ಕಾಂಗ್ರೆಸ್‌ ನಾಯಕ ಅಧೀರ್‌ ಹೇಳಿಕೆ ತಿರಸ್ಕರಿಸಿದ ನಂತರ ಪಶ್ಚಿಮ ಬಂಗಾಳ ಕಾಂಗ್ರೆಸ್ ಕಚೇರಿ ಮುಂದಿನ ಮಲ್ಲಿಕಾರ್ಜುನ ಖರ್ಗೆ ಪೋಸ್ಟರ್‌ಗಳಿಗೆ ಮಸಿ

ಕೋಲ್ಕತ್ತಾ : ಇಂಡಿಯಾ ಮೈತ್ರಿಕೂಟಕ್ಕೆ ಮಮತಾ ಬ್ಯಾನರ್ಜಿ ಅವರು ಸೇರುವ ಬಗ್ಗೆ ಅಧೀರ್ ರಂಜನ್ ಚೌಧರಿ ಅವರು ನಿರ್ಧಾರ ತೆಗೆದುಕೊಳ್ಳುವವರಲ್ಲ ಎಂಬ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ಹೇಳಿಕೆಯನ್ನು ವಿರೋಧಿಸಿ ಖರ್ಗೆಯವರ ಚಿತ್ರಕ್ಕೆ ಕೋಲ್ಕತ್ತಾದಲ್ಲಿ ಮಸಿ ಬಳಿಯಲಾಗಿದೆ. ಕೋಲ್ಕತ್ತಾದಲ್ಲಿನ ಕಾಂಗ್ರೆಸ್ ರಾಜ್ಯ ಕಚೇರಿಯ ಮುಂಭಾಗದಲ್ಲಿದ್ದ ಹಲವು ಪೋಸ್ಟರ್ ಗಳಲ್ಲಿನ ಖರ್ಗೆ ಭಾವಚಿತ್ರಕ್ಕೆ ಮಸಿ ಬಳಿಯಲಾಗಿದೆ. … Continued

ಖರ್ಗೆ ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್ ತಪಾಸಣೆ: ಚುನಾವಣಾಧಿಕಾರಿಗಳ ವಿರುದ್ಧ ಕಾಂಗ್ರೆಸ್‌ ಕಿಡಿ

ಪಾಟ್ನಾ : ಬಿಹಾರದ ಸಮಸ್ತಿಪುರದಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆಯವರು ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್‌ನ್ನು ಚುನಾವಣಾ ಅಧಿಕಾರಿಗಳು ತಪಾಸಣೆ ನಡೆಸಿದ್ದಾರೆ. ಖರ್ಗೆ ಅವರ ಹೆಲಿಕಾಪ್ಟರ್‌ನ್ನು ತಪಾಸಣೆ ನಡೆಸಿದ ವಿಚಾರವಾಗಿ ಕಾಂಗ್ರೆಸ್ ಮುಖಂಡ ರಾಜೇಶ ರಾಥೋರ ಅವರು ಚುನಾವಣಾ ಆಯೋಗದ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಪ್ರತಿಪಕ್ಷಗಳ ನಾಯಕರನ್ನು ಚುನಾವಣಾಧಿಕಾರಿಗಳು ಗುರಿಯಾಗಿಸುತ್ತಿದ್ದಾರೆ. ಬಿಜೆಪಿ ನೇತೃತ್ವದ ಎನ್‍ಡಿಎ ನಾಯಕರಿಗೆ ಮಾತ್ರ ಮುಕ್ತವಾಗಿ … Continued

ವೀಡಿಯೊ..| ರಾಷ್ಟ್ರದ ಸಂಪತ್ತಿನಲ್ಲಿ ಮುಸ್ಲಿಮರಿಗೆ ಮೊದಲ ಆದ್ಯತೆ ; ಮನಮೋಹನ ಸಿಂಗ್ ಹಳೆಯ ವೀಡಿಯೊ ಮೂಲಕ ಕಾಂಗ್ರೆಸ್ಸಿಗೆ ತಿರುಗೇಟು ನೀಡಿದ ಬಿಜೆಪಿ

