‘ಎಂದಿಗೂ ಸಹಿಸುವುದಿಲ್ಲ…’: ಸ್ವಪಕ್ಷದ ಸಂಸದ ಡಿ.ಕೆ.ಸುರೇಶ ‘ದಕ್ಷಿಣ ಭಾರತಕ್ಕೆ ಪ್ರತ್ಯೇಕ ರಾಷ್ಟ್ರ’ ಹೇಳಿಕೆಗೆ ಮಲ್ಲಿಕಾರ್ಜುನ ಖರ್ಗೆ ಎಚ್ಚರಿಕೆ

ನವದೆಹಲಿ: ಕಾಂಗ್ರೆಸ್ ಸಂಸದ ಡಿ.ಕೆ. ಸುರೇಶ ಅವರ, ‘ದಕ್ಷಿಣ ಭಾರತಕ್ಕೆ ಪ್ರತ್ಯೇಕ ರಾಷ್ಟ್ರ ಬೇಡಿಕೆ’ ಎಂಬ ಹೇಳಿಕೆ ಇಂದು, ಶುಕ್ರವಾರ ರಾಜ್ಯಸಭೆಯಲ್ಲಿ ಚರ್ಚೆಗೆ ಕಾರಣವಾಯಿತು. ದೇಶ ಒಡೆಯುವ ಬಗ್ಗೆ ಮಾತನಾಡುವವರು ಅವರು ಯಾವ ಪಕ್ಷದವರೇ ಆಗಲಿ ಸಹಿಸುವುದಿಲ್ಲ ಎಂದು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹೇಳಿದ್ದಾರೆ. ತಮ್ಮ ಪಕ್ಷದ ಸಂಸದ ಡಿ.ಕೆ.ಸುರೇಶ ಅವರ ವಿವಾದಾತ್ಮಕ ಹೇಳಿಕೆಗೆ … Continued

ಎಐಸಿಸಿ ಅಧ್ಯಕ್ಷ ಖರ್ಗೆಗೆ ನಿಂದನೆ ಆರೋಪ: ಸೂಲಿಬೆಲೆ ವಿರುದ್ಧದ ಎಫ್‌ಐಆರ್‌ಗೆ ಹೈಕೋರ್ಟ್‌ ತಡೆ

ಕಲಬುರಗಿ : ಕಾಂಗ್ರೆಸ್‌ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆ ಅವರ ಬಗ್ಗೆ ಅವಹೇಳನಕಾರಿ ಭಾಷಣ ಮಾಡಿದ್ದಾರೆಂದು ಆರೋಪಿಸಿ ಗುರಿಯಾಗಿ ಜಾತಿ ನಿಂದನೆ ಪ್ರಕರಣ ಎದುರಿಸುತ್ತಿರುವ ನಮೋ ಬ್ರಿಗೇಡ್‌ ಮುಖ್ಯಸ್ಥ ಚಕ್ರವರ್ತಿ ಸೂಲಿಬೆಲೆ ವಿರುದ್ಧದ ಎಫ್‌ಐಆರ್‌ಗೆ ಹೈಕೋರ್ಟ್‌ನ ಕಲಬುರ್ಗಿ ಪೀಠವು ಮಂಗಳವಾರ ತಡೆಯಾಜ್ಞೆ ನೀಡಿದೆ. ರಾಜಕೀಯ ಕಾರಣಕ್ಕಾಗಿ ತನ್ನ ವಿರುದ್ಧ ದಾಖಲಿಸಿರುವ ಎಫ್‌ಐಆರ್‌ ರದ್ದುಪಡಿಸಬೇಕು ಎಂದು ಕೋರಿ ಚಕ್ರವರ್ತಿ … Continued

ಇಂಡಿಯಾ ಮೈತ್ರಿಕೂಟಕ್ಕೆ ಪ್ರಧಾನಿ ಮುಖದ ಅಗತ್ಯವಿಲ್ಲ, ಮೈತ್ರಿಕೂಟದ ಹೆಸರಲ್ಲೇ ಮತ ಕೇಳಬೇಕು: ಶರದ್ ಪವಾರ್

