ವಿಡಿಯೊ…| ಭಾರಿ ಮಳೆ : ಪಾತಾಳಗಂಗಾ ನದಿಗೆ ಕೊಚ್ಚಿಹೋದ 3 ಸಾವಿರದಷ್ಟು ಅಡುಗೆ ಅನಿಲ (LPG) ಸಿಲಿಂಡರ್‌ಗಳು….!

ಮುಂಬೈ : ಮಹಾರಾಷ್ಟ್ರದ ರಾಯಗಡ ಜಿಲ್ಲೆಯಲ್ಲಿ ಸುರಿದ ಭಾರೀ ಮಳೆಯಿಂದ ಉಂಟಾದ ಪ್ರವಾಹದ ಪರಿಣಾಮ, ಹಿಂದೂಸ್ತಾನ್ ಪೆಟ್ರೋಲಿಯಂ ಕಾರ್ಪೊರೇಷನ್ ಲಿಮಿಟೆಡ್ (HPCL)ನ ಎಲ್‌ಪಿಜಿ ಬಾಟಲಿಂಗ್ ಘಟಕದಿಂದ ಸಾವಿರಾರು ಅಡುಗೆ ಅನಿಲ (LPG) ಸಿಲಿಂಡರ್‌ಗಳು ಪ್ರವಾಹದ ನೀರಿನಲ್ಲಿ ಕೊಚ್ಚಿಹೋಗಿರುವ ಘಟನೆ ವರದಿಯಾಗಿದೆ. ಪಾತಾಳಗಂಗಾ ನದಿಯಲ್ಲಿ ಸಿಲಿಂಡರ್‌ಗಳು ತೇಲುತ್ತಾ ಸಾಗುತ್ತಿರುವ ದೃಶ್ಯ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಸ್ಥಳೀಯ … Continued

ಉದ್ಧವ್‌ ಠಾಕ್ರೆಗೆ ಮಹಾ ಶಾಕ್ : ಶಿಂದೆ ಪಾಳಯ ಸೇರಿದ ಪಕ್ಷದ ಆರು ಬಂಡಾಯ ಸಂಸದರು !

ಮುಂಬೈ: ಮಹಾರಾಷ್ಟ್ರ ರಾಜಕಾರಣದಲ್ಲಿ ಭಾರಿ ಸಂಚಲನ ಮೂಡಿಸಿರುವ ಪ್ರಮುಖ ರಾಜಕೀಯ ಬೆಳವಣಿಗೆಯೊಂದರಲ್ಲಿ, ಶಿವಸೇನಾ (ಯುಬಿಟಿ) ಪಕ್ಷದ ಆರೂ ಜನ ಬಂಡಾಯ ಸಂಸದರು ಸೋಮವಾರ ಮುಂಬೈನಲ್ಲಿ ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಏಕನಾಥ ಶಿಂದೆ ನೇತೃತ್ವದ ಆಡಳಿತಾರೂಢ ಶಿವಸೇನೆಗೆ ಅಧಿಕೃತವಾಗಿ ಸೇರ್ಪಡೆಯಾಗಿದ್ದಾರೆ. ಇದು ಉದ್ಧವ್ ಠಾಕ್ರೆ ಬಣಕ್ಕೆ ಬಿದ್ದ ಬಲವಾದ ಆಘಾತವಾಗಿದೆ. ಮುಂಬೈನಲ್ಲಿ  ಸೋಮವಾರ ನಡೆದ ವಿಶೇಷ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ … Continued

ಮಹಾರಾಷ್ಟ್ರ ವಿಧಾನಪರಿಷತ್ ಚುನಾವಣೆ : ಮಹಾಯುತಿ ಮೈತ್ರಿಕೂಟಕ್ಕೆ ಭರ್ಜರಿ ಜಯ ; ಒಂದೇ ಒಂದು ಸ್ಥಾನ ಗೆಲ್ಲದ ವಿಪಕ್ಷಗಳು…!

