ಸಿಗದ ಸಚಿವ ಸ್ಥಾನ ; ಪಕ್ಷದ ಎಲ್ಲ ಹುದ್ದೆಗಳಿಗೆ ರಾಜೀನಾಮೆ ನೀಡಿದ ಶಿವಸೇನೆ ಶಾಸಕ

ಮುಂಬೈ: ಮಹಾರಾಷ್ಟ್ರದ ಮಹಾಯುತಿ ಸರ್ಕಾರದ ಸಚಿವ ಸಂಪುಟ ವಿಸ್ತರಣೆ ವೇಳೆ ಸಚಿವ ಸ್ಥಾನ ಸಿಗದ ಕಾರಣಕ್ಕೆ ಶಿವಸೇನೆಯ ಏಕನಾಥ ಶಿಂಧೆ ಬಣದ ಶಾಸಕರೊಬ್ಬರು ಪಕ್ಷದ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ನರೇಂದ್ರ ಭೋಂಡೇಕರ್ ಅವರು ಶಿವಸೇನೆಯ ಉಪನಾಯಕ ಮತ್ತು ವಿದರ್ಭದ ಪಕ್ಷದ ಸಂಯೋಜಕರಾಗಿದ್ದರು, ಅಲ್ಲಿ ಬಿಜೆಪಿ ನೇತೃತ್ವದ ಆಡಳಿತಾರೂಢ ಮೈತ್ರಿಕೂಟದ ಮಹಾಯುತಿ 62 ಸ್ಥಾನಗಳಲ್ಲಿ 47 ಸ್ಥಾನಗಳನ್ನು … Continued

ಬಾಬರಿ ಮಸೀದಿ ಧ್ವಂಸದ ಕುರಿತು ಉದ್ಧವ್ ಠಾಕ್ರೆ ಆಪ್ತನ ಹೇಳಿಕೆ ನಂತರ ಎಂವಿಎ ಮೈತ್ರಿ ತೊರೆಯಲು ಸಮಾಜವಾದಿ ಪಕ್ಷದ ನಿರ್ಧಾರ

ಮುಂಬೈ: ಬಾಬರಿ ಮಸೀದಿ ಧ್ವಂಸಕ್ಕೆ ಸಂಬಂಧಿಸಿದಂತೆ ಉದ್ಧವ್ ಠಾಕ್ರೆ ಅವರ ಆಪ್ತರೊಬ್ಬರ ವಿವಾದಾತ್ಮಕ ಹೇಳಿಕೆಯ ನಂತರ ಸಮಾಜವಾದಿ ಪಕ್ಷವು ಮಹಾರಾಷ್ಟ್ರದಲ್ಲಿ ವಿಪಕ್ಷಗಳ ಮೈತ್ರಿಕೂಟ ಮಹಾ ವಿಕಾಸ ಅಘಾಡಿ (ಎಂವಿಎ)ಯಿಂದ ಹೊರಬರಲು ನಿರ್ಧರಿಸಿದೆ. ಬಾಬರಿ ಮಸೀದಿ ಧ್ವಂಸದ 32 ನೇ ವಾರ್ಷಿಕೋತ್ಸವದಂದು, ಶಿವಸೇನೆಯ (ಯುಬಿಟಿ) ನಾಯಕ ಮಿಲಿಂದ್ ನಾರ್ವೇಕರ್ ಅವರು ಎಕ್ಸ್‌ನಲ್ಲಿ ಮಸೀದಿಯ ಫೋಟೋವನ್ನು ಪೋಸ್ಟ್ ಮಾಡಿದ್ದಾರೆ. … Continued

ಇದು ಅಧಿಕೃತ ; ದೇವೇಂದ್ರ ಫಡ್ನವೀಸ್ ಮಹಾರಾಷ್ಟ್ರದ ನೂತನ ಮುಖ್ಯಮಂತ್ರಿ : ನಾಳೆ ಪ್ರಮಾಣ ವಚನ

ಮುಂಬೈ: ಮುಂಬೈನ ಆಜಾದ್ ಮೈದಾನದಲ್ಲಿ ನಾಳೆ ಗುರುವಾರ (ಡಿಸೆಂಬರ್‌ 5) ಮಹಾರಾಷ್ಟ್ರ ಮುಖ್ಯಮಂತ್ರಿಯಾಗಿ ದೇವೇಂದ್ರ ಫಡ್ನವಿಸ್ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ಬಿಜೆಪಿ ನಾಯಕತ್ವವು ಬುಧವಾರ ಮುಖ್ಯಮಂತ್ರಿ ಹುದ್ದೆಗೆ ಫಡ್ನವೀಸ್ ಅವರ ಹೆಸರನ್ನು ಅಂತಿಮಗೊಳಿಸಿದೆ, ಯಾರು ಉನ್ನತ ಹುದ್ದೆಯನ್ನು ಪಡೆಯುತ್ತಾರೆ ಎಂಬ ದೀರ್ಘಾವಧಿಯ ಕುತೂಹಲಕ್ಕೆ ಈ ಮೂಲಕ ತೆರೆ ಬಿದ್ದಿದೆ. ಅವರ ಹೆಸರನ್ನು ಹೊಸದಾಗಿ ಆಯ್ಕೆಯಾದ ಶಾಸಕರ … Continued

