ಕಾಂಗ್ರೆಸ್‌ ಸೇರಿದ ಆಂಧ್ರ ಸಿಎಂ ಜಗನ್ಮೋಹನ ರೆಡ್ಡಿ ಸಹೋದರಿ

ನವದೆಹಲಿ: ವೈ.ಎಸ್. ಆರ್. ತೆಲಂಗಾಣ ಪಕ್ಷದ ಸಂಸ್ಥಾಪಕಿ ಹಾಗೂ ಆಂಧ್ರ ಮುಖ್ಯಮಂತ್ರಿ ವೈ.ಎಸ್‌. ಜಗನ್ಮೋಹನ ರೆಡ್ಡಿ ಅವರ ಸಹೋದರಿ ವೈ.ಎಸ್. ಶರ್ಮಿಳಾ ಗುರುವಾರ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಗೊಂಡಿದ್ದಾರೆ. ಅವರು ಬುಧವಾರ ತಡರಾತ್ರಿ ನವದೆಹಲಿಗೆ ಆಗಮಿಸಿದ್ದರು. ಸೇರ್ಪಡೆ ಸಮಾರಂಭದಲ್ಲಿ ಕಾಂಗ್ರೆಸ್‌ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಪಕ್ಷದ ವರಿಷ್ಠ ನಾಯಕ ರಾಹುಲ್ ಗಾಂಧಿ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು. ಅವರು ತಮ್ಮ … Continued

ಈ ಖರ್ಗೆ-ಪರ್ಗೆ ಯಾರು..? ವಿಪಕ್ಷಗಳ ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ‘ನಿತೀಶಕುಮಾರ’ : ಜೆಡಿಯು ಶಾಸಕ

ನವದೆಹಲಿ: ನವದೆಹಲಿಯಲ್ಲಿ ನಡೆದ ವಿಪಕ್ಷಗಳ ಮೈತ್ರಿಕೂಟ ಇಂಡಿಯಾ (I.N.D.I.A) ಬ್ಲಾಕ್‌ನ ನಾಲ್ಕನೇ ಸಭೆಯ ನಂತರ, ಜೆಡಿಯು ಶಾಸಕರೊಬ್ಬರು ಕಾಂಗ್ರೆಸ್ ಮುಖ್ಯಸ್ಥ ಮಲ್ಲಿಕಾರ್ಜುನ ಖರ್ಗೆ ವಿರುದ್ಧ ಅವಹೇಳನಕಾರಿ ಹೇಳಿಕೆಗಳನ್ನು ನೀಡಿದ್ದು, ಪ್ರತಿಪಕ್ಷಗಳ ಒಗ್ಗಟ್ಟಿನ ಮೇಲೆ ಪ್ರಶ್ನಾರ್ಥಕ ಚಿಹ್ನೆಗೆ ಕಾರಣವಾಗಿದೆ. ಜೆಡಿಯು ಶಾಸಕ ಗೋಪಾಲ ಮಂಡಲ್ ಮಾತನಾಡಿ, ಸಾಮಾನ್ಯ ಜನರಿಗೆ ಖರ್ಗೆ ಅವರ ಪರಿಚಯವಿಲ್ಲ, ಬಿಹಾರ ಮುಖ್ಯಮಂತ್ರಿ ನಿತೀಶ್ … Continued

ನೀವೇಕೆ ಹೊಂದಾಣಿಕೆ ಮಾಡಿಕೊಳ್ಳಲಿಲ್ಲ….: ವಿವಿಧ ರಾಜ್ಯಗಳ ಚುನಾವಣೆಯಲ್ಲಿ ಬಿಜೆಪಿ ವಿರುದ್ಧ ಸೋತ ನಂತರ ರಾಜ್ಯ ನಾಯಕರನ್ನು ಪ್ರಶ್ನಿಸಿದ ರಾಹುಲ್ ಗಾಂಧಿ

