ಸಕಲ ಸರ್ಕಾರಿ ಗೌರವಗಳೊಂದಿಗೆ ಬಾರಾಮತಿಯಲ್ಲಿ ಅಜಿತ್ ಪವಾರ್ ಅಂತ್ಯಕ್ರಿಯೆ

ಮುಂಬೈ: ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಹಾಗೂ ಎನ್‌ಸಿಪಿ (NCP) ಮುಖ್ಯಸ್ಥ ಅಜಿತ್ ಪವಾರ್ ಅವರ ಅಂತ್ಯಕ್ರಿಯೆಯು ಗುರುವಾರ ಬಾರಾಮತಿಯ ವಿದ್ಯಾ ಪ್ರತಿಷ್ಠಾನ ಮೈದಾನದಲ್ಲಿ ಸಕಲ ಸರ್ಕಾರಿ ಗೌರವಗಳೊಂದಿಗೆ ನೆರವೇರಿತು. ಅವರ ಕುಟುಂಬಸ್ಥರು, ಬೆಂಬಲಿಗರು ಮತ್ತು ಸಾವಿರಾರು ಸಂಖ್ಯೆಯಲ್ಲಿ ನೆರೆದಿದ್ದ ಅಭಿಮಾನಿಗಳು ಹಿರಿಯ ನಾಯಕನಿಗೆ ಕಣ್ಣೀರಿನ ವಿದಾಯ ಹೇಳಿದರು. ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್, ಉಪಮುಖ್ಯಮಂತ್ರಿ ಏಕನಾಥ ಶಿಂಧೆ, … Continued

ವೀಡಿಯೊ…| ಮಹಾರಾಷ್ಟ್ರ ಡಿಸಿಎಂ ಅಜಿತ್ ಪವಾರ್ ವಿಮಾನ ಅಪಘಾತಕ್ಕೀಡಾದ ಕ್ಷಣದ ದೃಶ್ಯ ಸಿಸಿಟಿವಿಯಲ್ಲಿ ಸೆರೆ

ಮುಂಬೈ: ಬುಧವಾರ (ಜನವರಿ 28) ಬೆಳಿಗ್ಗೆ 8.46:02 ಗಂಟೆಗೆ ಮಹಾರಾಷ್ಟ್ರದ ಬಾರಾಮತಿಯ ವಿಮಾನ ನಿಲ್ದಾಣದಿಂದ ಕೆಲವೇ ನಿಮಿಷಗಳ ದೂರದಲ್ಲಿರುವ ಹೆದ್ದಾರಿಯಲ್ಲಿ ಬೆಂಕಿಯ ಚೆಂಡು ಮತ್ತು ಬೃಹತ್ ಹೊಗೆ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಉಪಮುಖ್ಯಮಂತ್ರಿ ಅಜಿತ್ ಪವಾರ್ ಮತ್ತು ಇತರ ನಾಲ್ವರಿದ್ದ ವಿಮಾನ ಪತನಗೊಂಡಿದ್ದು, ಆ ಅಪಘಾತದಲ್ಲಿ 66 ವರ್ಷದ ಅಜಿತ್ ಪವಾರ್ ಮೃತಪಟ್ಟಿದ್ದಾರೆ. ಅಜಿತ ಪವಾರ್ ಆರು … Continued

ಲ್ಯಾಂಡಿಂಗ್ ವೇಳೆ ವಿಮಾನ ಪತನ ; ಮಹಾರಾಷ್ಟ್ರ ಡಿಸಿಎಂ ಅಜಿತ್ ಪವಾರ್ ಸಾವು

ಪುಣೆ : ಎನ್‌ಸಿಪಿ ಮುಖ್ಯಸ್ಥ ಮತ್ತು ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ (66 ವರ್ಷ) ಇಂದು, ಬುಧವಾರ ಬೆಳಿಗ್ಗೆ ಮುಂಬೈನಿಂದ ಬಾರಾಮತಿಗೆ ಹೋಗುತ್ತಿದ್ದಾಗ ಸಂಭವಿಸಿದ ವಿಮಾನ ಅಪಘಾತದಲ್ಲಿ ಸಾವಿಗೀಡಾಗಿದ್ದಾರೆ ಎಂದು ವರದಿಯಾಗಿದೆ. ಪೈಲಟ್‌ಗಳು ಮತ್ತು ಪವಾರ್ ಅವರ ಭದ್ರತಾ ಸಿಬ್ಬಂದಿ ಸೇರಿದಂತೆ ಇತರ ನಾಲ್ವರು ಸಹ ಅಪಘಾತದಲ್ಲಿ ಮೃತಪಟ್ಟಿದ್ದಾರೆ. ಮುಂಬೈನಿಂದ ಬುಧವಾರ ಬೆಳಿಗ್ಗೆ 8 ಗಂಟೆ … Continued