ಮುಂಬೈ: ಮಹಾರಾಷ್ಟ್ರ ವಿಧಾನಪರಿಷತ್ ಚುನಾವಣೆಯಲ್ಲಿ ಆಡಳಿತಾರೂಢ ಮಹಾಯುತಿ ಮೈತ್ರಿಕೂಟವು ಭರ್ಜರಿ ಜಯಭೇರಿ ಬಾರಿಸಿದೆ. ಒಟ್ಟು ಘೋಷಣೆಯಾದ 17 ಸ್ಥಾನಗಳ ಪೈಕಿ 16 ಸ್ಥಾನಗಳನ್ನು ತನ್ನದಾಗಿಸಿಕೊಳ್ಳುವ ಮೂಲಕ ಮೈತ್ರಿಕೂಟವು ಕೌನ್ಸಿಲ್‌ನಲ್ಲಿ ತನ್ನ ಹಿಡಿತವನ್ನು ಮತ್ತಷ್ಟು ಬಲಪಡಿಸಿಕೊಂಡಿದೆ. ಜೂನ್ 18 ರಂದು 17 ಸ್ಥಾನಗಳಿಗೆ ಮತದಾನ ನಡೆದಿತ್ತು. ಆದರೆ, ಮತದಾನಕ್ಕೂ ಮುನ್ನವೇ ಮಹಾಯುತಿ ಮೈತ್ರಿಕೂಟದ ಆರು ಅಭ್ಯರ್ಥಿಗಳು ಅವಿರೋಧವಾಗಿ … Continued

ಉದ್ಧವ್ ಠಾಕ್ರೆ ಬಣಕ್ಕೆ ಹಿನ್ನಡೆ : ಶಿಂಧೆ ಶಿವಸೇನೆಗೆ ಜಿಗಿದ ಸಂಸದ ಓಮ್ರಾಜೆ ನಿಂಬಾಳ್ಕರ್

ಮುಂಬೈ: ಮಹಾರಾಷ್ಟ್ರ ರಾಜಕಾರಣದಲ್ಲಿ ಮತ್ತೊಮ್ಮೆ ಭಾರಿ ಸಂಚಲನ ಸೃಷ್ಟಿಯಾಗಿದ್ದು, ಮಾಜಿ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ನೇತೃತ್ವದ ಶಿವಸೇನೆ (ಯುಬಿಟಿ) ಪಕ್ಷಕ್ಕೆ ಮತ್ತೊಂದು ಆಘಾತ ಎದುರಾಗಿದೆ. ಧಾರಾಶಿವ್ ಕ್ಷೇತ್ರದ ಸಂಸದ ಓಮ್ರಾಜೆ ನಿಂಬಾಳ್ಕರ್ ಅವರು ಉದ್ಧವ್ ಬಣವನ್ನು ತೊರೆದು, ಮುಖ್ಯಮಂತ್ರಿ ಏಕನಾಥ ಶಿಂಧೆ ನೇತೃತ್ವದ ಶಿವಸೇನೆಗೆ ಅಧಿಕೃತವಾಗಿ ಸೇರ್ಪಡೆಯಾಗಿದ್ದಾರೆ. ತಮ್ಮ ಗೋವರ್ಧನವಾಡಿಯ ನಿವಾಸದಲ್ಲಿ ಹಮ್ಮಿಕೊಂಡಿದ್ದ ಪಕ್ಷದ ಕಾರ್ಯಕರ್ತರ … Continued

ಮುಂಗಾರಿನ ಉಲ್ಟಾ ಪಲ್ಟಾ ಆಟ : ರಾಜಸ್ಥಾನದ ಮರುಭೂಮಿ ಹಸಿರಾಗುತ್ತಿದೆ, ಮಳೆ ಬೀಳುವ ಪ್ರದೇಶಗಳು ಒಣಗುತ್ತಿವೆ ಯಾಕೆ ?

ನವದೆಹಲಿ: ದೇಶಾದ್ಯಂತ ನೈಋತ್ಯ ಮುಂಗಾರು ಮಾರುತಗಳು ಮತ್ತೊಮ್ಮೆ ಚುರುಕಾಗಲಿ ಎಂದು ಇಡೀ ಭಾರತ ಕಾತರದಿಂದ ಕಾಯುತ್ತಿರುವ ಬೆನ್ನಲ್ಲೇ, ದೇಶದ ಹವಾಮಾನ ವ್ಯವಸ್ಥೆಯಲ್ಲಿ ತೀರಾ ಆಶ್ಚರ್ಯಕರ ಮತ್ತು ಆತಂಕಕಾರಿ ವಿದ್ಯಮಾನವೊಂದು ಮುಂಚೂಣಿಗೆ ಬಂದಿದೆ. ಭಾರತದ ಅತ್ಯಂತ ಒಣ ಭೂಮಿ ಹಾಗೂ ಥಾರ್ ಮರುಭೂಮಿಯ ನೆಲೆಯಾಗಿರುವ ರಾಜಸ್ಥಾನದಲ್ಲಿ ಈ ಜೂನ್ ತಿಂಗಳಿನಲ್ಲಿ ವಾಡಿಕೆಗಿಂತ ಅತಿ ಹೆಚ್ಚು ಮಳೆಯಾಗಿದೆ. ಆದರೆ, … Continued

