ಮಹಾರಾಷ್ಟ್ರದಲ್ಲಿ 235 ಕ್ಷೇತ್ರಗಳಲ್ಲಿ ಗೆದ್ದು ದಾಖಲೆ ಬರೆದ ʼಮಹಾಯುತಿʼ ; ಜಾರ್ಖಂಡ್‌ನಲ್ಲಿ 56 ಸ್ಥಾನಗಳಲ್ಲಿ ಗೆದ್ದ ಇಂಡಿಯಾ ಮೈತ್ರಿಕೂಟ

ನವದೆಹಲಿ: ಮಹಾರಾಷ್ಟ್ರ ಹಾಗೂ ಜಾರ್ಖಂಡ್ ವಿಧಾನಸಭೆ ಚುನಾವಣೆಯ ಫಲಿತಾಂಶ ಪ್ರಕಟವಾಗಿದ್ದು, ಮಹಾರಾಷ್ಟ್ರದಲ್ಲಿ ಬಿಜೆಪಿ ನೇತೃತ್ವದ ಮಹಾಯುತಿ 235 ಕ್ಷೇತ್ರಗಳಲ್ಲಿ ಗೆಲ್ಲುವ ಮೂಲಕ ‘ಪ್ರಚಂಡ’ ಗೆಲುವು ಸಾಧಿಸಿದೆ. ಜಾರ್ಖಂಡ್ ನಲ್ಲಿ ಇಂಡಿಯಾ ಮೈತ್ರಿಕೂಟ (INDIA bloc) 56 ಕ್ಷೇತ್ರಗಳಲ್ಲಿ ಗೆಲುವು ಸಾಧಿಸಿದ್ದು, ಇಲ್ಲಿ ಬಿಜೆಪಿಗೆ ಮುಖಭಂಗವಾಗಿದೆ. ಮಹಾರಾಷ್ಟ್ರದ ಒಟ್ಟು 288 ಕ್ಷೇತ್ರಗಳಲ್ಲಿ ಮಹಾಯುತಿ ಮೈತ್ರಿಕೂಟ 235  ಕ್ಷೇತ್ರಗಳಲ್ಲಿ … Continued

ವಿಧಾನಸಭೆ ಚುನಾವಣೆ ಮತ ಎಣಿಕೆ : ಮಹಾರಾಷ್ಟ್ರದಲ್ಲಿ ಎನ್‌ಡಿಎಗೆ ಬಹುದೊಡ್ಡ ಲೀಡ್‌ ; ಜಾರ್ಖಂಡದಲ್ಲಿ ಇಂಡಿಯಾ ಬಣಕ್ಕೆ ಮುನ್ನಡೆ

ನವದೆಹಲಿ: ದೇಶಾದ್ಯಂತ ತೀವ್ರ ಕುತೂಹಲ ಕೆರಳಿಸಿರುವ ಮಹಾರಾಷ್ಟ್ರ ಹಾಗೂ ಜಾರ್ಖಂಡ್‌ (Maharashtra, Jharkhand Election Result) ರಾಜ್ಯ ವಿಧಾನಸಭಾ ಚುನಾವಣೆಗಳ ಮತ ಎಣಿಕೆ ನಡೆಯುತ್ತಿದ್ದು, ಎರಡೂ ರಾಜ್ಯಗಳಲ್ಲಿ ಬಿಜೆಪಿ ನೇತೃತ್ವದ ಎನ್‌ಡಿ ಮೈತ್ರಿಕೂಟ ಮುನ್ನಡೆ ಸಾಧಿಸಿದೆ. 288 ಸ್ಥಾನಗಳ ಮಹಾರಾಷ್ಟ್ರ ವಿಧಾನಸಭೆ ಚುನಾವಣೆಯಲ್ಲಿ, ಬಿಜೆಪಿ, ಶಿವಸೇನೆ ಮತ್ತು ಎನ್‌ಸಿಪಿ (ಅಜಿತ್ ಪವಾರ್ ಬಣ) ಮಹಾಯುತಿ ಮೈತ್ರಿಕೂಟವು … Continued

6,600 ಕೋಟಿ ರೂ. ಮೊತ್ತದ ಮಹಾರಾಷ್ಟ್ರ ‘ಬಿಟ್‌ಕಾಯಿನ್ ಹಗರಣ’ದ ತನಿಖೆ ಆರಂಭಿಸಿದ ಸಿಬಿಐ ; ಇಬ್ಬರ ವಿರುದ್ಧ ಪ್ರಕರಣ ದಾಖಲು