ಉಲ್ಕಾಪಾತದಿಂದ ಸೃಷ್ಟಿಯಾದ ಲೋನಾರ್ ಸರೋವರದಲ್ಲಿ ನೀರಿನಮಟ್ಟ ಹೆಚ್ಚಳ : ಬರೋಬ್ಬರಿ 20 ಅಡಿ ಏರಿಕೆ : ಕಾರಣ ನಿಗೂಢ..?

ಮುಂಬೈ: ಮಹಾರಾಷ್ಟ್ರದ ಬುಲ್ಧಾನ ಜಿಲ್ಲೆಯ ವಿಶ್ವವಿಖ್ಯಾತ ಲೋನಾರ್ ಸರೋವರದ (Lonar Lake) ನೀರಿನ ಮಟ್ಟ ನಿರಂತರವಾಗಿ ಏರಿಕೆಯಾಗುತ್ತಿರುವುದು ಪರಿಸರ ಪ್ರೇಮಿಗಳು ಮತ್ತು ವಿಜ್ಞಾನಿಗಳಲ್ಲಿ ತೀವ್ರ ಆತಂಕ ಮೂಡಿಸಿದೆ. ಸರೋವರದ ಜೀವವೈವಿಧ್ಯಕ್ಕೆ ಎದುರಾಗಿರುವ ಈ ಅಪಾಯವನ್ನು ಗಂಭೀರವಾಗಿ ಪರಿಗಣಿಸಿರುವ ಬಾಂಬೆ ಹೈಕೋರ್ಟ್‌ನ ನಾಗ್ಪುರ ಪೀಠವು, ಈ ಬಗ್ಗೆ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು (PIL) ದಾಖಲಿಸಿಕೊಳ್ಳುವಂತೆ ಆದೇಶಿಸಿದೆ. ನ್ಯಾಯಮೂರ್ತಿಗಳಾದ … Continued

ವೀಡಿಯೊ…| ಭಾರತದ ಅಗ್ರಮಾನ್ಯ ಪೋಲ್ ವಾಲ್ಟರ್‌ ನನ್ನು ರೈಲಿನಿಂದ ಕೆಳಕ್ಕಿಳಿಸಿದ ಟಿಟಿಇ ; ವಿವಾದಕ್ಕೆ ಕಾರಣವಾದ ಘಟನೆ

ಪುರುಷರ ಪೋಲ್ ವಾಲ್ಟ್‌ನಲ್ಲಿ ರಾಷ್ಟ್ರೀಯ ದಾಖಲೆ ಹೊಂದಿರುವ ದೇವ್ ಮೀನಾ ಅವರಿಗೆ ರೈಲ್ವೆ ಟಿಕೆಟ್ ಪರೀಕ್ಷಕರು (TTE) ಪನ್ವೇಲ್ ನಿಲ್ದಾಣದಲ್ಲಿ ರೈಲಿನಿಂದ ಬಲವಂತವಾಗಿ ಕೆಳಗಿಳಿಸಿದ್ದಾರೆ ಎಂದು ಆರೋಪಿಸಲಾಗಿದೆ. ಈ ಘಟನೆಯ ವೀಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್‌ ಆಗಿದ್ದು, ಆಕ್ರೋಶಕ್ಕೆ ಕಾರಣವಾಗಿದೆ. ದೇವ್ ಮೀನಾ ಮತ್ತು ಸಹ ಕ್ರೀಡಾಪಟು ಕುಲದೀಪ ಯಾದವ್ ಅವರು ‘ಆಲ್ ಇಂಡಿಯಾ ಇಂಟರ್-ಯೂನಿವರ್ಸಿಟಿ … Continued

ಮಹಾರಾಷ್ಟ್ರ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಬಿಜೆಪಿಯ ‘ಸ್ಟ್ರೈಕ್ ರೇಟ್’ಗೆ ವಿಪಕ್ಷಗಳು ಧೂಳೀಪಟ