ದೇವಸ್ಥಾನದ ಸಭಾಮಂಟಪದ ಮೇಲ್ಛಾವಣಿ ಕುಸಿತ; ನಾಲ್ವರು ಸಾವು, 23 ಮಂದಿಗೆ ಗಾಯ

ಪರ್ಭಾನಿ : ಮಹಾರಾಷ್ಟ್ರದ ಪರ್ಭಾನಿ ಜಿಲ್ಲೆಯ ಪ್ರಸಿದ್ಧ ಯಶವಾಡಿ ದೇವಸ್ಥಾನದಲ್ಲಿ ನಿರ್ಮಾಣ ಹಂತದಲ್ಲಿದ್ದ ಸಭಾಮಂಟಪದ ಮೇಲ್ಛಾವಣಿ ಹಠಾತ್ತನೆ ಕುಸಿದು ಬಿದ್ದು  ನಾಲ್ವರು ಸಾವಿಗೀಡಾಗಿದ್ದು, 23 ಜನರು ಗಾಯಗೊಂಡ ಭೀಕರ ಘಟನೆ ಶನಿವಾರ ಸಂಭವಿಸಿದೆ. ಛತ್ರಪತಿ ಸಂಭಾಜಿನಗರದಿಂದ ಸುಮಾರು 190 ಕಿ.ಮೀ ದೂರದಲ್ಲಿರುವ ಯಶವಾಡಿ ಗ್ರಾಮದಲ್ಲಿ ಈ ದೇವಸ್ಥಾನವಿದ್ದು, ಘಟನೆ ನಡೆದಾಗ ಸುಮಾರು 27 ಜನರು ಅವಶೇಷಗಳ … Continued

ಬಂಡಾಯದ ಬಿರುಗಾಳಿ: ನಂಬಿಕೆ ಇಲ್ಲದಿದ್ರೆ ಶಿವಸೇನೆ ಮುಖ್ಯಸ್ಥನ ಸ್ಥಾನ ತ್ಯಜಿಸಲು ಸಿದ್ಧ ಎಂದ ಉದ್ಧವ್ ಠಾಕ್ರೆ

ಮುಂಬೈ: ಶಿವಸೇನೆ (ಯುಬಿಟಿ) ಪಕ್ಷದಲ್ಲಿ ಬಂಡಾಯದ ಬಿರುಗಾಳಿ ತೀವ್ರಗೊಂಡಿರುವ ಬೆನ್ನಲ್ಲೇ, ಪಕ್ಷದ ಕಾರ್ಯಕರ್ತರಿಗೆ ತಮ್ಮ ನಾಯಕತ್ವದ ಮೇಲೆ ವಿಶ್ವಾಸವಿಲ್ಲದಿದ್ದರೆ ತಕ್ಷಣವೇ ಹುದ್ದೆಯಿಂದ ಕೆಳಗಿಳಿಯಲು ಸಿದ್ಧ ಎಂದು ಪಕ್ಷದ ಮುಖ್ಯಸ್ಥ ಹಾಗೂ ಮಹಾರಾಷ್ಟ್ರದ ಮಾಜಿ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಶುಕ್ರವಾರ ಹೇಳಿದ್ದಾರೆ. ಕಾರ್ಯಕರ್ತರು ತಾವು ಈ ಸ್ಥಾನಕ್ಕೆ ಯೋಗ್ಯರಲ್ಲ ಎಂದು ಭಾವಿಸಿದರೆ, ಪಕ್ಷದ ಚುಕ್ಕಾಣಿಯನ್ನು ಯಾವುದೇ ಸಾಮಾನ್ಯ … Continued

ಮನೆ ಖಾಲಿ ಮಾಡುವಂತೆ ಕೋರ್ಟ್ ಆದೇಶ : ವೃದ್ಧ ತಂದೆಯನ್ನು ನಡು ರಸ್ತೆಯಲ್ಲೇ ಚಾಕುವಿನಿಂದ ಇರಿದು ಕೊಂದ ಮಗ !

