ಕೇವಲ ಒಂದೇ ತಿಂಗಳಲ್ಲಿ 215ರಿಂದ 20 ಸ್ಥಾನಕ್ಕೆ ಕುಸಿದ ಟಿಎಂಸಿ : ಮಮತಾ ರಾಜಕೀಯ ಸಾಮ್ರಾಜ್ಯದ ದಿಢೀರ್‌ ಮಹಾಪತನ !

ಪ್ರತಿರೋಧ, ಧೀಮಂತಿಕೆ ಮತ್ತು ಬಂಗಾಳದ ರಾಜಕೀಯ ನಾಡಿಮಿಡಿತವನ್ನು ಸರಿಯಾಗಿ ಅರಿತು ಯಶಸ್ಸು ಸಾಧಿಸಿದ್ದ ಮಮತಾ ಬ್ಯಾನರ್ಜಿ ಅವರ ರಾಜಕೀಯ ಜೀವನದಲ್ಲಿ, ಕಳೆದ ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಯ ನಂತರದ ಒಂದು ತಿಂಗಳು ಭಾರಿ ರಾಜಕೀಯ ಭೂಕಂಪವನ್ನೇ ಸೃಷ್ಟಿಸಿದೆ. ಕೇವಲ ಒಂದು ತಿಂಗಳ ಹಿಂದೆಯಷ್ಟೇ ತೃಣಮೂಲ ಕಾಂಗ್ರೆಸ್ (TMC) ಪಕ್ಷದ ಅವಿಭಜಿತ ನಾಯಕಿಯಾಗಿ, ಭಾರಿ ಶಾಸಕರ ಬಲದೊಂದಿಗೆ … Continued

ಬಂಗಾಳ ರಾಜಕೀಯದಲ್ಲಿ ಸುನಾಮಿ ; ದೀದಿಗೆ ಬಿಗ್ ಶಾಕ್ : ಟಿಂಎಂಸಿ ಶಾಸಕರ ಬೆಂಬಲದಿಂದಲೇ ವಿಧಾನಸಭೆ ವಿಪಕ್ಷದ ನಾಯಕನಾದ ಉಚ್ಚಾಟಿತ ಶಾಸಕ..!

ಕೋಲ್ಕತ್ತಾ :  ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದಲ್ಲಿ ಉಂಟಾಗಿದ್ದ ಬಿರುಕು ಈಗ ಮರಳಿ ಸರಿಪಡಿಸಲಾಗದ ಹಂತಕ್ಕೆ ತಲುಪಿದೆ. ಟಿಎಂಸಿಯ ಸುಪ್ರಿಮೋ ಮಮತಾ ಬ್ಯಾನರ್ಜಿಗೆ ಮತ್ತೊಂದು ದೊಡ್ಡ ಆಘಾತದಲ್ಲಿ ಬಂಗಾಳ ವಿಧಾನಸಭೆಯ ಸ್ಪೀಕರ್ ರಥೀಂದ್ರ ಬೋಸ್ ಅವರು ಟಿಎಂಸಿಯ ಉಚ್ಚಾಟಿತ ಬಂಡಾಯ ಶಾಸಕ ನಾಯಕ ರಿತಬ್ರತ ಬ್ಯಾನರ್ಜಿ ಅವರನ್ನು ಅಧಿಕೃತವಾಗಿ ವಿರೋಧ ಪಕ್ಷದ ನಾಯಕ ಎಂದು ಅಂಗೀಕರಿಸಿದ್ದಾರೆ. … Continued

ಟಿಎಂಸಿ ಇಬ್ಭಾಗ ; ಶಾಸಕಾಂಗ ಪಕ್ಷದ ನಾಯಕನ ಸ್ಥಾನಕ್ಕೆ ಉಚ್ಚಾಟಿತ ಶಾಸಕ ರಿತಬ್ರತ ಬೆಂಬಲಿಸಿ ಸ್ಪೀಕರ್‌ಗೆ 58 ಶಾಸಕರ ಹಕ್ಕು ಸಲ್ಲಿಕೆ !