ನವದೆಹಲಿ: ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಕಾಂಗ್ರೆಸ್‌ ಪಕ್ಷದ ಪ್ರಣಾಳಿಕೆಯ ಬಗ್ಗೆ ಚರ್ಚಿಸಲು ಸಮಯ ಕೋರಿ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಬಹಿರಂಗ ಪತ್ರ ಬರೆದ ಒಂದು ದಿನದ ನಂತರ, ಬಿಜೆಪಿ ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರ ಹಳೆಯ ವೀಡಿಯೊವನ್ನು ಹಂಚಿಕೊಳ್ಳುವ ಮೂಲಕ ಕಾಂಗ್ರೆಸ್ಸಿಗೆ ತಿರುಗೇಟು ನೀಡಿದೆ. ಬಿಜೆಪಿಯ ಪ್ರಕಾರ, ಏಪ್ರಿಲ್ 2009 … Continued

ತಪ್ಪು ಮಾಹಿತಿ ನೀಡಲಾಗಿದೆ : ಕಾಂಗ್ರೆಸ್ ಪ್ರಣಾಳಿಕೆ ಬಗ್ಗೆ ವಿವರಿಸಲು ಮೋದಿ ಭೇಟಿಗೆ ಸಮಯಾವಕಾಶ ಕೋರಿ ಬಹಿರಂಗ ಪತ್ರ ಬರೆದ ಖರ್ಗೆ

ನವದೆಹಲಿ : ಕಾಂಗ್ರೆಸ್ ಪ್ರಣಾಳಿಕೆ ಕುರಿತು ಪ್ರಧಾನಿ ನರೇಂದ್ರ ಮೋದಿ ಹೇಳಿಕೆ ನಂತರ ನಡೆದಿರುವ ಭಾರೀ ಚರ್ಚೆಯ ನಡುವೆಯೇ ಕಾಂಗ್ರೆಸ್‌ ಮುಖ್ಯಸ್ಥ ಮಲ್ಲಿಕಾರ್ಜುನ ಖರ್ಗೆ ಪ್ರಧಾನಿಯವರಿಗೆ ಪತ್ರ ಬರೆದಿದ್ದು, ನಮ್ಮ ನ್ಯಾಯ ಪತ್ರವನ್ನು ವಿವರಿಸಲು ನಿಮ್ಮನ್ನು ಖುದ್ದಾಗಿ ಭೇಟಿಯಾಗಲು ಸಮಯ ಕೊಡಿ ಎಂದು ಕೇಳಿದ್ದಾರೆ. ಕಾಂಗ್ರೆಸ್‌ ಮೇಲೆ ವಾಗ್ದಾಳಿ ನಡೆಸಿದ್ದ ಪ್ರಧಾನಿ ಮೋದಿ, ಕಾಂಗ್ರೆಸ್ ಸಂಪತ್ತು … Continued

‘ಯುಗಾಂತ್ಯ’ : ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ರಾಜ್ಯಸಭೆಯಿಂದ ನಿವೃತ್ತಿ ; ಮಲ್ಲಿಕಾರ್ಜುನ ಖರ್ಗೆ ಪತ್ರ

ನವದೆಹಲಿ: 33 ವರ್ಷಗಳ ಸುದೀರ್ಘ ಸಂಸದೀಯ ಪಯಣಕ್ಕೆ ಮಾಜಿ ಪ್ರಧಾನಿ ಮನಮೋಹನ ಸಿಂಗ್‌ ಅವರು ಮಂಗಳವಾರ ಅಂತ್ಯ ಹಾಡಿದ್ದಾರೆ. ರಾಜ್ಯಸಭೆಯಿಂದ ಬುಧವಾರ (ಏಪ್ರಿಲ್‌ 3) ನಿವೃತ್ತರಾಗಲಿರುವ ಭಾರತದ ಮಾಜಿ ಪ್ರಧಾನಿ ಮತ್ತು ಪಕ್ಷದ ಹಿರಿಯ ನಾಯಕ ಮನಮೋಹನ ಸಿಂಗ್ ಅವರಿಗೆ ಕಾಂಗ್ರೆಸ್ ಮುಖ್ಯಸ್ಥ ಮಲ್ಲಿಕಾರ್ಜುನ ಖರ್ಗೆ ಪತ್ರ ಬರೆದಿದ್ದಾರೆ. ಸಿಂಗ್ ನಿವೃತ್ತಿಯನ್ನು ‘ಯುಗಾಂತ್ಯ’ ಎಂದು ಖರ್ಗೆ … Continued

