ಕಾಂಗ್ರೆಸ್ಸಿಗೆ ಮತ್ತೊಂದು ಆಘಾತ : ಲೋಕಸಭೆಯ ಮಾಜಿ ಸ್ಪೀಕರ್ ಶಿವರಾಜ ಪಾಟೀಲ ಸೊಸೆ ಡಾ.ಅರ್ಚನಾ ಪಾಟೀಲ ಬಿಜೆಪಿಗೆ ಸೇರ್ಪಡೆ

ಮುಂಬೈ: ಲೋಕಸಭೆಯ ಮಾಜಿ ಸ್ಪೀಕರ್ ಮತ್ತು ಕಾಂಗ್ರೆಸ್ ವರಿಷ್ಠ ಶಿವರಾಜ ಪಾಟೀಲ ಅವರ ಸೊಸೆ, ಡಾ. ಅರ್ಚನಾ ಪಾಟೀಲ ಚಾಕುರ್ಕರ್ ಅವರು ಶನಿವಾರ (ಮಾರ್ಚ್ 30) ಮಹಾರಾಷ್ಟ್ರ ಉಪಮುಖ್ಯಮಂತ್ರಿ ದೇವೇಂದ್ರ ಫಡ್ನವಿಸ್ ಅವರ ಸಮ್ಮುಖದಲ್ಲಿ ಭಾರತೀಯ ಜನತಾ ಪಕ್ಷಕ್ಕೆ (ಬಿಜೆಪಿ) ಸೇರಿದರು. ದೇಶದಲ್ಲಿ ಏಪ್ರಿಲ್ 19 ರಂದು ಪ್ರಾರಂಭವಾಗುವ ಲೋಕಸಭೆ ಚುನಾವಣೆಗೆ ಕೆಲವು ದಿನಗಳ ಮೊದಲು … Continued

ಮಹಾರಾಷ್ಟ್ರದ ಸೆಮಿಕಂಡಕ್ಟರ್ ಉದ್ಯಮದಲ್ಲಿ 5,000 ಕೋಟಿ ಹೂಡಿಕೆ ಮಾಡಲಿರುವ ಸಚಿನ್ ತೆಂಡೂಲ್ಕರ್ ಬೆಂಬಲಿತ ಕಂಪನಿ

ಮುಂಬೈ : ಮಾಜಿ ಕ್ರಿಕೆಟಿಗ ಸಚಿನ್ ತೆಂಡೂಲ್ಕರ್‌ ಬೆಂಬಲಿತ ಆರ್‌ಆರ್‌ಪಿ ಎಲೆಕ್ಟ್ರಾನಿಕ್ಸ್ ಕಂಪನಿಯು ಮಹಾರಾಷ್ಟ್ರದಲ್ಲಿ ಸೆಮಿಕಂಡಕ್ಟರ್ ಸೌಲಭ್ಯಕ್ಕಾಗಿ 5,000 ಕೋಟಿ ರೂಪಾಯಿ ಹೂಡಿಕೆ ಮಾಡುವುದಾಗಿ ಮಂಗಳವಾರ ಪ್ರಕಟಿಸಿದೆ. ಮುಂದಿನ ಐದು ವರ್ಷಗಳಲ್ಲಿ ಹೂಡಿಕೆ ಮಾಡಲಾಗುವುದು ಎಂದು ಕಂಪನಿ ಪ್ರಕಟಣೆಯಲ್ಲಿ ತಿಳಿಸಿದೆ. ಒಟ್ಟಾರೆ ಹೂಡಿಕೆಯಲ್ಲಿ ತೆಂಡೂಲ್ಕರ್ ಅಥವಾ ಇತರ ಷೇರುದಾರರ ವಿವರಗಳನ್ನು ಕಂಪನಿಯು ಬಹಿರಂಗಪಡಿಸಿಲ್ಲ. ಮಾರ್ಚ್ 23 … Continued

ಲೋಕಸಭೆ ಚುನಾವಣೆಗೂ ಮುನ್ನ ಕಾಂಗ್ರೆಸ್ಸಿಗೆ ಮತ್ತೊಂದು ಹಿನ್ನಡೆ : ಮಹಾರಾಷ್ಟ್ರದ ಹಿರಿಯ ನಾಯಕ ಬಿಜೆಪಿಗೆ ಸೇರ್ಪಡೆ