2026 ರ ಮಹಾರಾಷ್ಟ್ರ ಸ್ಥಳೀಯ ನಗರ ಸಂಸ್ಥೆಗಳ ಚುನಾವಣೆಗಳಲ್ಲಿ ಬಿಜೆಪಿಯು ರಾಜ್ಯಾದ್ಯಂತ ಅತ್ಯಂತ ಪರಿಣಾಮಕಾರಿ ಮತ್ತು ಬಲಾಢ್ಯ ರಾಜಕೀಯ ಶಕ್ತಿಯಾಗಿ ಹೊರಹೊಮ್ಮಿದೆ, ಇದರಲ್ಲಿ ಭಾರತದ ಅತ್ಯಂತ ಶ್ರೀಮಂತ ಮಹಾನಗರ ಪಾಲಿಕೆಯಾದ ಬೃಹನ್ಮುಂಬೈ ಮುನ್ಸಿಪಲ್ ಕಾರ್ಪೊರೇಷನ್ (ಬಿಎಂಸಿ) ಸೇರಿದೆ. ಮುಂಬೈನಲ್ಲಿ, ಬಿಜೆಪಿ ಎಲ್ಲಾ ಪಕ್ಷಗಳಿಗಿಂತ ಅತ್ಯಧಿಕ ಸ್ಟ್ರೈಕ್ ರೇಟ್‌ ದಾಖಲಿಸಿದೆ, ಅದು ಸ್ಪರ್ಧಿಸಿದ 135 ಸ್ಥಾನಗಳಲ್ಲಿ 89 … Continued

ಅಂತ್ಯಸಂಸ್ಕಾರಕ್ಕೆ ತೆರಳಿದ್ದಾಗ 103ರ ಅಜ್ಜಿ ಎದ್ದು ಕುಳಿತರು…! ಕೇಕ್ ತಿಂದು ಜನ್ಮದಿನ ಆಚರಿಸಿಕೊಂಡರು…!!

ನಾಗ್ಪುರ: ಸಾವು ಎಂಬುದು ಅನಿವಾರ್ಯ, ಆದರೆ ಅನಿರೀಕ್ಷಿತವಾಗಿ ಸಾವು ಬಂದು ಮತ್ತೆ ಮರಳಿ ಹೋದರೆ? ಇಂತಹದ್ದೊಂದು ನಂಬಲಾಗದ ಪವಾಡ ಮಹಾರಾಷ್ಟ್ರದ ನಾಗ್ಪುರ ಜಿಲ್ಲೆಯ ರಾಮ್ಟೆಕ್‌ನಲ್ಲಿ ನಡೆದಿದೆ ಎಂದು ವರದಿಯಾಗಿದೆ. ಮನೆಯವರೆಲ್ಲ ಸೇರಿ ಅಂತ್ಯಸಂಸ್ಕಾರಕ್ಕೆ ಸಿದ್ಧತೆ ಮಾಡಿಕೊಳ್ಳುತ್ತಿದ್ದಾಗ, ಸತ್ತಿದ್ದಾರೆಂದು ಭಾವಿಸಲಾಗಿದ್ದ 103 ವರ್ಷದ ಮುತ್ತಜ್ಜಿ ದಿಢೀರನೆ ಉಸಿರಾಡಲು ಆರಂಭಿಸಿ ಎದ್ದು ಕುಳಿತು ಎಲ್ಲರನ್ನೂ ಅಚ್ಚರಿಯಲ್ಲಿ ಮುಳುಗಿಸಿದ್ದಾರೆ. ರಾಮ್ಟೆಕ್ … Continued

ಚಾಕುವಿನಿಂದ ಇರಿದು ಮಹಾರಾಷ್ಟ್ರ ಕಾಂಗ್ರೆಸ್ ಉಪಾಧ್ಯಕ್ಷನ ಹತ್ಯೆ

ಮುಂಬೈ: ಮಹಾರಾಷ್ಟ್ರ ಪ್ರದೇಶ ಕಾಂಗ್ರೆಸ್ ಉಪಾಧ್ಯಕ್ಷ ಹಿದಾಯತ್ ಪಟೇಲ್ ಅವರ ಮೇಲೆ ನಡೆದ ಮಾರಣಾಂತಿಕ ಹಲ್ಲೆ ಸಾವಿನಲ್ಲಿ ಅಂತ್ಯಗೊಂಡಿದೆ. ಮಂಗಳವಾರ ಅಕೋಲಾ ಜಿಲ್ಲೆಯ ಅಕೋಟ್ ನಗರದಲ್ಲಿ ದುಷ್ಕರ್ಮಿಯೊಬ್ಬರಿಂದ ಚಾಕು ಇರಿತಕ್ಕೊಳಗಾಗಿದ್ದ ಪಟೇಲ್, ಬುಧವಾರ ಬೆಳಿಗ್ಗೆ ಚಿಕಿತ್ಸೆ ಫಲಿಸದೆ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ ಎಂದು ವರದಿಯಾಗಿದೆ. ಅಕೋಲಾ ಪೊಲೀಸ್ ಅಧೀಕ್ಷಕ ಅರ್ಚಿತ್ ಚಂದಕ್ ಅವರ ಮಾಹಿತಿ ಪ್ರಕಾರ, ಮಂಗಳವಾರ … Continued