ಮುಂಬೈ: 6,600 ಕೋಟಿ ಮೊತ್ತದ ಮಹಾರಾಷ್ಟ್ರ ‘ಬಿಟ್‌ಕಾಯಿನ್ ಹಗರಣ’ ಪ್ರಕರಣದ ತನಿಖೆಯನ್ನು ಸಿಬಿಐ ಬುಧವಾರ ಆರಂಭಿಸಿದೆ ಮತ್ತು ಇಬ್ಬರು ಮಾಸ್ಟರ್‌ಮೈಂಡ್‌ಗಳ ವಿರುದ್ಧ ಪ್ರಕರಣ ದಾಖಲಿಸಿದೆ ಮತ್ತು ಇನ್ನೊಬ್ಬನನ್ನು ವಿಚಾರಣೆಗೆ ಕರೆದಿದೆ. ಪ್ರಾಥಮಿಕ ಮಾಹಿತಿಯ ಪ್ರಕಾರ, ಪ್ರಕರಣದ ಮಾಸ್ಟರ್‌ಮೈಂಡ್‌ಗಳಾದ ಅಮಿತ್ ಭಾರದ್ವಾಜ್ ಮತ್ತು ಅಜಯ ಭಾರದ್ವಾಜ್ ಎಂಬ ಇಬ್ಬರು ಶಂಕಿತರನ್ನು ಸಿಬಿಐ ಎಫ್‌ಐಆರ್‌ನಲ್ಲಿ ಹೆಸರಿಸಲಾಗಿದೆ. ಈ ಪ್ರಕರಣದಲ್ಲಿ … Continued

ಮಹಾರಾಷ್ಟ್ರ ಚುನಾವಣೆಗೂ ಮುನ್ನ ಹೊಟೇಲಿನಲ್ಲಿ ಹೈಡ್ರಾಮಾ ; ಬಿಜೆಪಿ ನಾಯಕನ ವಿರುದ್ಧ ಹಣ ಹಂಚಿದ ಆರೋಪ : ಮಾಜಿ ಸಚಿವರಿಂದ ನಿರಾಕರಣೆ

ಮುಂಬೈ : ಬುಧವಾರ (ನವೆಂಬರ್‌ ೨೦) ವಿಧಾನಸಭೆ ಚುನಾವಣೆಯ ನಿರ್ಣಾಯಕ ಮತದಾನದ ದಿನಕ್ಕಾಗಿ ಮಹಾರಾಷ್ಟ್ರ ಸಜ್ಜಾಗುತ್ತಿರುವಾಗ, ಮಂಗಳವಾರ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ವಿನೋದ್ ತಾವ್ಡೆ  ಸಮ್ಮುಖದಲ್ಲಿ  ಹಣ ಹಂಚಲಾಗಿದೆ ಎಂಬ ಆರೋಪದ ನಂತರ ದೊಡ್ಡ ವಿವಾದ ಭುಗಿಲೆದ್ದಿದೆ. ಬಹುಜನ ವಿಕಾಸ ಅಘಾಡಿ (ಬಿವಿಎ) ನಾಯಕ ಹಿತೇಂದ್ರ ಠಾಕೂರ್ ಅವರು ಈ ಆರೋಪಗಳನ್ನು ಮಾಡಿದ್ದಾರೆ. ತಾವಡೆ … Continued

ವೀಡಿಯೊ…| ಗರ್ಭಿಣಿ ಸಾಗಿಸುತ್ತಿದ್ದ ಆಂಬುಲೆನ್ಸ್‌ ಏಕಾಏಕಿ ಸ್ಫೋಟ ; ಹತ್ತಿರದ ಮನೆಗಳ ಕಿಟಕಿಗಳು ಛಿದ್ರ…!