ಮುಂಬೈ: ಮುಂಬರುವ ಲೋಕಸಭೆ ಚುನಾವಣೆಗೆ ಮುನ್ನ ಕಾಂಗ್ರೆಸ್ಸಿಗೆ ಮಹಾರಾಷ್ಟ್ರದಲ್ಲಿ ಮತ್ತೊಂದು ಹಿನ್ನಡೆಯಾಗಿದ್ದು, ಪಕ್ಷದ ಹಿರಿಯ ನಾಯಕ ಹಾಗೂ ಮಾಜಿ ಸಚಿವ ಪದ್ಮಾಕರ ವಾಲ್ವಿ ಬುಧವಾರ ಭಾರತೀಯ ಜನತಾ ಪಕ್ಷಕ್ಕೆ (ಬಿಜೆಪಿ) ಸೇರ್ಪಡೆಗೊಂಡಿದ್ದಾರೆ. ಮುಂಬೈನಲ್ಲಿ ಮಹಾರಾಷ್ಟ್ರ ಬಿಜೆಪಿ ಅಧ್ಯಕ್ಷ ಅಧ್ಯಕ್ಷ ಚಂದ್ರಶೇಖರ ಬವಾಂಕುಲೆ ಮತ್ತು ಪಕ್ಷದ ಮುಖಂಡ ಅಶೋಕ ಚವ್ಹಾಣ ಅವರ ಸಮ್ಮುಖದಲ್ಲಿ ಅವರು ಬಿಜೆಪಿಗೆ ಸೇರ್ಪಡೆಯಾಗಿದ್ದಾರೆ. … Continued

ವೀಡಿಯೊ..| ಏನು ಧೈರ್ಯ-ಸಮಯಪ್ರಜ್ಞೆ ; ಹಾಲ್‌ ಒಳಗೆ ನುಗ್ಗಿದ ಚಿರತೆ ನೋಡಿ ಗಾಬರಿಯಾಗದೆ ಲಾಕ್ ಮಾಡಿ ಬಂಧಿಸಿದ ದಿಟ್ಟ ಬಾಲಕ…!

ಮಾಲೆಗಾಂವ್ : ಮಹಾರಾಷ್ಟ್ರದ ಮಾಲೆಗಾಂವ್‌ನಲ್ಲಿ ಅಪ್ರಾಪ್ತ ಬಾಲಕನೊಬ್ಬ ತಾನು ಕುಳಿತಿದ್ದ ಬ್ಯಾಂಕ್ವೆಟ್ ಹಾಲ್‌ಗೆ ಚಿರತೆ ನುಗ್ಗಿದ ನಂತರ ಪವಾಡ ಸದೃಶವೆಂಬಂತೆ ಪಾರಾದ ವೀಡಿಯೊ ವೈರಲ್ ಆಗಿದೆ. 12 ವರ್ಷದ ಬಾಲಕ ಮೊಬೈಲ್‌ನಲ್ಲಿ ಗೇಮ್ ಆಡುತ್ತಿದ್ದಾಗ ಈ ಘಟನೆ ಸಂಭವಿಸಿದ್ದು, ಮದುವೆ ಹಾಲ್‌ನ ಮುಖ್ಯ ಬಾಗಿಲು ತೆರೆದಿತ್ತು.ಚಿರತೆ ಕೋಣೆಗೆ ನುಗ್ಗಿದ್ದನ್ನು ಕಂಡ ತಕ್ಷಣ ಬಾಲಕ ಕೂಗಿಕೊಳ್ಳದೆ ಸಮಯಪ್ರಜ್ಞೆ … Continued

ಲೋಕಸಭೆ ಚುನಾವಣೆ ಘೋಷಣೆಗೂ ಮುನ್ನ ಕಾಂಗ್ರೆಸ್ಸಿಗೆ ಮತ್ತೊಂದು ಆಘಾತ : ಕಾಂಗ್ರೆಸ್ಸಿನ ಮಹಾರಾಷ್ಟ್ರ ಘಟಕದ ಕಾರ್ಯಾಧ್ಯಕ್ಷ ರಾಜೀನಾಮೆ