ಕೋಲ್ಕತ್ತಾ : ತೃಣಮೂಲ ಕಾಂಗ್ರೆಸ್ (ಟಿಎಂಸಿ) ಒಳಗಿನ ಆಂತರಿಕ ಬಂಡಾಯ ಬುಧವಾರ ನಿರ್ಣಾಯಕ ತಿರುವು ಪಡೆದುಕೊಂಡಿದೆ. ಟಿಎಂಸಿಯಿಂದ ಉಚ್ಚಾಟಿತರಾಗಿರುವ ಶಾಸಕ ರಿತಬ್ರತ ಬ್ಯಾನರ್ಜಿ ಅವರಿಗೆ ಪಕ್ಷದ 58 ಭಿನ್ನಮತೀಯ ಶಾಸಕರು ಬೆಂಬಲ ಘೋಷಿಸಿದ್ದು, ಅವರನ್ನು ಶಾಸಕಾಂಗ ಪಕ್ಷದ ನಾಯಕರನ್ನಾಗಿ ಆಯ್ಕೆ ಮಾಡಿದ್ದಾರೆ. ಈ ಕುರಿತ ತಮ್ಮ ನಿರ್ಧಾರವನ್ನು ಪತ್ರಕ್ಕೆ ಸಹಿ ಹಾಕುವ ಮೂಲಕ ಪಶ್ಚಿಮ ಬಂಗಾಳ … Continued

ಬೃಹತ್ ಪ್ರತಿಭಟನೆ ನಡೆಸಿದ ಮಮತಾ ; 78 ಶಾಸಕರು, 41 ಸಂಸದರಿದ್ರೂ ಬಂದದ್ದು 8 ಶಾಸಕರು 6 ಸಂಸದರು ಮಾತ್ರ ! ಟಿಎಂಸಿಯಲ್ಲಿ ಹೀಗ್ಯಾಕೆ ?

ಕೋಲ್ಕತ್ತಾ: ಬಂಗಾಳ ಚುನಾವಣೆಯ ಹೀನಾಯ ಸೋಲಿನ ನಂತರ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಭಿನ್ನಮತ ತಾರಕಕ್ಕೇರಿದೆ. ಪಕ್ಷವನ್ನು ಸಮಾಧಾನಪಡಿಸುವ ಮತ್ತು ಕಾರ್ಯಕರ್ತರಲ್ಲಿ ಚೈತನ್ಯ ತುಂಬುವ ನಿಟ್ಟಿನಲ್ಲಿ ಟಿಎಂಸಿ ಸುಪ್ರಿಮೋ ಮಮತಾ ಬ್ಯಾನರ್ಜಿ ಮತ್ತೆ ತಮ್ಮ ಹಳೆಯ ‘ಸ್ಟ್ರೀಟ್ ಫೈಟರ್’ (ಬೀದಿ ಹೋರಾಟಗಾರ್ತಿ) ಅವತಾರಕ್ಕೆ ಮರಳಿದ್ದಾರೆ. ಸೋಲಿನ ನಂತರ ಹಮ್ಮಿಕೊಂಡ ಮೊದಲ ಬೃಹತ್ ಪ್ರತಿಭಟನೆಯಲ್ಲಿ ಬಿಜೆಪಿಯ … Continued

ದೀದಿ ಪಕ್ಷದಲ್ಲಿ ಬೀದಿಗೆ ಬಂದ ಒಳಜಗಳ ; ಇಬ್ಬರು ಶಾಸಕರನ್ನು ಉಚ್ಚಾಟಿಸಿದ ಟಿಎಂಸಿ…!

ಕೋಲ್ಕತ್ತಾ:  ಪಕ್ಷ ವಿರೋಧಿ ಚಟುವಟಿಕೆಗಳ ಹಿನ್ನೆಲೆಯಲ್ಲಿ ತೃಣಮೂಲ ಕಾಂಗ್ರೆಸ್ (TMC) ಸೋಮವಾರ ತನ್ನ ಇಬ್ಬರು ಶಾಸಕರನ್ನು ಪಕ್ಷದಿಂದ ಉಚ್ಚಾಟಿಸಿದೆ. ಶಾಸಕರಾದ ಸಂದೀಪನ್ ಸಹಾ ಮತ್ತು ರಿತಬ್ರತಾ ಬ್ಯಾನರ್ಜಿ ಅವರನ್ನು ತಕ್ಷಣದಿಂದ ಜಾರಿಗೆ ಬರುವಂತೆ ಪಕ್ಷದಿಂದ ಉಚ್ಚಾಟಿಸಲಾಗಿದೆ ಎಂದು ಟಿಎಂಸಿ ಹೇಳಿದೆ.  2026ರ ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಯಲ್ಲಿ ಟಿಎಂಸಿ ಅಧಿಕಾರ ಕಳೆದುಕೊಂಡ ಬೆನ್ನಲ್ಲೇ, ಪಕ್ಷದ ನಾಯಕರಲ್ಲಿ … Continued

ದೀದಿ ಪಕ್ಷದಲ್ಲಿ ಬಣ ರಾಜಕೀಯದ ಸದ್ದು ; ಆಂತರಿಕ ತಲ್ಲಣದಿಂದ ದುರ್ಬಲವಾಗುತ್ತಿದೆಯೇ ಟಿಎಂಸಿ..?

