ಮಾಜಿ ಸಚಿವ ಬಾಬಾ ಸಿದ್ದಿಕಿ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಬಂಧನ

ನವದೆಹಲಿ : ಮಹಾರಾಷ್ಟ್ರದ ಮಾಜಿ ಸಚಿವ ಬಾಬಾ ಸಿದ್ದಿಕಿ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಹಾಗೂ ಮೂವರು ಶೂಟರ್‌ಗಳ ಪೈಕಿ ಒಬ್ಬನಾದ ಶಿವಕುಮಾರ ಗೌತಮ ಎಂಬಾತನನ್ನು ಭಾನುವಾರ ಉತ್ತರ ಪ್ರದೇಶದ ಬಹ್ರೈಚ್‌ನಲ್ಲಿ ಬಂಧಿಸಲಾಗಿದೆ. ಈತ ನೇಪಾಳಕ್ಕೆ ಪಲಾಯನ ಮಾಡಲು ಯತ್ನಿಸುತ್ತಿದ್ದ ಎಂದು ಮೂಲಗಳು ತಿಳಿಸಿವೆ. ಶಿವಕುಮಾರಗೆ ಆಶ್ರಯ ನೀಡಿ ನೇಪಾಳಕ್ಕೆ ಪರಾರಿಯಾಗಲು ಸಹಾಯ ಮಾಡಿದ್ದಕ್ಕಾಗಿ ಇತರ … Continued

ಸೆಲ್ಫಿ ತೆಗೆಯಲು ಹೋಗಿ ಕಾಡಾನೆಯಿಂದ ಸಾವಿಗೀಡಾದ ಯುವಕ…!

ಮುಂಬೈ : ಗುರುವಾರ (ಅಕ್ಟೋಬರ್ 24) ನಡೆದ ಅಹಿತಕರ ಘಟನೆಯಲ್ಲಿ ಮಹಾರಾಷ್ಟ್ರದ ಗಡ್ಚಿರೋಲಿ ಜಿಲ್ಲೆಯ ಮುಟ್ನೂರು ಗ್ರಾಮದ ಅರಣ್ಯ ಪ್ರದೇಶದಲ್ಲಿ 24 ವರ್ಷದ ವ್ಯಕ್ತಿಯೊಬ್ಬರು ಆನೆಯೊಂದಿಗೆ ಸೆಲ್ಫಿ ತೆಗೆದುಕೊಳ್ಳಲು ಹೋಗಿ ಕಾಡಾನೆ ದಾಳಿಯಿಂದ ಸಾವಿಗೀಡಾಗಿದ್ದಾರೆ ಎಂದು ವರದಿಯಾಗಿದೆ. ವರದಿಯ ಪ್ರಕಾರ, ವ್ಯಕ್ತಿ ಸಮೀಪ ಹೋಗಿ ಆನೆಯೊಂದಿಗೆ ಸೆಲ್ಫಿ ತೆಗೆದುಕೊಳ್ಳಲು ಪ್ರಯತ್ನಿಸುತ್ತಿದ್ದಾಗ ಆನೆ ಆತನ ಮೇಲೆ ದಾಳಿ … Continued

ಮಹಾರಾಷ್ಟ್ರ ವಿಧಾನಸಭೆ ಚುನಾವಣೆ: ಮಹಾ ವಿಕಾಸ್ ಅಘಾಡಿ ಪಕ್ಷಗಳ ನಡುವೆ 85-85-85 ಸೀಟುಗಳ ಹಂಚಿಕೆ

ಮುಂಬೈ: ಕಾಂಗ್ರೆಸ್, ಎನ್‌ಸಿಪಿ (ಎಸ್‌ಪಿ) ಮತ್ತು ಶಿವಸೇನೆ (ಯುಬಿಟಿ) ಒಳಗೊಂಡಿರುವ ಮಹಾ ವಿಕಾಸ್ ಅಘಾಡಿ ಬುಧವಾರ ಮಹಾರಾಷ್ಟ್ರ ವಿಧಾನಸಭೆ ಚುನಾವಣೆಗೆ ತನ್ನ ಸೀಟು ಹಂಚಿಕೆ ಒಪ್ಪಂದಕ್ಕೆ ಬಂದಿವೆ. ಮಿತ್ರಪಕ್ಷಗಳು ತಲಾ 85 ಸ್ಥಾನಗಳಲ್ಲಿ ಸ್ಪರ್ಧಿಸಲಿವೆ, ಅಂತಿಮ ಒಪ್ಪಂದಕ್ಕೆ ಮುದ್ರೆಯೊತ್ತಲು ಇನ್ನೂ ಚರ್ಚೆಗಳು ನಡೆಯುತ್ತಿವೆ. ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಶಿವಸೇನಾ (ಯುಬಿಟಿ) ಸಂಸದ ಸಂಜಯ ರಾವತ್, ನವೆಂಬರ್ 20 … Continued