ಮಹಾರಾಷ್ಟ್ರ | ಸರ್ಕಾರ ರಚನೆಗೆ ಮುಂದುವರಿದ ಬಿಕ್ಕಟ್ಟು : ಆದ್ರೆ ಸಚಿವ ಸಂಪುಟದ ಪ್ರಮಾಣ ವಚನದ ದಿನಾಂಕ ಪ್ರಕಟಿಸಿದ ಬಿಜೆಪಿ…!

ಮುಂಬೈ: ಮಹಾರಾಷ್ಟ್ರದ ನೂತನ ಸಚಿವ ಸಂಪುಟದ ಪ್ರಮಾಣ ವಚನ ಸ್ವೀಕಾರ ಸಮಾರಂಭದ ದಿನಾಂಕವನ್ನು ಬಿಜೆಪಿ ಪ್ರಕಟಿಸಿದೆ. ಆದರೆ ಮುಖ್ಯಮಂತ್ರಿ ಹೆದ್ದೆಯನ್ನು ಯಾರು ಅಲಂಕರಿಸುತ್ತಾರೆ ಎಂಬುದರ ಕುರಿತು ಇನ್ನೂ ಯಾವುದೇ ಮಾಹಿತಿ ಇಲ್ಲ. ಪ್ರಮಾಣ ವಚನ ಸ್ವೀಕಾರ ಸಮಾರಂಭ ಡಿಸೆಂಬರ್ 5 ರಂದು ಸಂಜೆ 5 ಗಂಟೆಗೆ ಮುಂಬೈನ ಐಕಾನಿಕ್ ಆಜಾದ್ ಮೈದಾನದಲ್ಲಿ ಸಮಾರಂಭ ನಡೆಯಲಿದೆ. ಪ್ರಮಾಣ … Continued

ವೀಡಿಯೊ…| ಚುನಾವಣೆಯಲ್ಲಿ ಗೆಲುವು ; ವಿಜಯೋತ್ಸವದ ವೇಳೆ ಒಮ್ಮೆಗೇ ಹೊತ್ತಿ ಉರಿದ ಬೆಂಕಿ, ಹಲವರಿಗೆ ಗಾಯ

ಬೆಳಗಾವಿ: ಬೆಳಗಾವಿಗೆ ಹೊಂದಿಕೊಂಡಿರುವ ಮಹಾರಾಷ್ಟ್ರದ ಚಂದಗಢ ವಿಧಾನಸಭಾ ಚುನಾವಣೆಯಲ್ಲಿ ಗೆಲುವು ಸಾಧಿಸಿದ್ದ ಶಿವಾಜಿ ಪಾಟೀಲ ಅವರ ವಿಜಯೋತ್ಸವದ ವೇಳೆ ಅವಘಡ ಸಂಭವಿಸಿದೆ. ಅವಘಡದಲ್ಲಿ ಮೆರವಣಿಗೆಯಲ್ಲಿದ್ದ ಕೆಲ ಮಹಿಳೆಯರಿಗೂ ಗಾಯಗಳಾಗಿವೆ ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ. ಘಟನೆಯ ವೀಡಿಯೊ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಮಹಾರಾಷ್ಟ್ರ ವಿಧಾನಸಭಾ ಚುನಾವಣೆಯಲ್ಲಿ ಕರ್ನಾಟಕದ ಗಡಿಭಾಗವಾದ ಮಹಾರಾಷ್ಟ್ರದ ಚಂದಗಢ ವಿಧಾನಸಭಾ ಕ್ಷೇತ್ರದಿಂದ ಜಯಗಳಿಸಿದ್ದ … Continued

ಮಹಾರಾಷ್ಟ್ರದಲ್ಲಿ 235 ಕ್ಷೇತ್ರಗಳಲ್ಲಿ ಗೆದ್ದು ದಾಖಲೆ ಬರೆದ ʼಮಹಾಯುತಿʼ ; ಜಾರ್ಖಂಡ್‌ನಲ್ಲಿ 56 ಸ್ಥಾನಗಳಲ್ಲಿ ಗೆದ್ದ ಇಂಡಿಯಾ ಮೈತ್ರಿಕೂಟ