ಪಶ್ಚಿಮ ಬಂಗಾಳದ ರಾಜಕಾರಣದಲ್ಲಿ ತೃಣಮೂಲ ಕಾಂಗ್ರೆಸ್ (TMC) ಸದ್ಯ ತನ್ನ ಇತಿಹಾಸದಲ್ಲೇ ಅತ್ಯಂತ ಕಠಿಣ ಪರಿಸ್ಥಿತಿಯನ್ನು ಎದುರಿಸುತ್ತಿದೆ. ಹಿರಿಯ ಸಂಸದರಾದ ಕಾಕಲಿ ಘೋಷ್ ದಸ್ತಿದಾರ್ ಮತ್ತು ಕಲ್ಯಾಣ ಬ್ಯಾನರ್ಜಿ ನಡುವಿನ ಬಹಿರಂಗ ಜಗಳ ಹಾಗೂ ಅದರ ಬೆನ್ನಲ್ಲೇ ದಸ್ತಿದಾರ್ ಅವರ ಬಹಿರಂಗ ಬಂಡಾಯ, ಟಿಎಂಸಿ ಪಕ್ಷದೊಳಗಿನ ಆಂತರಿಕ ವೈರುಧ್ಯಗಳನ್ನು ಮತ್ತೊಮ್ಮೆ ಜಗಜ್ಜಾಹೀರು ಮಾಡಿದೆ. ಈ ಪಕ್ಷದಲ್ಲಿ … Continued

ಮಮತಾ ಬ್ಯಾನರ್ಜಿಗೆ ಆಘಾತ: ಟಿಎಂಸಿ ಪಕ್ಷದ ಎಲ್ಲ ಹುದ್ದೆಗಳಿಗೆ ರಾಜೀನಾಮೆ ನೀಡಿದ ಹಿರಿಯ ಸಂಸದೆ ಕಾಕೋಲಿ ಘೋಷ್ ದಸ್ತಿದಾರ್

ಕೋಲ್ಕತ್ತಾ: ಪಶ್ಚಿಮ ಬಂಗಾಳದಲ್ಲಿ ತೃಣಮೂಲ ಕಾಂಗ್ರೆಸ್ (TMC) ಪಕ್ಷಕ್ಕೆ ತೀವ್ರ ರಾಜಕೀಯ ಆಘಾತ ಎದುರಾಗಿದೆ. ಪಕ್ಷದ ನಾಯಕತ್ವದ ವಿರುದ್ಧ ಬಹಿರಂಗವಾಗಿ ತಮ್ಮ ಅಸಮಾಧಾನ ಹೊರಹಾಕಿದ್ದ ಬರಾಸತ್ ಕ್ಷೇತ್ರದ ಹಿರಿಯ ಸಂಸದೆ ಕಾಕೋಲಿ ಘೋಷ್ ದಸ್ತಿದಾರ್ ಅವರು ಬುಧವಾರ (ಮೇ 27) ಪಕ್ಷದ ಎಲ್ಲ ಹುದ್ದೆಗಳಿಗೆ ರಾಜೀನಾಮೆ ನೀಡಿದ್ದಾರೆ. ಕಾಕೋಲಿ ಘೋಷ್ ಅವರು ತೃಣಮೂಲ ಕಾಂಗ್ರೆಸ್‌ನ ಮಹಿಳಾ … Continued

ಬಂಗಾಳದಲ್ಲಿ ಅಲ್ಲಾಡುತ್ತಿದೆಯೇ ಮಮತಾ ಬ್ಯಾನರ್ಜಿ ಸಾಮ್ರಾಜ್ಯ ? ಚುನಾವಣಾ ಸೋಲಿನ ಬೆನ್ನಲ್ಲೇ 100ಕ್ಕೂ ಹೆಚ್ಚು ಕೌನ್ಸಿಲರ್‌ಗಳ ರಾಜೀನಾಮೆ !