ಮಹಾರಾಷ್ಟ್ರ, ಜಾರ್ಖಂಡ್‌ ವಿಧಾನಸಭೆ ಚುನಾವಣೆ ದಿನಾಂಕ ಪ್ರಕಟ

ನವದೆಹಲಿ: ಮಹಾರಾಷ್ಟ್ರ ಹಾಗೂ ಜಾರ್ಖಂಡ್‌ ರಾಜ್ಯಗಳ ವಿಧಾನಸಭೆ ಚುನಾವಣಾ ದಿನಾಂಕಗಳನ್ನು ಚುನಾವಣಾ ಆಯೋಗ ಮಂಗಳವಾರ ಪ್ರಟಿಸಿದೆ. ಮಹಾರಾಷ್ಟ್ರ ವಿಧಾನಸಭೆಗೆ ಒಂದೇ ಹಂತದಲ್ಲಿ ನವೆಂಬರ್ 20 ರಂದು ಚುನಾವಣೆ ನಡೆಯಲಿದೆ ಎಂದು ಚುನಾವಣಾ ಆಯೋಗ ತಿಳಿಸಿದೆ. ನವೆಂಬರ್ 23 ರಂದು ಮತ ಎಣಿಕೆ ನಡೆಯಲಿದೆ. ಜಾರ್ಖಂಡ್​ನಲ್ಲಿ ನವೆಂಬರ್ 13 ಹಾಗೂ ನವೆಂಬರ್ 20ರಂದು ಎರಡು ಹಂತಗಳಲ್ಲಿ ವಿಧಾನಸಭೆ … Continued

ʼಭಾರತ ರತ್ನʼ ಪುರಸ್ಕಾರಕ್ಕೆ ಕೈಗಾರಿಕೋದ್ಯಮಿ ರತನ್ ಟಾಟಾ ಹೆಸರು ಪ್ರಸ್ತಾಪಿಸಿದ ಮಹಾರಾಷ್ಟ್ರ ಸರ್ಕಾರ

ಮುಂಬೈ : ಬುಧವಾರ ರಾತ್ರಿ ಮುಂಬೈನಲ್ಲಿ 86 ನೇ ವಯಸ್ಸಿನಲ್ಲಿ ನಿಧನರಾದ ಹಿರಿಯ ಕೈಗಾರಿಕೋದ್ಯಮಿ ರತನ್ ಟಾಟಾ ಅವರಿಗೆ ಭಾರತದ ಅತ್ಯುನ್ನತ ನಾಗರಿಕ ಪ್ರಶಸ್ತಿಯಾದ ʼಭಾರತ ರತ್ನʼ ನೀಡಬೇಕು ಎಂದು ಕೇಂದ್ರ ಸರ್ಕಾರವನ್ನು ಒತ್ತಾಯಿಸುವ ಪ್ರಸ್ತಾವನೆಯನ್ನು ಮಹಾರಾಷ್ಟ್ರ ಸಚಿವ ಸಂಪುಟ ಗುರುವಾರ ಅಂಗೀಕರಿಸಿದೆ. ಮುಖ್ಯಮಂತ್ರಿ ಏಕನಾಥ ಶಿಂಧೆ ಮತ್ತು ಅವರ ಸಂಪುಟದ ಸಚಿವರು ರತನ್ ಟಾಟಾ … Continued