ಲೋಕಸಭೆ ಚುನಾವಣೆ : ಕಾಂಗ್ರೆಸ್‌ ಸ್ಟಾರ್‌ ಪ್ರಚಾರಕರ ಪಟ್ಟಿ ಬಿಡುಗಡೆ

ಬೆಂಗಳೂರು: ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಕಾಂಗ್ರೆಸ್‌ (Congress)ನಿಂದ ಸ್ಟಾರ್‌ ಪ್ರಚಾರಕರ ಪಟ್ಟಿ ಬಿಡುಗಡೆ ಮಾಡಲಾಗಿದೆ. ರ್ನಾಟಕದಲ್ಲಿ ಏಪ್ರಿಲ್ 26 ಹಾಗೂ ಮೇ 7 ರಂದು ಎರಡು ಹಂತಗಳಲ್ಲಿ ಚುನಾವಣೆ ನಡೆಯುತ್ತಿದ್ದು, ಕಾಂಗ್ರೆಸ್‌ ಒಟ್ಟು 40 ಸ್ಟಾರ್‌ ಪ್ರಚಾರಕರ ಹೆಸರನ್ನು ಘೋಷಣೆ ಮಾಡಿದೆ. ಪಟ್ಟಿಯಲ್ಲಿ ಸೋನಿಯಾ ಗಾಂಧಿ, ಪ್ರಿಯಾಂಕಾ ಗಾಂಧಿ ಮತ್ತು ರಾಹುಲ್ ಗಾಂಧಿ ಸಹ ಸೇರಿದ್ದಾರೆ. … Continued

ಈ ಕಾರಣಗಳಿಗಾಗಿ ಮಲ್ಲಿಕಾರ್ಜುನ ಖರ್ಗೆ ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧಿಸದೇ ಇರಬಹುದು…: ಮೂಲಗಳು

ನವದೆಹಲಿ: ಕಾಂಗ್ರೆಸ್ ಮುಖ್ಯಸ್ಥ ಮಲ್ಲಿಕಾರ್ಜುನ ಖರ್ಗೆ ಅವರು ಈ ಬಾರಿಯ ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧಿಸದಿರುವ ಸಾಧ್ಯತೆಯಿದೆ. ಕಳೆದ ವಾರ ಗುಲ್ಬರ್ಗ ಕ್ಷೇತ್ರಕ್ಕೆ ಚರ್ಚಿಸಲಾದ ಕರ್ನಾಟಕದ ಅಭ್ಯರ್ಥಿಗಳ ಪಟ್ಟಿಯಲ್ಲಿ ಮಲ್ಲಿಕಾರ್ಜುನ ಖರ್ಗೆ ಅವರ ಹೆಸರು ಅವಿರೋಧ ಆಯ್ಕೆಯಾಗಿತ್ತು. ಆದರೆ ಅವರು ತಮ್ಮ ಅಳಿಯ ರಾಧಾಕೃಷ್ಣ ದೊಡ್ಡಮನಿ ಅವರನ್ನು ನಾಮನಿರ್ದೇಶನ ಮಾಡುವ ಸಾಧ್ಯತೆಯಿದೆ ಎಂದು ಅವರ ನಿಕಟ ಮೂಲಗಳು … Continued

ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆಗೆ ಝಡ್ ಪ್ಲಸ್ ಭದ್ರತೆ

ನವದೆಹಲಿ: ಲೋಕಸಭೆ ಚುನಾವಣೆಗೆ ಮುನ್ನ, ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಕೇಂದ್ರ ಗೃಹ ಸಚಿವಾಲಯವು ಝಡ್ ಪ್ಲಸ್ ಭದ್ರತೆ ನೀಡಿದೆ ಎಂದು ಅಧಿಕೃತ ಮೂಲಗಳು ಗುರುವಾರ ತಿಳಿಸಿವೆ. ಖರ್ಗೆಯವರ ಬೆದರಿಕೆ ಗ್ರಹಿಕೆಯನ್ನು ಆಧರಿಸಿ ಗೃಹ ಸಚಿವಾಲಯವು ಈ ತಿಂಗಳ ಆರಂಭದಲ್ಲಿ ಈ ನಿರ್ಧಾರವನ್ನು ತೆಗೆದುಕೊಂಡಿದೆ ಎಂದು ಅದು ಹೇಳಿದೆ. ಕೇಂದ್ರೀಯ ಮೀಸಲು ಪೊಲೀಸ್ ಪಡೆಯ … Continued

ಪ್ರಧಾನಿ ಭೇಟಿಯಾದ ಕೆಲವೇ ದಿನಗಳಲ್ಲಿ ಹಿರಿಯ ನಾಯಕ ಪ್ರಮೋದ ಕೃಷ್ಣಂ ಅವರನ್ನು ಪಕ್ಷದಿಂದ ಉಚ್ಚಾಟಿಸಿದ ಕಾಂಗ್ರೆಸ್‌…!

ನವದೆಹಲಿ : ಪಕ್ಷದ ವಿರುದ್ಧ ಅಶಿಸ್ತು ಮತ್ತು ಪಕ್ಷಕ್ಕೆ ಮುಜುಗರ ತರುವ ಪುನರಾವರ್ತಿತ ಹೇಳಿಕೆಗಳ ಬಗ್ಗೆ ಬಂದ ಆಕ್ಷೇಪಗಳನ್ನು ಗಮನದಲ್ಲಿಟ್ಟುಕೊಂಡು, ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಶನಿವಾರ (ಫೆಬ್ರವರಿ 10) ಪಕ್ಷದ ಹಿರಿಯ ನಾಯಕ ಪ್ರಮೋದ ಕೃಷ್ಣಂ ಅವರನ್ನು ಪಕ್ಷದಿಂದ ಆರು ವರ್ಷಗಳ ಕಾಲ ಉಚ್ಚಾಟಿಸಿದ್ದಾರೆ. ಪ್ರಮೋದ ಕೃಷ್ಣಂ ಅವರನ್ನು ಪಕ್ಷದಿಂದ ಹೊರಹಾಕಬೇಕೆಂಬ ಉತ್ತರ ಪ್ರದೇಶ … Continued

ವೀಡಿಯೊ…| ಬಿಜೆಪಿ 400 ಸ್ಥಾನ ಗೆಲ್ಲಲಿದೆ : ರಾಜ್ಯಸಭೆಯಲ್ಲಿ ಹೀಗೆಂದು ಭವಿಷ್ಯ ನುಡಿದ ಮಲ್ಲಿಕಾರ್ಜುನ್ ಖರ್ಗೆ…!

ನವದೆಹಲಿ: ರಾಜ್ಯಸಭೆ ವಿಪಕ್ಷ ನಾಯಕ ಮಲ್ಲಿಕಾರ್ಜುನ ಖರ್ಗೆ ಭಾಷಣವು ಆಡಳಿತ ಪಕ್ಷದ ಸಾಲಿನಲ್ಲಿ ಭಾರೀ ಖುಷಿಗೆ ಕಾರಣವಾದ ಪ್ರಸಂಗವು ರಾಜ್ಯಸಭೆಯಲ್ಲಿ ನಡೆದಿದೆ. ಖರ್ಗೆ ಅವರ ಮಾತಿಗೆ ಆಡಳಿತ ಪಕ್ಷದ ಸಂಸದರೆಲ್ಲರೂ ಬೆಂಚ್‌ ಗುದ್ದಿ ಸ್ವಾಗತಿಸಿದ ಅಪರೂಪದ ವಿದ್ಯಮಾನ ಇದಾಗಿದೆ. ಆಡಳಿತಾರೂಢ ಬಿಜೆಪಿ ಉಲ್ಲೇಖಿಸಿ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ‘ಅಬ್ ತೋ 400 ಪಾರ್’ ಹೋ … Continued