ಕೋಲ್ಕತ್ತಾ : ಪಶ್ಚಿಮ ಬಂಗಾಳದ 2026ರ ವಿಧಾನಸಭಾ ಚುನಾವಣೆಯಲ್ಲಿ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಸೋಲನುಭವಿಸಿದ ಬೆನ್ನಲ್ಲೇ, ಪಕ್ಷದೊಳಗೆ ತೀವ್ರ ರಾಜಕೀಯ ಅಸ್ಥಿರತೆ ತಲೆದೋರಿದೆ. ಇದಕ್ಕೆ ನಿದರ್ಶನವೆಂಬಂತೆ ರಾಜ್ಯದ ವಿವಿಧ ಮುನ್ಸಿಪಾಲಿಟಿಗಳ (ನಗರಸಭೆ/ಪುರಸಭೆ) ಕೌನ್ಸಿಲರ್‌ಗಳು ಸಾಮೂಹಿಕವಾಗಿ ರಾಜೀನಾಮೆ ನೀಡುತ್ತಿದ್ದು, ಟಿಎಂಸಿಗೆ ಭಾರಿ ಹಿನ್ನಡೆಯಾಗಿದೆ. ರಾಜ್ಯಾದ್ಯಂತ ವಿವಿಧ ಪುರಸಭೆಗಳ 100ಕ್ಕೂ ಹೆಚ್ಚು ಕೌನ್ಸಿಲರ್‌ಗಳು ತಮ್ಮ ಸ್ಥಾನಗಳಿಗೆ ರಾಜೀನಾಮೆ … Continued

ಇಮಾಮರು, ಅರ್ಚಕರ ಸರ್ಕಾರಿ ಸಹಾಯಧನ ಸಂಪೂರ್ಣ ಸ್ಥಗಿತ ; ಪಶ್ಚಿಮ ಬಂಗಾಳ ಸರ್ಕಾರದ ನಿರ್ಧಾರ

ಕೋಲ್ಕತ್ತಾ: ಪಶ್ಚಿಮ ಬಂಗಾಳದಲ್ಲಿ ಸುವೇಂದು ಅಧಿಕಾರಿ ನೇತೃತ್ವದ ನೂತನ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದ ಬೆನ್ನಲ್ಲೇ, ಇಂದು, ಸೋಮವಾರ ನಡೆದ ಮೊದಲ ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ಹಲವು ಮಹತ್ವದ ನಿರ್ಧಾರಗಳನ್ನು ಕೈಗೊಳ್ಳಲಾಗಿದೆ. ಈ ಪೈಕಿ, ಮುಂಬರುವ ಜೂನ್ ತಿಂಗಳಿನಿಂದ ಧಾರ್ಮಿಕ ಆಧಾರಿತ ಸರ್ಕಾರಿ ನೆರವುಗಳನ್ನು ಸ್ಥಗಿತಗೊಳಿಸುವುದು ಮತ್ತು ಕಲ್ಕತ್ತಾ ಹೈಕೋರ್ಟ್ ಆದೇಶದ ಹಿನ್ನೆಲೆಯಲ್ಲಿ ರಾಜ್ಯದ … Continued

ವಕೀಲರ ಉಡುಪಿನಲ್ಲಿ ಕೋರ್ಟ್‌ಗೆ ಮಮತಾ ಬ್ಯಾನರ್ಜಿ ಹಾಜರು : ವಕೀಲ ವೃತ್ತಿಯ ವಿವರ ಕೇಳಿದ ಬಾರ್ ಕೌನ್ಸಿಲ್

ನವದೆಹಲಿ : ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಬುಧವಾರ ಕಲ್ಕತ್ತಾ ಹೈಕೋರ್ಟ್‌ಗೆ ವಕೀಲರ ಗೌನ್ ಮತ್ತು ಬಿಳಿ ಬ್ಯಾಂಡ್ ಧರಿಸಿ ಹಾಜರಾದ ಬೆನ್ನಲ್ಲೇ, ಭಾರತೀಯ ವಕೀಲರ ಪರಿಷತ್ತು (Bar Council of India) ಈ ವಿಷಯವನ್ನು ಗಂಭೀರವಾಗಿ ಪರಿಗಣಿಸಿದೆ. ಬ್ಯಾನರ್ಜಿ ಅವರ ದಾಖಲಾತಿ ಮತ್ತು ವಕೀಲ ವೃತ್ತಿಯ ಸ್ಥಿತಿಗತಿಯ ಬಗ್ಗೆ ವಿವರವಾದ ಮಾಹಿತಿಯನ್ನು … Continued