ನವದೆಹಲಿ : ರಾಷ್ಟ್ರೀಯ ಚುನಾವಣೆಗೆ ಕೆಲವೇ ತಿಂಗಳುಗಳ ಮೊದಲು ಮೂರು ಪ್ರಮುಖ ರಾಜ್ಯಗಳಲ್ಲಿ ಕಾಂಗ್ರೆಸ್‌ ಸೋಲು ಗುರುವಾರ ನಡೆದ ಪಕ್ಷದ ಉನ್ನತ ನಾಯಕತ್ವದ ಸಭೆಯಲ್ಲಿ ಭಾರಿ ಮಹತ್ವ ಪಡೆದಿದ್ದು ಬಿಜೆಪಿ ವಿರುದ್ಧದ ಹೋರಾಟದಲ್ಲಿ ಪ್ರಾದೇಶಿಕ ಪಕ್ಷಗಳಿಗೆ ಅವಕಾಶ ಕಲ್ಪಿಸುವ ಅಗತ್ಯವನ್ನು ರಾಹುಲ್ ಗಾಂಧಿ ಅವರು ಒತ್ತಿ ಹೇಳಿದ್ದಾರೆ. ಕಾಂಗ್ರೆಸ್ ಕಾರ್ಯಕಾರಿ ಸಮಿತಿಯ (ಸಿಡಬ್ಲ್ಯೂಸಿ) ಸಭೆಯಲ್ಲಿ ಪಕ್ಷದ … Continued

ಅಯೋಧ್ಯೆ ರಾಮ ಮಂದಿರ ಉದ್ಘಾಟನಾ ಕಾರ್ಯಕ್ರಮಕ್ಕೆ ಸೋನಿಯಾ ಗಾಂಧಿ, ಖರ್ಗೆಗೆ ಆಹ್ವಾನ

ನವದೆಹಲಿ: ಕಾಂಗ್ರೆಸ್‌ ನಾಯಕಿ ಸೋನಿಯಾ ಗಾಂಧಿ, ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಮತ್ತು ಲೋಕಸಭೆಯ ಪಕ್ಷದ ನಾಯಕ ಅಧೀರ್ ರಂಜನ್ ಚೌಧರಿ ಸೇರಿದಂತೆ ವಿಪಕ್ಷಗಳ ನಾಯಕರನ್ನು ಜನವರಿ 22 ರಂದು ಅಯೋಧ್ಯೆಯಲ್ಲಿ ರಾಮಮಂದಿರದ ಉದ್ಘಾಟನಾ ಸಮಾರಂಭಕ್ಕೆ ಆಹ್ವಾನಿಸಲಾಗಿದೆ. ಮಾಜಿ ಪ್ರಧಾನಿಗಳಾದ ಮನಮೋಹನ್ ಸಿಂಗ್ ಮತ್ತು ಎಚ್‌.ಡಿ. ದೇವೇಗೌಡರಿಗೂ ಶ್ರೀರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್‌ನಿಂದ ಆಹ್ವಾನ … Continued

ವಿಪಕ್ಷಗಳ ಇಂಡಿಯಾ ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿಯಾಗಿ ಮಲ್ಲಿಕಾರ್ಜುನ ಖರ್ಗೆ? : ಮಮತಾ ಬ್ಯಾನರ್ಜಿ ಪ್ರಸ್ತಾವನೆ, ಅದಕ್ಕೆ ಖರ್ಗೆ ಹೇಳಿದ್ದೇನೆಂದರೆ…

ನವದೆಹಲಿ: ಲೋಕಸಭೆ ಚುನಾವಣೆ ಮುಗಿಯುವವರೆಗೆ ವಿಪಕ್ಷಗಳ ಮೈತ್ರಿಕೂಟವಾದ ಇಂಡಿಯಾ ಬ್ಲಾಕ್‌ ತನ್ನ ಪ್ರಧಾನಿ ಅಭ್ಯರ್ಥಿಯನ್ನು ಹೆಸರಿಸುವುದಿಲ್ಲ ಎಂದು ಸೋಮವಾರ ಪ್ರಕಟಿಸಿದ್ದ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮಂಗಳವಾರ (ಡಿಸೆಂಬರ್‌ ೧೯) ಕಾಂಗ್ರೆಸ್ ಮುಖ್ಯಸ್ಥ ಮಲ್ಲಿಕಾರ್ಜುನ ಖರ್ಗೆ ಅವರ ಹೆಸರನ್ನು ಪ್ರಸ್ತಾಪಿಸುವ ಮೂಲಕ 180 ಟರ್ನ್‌ ಹೊಡೆದಿದ್ದಾರೆ. ವಿಪಕ್ಷಗಳ ಇಂಡಿಯಾ ಮೈತ್ರಿಕೂಟದ ಸಭೆಯಲ್ಲಿ ಮಮತಾ ಬ್ಯಾನರ್ಜಿ … Continued

ವೀಡಿಯೊ..| ರಾಜೀವ ಗಾಂಧಿ ಬದಲಿಗೆ ರಾಹುಲ್‌ ಗಾಂಧಿಯಂತಹ ನಾಯಕರು ದೇಶಕ್ಕಾಗಿ ಪ್ರಾಣ ತ್ಯಾಗ ಮಾಡಿದ್ದಾರೆ ಎಂದು ಹೇಳಿ ಕಾಂಗ್ರೆಸ್‌ ಅಧ್ಯಕ್ಷ ಖರ್ಗೆ ಎಡವಟ್ಟು