ಮುಂಬೈ : ಮಹಾರಾಷ್ಟ್ರದ ಛತ್ರಪತಿ ಸಂಭಾಜಿನಗರದಲ್ಲಿ ಆಸ್ತಿ ವಿವಾದಕ್ಕೆ ಸಂಬಂಧಿಸಿದಂತೆ ನ್ಯಾಯಾಲಯದಲ್ಲಿ ತನಗೆ ಸೋಲಾದ ಕೆಲವೇ ಹೊತ್ತಿನಲ್ಲಿ ಮಗನೊಬ್ಬ ತನ್ನ 82 ವರ್ಷದ ವೃದ್ಧ ತಂದೆಯನ್ನೇ ಸಾರ್ವಜನಿಕ ರಸ್ತೆಯಲ್ಲಿ ಚಾಕುವಿನಿಂದ ಇರಿದು ಭೀಕರವಾಗಿ ಕೊಲೆ ಮಾಡಿರುವ ಆಘಾತಕಾರಿ ಘಟನೆ ನಡೆದಿದೆ ಎಂದು ವರದಿಯಾಗಿದೆ. ಜಲಸಂಪನ್ಮೂಲ ಇಲಾಖೆಯ ನಿವೃತ್ತ ಉದ್ಯೋಗಿಯಾಗಿದ್ದ ಜಾಫರ್ ಕಮರುದ್ದೀನ್ ಸಯ್ಯದ್ ಪಟೇಲ್ ಎಂಬಾತ … Continued

ಹುಲಿ ದಾಳಿಗೆ ನಾಲ್ವರು ಮಹಿಳೆಯರು ಸಾವು

ಮುಂಬೈ: ಮಹಾರಾಷ್ಟ್ರದ ಚಂದ್ರಾಪುರ ಜಿಲ್ಲೆಯಲ್ಲಿ ಶುಕ್ರವಾರ (ಮೇ 22)  ಅತ್ಯಂತ ದುರದೃಷ್ಟಕರ ಘಟನೆಯೊಂದು ಸಂಭವಿಸಿದೆ. ಅರಣ್ಯ ಪ್ರದೇಶಕ್ಕೆ ತೇಂದು ಎಲೆಗಳನ್ನು ಸಂಗ್ರಹಿಸಲು ಹೋಗಿದ್ದ 13 ಮಹಿಳೆಯರ ಗುಂಪಿನ ಮೇಲೆ ಹುಲಿ ದಾಳಿ ನಡೆಸಿದ್ದು, ನಾಲ್ವರು ಮಹಿಳೆಯರು ಸ್ಥಳದಲ್ಲೇ ಪ್ರಾಣ ಕಳೆದುಕೊಂಡಿದ್ದಾರೆ. ಜಿಲ್ಲಾ ಕೇಂದ್ರದಿಂದ ಸುಮಾರು 70 ಕಿಲೋಮೀಟರ್ ದೂರದಲ್ಲಿರುವ ಸಿಂದೇವಾಹಿ ತಹಸಿಲ್‌ನ ಗುಂಜೆವಾಹಿ ಗ್ರಾಮದ ನಿವಾಸಿಗಳಾದ … Continued

ವಿಡಿಯೋ | ಭೀಕರ ಬೇಸಿಗೆಗೆ ತತ್ತರಿಸಿದ ವನ್ಯಜೀವಿಗಳು : ನೀರಿಗಾಗಿ ಸಾರಿಗೆ ಬಸ್ಸನ್ನೇ ತಡೆದು ನಿಲ್ಲಿಸಿದ ಕೋತಿಗಳ ಹಿಂಡು !

ಮಹಾರಾಷ್ಟ್ರದ ವಿದರ್ಭ ಪ್ರದೇಶದಲ್ಲಿ ನಡೆದ ಅತ್ಯಂತ ಹೃದಯವಿದ್ರಾವಕ ಘಟನೆಯೊಂದು, ತೀವ್ರ ಬೇಸಿಗೆಯ ಶಾಖವು ವನ್ಯಜೀವಿಗಳ ಮೇಲೆ ಬೀರುತ್ತಿರುವ ಭೀಕರ ಪರಿಣಾಮವನ್ನು ಕಣ್ಣಿಗೆ ಕಟ್ಟುವಂತೆ ಮಾಡಿದೆ. ಯವತ್ಮಾಲ್ ಜಿಲ್ಲೆಯ ಪುಸಾದ್ ಬಳಿಯ ಖಂಡಾಲಾ ಘಾಟ್‌ನಲ್ಲಿ, ಬಾಯಾರಿಕೆಯಿಂದ ತತ್ತರಿಸಿದ್ದ ಮಂಗಗಳು ನೀರಿಗಾಗಿ ಚಲಿಸುತ್ತಿದ್ದ ರಾಜ್ಯ ಸಾರಿಗೆ ಬಸ್ಸನ್ನು ತಡೆದು ನಿಲ್ಲಿಸಿದ ಘಟನೆ ಪ್ರಯಾಣಿಕರನ್ನು ಭಾವುಕರನ್ನಾಗಿಸಿದೆ. ಬುಧವಾರ ಮಧ್ಯಾಹ್ನ ಸುಮಾರು … Continued