ಕಳೆದುಹೋಗಿ 25 ವರ್ಷಗಳ ನಂತರ ಹಿಮಾಚಲ ಪ್ರದೇಶದಲ್ಲಿ ಪತ್ತೆಯಾದ ಬಳ್ಳಾರಿ ಜಿಲ್ಲೆಯ ಮಹಿಳೆ …!

ಬಳ್ಳಾರಿ: ಸುಮಾರು 25 ವರ್ಷಗಳ ನಂತರ ಮನೆಯವರ ಸಂಪರ್ಕವಿಲ್ಲದೆ ನಾಪತ್ತೆಯಾಗಿದ್ದ ಮಹಿಳೆಯೊಬ್ಬರು ಕೊನೆಗೂ ಪತ್ತೆಯಾಗಿದ್ದಾರೆ…! ಮೂಲತಃ ಬಳ್ಳಾರಿ ತಾಲೂಕಿನ ಕುರುವಳ್ಳಿ ಗ್ರಾಮದವರಾದ ಸಾಕಮ್ಮ ಎಂಬ ಮಹಿಳೆ ಹಿಮಾಚಲ ಪ್ರದೇಶದ ಮಂಡಿಯಲ್ಲಿ ಪತ್ತೆಯಾಗಿದ್ದು,ಅವರನ್ನು ಈಗ ಕರೆತರಲಾಗಿದೆ. 20 ವರ್ಷಗಳಿಗೂ ಹೆಚ್ಚು ಕಾಲ ಮನೆ ಬಿಟ್ಟು ಹೋಗಿದ್ದ ಬಳ್ಳಾರಿ ಮೂಲದ ಸಾಕವ್ವ ಪತ್ತೆಯಾಗಿದ್ದು, ಡಿಸೆಂಬರ್ 24ರಂದು ಸಂಜೆ ಬೆಂಗಳೂರಿನ … Continued

ಮಂಡಿ ಲೋಕಸಭಾ ಕ್ಷೇತ್ರದಿಂದ ಆಯ್ಕೆ ಪ್ರಶ್ನಿಸಿ ಅರ್ಜಿ : ಬಿಜೆಪಿ ಸಂಸದೆ ಕಂಗನಾ ರಣಾವತ್ ಗೆ ಹೈಕೋರ್ಟ್ ನೋಟಿಸ್

ಶಿಮ್ಲಾ : ಮಂಡಿ ಲೋಕಸಭಾ ಸದಸ್ಯೆ ಕಂಗನಾ ರಣಾವತ್‌ ಅವರಿಗೆ ಹಿಮಾಚಲ ಪ್ರದೇಶ ಹೈಕೋರ್ಟ್ ಬುಧವಾರ ನೋಟಿಸ್ ನೀಡಿದೆ. ಕಿನ್ನೌರ್‌ನ ನಿವಾಸಿಯೊಬ್ಬರು ಲೋಕಸಭೆ ಸ್ಥಾನಕ್ಕೆ ಸಲ್ಲಿಸಿದ್ದ ತನ್ನ ನಾಮಪತ್ರಗಳನ್ನು ತಪ್ಪಾಗಿ ತಿರಸ್ಕರಿಸಲಾಗಿದೆ ಎಂಬ ಕಾರಣಕ್ಕೆ ಚುನಾವಣೆಯನ್ನು ರದ್ದುಗೊಳಿಸುವಂತೆ ಕೋರಿ ಅರ್ಜಿ ಸಲ್ಲಿಸಿದ್ದರು. ನೋಟಿಸ್ ನೀಡಿದ ನ್ಯಾಯಮೂರ್ತಿ ಜ್ಯೋತ್ಸ್ನಾ ರೇವಾಲ್ ಅವರು ಆಗಸ್ಟ್ 21 ರೊಳಗೆ ಉತ್ತರ … Continued

ನನ್ನ ಭೇಟಿಗೆ ಬರುವ ಜನರು ಆಧಾರ ಕಾರ್ಡ್‌ ತರಬೇಕು ಎಂದ ಸಂಸದೆ ಕಂಗನಾ ರಣಾವತ್‌ ; ಕಾಂಗ್ರೆಸ್‌ ಟೀಕೆ

ಶಿಮ್ಲಾ : ಹಿಮಾಚಲ ಪ್ರದೇಶದ ಮಂಡಿಯ ಬಿಜೆಪಿ ಸಂಸದೆ ಹಾಗೂ ಬಾಲಿವುಡ್ ನಟಿ ಕಂಗನಾ ರಣಾವತ್ ಅವರು ತಮ್ಮನ್ನು ಭೇಟಿಯಾಗಲು ಬರುವವರು ಕಡ್ಡಾಯವಾಗಿ ಆಧಾರ್​ ಕಾರ್ಡ್​ ತೆಗೆದುಕೊಂಡು ಬರಬೇಕು ಎಂದು ಹೇಳಿರುವುದು ಈಗ ಚರ್ಚೆಗೆ ಗ್ರಾಸವಾಗಿದೆ. ಸುದ್ದಿಗಾರರೊಂದಿಗೆ ಮಾತನಾಡಿದ ಕಂಗನಾ ರಣಾವತ್‌, ಯಾವುದೇ ಅನಾನುಕೂಲತೆ ಆಗದಂತೆ ನೋಡಿಕೊಳ್ಳಲು ಭೇಟಿಗೆ ಬರುವವರು ಆಧಾರ್​ ಕಾರ್ಡ್​ ತೆಗೆದುಕೊಂಡು ಬರಬೇಕು. … Continued

ವಿವಾದಕ್ಕೆ ಕಾರಣವಾದ ಕಂಗನಾ ರಣಾವತ್ ಕುರಿತ ಕಾಂಗ್ರೆಸ್ ನಾಯಕಿ ಇನ್ಸ್ಟಾಗ್ರಾಮ್ ಪೋಸ್ಟ್

ನವದೆಹಲಿ: ನಟಿ ಕಂಗನಾ ರಣಾವತ್ ಅವರ ಚುನಾವಣಾ ಪ್ರಚಾರದ ಕುರಿತು ಕಾಂಗ್ರೆಸ್ ನಾಯಕರೊಬ್ಬರು ಅವಹೇಳನಕಾರಿ ಪೋಸ್ಟ್ ಮಾಡಿದ್ದು ಹೊಸ ವಿವಾದಕ್ಕೆ ಕಾರಣವಾಗಿದ್ದು, ರಾಷ್ಟ್ರೀಯ ಮಹಿಳಾ ಆಯೋಗವು ರಾಜಕಾರಣಿ ವಿರುದ್ಧ ಕ್ರಮಕ್ಕೆ ಒತ್ತಾಯಿಸಿದೆ. ಕಾಂಗ್ರೆಸ್ ವಕ್ತಾರರಾದ ಸುಪ್ರಿಯಾ ಶ್ರಿನಾಟೆ ಅವರ ಇನ್‌ಸ್ಟಾಗ್ರಾಮ್ ಹ್ಯಾಂಡಲ್‌ನಿಂದ ಕಂಗನಾ ರಣಾವತ್ ಅವರ ಫೋಟೋದೊಂದಿಗೆ ಪೋಸ್ಟ್ ರಾಷ್ಟ್ರೀಯ ಚುನಾವಣೆಗೆ ವಾರಗಳ ಮೊದಲು ಬಂದಿದೆ. … Continued