ಮುಂಬೈ: ಲೋಕಸಭೆ ಚುನಾವಣೆ ಘೋಷಣೆಯಾಗುವ ಮುನ್ನವೇ ಮಹಾರಾಷ್ಟ್ರದಲ್ಲಿ ಕಾಂಗ್ರೆಸ್‌ಗೆ ಮತ್ತೊಂದು ಹಿನ್ನಡೆಯಾಗಿದೆ. ಮಾಜಿ ಸಚಿವ ಹಾಗೂ ಕಾಂಗ್ರೆಸ್‌ನ ಮಹಾರಾಷ್ಟ್ರ ಘಟಕದ ಕಾರ್ಯಾಧ್ಯಕ್ಷ ಬಸವರಾಜ ಪಾಟೀಲ ಮುರುಮಕರ ಅವರು ಪಕ್ಷಕ್ಕೆ ರಾಜೀನಾಮೆ ನೀಡಿದ್ದಾರೆ. ಕೆಲವೇ ದಿನಗಳ ಹಿಂದೆ ಮಾಜಿ ಮುಖ್ಯಮಂತ್ರಿ ಅಶೋಕ ಚವಾಣ್ ಅವರು ಕಾಂಗ್ರೆಸ್‌ ಪಕ್ಷವನ್ನು ತೊರೆದಿದ್ದರು. ಬಸವರಾಜ ಪಾಟೀಲ ಅವರು ಭಾರತೀಯ ಜನತಾ ಪಕ್ಷಕ್ಕೆ … Continued

ಮಹಾರಾಷ್ಟ್ರದ ಮಾಜಿ ಸಿಎಂ ಮನೋಹರ ಜೋಶಿ ನಿಧನ

ಮುಂಬೈ : ಮಹಾರಾಷ್ಟ್ರದ ಮಾಜಿ ಮುಖ್ಯಮಂತ್ರಿ ಹಾಗೂ ಲೋಕಸಭೆ ಮಾಜಿ ಸ್ಪೀಕರ್‌ ಮನೋಹರ ಜೋಶಿ ಅವರು ಮುಂಬೈ ಆಸ್ಪತ್ರೆಯಲ್ಲಿ ಇಂದು, ಶುಕ್ರವಾರ ನಿಧನರಾದರು. ಅವರಿಗೆ 86 ವರ್ಷ ವಯಸ್ಸಾಗಿತ್ತು. ಜೋಶಿ ಅವರ ಅಂತ್ಯಕ್ರಿಯೆ ಮುಂಬೈನ ಶಿವಾಜಿ ಪಾರ್ಕ್ ಚಿತಾಗಾರದಲ್ಲಿ ಇಂದು, ಶುಕ್ರವಾರ ನಡೆಯಲಿದೆ. ಜೋಶಿ ಅವರನ್ನು ಹೃದಯಾಘಾತದ ಕಾರಣಕ್ಕೆ ಎರಡು ದಿನಗಳ ಹಿಂದೆ ಬುಧವಾರ ಮುಂಬೈನ … Continued

ಲೋಕಸಭೆ ಚುನಾವಣೆ : ಮಹಾರಾಷ್ಟ್ರದಲ್ಲಿ ಬಿಜೆಪಿ-ರಾಜ್‌ ಠಾಕ್ರೆ ಎಂಎನ್‌ಎಸ್‌ ಮೈತ್ರಿ..?

ಮುಂಬೈ : ಮುಂಬೈ ಬಿಜೆಪಿ ಮುಖ್ಯಸ್ಥ ಆಶಿಶ್ ಶೆಲಾರ್‌ ಸೋಮವಾರ ಮಹಾರಾಷ್ಟ್ರ ನಿರ್ಮಾಣ ಸೇನೆ (MNS) ಅಧ್ಯಕ್ಷ ರಾಜ್ ಠಾಕ್ರೆ ಅವರನ್ನು ಭೇಟಿ ಮಾಡಿದ್ದು, ಇದು ಬಿಜೆಪಿ-ಎಂಎನ್‌ಎಸ್‌ ಪಕ್ಷಗಳ ನಡುವಿನ ಸಂಭವನೀಯ ಚುನಾವಣಾ ಮೈತ್ರಿ ಕುರಿತ ಊಹಾಪೋಹಗಳಿಗೆ ಕಾರಣವಾಗಿದೆ. ಹಳೆಯ ಸ್ನೇಹಿತರ ನಡುವೆ ಸಭೆಗಳು ನಡೆಯುತ್ತವೆ ಎಂದು ಶೆಲಾರ್ ಹೇಳಿದ್ದಾರೆ. ಆದಾಗ್ಯೂ, “ವಿವರಗಳನ್ನು ಸೂಕ್ತ ಸಮಯದಲ್ಲಿ … Continued

ಕಾಂಗ್ರೆಸ್ ತೊರೆದ ಮರುದಿನವೇ ಬಿಜೆಪಿ ಸೇರಿದ ಅಶೋಕ ಚವಾಣ ; ನಾಳೆ ರಾಜ್ಯಸಭೆಗೆ ನಾಮಪತ್ರ ಸಲ್ಲಿಕೆ..?