ಅಹಮದ್‌ ನಗರ ಜಿಲ್ಲೆಗೆ ಅಹಲ್ಯಾನಗರ ಎಂದು ಮರುನಾಮಕರಣ : ಕೇಂದ್ರ ಸರ್ಕಾರ ಒಪ್ಪಿಗೆ

ಮುಂಬೈ: ಮಹಾರಾಷ್ಟ್ರದ ಅಹಮದ್‌ ನಗರ ಜಿಲ್ಲೆಯ ಹೆಸರನ್ನು ಅಹಲ್ಯಾನಗರ ಎಂದು ಮರುನಾಮಕರಣ ಮಾಡಲು ಕೇಂದ್ರ ಗೃಹ ಸಚಿವಾಲಯ ಅನುಮೋದನೆ ನೀಡಿದೆ. ಈ ಮಹಾರಾಷ್ಟ್ರದ ಕಂದಾಯ ಸಚಿವ ರಾಧಾಕೃಷ್ಣ ವಿಖೆ ಪಾಟೀಲ್ ಮಾಹಿತಿ ನೀಡಿದ್ದು, ಅಹಮದ್‌ ನಗರ ಹೆಸರನ್ನು ಮರುನಾಮಕರಣ ಮಾಡುವ ನಿರ್ಧಾರವನ್ನು ಕಳೆದ ಮಾರ್ಚ್‌ನಲ್ಲಿ ರಾಜ್ಯ ಸಚಿವ ಸಂಪುಟ ಕೈಗೊಂಡಿತ್ತು. ನಂತರ ಕೇಂದ್ರದದ ಸಮ್ಮತಿಗಾಗಿ ಕಳುಹಿಸಲಾಗಿತ್ತು … Continued

ವೀಡಿಯೊ…| ಪುಣೆ ಸಮೀಪ ಹೆಲಿಕಾಪ್ಟರ್ ಪತನ : ಇಬ್ಬರು ಪೈಲಟ್‌ ಸೇರಿ ಮೂವರು ಸಾವು

ಪುಣೆ: ಮಹಾರಾಷ್ಟ್ರದ ಪುಣೆಯಲ್ಲಿ ಬುಧವಾರ ಬೆಳಗ್ಗೆ ಹೆಲಿಕಾಪ್ಟರ್ ಪತನಗೊಂಡಿದೆ. ಘಟನೆಯಲ್ಲಿ ಹೆಲಿಕಾಪ್ಟರ್‌ನಲ್ಲಿದ್ದ ಮೂವರು ಸಾವಿಗೀಡಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಹೆಲಿಕಾಪ್ಟರ್ ಪುಣೆಯ ಆಕ್ಸ್‌ಫರ್ಡ್ ಗಾಲ್ಫ್ ಕೋರ್ಸ್ ಹೆಲಿಪ್ಯಾಡ್‌ನಿಂದ ಟೇಕಾಫ್ ಆದ ಕೂಡಲೇ ನಗರದ ವಸತಿ ಉಪನಗರವಾದ ಬವ್‌ಧಾನ್‌ ಗುಡ್ಡಗಾಡು ಪ್ರದೇಶದ ಬಳಿ ಇಂದು, ಬುಧವಾರ ಬೆಳಿಗ್ಗೆ 6:45 ರ ಸುಮಾರಿಗೆ ಪತನಗೊಂಡಿದೆ ಎಂದು ವರದಿಯಾಗಿದೆ. ಹೆಲಿಕಾಪ್ಟರ್‌ … Continued

ಗೋವುಗಳನ್ನು ʼರಾಜ್ಯ ಮಾತೆʼ ಎಂದು ಘೋಷಿಸಿದ ಮಹಾರಾಷ್ಟ್ರ ಸರ್ಕಾರ

ಮುಂಬೈ: ಪ್ರಮುಖ ನಿರ್ಧಾರದಲ್ಲಿ ಮಹಾರಾಷ್ಟ್ರ ವಿಧಾನಸಭೆ ಚುನಾವಣೆಗೆ ಮುನ್ನವೇ ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ ಶಿಂದೆ ನೇತೃತ್ವದ ರಾಜ್ಯ ಸರ್ಕಾರವು ದೇಸಿ ಹಸುಗಳನ್ನು ‘ರಾಜ್ಯ ಮಾತಾ-ಗೋಮಾತೆ’ ಎಂದು ಘೋಷಣೆ ಮಾಡಿದೆ. ವೇದಗಳ ಕಾಲದಿಂದಲೂ ಹಸುಗಳು ಹೊಂದಿರುವ ಪ್ರಾಮುಖ್ಯತೆಯನ್ನು ಪರಿಗಣಿಸಿ ಅವುಗಳನ್ನು ‘ರಾಜ್ಯ ಮಾತಾ-ಗೋಮಾತೆ’ ಎಂದು ಘೋಷಣೆ ಮಾಡಿರುವುದಾಗಿ ಸರ್ಕಾರದ ಅಧಿಸೂಚನೆಯಲ್ಲಿ ಹೇಳಲಾಗಿದೆ. ಮಾನವನ ಪೋಷಣೆಯಲ್ಲಿ ದೇಸಿ ಹಸುಗಳ … Continued