ನವದೆಹಲಿ: ವಿಪಕ್ಷಗಳ ಮೈತ್ರಿಕೂಟವಾದ ಇಂಡಿಯಾ ಬ್ಲಾಕ್‌ಗೆ ಪ್ರಧಾನಿ ಅಭ್ಯರ್ಥಿಯ ಅಗತ್ಯವಿಲ್ಲ, ಏಕೆಂದರೆ ನಾವು ಮೈತ್ರಿಕೂಟದ ಹೆಸರಿನಲ್ಲಿ ಹೆಸರಿನಲ್ಲಿ ಮತ ಕೇಳಬೇಕು ಎಂದು ಹಿರಿಯ ರಾಜಕಾರಣಿ ಮತ್ತು ರಾಷ್ಟ್ರೀಯವಾದಿ ಕಾಂಗ್ರೆಸ್ ಪಕ್ಷದ (ಎನ್‌ಸಿಪಿ) ಮುಖ್ಯಸ್ಥ ಶರದ್ ಪವಾರ್ ಶನಿವಾರ ಹೇಳಿದ್ದಾರೆ. ಮಾಧ್ಯಮಗಳೊಂದಿಗೆ ಮಾತನಾಡಿದ ಪವಾರ್ ಅವರು, “ಪ್ರಧಾನಿ ಅಭ್ಯರ್ಥಿಯನ್ನು ಘೋಷಿಸುವ ಅಗತ್ಯವಿಲ್ಲ ಎಂದು ನಾವು ಭಾವಿಸುತ್ತೇವೆ ಮತ್ತು … Continued

ಇಂಡಿಯಾ ಮೈತ್ರಿಕೂಟದ ಅಧ್ಯಕ್ಷರಾಗಿ ಖರ್ಗೆ ನೇಮಕ : ಸಂಚಾಲಕನ ಹುದ್ದೆ ತಿರಸ್ಕರಿಸಿದ ನಿತೀಶಕುಮಾರ; ವರದಿ

ನವದೆಹಲಿ: ಸರಣಿ ಸಭೆಗಳು ಮತ್ತು ಚರ್ಚೆಗಳ ನಂತರ, ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರನ್ನು ಶನಿವಾರ ವಿಪಕ್ಷಗಳ ಮೈತ್ರಿಕೂಟವಾದ ಇಂಡಿಯಾ ಬ್ಲಾಕ್‌ನ ಅಧ್ಯಕ್ಷರನ್ನಾಗಿ ಹೆಸರಿಸಲಾಗಿದೆ ಎಂದು ಮೂಲಗಳು ತಿಳಿಸಿವೆ. ಆದರೆ, ಈ ಬಗ್ಗೆ ಅಧಿಕೃತ ಘೋಷಣೆಗೆ ಕಾಯಬೇಕಿದೆ ಎಂದು ಕೆಲವು ರಾಷ್ಟ್ರೀಯ ಸುದ್ದಿ ಮಧ್ಯಮಗಳು ವರದಿ ಮಾಡಿವೆ. ಸೀಟು ಹಂಚಿಕೆ ಕಾರ್ಯಸೂಚಿ, “ಭಾರತ್ ಜೋಡೊ ನ್ಯಾಯ … Continued

ಸಂಪುಟದಿಂದ ಕೆ.ಎನ್​ ರಾಜಣ್ಣರನ್ನು ಕೈ ಬಿಡಿ: ಕಾಂಗ್ರೆಸ್‌ ಕಾರ್ಯಕರ್ತರ ಆಗ್ರಹ

ಬೆಂಗಳೂರು : ಸಹಕಾರ ಸಚಿವ ಕೆ.ಎನ್​.ರಾಜಣ್ಣ ವಿರುದ್ಧ ಎಐಸಿಸಿಗೆ ಅಧ್ಯಕ್ಷ ಮಲ್ಲಿಕಾರ್ಜುನ್​ ಖರ್ಗೆ ಅವರಿಗೆ ಸ್ವಪಕ್ಷವಾದ ಕಾಂಗ್ರೆಸ್‌ ಕಾರ್ಯಕರ್ತರೇ ದೂರು ನೀಡಿದ್ದು, ಅವರನ್ನು ಸಚಿವ ಸಂಪುಟದಿಂದ ಕೈಬಿಡುವಂತೆ ಒತ್ತಾಯಿಸಿದ್ದಾರೆ. ಅಲ್ಲದೆ, ಈ ಕುರಿತು ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ.ವೇಣುಗೋಪಾಲ ಹಾಗೂ ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ ಸುರ್ಜೇವಾಲಾ ಅವರಿಗೂ ದೂರು ನೀಡಿದ್ದು, ಕೆಎನ್​​ ರಾಜಣ್ಣ ಅವರನ್ನು … Continued