ಮುಂಬೈ: ಮಹಾರಾಷ್ಟ್ರದ ಮಾಜಿ ಮುಖ್ಯಮಂತ್ರಿ ಅಶೋಕ ಚವಾಣ ಅವರು ಕಾಂಗ್ರೆಸ್‌ ಗೆ ರಾಜೀನಾಮೆ ನೀಡಿದ ಒಂದು ದಿನದ ನಂತರ ಇಂದು, ಮಂಗಳವಾರ ಬಿಜೆಪಿಗೆ ಸೇರ್ಪಡೆಗೊಂಡಿದ್ದಾರೆ. ಚವಾಣ ಅವರು ಫೆಬ್ರವರಿ 14 ರಂದು ರಾಜ್ಯಸಭೆಗೆ ನಾಮಪತ್ರ ಸಲ್ಲಿಸಲಿದ್ದಾರೆ ಎಂದು ಹೇಳಲಾಗಿದೆ. ಕಾಂಗ್ರೆಸ್‌ ಪಕ್ಷಕ್ಕೆ ಆಘಾತ ನೀಡಿದ ಚವಾಣ ಅವರು ಮುಂಬರುವ ಲೋಕಸಭೆ ಚುನಾವಣೆಗೆ ಮುನ್ನ ಪಕ್ಷದ ಪ್ರಾಥಮಿಕ … Continued

ಕಾಂಗ್ರೆಸ್ಸಿಗೆ ರಾಜೀನಾಮೆ ನೀಡಿದ ಅಲ್ಪಸಂಖ್ಯಾತ ನಾಯಕ, ಮಾಜಿ ಸಚಿವ ಬಾಬಾ ಸಿದ್ದಿಕ್

ಮುಂಬೈ: ಮಹಾರಾಷ್ಟ್ರದ ಕಾಂಗ್ರೆಸ್‌ ನಾಯಕ ಹಾಗೂ ಮಾಜಿ ಸಚಿವ ಬಾಬಾ ಸಿದ್ದಿಕ್ ಅವರು ತಕ್ಷಣದಿಂದ ಜಾರಿಗೆ ಬರುವಂತೆ ಕಾಂಗ್ರೆಸ್‌ನ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡುವುದಾಗಿ ಗುರುವಾರ ಘೋಷಿಸಿದ್ದಾರೆ. ಅವರು ಕಳೆದ 48 ವರ್ಷಗಳಿಂದ ಕಾಂಗ್ರೆಸ್‌ ಸದಸ್ಯರಾಗಿದ್ದರು. ಎಕ್ಸ್‌ನಲ್ಲಿನ ಪೋಸ್ಟ್‌ನಲ್ಲಿ, “ನಾನು ಹದಿಹರೆಯದವನಾಗಿದ್ದಾಗ ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ಪಕ್ಷಕ್ಕೆ ಸೇರಿದ್ದೇನೆ ಮತ್ತು ಇದು 48 ವರ್ಷಗಳ ಮಹತ್ವದ … Continued

ಕಾಂಗ್ರೆಸ್ಸಿಗೆ ಗುಡ್‌ ಬೈ ಹೇಳಿದ ಮಾಜಿ ಕೇಂದ್ರ ಸಚಿವ ಮಿಲಿಂದ್ ದಿಯೋರಾ : ಇಂದೇ ಸಿಎಂ ಏಕನಾಥ ಶಿಂಧೆ ಶಿವಸೇನೆ ಸೇರುವ ಸಾಧ್ಯತೆ

ನವದೆಹಲಿ: ಮಾಜಿ ಕೇಂದ್ರ ಸಚಿವ ಮಿಲಿಂದ್ ದಿಯೋರಾ ಅವರು ಕಾಂಗ್ರೆಸ್ ಪಕ್ಷಕ್ಕೆ ರಾಜೀನಾಮೆ ನೀಡಿದ್ದಾರೆ. ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ ಶಿಂಧೆ ನೇತೃತ್ವದ ಶಿವಸೇನೆಗೆ ಸೇರುವ ನಿರೀಕ್ಷೆಯಿದೆ. ನಾನು ಕಾಂಗ್ರೆಸ್‌ನ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದೇನೆ, ಪಕ್ಷದೊಂದಿಗಿನ ನನ್ನ ಕುಟುಂಬದ 55 ವರ್ಷಗಳ ಸಂಬಂಧವನ್ನು ಕೊನೆಗೊಳಿಸಿದ್ದೇನೆ” ಎಂದು ಅವರು ಎಕ್ಸ್ ನಲ್ಲಿ ಪೋಸ್ಟ್ ಮಾಡಿದ್ದಾರೆ. “ಎಲ್ಲಾ ನಾಯಕರು, … Continued