ಈ ರಾಷ್ಟ್ರದ ಏಕತೆಗಾಗಿ ರಾಹುಲ್ ಗಾಂಧಿಯಂತಹ ಕಾಂಗ್ರೆಸ್‌ ನಾಯಕರು ತಮ್ಮ ಪ್ರಾಣ ತ್ಯಾಗ ಮಾಡಿದ್ದಾರೆ ಎಂದು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಸೋಮವಾರ ರಾಜೀವ್ ಗಾಂಧಿ ಅವರನ್ನು ಉಲ್ಲೇಖಿಸುವ ಭರದಲ್ಲಿ ರಾಹುಲ್ ಗಾಂಧಿ ಎಂದು ಹೇಳಿ ಪೇಚಿಗೆ ಸಿಲುಕಿದ್ದಾರೆ. ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ರಾಜೀವ್ ಗಾಂಧಿ ಅವರನ್ನು ಉಲ್ಲೇಖಿಸುವಾಗ ಅಚಾತುರ್ಯದಿಂದ ರಾಹುಲ್ ಗಾಂಧಿ … Continued

ಮತದಾನದ ಸಮಯದಲ್ಲಿ ಪ್ಲಾಟ್‌ಫಾರ್ಮ್‌ಗಳ ತಟಸ್ಥತೆಗೆ ಒತ್ತಾಯಿಸಿ ಫೇಸ್‌ಬುಕ್, ಗೂಗಲ್ ಸಿಇಒಗಳಿಗೆ ಪತ್ರ ಬರೆದ ವಿಪಕ್ಷಗಳ ʼಇಂಡಿಯಾʼ ಮೈತ್ರಿಕೂಟ

ನವದೆಹಲಿ : ದೇಶದಲ್ಲಿ “ಕೋಮು ದ್ವೇಷಕ್ಕೆ” ಸಹಾಯ ಮಾಡುವಲ್ಲಿ ಸಾಮಾಜಿಕ ಮಾಧ್ಯಮ ವೇದಿಕೆಗಳ ಪಾತ್ರದ ಕುರಿತು ವಿಪಕ್ಷಗಳ ಮೈತ್ರಿಕೂಟ- ಇಂಡಿಯಾ ಬಣವು ಮೆಟಾ ಸಿಇಒ ಮಾರ್ಕ್ ಜುಕರ್‌ಬರ್ಗ್ ಮತ್ತು ಗೂಗಲ್ ಸಿಇಒ ಸುಂದರ್ ಪಿಚೈ ಅವರಿಗೆ ಪತ್ರ ಬರೆದಿದೆ ಮತ್ತು ಮುಂಬರುವ ಚುನಾವಣೆಗಳಲ್ಲಿ ಸಾಮಾಜಿಕ ವೇದಿಕೆಗಳು ʼತಟಸ್ಥತೆʼ ಕಾಯ್ದುಕೊಳ್ಳಬೇಕೆಂದು ಒತ್ತಾಯಿಸಿದೆ. ವಾಷಿಂಗ್ಟನ್ ಪೋಸ್ಟ್ ಪತ್ರಿಕೆಯು ಆಡಳಿತಾರೂಢ … Continued

ಅವರು ಮನೆಯಲ್ಲಿ ಧ್ವಜಾರೋಹಣ ಮಾಡ್ತಾರೆ’ : ಮುಂದಿನ ವರ್ಷ ಕೆಂಪುಕೋಟೆಯಲ್ಲಿ ಭೇಟಿಯಾಗೋಣ ಎಂಬ ಪ್ರಧಾನಿ ಮೋದಿ ಹೇಳಿಕೆಗೆ ಖರ್ಗೆ ವ್ಯಂಗ್ಯ