‘ಆರ್‌ಎಸ್‌ಎಸ್, ಬಿಜೆಪಿ ಕಾರ್ಯಕ್ರಮ….’ : ‘ಗೌರವಪೂರ್ವಕʼವಾಗಿ ರಾಮಮಂದಿರ ಆಹ್ವಾನ ನಿರಾಕರಿಸಿದ ಕಾಂಗ್ರೆಸ್ ನಾಯಕತ್ವ

ನವದೆಹಲಿ: ಜನವರಿ 22 ರಂದು ಅಯೋಧ್ಯೆಯಲ್ಲಿ ನಡೆಯಲಿರುವ ರಾಮಮಂದಿರ ಪ್ರತಿಷ್ಠಾಪನೆ ಹಾಗೂ ಉದ್ಘಾಟನೆ ಕಾರ್ಯಕ್ರಮದಲ್ಲಿ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಮತ್ತು ಮಾಜಿ ಅಧ್ಯಕ್ಷೆ ಸೋನಿಯಾ ಗಾಂಧಿ, ಲೋಕಸಭೆಯ ವಿರೋಧ ಪಕ್ಷದ ನಾಯಕ ಅಧೀರ್ ರಂಜನ್ ಚೌಧರಿ ಸೇರಿದಂತೆ ಹಿರಿಯ ನಾಯಕರು ಭಾಗವಹಿಸುವುದಿಲ್ಲ ಎಂದು ಪಕ್ಷದ ಪ್ರಕಟಣೆ ಬುಧವಾರ ತಿಳಿಸಿದೆ. ತನ್ನ ಅಧಿಕೃತ X ಹ್ಯಾಂಡಲ್‌ನಲ್ಲಿ … Continued

ಹೈಕಮಾಂಡ್ ಮುಂದೆ ಮೂವರು ಡಿಸಿಎಂ ಪ್ರಸ್ತಾಪವಿಲ್ಲ; ಇವೆಲ್ಲ ಕೇವಲ ಊಹಾಪೋಹ : ಮಲ್ಲಿಕಾರ್ಜುನ ಖರ್ಗೆ ಸ್ಪಷ್ಟನೆ

ಕಲಬುರಗಿ: ಕರ್ನಾಟಕದಲ್ಲಿ ಮೂರು ಉಪಮುಖ್ಯಮಂತ್ರಿ ಹುದ್ದೆ ಸೃಷ್ಟಿಯ ಮಾತು ಕೇವಲ ಊಹಾಪೋಹ, ಹೈಕಮಾಂಡ್ ಮುಂದೆ ಅಂತಹ ಯಾವುದೇ ಪ್ರಸ್ತಾವನೆಯಿಲ್ಲ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಸ್ಪಷ್ಟಪಡಿಸಿದ್ದಾರೆ ರಾಜ್ಯದಲ್ಲಿ ಮೂವರು ಉಪಮುಖ್ಯಮಂತ್ರಿಗಳ ಹುದ್ದೆ ಸೃಷ್ಟಿಸುವ ವಿಚಾರದ ಬಗ್ಗೆ ಪ್ರತಿಕ್ರಿಯಿಸಿದ ಅವರು, ಕಾಂಗ್ರೆಸ್ ಹೈಕಮಾಂಡ್ ಎದುರು ಇಂತಹ ಯಾವುದೇ ಪ್ರಸ್ತಾವನೆ ಇಲ್ಲ. ಇದಕ್ಕಿಂತಲೂ ಹೆಚ್ಚಿನ ಸ್ಪಷ್ಟನೆ ಬೇಕಿದ್ದರೆ … Continued

ಕಾಂಗ್ರೆಸ್‌ ಸೇರಿದ ಆಂಧ್ರ ಸಿಎಂ ಜಗನ್ಮೋಹನ ರೆಡ್ಡಿ ಸಹೋದರಿ

ನವದೆಹಲಿ: ವೈ.ಎಸ್. ಆರ್. ತೆಲಂಗಾಣ ಪಕ್ಷದ ಸಂಸ್ಥಾಪಕಿ ಹಾಗೂ ಆಂಧ್ರ ಮುಖ್ಯಮಂತ್ರಿ ವೈ.ಎಸ್‌. ಜಗನ್ಮೋಹನ ರೆಡ್ಡಿ ಅವರ ಸಹೋದರಿ ವೈ.ಎಸ್. ಶರ್ಮಿಳಾ ಗುರುವಾರ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಗೊಂಡಿದ್ದಾರೆ. ಅವರು ಬುಧವಾರ ತಡರಾತ್ರಿ ನವದೆಹಲಿಗೆ ಆಗಮಿಸಿದ್ದರು. ಸೇರ್ಪಡೆ ಸಮಾರಂಭದಲ್ಲಿ ಕಾಂಗ್ರೆಸ್‌ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಪಕ್ಷದ ವರಿಷ್ಠ ನಾಯಕ ರಾಹುಲ್ ಗಾಂಧಿ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು. ಅವರು ತಮ್ಮ … Continued

