾರಣಕ್ಕೆ ಅವಳ ತಂದೆ ಅವಳನ್ನು ಹೊಡೆದು ಕೊಂದ ಘಟನೆ ಮಹಾರಾಷ್ಟ್ರದ ಸಾಂಗ್ಲಿಯಲ್ಲಿ ವರದಿಯಾಗಿದೆ. ಮಹಾರಾಷ್ಟ್ರದ ಸಾಂಗ್ಲಿಯ ಸಾಧನಾ ಭೋಂಸ್ಲೆ – ಪೂರ್ವ ವೈದ್ಯಕೀಯ … Continued

ಕಸದ ರಾಶಿಯ ಮಧ್ಯೆ ಕ್ಯಾನ್ಸರ್ ಪೀಡಿತ ವೃದ್ಧ ಮಹಿಳೆ ಪತ್ತೆ : ಮೊಮ್ಮಗ ನನ್ನನ್ನು ಇಲ್ಲಿ ಬಿಟ್ಟು ಹೋದ ಎಂದ ವೃದ್ಧೆ…!

ಮುಂಬೈ: ಮುಂಬೈನಲ್ಲಿ ಕಸದ ರಾಶಿಗಳ ಮೇಲೆ ಬಿದ್ದಿದ್ದ ವೃದ್ಧ ಮಹಿಳೆಯೊಬ್ಬರ ದಯನೀಯ ಸ್ಥಿತಿಯ ಪ್ರಕರಣವೊಂದು ಬೆಳಕಿಗೆ ಬಂದಿದೆ. ಕ್ಯಾನ್ಸರ್ ನಿಂದ ಬಳಲುತ್ತಿದ್ದ ಮಹಿಳೆಯನ್ನು ಅವರ ಮೊಮ್ಮಗ ಕಸ ಎಸೆಯುವ ಜಾಗದಲ್ಲಿ ಬಿಟ್ಟು ಹೋಗಿದ್ದಾರೆ ಎಂದು ಆರೋಪಿಸಲಾಗಿದೆ. ಪೊಲೀಸರು ತನಿಖೆ ಆರಂಭಿಸಿ, ಮಹಿಳೆಯ ಕುಟುಂಬಕ್ಕಾಗಿ ಹುಡುಕಾಟ ನಡೆಸಿದ್ದಾರೆ. ಶನಿವಾರ ಮುಂಬೈ ಪೊಲೀಸರು ನಗರದ ಆರೆ ಕಾಲೋನಿಯ ರಸ್ತೆಯಲ್ಲಿರುವ … Continued

ವೀಡಿಯೊಗಳು…| ಪುಣೆ : ಇಂದ್ರಯಾಣಿ ನದಿ ಪ್ರವಾಸಿ ಸೇತುವೆ ಕುಸಿತ ; ಹಲವರು ನೀರಿನಲ್ಲಿ ಕೊಚ್ಚಿ ಹೋಗಿರುವ ಶಂಕೆ

ಪುಣೆ: ಭಾನುವಾರ ಮಧ್ಯಾಹ್ನ ಪುಣೆ ಜಿಲ್ಲೆಯ ದೇಹುವಿನ ಕುಂಡ್ಮಲ ಪ್ರದೇಶದಲ್ಲಿ ಇಂದ್ರಯಾಣಿ ನದಿಗೆ ಅಡ್ಡಲಾಗಿ ನಿರ್ಮಿಸಲಾದ ಪಾದಾಚಾರಿ ಸೇತುವೆ ಕುಸಿದು ಹಲವಾರು ಜನರು ನದಿಯ ರಭಸದ ಪ್ರವಾಹಕ್ಕೆ ಸಿಲುಕಿ ಮುಳುಗಿದ್ದಾರೆ ಎಂದು ವರದಿಯಾಗಿದೆ. ಈ ಘಟನೆ ಮಧ್ಯಾಹ್ನ 3:30 ರ ಸುಮಾರಿಗೆ ಸಂಭವಿಸಿದ್ದು, ಕನಿಷ್ಠ ಇಬ್ಬರು ಸಾವಿಗೀಡಾಗಿರುವುದು ಎಂದು ದೃಢಪಟ್ಟಿದೆ, ಆದರೆ ಇನ್ನೂ ಅನೇಕರು ಕಾಣೆಯಾಗಿದ್ದಾರೆ. … Continued

ವೀಡಿಯೊ..| ಕಾಲೇಜಿನ ಸಮಾರಂಭದಲ್ಲಿ ಭಾಷಣ ಮಾಡುತ್ತಿರುವಾಗಲೇ ಕುಸಿದು ಬಿದ್ದು ವಿದ್ಯಾರ್ಥಿನಿ ಸಾವು