ನವದೆಹಲಿ: ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆಯವರು ಪ್ರಧಾನಿ ನರೇಂದ್ರ ಮೋದಿಯವರ ಸ್ವಾತಂತ್ರ್ಯೋತ್ಸವ ಭಾಷಣದ ಬಗ್ಗೆ ವಾಗ್ದಾಳಿ ನಡೆಸಿದ್ದಾರೆ. ಪ್ರಧಾನಿ ಮೋದಿಯವರ ‘ಕೆಂಪುಕೋಟೆಯಲ್ಲಿ ಮುಂದಿನ ವರ್ಷ ಭೇಟಿಯಾಗೋಣ’ ಎಂಬ ಕಾಮೆಂಟ್‌ಗೆ ಪ್ರತಿಕ್ರಿಯಿಸಿದ ಖರ್ಗೆ, ಪ್ರಧಾನಿಯವರ ಹೇಳಿಕೆಗಳು ಅವರ “ಅಹಂಕಾರ”ವನ್ನು ತೋರಿಸುತ್ತದೆ ಮತ್ತು ಮುಂದಿನ ವರ್ಷ “ತಮ್ಮ ಮನೆಯಲ್ಲಿ” ಧ್ವಜಾರೋಹಣ ಮಾಡಲಿದ್ದಾರೆ ಎಂದು ಹೇಳಿದರು. ಅವರು [ಮೋದಿ] ಮುಂದಿನ … Continued

ರಾಜ್ಯಸಭೆಯಲ್ಲಿ ಮಲ್ಲಿಕಾರ್ಜುನ ಖರ್ಗೆ ಮೈಕ್ರೋಫೋನ್‌ ಸ್ವಿಚ್‌ ಆಫ್ ಮಾಡಿದ ಆರೋಪ ; ‘ಇಂಡಿಯಾ’ ಮೈತ್ರಿ ಪಕ್ಷದ ಸದಸ್ಯರಿಂದ ಸಭಾತ್ಯಾಗ

ನವದೆಹಲಿ: ರಾಜ್ಯಸಭೆಯಲ್ಲಿ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರ ಮೈಕ್ರೋಫೋನ್‌ ಸ್ವಿಚ್‌ ಆಫ್ ಮಾಡಲಾಗಿದೆ ಎಂದು ಆರೋಪಿಸಿ ‘ಇಂಡಿಯಾ’ ಒಕ್ಕೂಟದ ಪಕ್ಷಗಳು ಸರ್ಕಾರದ ನಡೆ ಖಂಡಿಸಿ ಇಂದು ಮಂಗಳವಾರ ಸಭಾತ್ಯಾಗ ಮಾಡಿದವು. ಟಿಎಂಸಿ ರಾಜ್ಯಸಭಾ ಸದಸ್ಯ ಡೆರೆಕ್ ಓಬ್ರಿಯಾನ್ ಈ ಬಗ್ಗೆ ಟ್ವೀಟ್‌ ಮಾಡಿದ್ದಾರೆ. ರಾಜ್ಯಸಭೆಯ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರ … Continued

ಕಾಂಗ್ರೆಸ್ಸಿನಲ್ಲಿ ಮುಗಿಯದ ಸಿಎಂ ಆಯ್ಕೆ ಕಗ್ಗಂಟು : ನಾಳೆ ಬೆಳಿಗ್ಗೆ ಹೈಕಮಾಂಡ್ ಮತ್ತೊಂದು ಸಭೆ, ನಂತರ ಸಿಎಂ ಹೆಸರು ಘೋಷಣೆ ಸಾಧ್ಯತೆ

ಬೆಂಗಳೂರು: ಕಾಂಗ್ರೆಸ್ ಪಕ್ಷದಿಂದ ಮುಂದಿನ ಮುಖ್ಯಮಂತ್ರಿ ಆಯ್ಕೆಯ ಬಗ್ಗೆ ದೆಹಲಿಯಲ್ಲಿ ನಿನ್ನೆಯಿಂದ ಸಾಲು ಸಾಲು ಸಭೆಗಳು ನಡೆಯುತ್ತಿದ್ದರೂ ಮುಖ್ಯಮಂತ್ರಿ ಅಭ್ಯರ್ಥಿ ಯಾರೆಂದು ಇನ್ನೂ ಅಂತಿಮಗೊಳಿಸಲು ಸಾಧ್ಯವಾಗಿಲ್ಲ. ನಾಳೆ, ಬುಧವಾರ ದೆಹಲಿಯಲ್ಲಿ ಬೆಳಿಗ್ಗೆ 11ಕ್ಕೆ ಮುಖ್ಯಮಂತ್ರಿ ಆಯ್ಕೆ ಬಗ್ಗೆ ಅಂತಿಮ ಸಭೆ ನಡೆಯಲಿದ್ದು, ಬಳಿಕ ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಯಾರೆಂಬುದನ್ನು ಪ್ರಕಟಿಸಲಾಗುವುದು ಎಂದು ಹೇಳಲಾಗಿದೆ. ಮುಖ್ಯಮಂತ್ರಿ ಆಯ್ಕೆ … Continued