ಈ ಖರ್ಗೆ-ಪರ್ಗೆ ಯಾರು..? ವಿಪಕ್ಷಗಳ ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ‘ನಿತೀಶಕುಮಾರ’ : ಜೆಡಿಯು ಶಾಸಕ

ನವದೆಹಲಿ: ನವದೆಹಲಿಯಲ್ಲಿ ನಡೆದ ವಿಪಕ್ಷಗಳ ಮೈತ್ರಿಕೂಟ ಇಂಡಿಯಾ (I.N.D.I.A) ಬ್ಲಾಕ್‌ನ ನಾಲ್ಕನೇ ಸಭೆಯ ನಂತರ, ಜೆಡಿಯು ಶಾಸಕರೊಬ್ಬರು ಕಾಂಗ್ರೆಸ್ ಮುಖ್ಯಸ್ಥ ಮಲ್ಲಿಕಾರ್ಜುನ ಖರ್ಗೆ ವಿರುದ್ಧ ಅವಹೇಳನಕಾರಿ ಹೇಳಿಕೆಗಳನ್ನು ನೀಡಿದ್ದು, ಪ್ರತಿಪಕ್ಷಗಳ ಒಗ್ಗಟ್ಟಿನ ಮೇಲೆ ಪ್ರಶ್ನಾರ್ಥಕ ಚಿಹ್ನೆಗೆ ಕಾರಣವಾಗಿದೆ. ಜೆಡಿಯು ಶಾಸಕ ಗೋಪಾಲ ಮಂಡಲ್ ಮಾತನಾಡಿ, ಸಾಮಾನ್ಯ ಜನರಿಗೆ ಖರ್ಗೆ ಅವರ ಪರಿಚಯವಿಲ್ಲ, ಬಿಹಾರ ಮುಖ್ಯಮಂತ್ರಿ ನಿತೀಶ್ … Continued

ನೀವೇಕೆ ಹೊಂದಾಣಿಕೆ ಮಾಡಿಕೊಳ್ಳಲಿಲ್ಲ….: ವಿವಿಧ ರಾಜ್ಯಗಳ ಚುನಾವಣೆಯಲ್ಲಿ ಬಿಜೆಪಿ ವಿರುದ್ಧ ಸೋತ ನಂತರ ರಾಜ್ಯ ನಾಯಕರನ್ನು ಪ್ರಶ್ನಿಸಿದ ರಾಹುಲ್ ಗಾಂಧಿ

ನವದೆಹಲಿ : ರಾಷ್ಟ್ರೀಯ ಚುನಾವಣೆಗೆ ಕೆಲವೇ ತಿಂಗಳುಗಳ ಮೊದಲು ಮೂರು ಪ್ರಮುಖ ರಾಜ್ಯಗಳಲ್ಲಿ ಕಾಂಗ್ರೆಸ್‌ ಸೋಲು ಗುರುವಾರ ನಡೆದ ಪಕ್ಷದ ಉನ್ನತ ನಾಯಕತ್ವದ ಸಭೆಯಲ್ಲಿ ಭಾರಿ ಮಹತ್ವ ಪಡೆದಿದ್ದು ಬಿಜೆಪಿ ವಿರುದ್ಧದ ಹೋರಾಟದಲ್ಲಿ ಪ್ರಾದೇಶಿಕ ಪಕ್ಷಗಳಿಗೆ ಅವಕಾಶ ಕಲ್ಪಿಸುವ ಅಗತ್ಯವನ್ನು ರಾಹುಲ್ ಗಾಂಧಿ ಅವರು ಒತ್ತಿ ಹೇಳಿದ್ದಾರೆ. ಕಾಂಗ್ರೆಸ್ ಕಾರ್ಯಕಾರಿ ಸಮಿತಿಯ (ಸಿಡಬ್ಲ್ಯೂಸಿ) ಸಭೆಯಲ್ಲಿ ಪಕ್ಷದ … Continued