ಮುಂಬೈ: ಮಹಾರಾಷ್ಟ್ರದ ಜಲ್ಗಾಂವ್‌ ಜಿಲ್ಲೆಯಲ್ಲಿ ಅಂಬ್ಯುಲೆನ್ಸ್‌ಗೆ ಬೆಂಕಿ ತಗುಲಿದ ಪರಿಣಾಮ ಕೆಲವೇ ನಿಮಿಷಗಳಲ್ಲಿ ಆಂಬುಲೆನ್ಸ್‌ ಸ್ಫೋಟಗೊಂಡಿದೆ. ಅದರಲ್ಲಿದ್ದ ಗರ್ಭಿಣಿ ಮತ್ತು ಅವರ ಕುಟುಂಬದವರು ಪವಾಡ ಸದೃಶ್ಯ ರೀತಿಯಲ್ಲಿ ಅಪಾಯದಿಂದ ಪಾರಾಗಿದ್ದಾರೆ. ಆಂಬುಲೆನ್ಸ್‌ ಸ್ಫೋಟದ ತೀವ್ರತೆಯ ಪರಿಣಾಮದಿಂದ ಹತ್ತಿರದ ಮನೆಗಳ ಕಿಟಕಿಗಳು ಸಹ ಛಿದ್ರಗೊಂಡಿದೆ. ಅದೃಷ್ಟವಶಾತ್ ಈ ಘಟನೆಯಲ್ಲಿ ಯಾರಿಗೂ ಗಾಯಗಳಾಗಿಲ್ಲ , ಪ್ರಾಣಹಾನಿ ಸಂಭವಿಸಿಲ್ಲ ಎಂದು … Continued

ಮಾಜಿ ಸಚಿವ ಬಾಬಾ ಸಿದ್ದಿಕಿ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಬಂಧನ

ನವದೆಹಲಿ : ಮಹಾರಾಷ್ಟ್ರದ ಮಾಜಿ ಸಚಿವ ಬಾಬಾ ಸಿದ್ದಿಕಿ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಹಾಗೂ ಮೂವರು ಶೂಟರ್‌ಗಳ ಪೈಕಿ ಒಬ್ಬನಾದ ಶಿವಕುಮಾರ ಗೌತಮ ಎಂಬಾತನನ್ನು ಭಾನುವಾರ ಉತ್ತರ ಪ್ರದೇಶದ ಬಹ್ರೈಚ್‌ನಲ್ಲಿ ಬಂಧಿಸಲಾಗಿದೆ. ಈತ ನೇಪಾಳಕ್ಕೆ ಪಲಾಯನ ಮಾಡಲು ಯತ್ನಿಸುತ್ತಿದ್ದ ಎಂದು ಮೂಲಗಳು ತಿಳಿಸಿವೆ. ಶಿವಕುಮಾರಗೆ ಆಶ್ರಯ ನೀಡಿ ನೇಪಾಳಕ್ಕೆ ಪರಾರಿಯಾಗಲು ಸಹಾಯ ಮಾಡಿದ್ದಕ್ಕಾಗಿ ಇತರ … Continued

ಸೆಲ್ಫಿ ತೆಗೆಯಲು ಹೋಗಿ ಕಾಡಾನೆಯಿಂದ ಸಾವಿಗೀಡಾದ ಯುವಕ…!

ಮುಂಬೈ : ಗುರುವಾರ (ಅಕ್ಟೋಬರ್ 24) ನಡೆದ ಅಹಿತಕರ ಘಟನೆಯಲ್ಲಿ ಮಹಾರಾಷ್ಟ್ರದ ಗಡ್ಚಿರೋಲಿ ಜಿಲ್ಲೆಯ ಮುಟ್ನೂರು ಗ್ರಾಮದ ಅರಣ್ಯ ಪ್ರದೇಶದಲ್ಲಿ 24 ವರ್ಷದ ವ್ಯಕ್ತಿಯೊಬ್ಬರು ಆನೆಯೊಂದಿಗೆ ಸೆಲ್ಫಿ ತೆಗೆದುಕೊಳ್ಳಲು ಹೋಗಿ ಕಾಡಾನೆ ದಾಳಿಯಿಂದ ಸಾವಿಗೀಡಾಗಿದ್ದಾರೆ ಎಂದು ವರದಿಯಾಗಿದೆ. ವರದಿಯ ಪ್ರಕಾರ, ವ್ಯಕ್ತಿ ಸಮೀಪ ಹೋಗಿ ಆನೆಯೊಂದಿಗೆ ಸೆಲ್ಫಿ ತೆಗೆದುಕೊಳ್ಳಲು ಪ್ರಯತ್ನಿಸುತ್ತಿದ್ದಾಗ ಆನೆ ಆತನ ಮೇಲೆ ದಾಳಿ … Continued

ಮಹಾರಾಷ್ಟ್ರ ವಿಧಾನಸಭೆ ಚುನಾವಣೆ: ಮಹಾ ವಿಕಾಸ್ ಅಘಾಡಿ ಪಕ್ಷಗಳ ನಡುವೆ 85-85-85 ಸೀಟುಗಳ ಹಂಚಿಕೆ