ನವದೆಹಲಿ: ಮಹಾರಾಷ್ಟ್ರ ಹಾಗೂ ಜಾರ್ಖಂಡ್ ವಿಧಾನಸಭೆ ಚುನಾವಣೆಯ ಫಲಿತಾಂಶ ಪ್ರಕಟವಾಗಿದ್ದು, ಮಹಾರಾಷ್ಟ್ರದಲ್ಲಿ ಬಿಜೆಪಿ ನೇತೃತ್ವದ ಮಹಾಯುತಿ 235 ಕ್ಷೇತ್ರಗಳಲ್ಲಿ ಗೆಲ್ಲುವ ಮೂಲಕ ‘ಪ್ರಚಂಡ’ ಗೆಲುವು ಸಾಧಿಸಿದೆ. ಜಾರ್ಖಂಡ್ ನಲ್ಲಿ ಇಂಡಿಯಾ ಮೈತ್ರಿಕೂಟ (INDIA bloc) 56 ಕ್ಷೇತ್ರಗಳಲ್ಲಿ ಗೆಲುವು ಸಾಧಿಸಿದ್ದು, ಇಲ್ಲಿ ಬಿಜೆಪಿಗೆ ಮುಖಭಂಗವಾಗಿದೆ. ಮಹಾರಾಷ್ಟ್ರದ ಒಟ್ಟು 288 ಕ್ಷೇತ್ರಗಳಲ್ಲಿ ಮಹಾಯುತಿ ಮೈತ್ರಿಕೂಟ 235  ಕ್ಷೇತ್ರಗಳಲ್ಲಿ … Continued

ವಿಧಾನಸಭೆ ಚುನಾವಣೆ ಮತ ಎಣಿಕೆ : ಮಹಾರಾಷ್ಟ್ರದಲ್ಲಿ ಎನ್‌ಡಿಎಗೆ ಬಹುದೊಡ್ಡ ಲೀಡ್‌ ; ಜಾರ್ಖಂಡದಲ್ಲಿ ಇಂಡಿಯಾ ಬಣಕ್ಕೆ ಮುನ್ನಡೆ

ನವದೆಹಲಿ: ದೇಶಾದ್ಯಂತ ತೀವ್ರ ಕುತೂಹಲ ಕೆರಳಿಸಿರುವ ಮಹಾರಾಷ್ಟ್ರ ಹಾಗೂ ಜಾರ್ಖಂಡ್‌ (Maharashtra, Jharkhand Election Result) ರಾಜ್ಯ ವಿಧಾನಸಭಾ ಚುನಾವಣೆಗಳ ಮತ ಎಣಿಕೆ ನಡೆಯುತ್ತಿದ್ದು, ಎರಡೂ ರಾಜ್ಯಗಳಲ್ಲಿ ಬಿಜೆಪಿ ನೇತೃತ್ವದ ಎನ್‌ಡಿ ಮೈತ್ರಿಕೂಟ ಮುನ್ನಡೆ ಸಾಧಿಸಿದೆ. 288 ಸ್ಥಾನಗಳ ಮಹಾರಾಷ್ಟ್ರ ವಿಧಾನಸಭೆ ಚುನಾವಣೆಯಲ್ಲಿ, ಬಿಜೆಪಿ, ಶಿವಸೇನೆ ಮತ್ತು ಎನ್‌ಸಿಪಿ (ಅಜಿತ್ ಪವಾರ್ ಬಣ) ಮಹಾಯುತಿ ಮೈತ್ರಿಕೂಟವು … Continued

6,600 ಕೋಟಿ ರೂ. ಮೊತ್ತದ ಮಹಾರಾಷ್ಟ್ರ ‘ಬಿಟ್‌ಕಾಯಿನ್ ಹಗರಣ’ದ ತನಿಖೆ ಆರಂಭಿಸಿದ ಸಿಬಿಐ ; ಇಬ್ಬರ ವಿರುದ್ಧ ಪ್ರಕರಣ ದಾಖಲು