2012ರ ಪುಣೆ ಸ್ಫೋಟ ಪ್ರಕರಣದ ಆರೋಪಿ ಗುಂಡಿಕ್ಕಿ ಹತ್ಯೆ

2012ರ ಪುಣೆ ಸರಣಿ ಬಾಂಬ್ ಸ್ಫೋಟ ಪ್ರಕರಣದ ಪ್ರಮುಖ ಆರೋಪಿಗಳಲ್ಲಿ ಒಬ್ಬನಾದ ಅಸ್ಲಂ ಶಬ್ಬೀರ್ ಶೇಖ್ ಅಲಿಯಾಸ್ ಬಂಟಿ ಜಹಾಗೀರ್‌ದಾರ್‌ ಎಂಬಾತನನ್ನು ಬುಧವಾರ ಮಹಾರಾಷ್ಟ್ರದ ಶ್ರೀರಾಂಪುರದಲ್ಲಿ ಅಪರಿಚಿತ ದುಷ್ಕರ್ಮಿಗಳು ಗುಂಡಿಕ್ಕಿ ಕೊಂದಿದ್ದಾರೆ. ಬಂಟಿ ಜಹಾಗೀರ್‌ದಾರ್ ಅಂತ್ಯಕ್ರಿಯೆಯೊಂದರಲ್ಲಿ ಪಾಲ್ಗೊಳ್ಳಲು ಶ್ರೀರಾಂಪುರಕ್ಕೆ ಆಗಮಿಸಿದ್ದ. ಸ್ಮಶಾನದಿಂದ ವಾಪಸ್ ಬರುತ್ತಿದ್ದಾಗ, ಜರ್ಮನ್ ಆಸ್ಪತ್ರೆಯ ಮುಖ್ಯ ದ್ವಾರದ ಬಳಿ ಹೊಂಚು ಹಾಕಿದ್ದ ಇಬ್ಬರು … Continued

2 ವರ್ಷಗಳಿಂದ ಪ್ರೀತಿಸಿ ವಿವಾಹವಾದರು… ಆದ್ರೆ ಮದುವೆಯಾದ 24 ಗಂಟೆಗಳಲ್ಲೇ ಡೈವೋರ್ಸ್…!

ಪುಣೆ: ಮಹಾರಾಷ್ಟ್ರದ ಪುಣೆಯಲ್ಲಿ ಅತ್ಯಂತ ವಿಚಿತ್ರ ಹಾಗೂ ಅಚ್ಚರಿಯ ಪ್ರಕರಣವೊಂದು ವರದಿಯಾಗಿದೆ. ಎರಡು-ಮೂರು ವರ್ಷಗಳಿಂದ ಪ್ರೀತಿಸಿ, ಸಂಭ್ರಮದಿಂದ ಮದುವೆಯಾಗಿದ್ದ ಜೋಡಿಯೊಂದು ಹಸೆಮಣೆ ಏರಿದ ಕೇವಲ 24 ಗಂಟೆಗಳಲ್ಲಿ ವಿಚ್ಛೇದನ ಪಡೆದು ಕಾನೂನುಬದ್ಧವಾಗಿ ಬೇರ್ಪಟ್ಟಿದ್ದಾರೆ….! ವೃತ್ತಿಯಲ್ಲಿ ವೈದ್ಯೆಯಾಗಿರುವ ಯುವತಿ ಹಾಗೂ ಇಂಜಿನಿಯರ್ ಆಗಿರುವ ಯುವಕ ಕಳೆದ ಕೆಲವು ವರ್ಷಗಳಿಂದ ಪರಸ್ಪರ ಪ್ರೀತಿಸುತ್ತಿದ್ದರು. ಇಬ್ಬರೂ ಪರಸ್ಪರ ಒಪ್ಪಿಗೆಯಿಂದ ಇತ್ತೀಚೆಗೆ … Continued