ಮುಂಬೈ: ಕಾಂಗ್ರೆಸ್, ಎನ್‌ಸಿಪಿ (ಎಸ್‌ಪಿ) ಮತ್ತು ಶಿವಸೇನೆ (ಯುಬಿಟಿ) ಒಳಗೊಂಡಿರುವ ಮಹಾ ವಿಕಾಸ್ ಅಘಾಡಿ ಬುಧವಾರ ಮಹಾರಾಷ್ಟ್ರ ವಿಧಾನಸಭೆ ಚುನಾವಣೆಗೆ ತನ್ನ ಸೀಟು ಹಂಚಿಕೆ ಒಪ್ಪಂದಕ್ಕೆ ಬಂದಿವೆ. ಮಿತ್ರಪಕ್ಷಗಳು ತಲಾ 85 ಸ್ಥಾನಗಳಲ್ಲಿ ಸ್ಪರ್ಧಿಸಲಿವೆ, ಅಂತಿಮ ಒಪ್ಪಂದಕ್ಕೆ ಮುದ್ರೆಯೊತ್ತಲು ಇನ್ನೂ ಚರ್ಚೆಗಳು ನಡೆಯುತ್ತಿವೆ. ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಶಿವಸೇನಾ (ಯುಬಿಟಿ) ಸಂಸದ ಸಂಜಯ ರಾವತ್, ನವೆಂಬರ್ 20 … Continued

ಮಹಾರಾಷ್ಟ್ರ, ಜಾರ್ಖಂಡ್‌ ವಿಧಾನಸಭೆ ಚುನಾವಣೆ ದಿನಾಂಕ ಪ್ರಕಟ

ನವದೆಹಲಿ: ಮಹಾರಾಷ್ಟ್ರ ಹಾಗೂ ಜಾರ್ಖಂಡ್‌ ರಾಜ್ಯಗಳ ವಿಧಾನಸಭೆ ಚುನಾವಣಾ ದಿನಾಂಕಗಳನ್ನು ಚುನಾವಣಾ ಆಯೋಗ ಮಂಗಳವಾರ ಪ್ರಟಿಸಿದೆ. ಮಹಾರಾಷ್ಟ್ರ ವಿಧಾನಸಭೆಗೆ ಒಂದೇ ಹಂತದಲ್ಲಿ ನವೆಂಬರ್ 20 ರಂದು ಚುನಾವಣೆ ನಡೆಯಲಿದೆ ಎಂದು ಚುನಾವಣಾ ಆಯೋಗ ತಿಳಿಸಿದೆ. ನವೆಂಬರ್ 23 ರಂದು ಮತ ಎಣಿಕೆ ನಡೆಯಲಿದೆ. ಜಾರ್ಖಂಡ್​ನಲ್ಲಿ ನವೆಂಬರ್ 13 ಹಾಗೂ ನವೆಂಬರ್ 20ರಂದು ಎರಡು ಹಂತಗಳಲ್ಲಿ ವಿಧಾನಸಭೆ … Continued

ʼಭಾರತ ರತ್ನʼ ಪುರಸ್ಕಾರಕ್ಕೆ ಕೈಗಾರಿಕೋದ್ಯಮಿ ರತನ್ ಟಾಟಾ ಹೆಸರು ಪ್ರಸ್ತಾಪಿಸಿದ ಮಹಾರಾಷ್ಟ್ರ ಸರ್ಕಾರ

ಮುಂಬೈ : ಬುಧವಾರ ರಾತ್ರಿ ಮುಂಬೈನಲ್ಲಿ 86 ನೇ ವಯಸ್ಸಿನಲ್ಲಿ ನಿಧನರಾದ ಹಿರಿಯ ಕೈಗಾರಿಕೋದ್ಯಮಿ ರತನ್ ಟಾಟಾ ಅವರಿಗೆ ಭಾರತದ ಅತ್ಯುನ್ನತ ನಾಗರಿಕ ಪ್ರಶಸ್ತಿಯಾದ ʼಭಾರತ ರತ್ನʼ ನೀಡಬೇಕು ಎಂದು ಕೇಂದ್ರ ಸರ್ಕಾರವನ್ನು ಒತ್ತಾಯಿಸುವ ಪ್ರಸ್ತಾವನೆಯನ್ನು ಮಹಾರಾಷ್ಟ್ರ ಸಚಿವ ಸಂಪುಟ ಗುರುವಾರ ಅಂಗೀಕರಿಸಿದೆ. ಮುಖ್ಯಮಂತ್ರಿ ಏಕನಾಥ ಶಿಂಧೆ ಮತ್ತು ಅವರ ಸಂಪುಟದ ಸಚಿವರು ರತನ್ ಟಾಟಾ … Continued