ಮುಂಬೈ: 6,600 ಕೋಟಿ ಮೊತ್ತದ ಮಹಾರಾಷ್ಟ್ರ ‘ಬಿಟ್‌ಕಾಯಿನ್ ಹಗರಣ’ ಪ್ರಕರಣದ ತನಿಖೆಯನ್ನು ಸಿಬಿಐ ಬುಧವಾರ ಆರಂಭಿಸಿದೆ ಮತ್ತು ಇಬ್ಬರು ಮಾಸ್ಟರ್‌ಮೈಂಡ್‌ಗಳ ವಿರುದ್ಧ ಪ್ರಕರಣ ದಾಖಲಿಸಿದೆ ಮತ್ತು ಇನ್ನೊಬ್ಬನನ್ನು ವಿಚಾರಣೆಗೆ ಕರೆದಿದೆ. ಪ್ರಾಥಮಿಕ ಮಾಹಿತಿಯ ಪ್ರಕಾರ, ಪ್ರಕರಣದ ಮಾಸ್ಟರ್‌ಮೈಂಡ್‌ಗಳಾದ ಅಮಿತ್ ಭಾರದ್ವಾಜ್ ಮತ್ತು ಅಜಯ ಭಾರದ್ವಾಜ್ ಎಂಬ ಇಬ್ಬರು ಶಂಕಿತರನ್ನು ಸಿಬಿಐ ಎಫ್‌ಐಆರ್‌ನಲ್ಲಿ ಹೆಸರಿಸಲಾಗಿದೆ. ಈ ಪ್ರಕರಣದಲ್ಲಿ … Continued

ಮಹಾರಾಷ್ಟ್ರ ಚುನಾವಣೆಗೂ ಮುನ್ನ ಹೊಟೇಲಿನಲ್ಲಿ ಹೈಡ್ರಾಮಾ ; ಬಿಜೆಪಿ ನಾಯಕನ ವಿರುದ್ಧ ಹಣ ಹಂಚಿದ ಆರೋಪ : ಮಾಜಿ ಸಚಿವರಿಂದ ನಿರಾಕರಣೆ

ಮುಂಬೈ : ಬುಧವಾರ (ನವೆಂಬರ್‌ ೨೦) ವಿಧಾನಸಭೆ ಚುನಾವಣೆಯ ನಿರ್ಣಾಯಕ ಮತದಾನದ ದಿನಕ್ಕಾಗಿ ಮಹಾರಾಷ್ಟ್ರ ಸಜ್ಜಾಗುತ್ತಿರುವಾಗ, ಮಂಗಳವಾರ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ವಿನೋದ್ ತಾವ್ಡೆ  ಸಮ್ಮುಖದಲ್ಲಿ  ಹಣ ಹಂಚಲಾಗಿದೆ ಎಂಬ ಆರೋಪದ ನಂತರ ದೊಡ್ಡ ವಿವಾದ ಭುಗಿಲೆದ್ದಿದೆ. ಬಹುಜನ ವಿಕಾಸ ಅಘಾಡಿ (ಬಿವಿಎ) ನಾಯಕ ಹಿತೇಂದ್ರ ಠಾಕೂರ್ ಅವರು ಈ ಆರೋಪಗಳನ್ನು ಮಾಡಿದ್ದಾರೆ. ತಾವಡೆ … Continued

ವೀಡಿಯೊ…| ಗರ್ಭಿಣಿ ಸಾಗಿಸುತ್ತಿದ್ದ ಆಂಬುಲೆನ್ಸ್‌ ಏಕಾಏಕಿ ಸ್ಫೋಟ ; ಹತ್ತಿರದ ಮನೆಗಳ ಕಿಟಕಿಗಳು ಛಿದ್ರ…!

ಮುಂಬೈ: ಮಹಾರಾಷ್ಟ್ರದ ಜಲ್ಗಾಂವ್‌ ಜಿಲ್ಲೆಯಲ್ಲಿ ಅಂಬ್ಯುಲೆನ್ಸ್‌ಗೆ ಬೆಂಕಿ ತಗುಲಿದ ಪರಿಣಾಮ ಕೆಲವೇ ನಿಮಿಷಗಳಲ್ಲಿ ಆಂಬುಲೆನ್ಸ್‌ ಸ್ಫೋಟಗೊಂಡಿದೆ. ಅದರಲ್ಲಿದ್ದ ಗರ್ಭಿಣಿ ಮತ್ತು ಅವರ ಕುಟುಂಬದವರು ಪವಾಡ ಸದೃಶ್ಯ ರೀತಿಯಲ್ಲಿ ಅಪಾಯದಿಂದ ಪಾರಾಗಿದ್ದಾರೆ. ಆಂಬುಲೆನ್ಸ್‌ ಸ್ಫೋಟದ ತೀವ್ರತೆಯ ಪರಿಣಾಮದಿಂದ ಹತ್ತಿರದ ಮನೆಗಳ ಕಿಟಕಿಗಳು ಸಹ ಛಿದ್ರಗೊಂಡಿದೆ. ಅದೃಷ್ಟವಶಾತ್ ಈ ಘಟನೆಯಲ್ಲಿ ಯಾರಿಗೂ ಗಾಯಗಳಾಗಿಲ್ಲ , ಪ್ರಾಣಹಾನಿ ಸಂಭವಿಸಿಲ್ಲ ಎಂದು … Continued