ವೀಡಿಯೊ…| ದಿಢೀರ್ ಬಾಯ್ತೆರೆದ ರಸ್ತೆ : ಸೆಕೆಂಡೆಗಳಲ್ಲೇ ದೊಡ್ಡ ಟ್ಯಾಂಕರ್ ಅನ್ನೇ ಇಡಿಯಾಗಿ ನುಂಗಿದ ಗುಂಡಿ…!

ಇದಕ್ಕಿದ್ದಂತೆ ಬಾಯ್ತೆರೆದ ರಸ್ತೆಯು ಮುನ್ಸಿಪಲ್ ಕಾರ್ಪೊರೇಷನ್ (ಪಿಎಂಸಿ) ಸೆಪ್ಟಿಕ್ ಟ್ಯಾಂಕ್ ವಾಹನವನ್ನು ಇಡಿಯಾಗಿ ಆಪೋಶನ ತೆಗೆದುಕೊಂಡ ಘಟನೆ ಶುಕ್ರವಾರ ಪುಣೆಯ ಲಕ್ಷ್ಮೀ ರಸ್ತೆಯ ಸಮಾಧಾನ ಚೌಕದ ಬಳಿ ನಡೆದಿದೆ. ಚಾಲಕ ತನ್ನನ್ನು ರಕ್ಷಿಸಿಕೊಳ್ಳಲು ತಕ್ಷಣವೇ ವಾಹನದಿಂದ ಜಿಗಿದು ಪಾರಾಗಿದ್ದಾನೆ. ಘಟನೆ ವರದಿಯಾದ ನಂತರ ಅಗ್ನಿಶಾಮಕ ದಳದ 20 ಜವಾನರು ಮತ್ತು ಪೊಲೀಸ್ ಅಧಿಕಾರಿಗಳು ರಕ್ಷಣಾ ಕಾರ್ಯಾಚರಣೆಗಾಗಿ … Continued

ವೀಡಿಯೊ..| ರಾಹುಲ್ ಗಾಂಧಿ ನಾಲಿಗೆ ಕತ್ತರಿಸಿದ್ರೆ 11 ಲಕ್ಷ ರೂ. ಬಹುಮಾನ ; ವಿವಾದದ ಕಿಡಿ ಹೊತ್ತಿಸಿದ ಶಿವಸೇನೆ (ಏಕನಾಥ ಶಿಂಧೆ) ಶಾಸಕ

ವಿವಾದಾತ್ಮಕ ಹೇಳಿಕೆಯೊಂದರಲ್ಲಿ, ಶಿವಸೇನಾ (ಏಕನಾಥ ಶಿಂಧೆ ಬಣ) ಶಾಸಕ ಸಂಜಯ ಗಾಯಕ್ವಾಡ್ ಅವರು ಮೀಸಲಾತಿ ವ್ಯವಸ್ಥೆಯನ್ನು ರದ್ದುಗೊಳಿಸುವ ಕುರಿತು ನೀಡಿದ ಹೇಳಿಕೆಗಾಗಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರ ನಾಲಿಗೆಯನ್ನು ಕತ್ತರಿಸುವವರಿಗೆ 11 ಲಕ್ಷ ರೂಪಾಯಿ ನೀಡುವುದಾಗಿ ಸೋಮವಾರ ಘೋಷಿಸಿದ್ದಾರೆ. ಗಾಯಕ್ವಾಡ ಅವರು ತಮ್ಮ ವಿಲಕ್ಷಣ ಹೇಳಿಕೆಯಲ್ಲಿ, “ ವಿದೇಶದಲ್ಲಿದ್ದಾಗ, ರಾಹುಲ್ ಗಾಂಧಿ ಅವರು ಭಾರತದಲ್ಲಿ … Continued