ಮುಂಬೈ: ಮಹಾರಾಷ್ಟ್ರದ ಧಾರಶಿವ ನಗರದಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಭಾಷಣ ಮಾಡುತ್ತಿದ್ದ 20 ವರ್ಷದ ಕಾಲೇಜು ವಿದ್ಯಾರ್ಥಿನಿಯೊಬ್ಬಳು ಭಾಷಣ ಮಾಡುತ್ತಿದ್ದಾಗಲೇ ಕುಸಿದುಬಿದ್ದು ಸಾವಿಗೀಡಾಗಿದ್ದಾಳೆ. ಕುಸಿದುಬಿದ್ದ ವಿದ್ಯಾರ್ಥಿನಿಯನ್ನು ತಕ್ಷಣವೇ ಹತ್ತಿರದ ಆಸ್ಪತ್ರೆಗೆ ಸಾಗಿಸಲಾಯಿತು, ಆದರೆ ವೈದ್ಯರು ಮೃತಪಟ್ಟಿರುವುದಾಗಿ ಘೋಷಿಸಿದರು ಎಂದು ಹೇಳಲಾಗಿದೆ. ಈ ಘಟನೆಯ ವೀಡಿಯೊ ವೈರಲ್ ಆಗಿದ್ದು, ಪರಂದ ತಾಲೂಕಿನ ಮಹರ್ಷಿ ಗುರುವರ್ಯ ಆರ್.ಜಿ.ಶಿಂಧೆ ಮಹಾವಿದ್ಯಾಲಯದಲ್ಲಿ ಈ … Continued

ವೀಡಿಯೊ..| ಎರಡು ಕುಟುಂಬಗಳ ನಡುವೆ ಜಗಳ ನಡೆಯುವಾಗ ಕುಸಿದ ಛಾವಣಿ ; ಕೆಲವರಿಗೆ ಗಾಯ

ಮಹಾರಾಷ್ಟ್ರದ (Maharashtra) ಥಾಣೆಯ ಭಿವಾಂಡಿಯ ದೇನೆನಗರದಲ್ಲಿ ಎರಡು ಕುಟುಂಬಗಳ ನಡುವೆ ನಡೆದ ಹಿಂಸಾತ್ಮಕ ಜಗಳದ ವೇಳೆ ಮನೆಯ ಛಾವಣಿ ಕುಸಿದು ಬಿದ್ದಿದೆ. ಈ ವೇಳೆ ಮೇಲಿನ ಮಹಡಿಯಿಂದ ಕೆಳಗಿನ ಮಹಡಿಗೆ ಕೆಲವರು ಉರುಳಿಬಿದ್ದಿದ್ದು, ಅವರಿಗೆ ಗಾಯಗಳಾಗಿವೆ ಎಂದು ಹೇಳಲಾಗಿದೆ.. ಸಣ್ಣ ಕಾರಣಕ್ಕೆ ದೊಡ್ಡ ಜಗಳ ನಡೆದ ನಂತರ ಈ ಆಘಾತಕಾರಿ ಘಟನೆಯನ್ನು ವೀಡಿಯೊದಲ್ಲಿ ಸೆರೆಹಿಡಿಯಲಾಗಿದೆ. ವೈರಲ್ … Continued

ಮಹಾರಾಷ್ಟ್ರ ಡಿಸಿಎಂ ಏಕನಾಥ ಶಿಂಧೆ ವಿರುದ್ಧ ವಿವಾದಾತ್ಮಕ ಹೇಳಿಕೆ ; ಕುನಾಲ್ ಕಾಮ್ರಾಗೆ ಮುಂಬೈ ಪೊಲೀಸರಿಂದ ಸಮನ್ಸ್

ಮುಂಬೈ: ಮಹಾರಾಷ್ಟ್ರ ಉಪಮುಖ್ಯಮಂತ್ರಿ ಏಕನಾಥ ಶಿಂಧೆ ವಿರುದ್ಧ ವಿವಾದಾತ್ಮಕ ಹೇಳಿಕೆ ನೀಡಿದ ನಂತರ ಮುಂಬೈನ ಖಾರ್ ಪೊಲೀಸರು ಹಾಸ್ಯನಟ ಕುನಾಲ್ ಕಮ್ರಾ ಅವರಿಗೆ ತನಿಖೆಗೆ ಸಂಬಂಧಿಸಿದಂತೆ ವಿಚಾರಣೆಗೆ ಹಾಜರಾಗುವಂತೆ ಸಮನ್ಸ್ ಜಾರಿ ಮಾಡಿದ್ದಾರೆ. ಸದ್ಯ ಕಾಮ್ರಾ ಮಹಾರಾಷ್ಟ್ರದ ಹೊರಗಿರುವ ಕಾರಣ ಬೆಳಗ್ಗೆ 11 ಗಂಟೆಗೆ ಹೇಳಿಕೆ ದಾಖಲಿಸಿಕೊಳ್ಳುವಂತೆ ವಾಟ್ಸಾಪ್‌ನಲ್ಲಿ ಸಮನ್ಸ್‌ ಕಳುಹಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. … Continued