ವಿಡಿಯೋ ವೈರಲ್‌ | ದಿಢೀರನೆ ಬಂದು ನಾಯಿ ಮರಿ ಹೊತ್ತೊಯ್ದು ಮರ ಏರಿ ಕುಳಿತ ದೈತ್ಯ ಮಂಗ…! ಮುಂದೇನಾಯ್ತು ಗೊತ್ತೆ…?

ಪ್ರಕೃತಿಯಲ್ಲಿ ಪ್ರಾಣಿಗಳ ನಡುವಿನ ಪ್ರೀತಿ ಮತ್ತು ವಾತ್ಸಲ್ಯಕ್ಕೆ ಕೊನೆಯಿಲ್ಲ ಎಂಬುದಕ್ಕೆ ಸಾಕ್ಷಿಯಾದ ಅಪರೂಪದ ಘಟನೆಯೊಂದು ಹಿಮಾಚಲ ಪ್ರದೇಶದ ಮಂಡಿ ಜಿಲ್ಲೆಯಲ್ಲಿ ನಡೆದಿದ್ದು, ಇದರ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಭಾರಿ ವೈರಲ್ ಆಗಿದೆ. ಇಲ್ಲಿನ ರೇವಾಲ್ಸರ್ ಪ್ರದೇಶದಲ್ಲಿ ಕೋತಿಯೊಂದು ನಾಯಿ ಮರಿಯನ್ನು ಹೊತ್ತೊಯ್ದು ಮರದ ಮೇಲೆ ಕುಳಿತು ಪ್ರೀತಿಯಿಂದ ನೋಡಿಕೊಂಡ ದೃಶ್ಯ ಸ್ಥಳೀಯರ ಮನಗೆದ್ದಿದೆ. ಸ್ಥಳೀಯರು ನೀಡಿದ … Continued

ವೀಡಿಯೊ..| 2 ತಿಂಗಳ ಮಗುವಿಗೆ ಜೀವ ರಕ್ಷಕ ಇಂಜೆಕ್ಷನ್ ನೀಡಲು ಪ್ರಾಣ ಪಣಕ್ಕಿಟ್ಟು ಉಕ್ಕಿ ಹರಿಯುತ್ತಿದ್ದ ಹೊಳೆ ದಾಟಿದ ನರ್ಸ್…!

ಮಂಡಿ: ಹಿಮಾಚಲ ಪ್ರದೇಶದ ಮಂಡಿ ಜಿಲ್ಲೆಯಲ್ಲಿ, ಸ್ಟಾಫ್ ನರ್ಸ್ ಒಬ್ಬರು ಪ್ರವಾಹ ಪೀಡಿತ ಪ್ರದೇಶದ ಅನಾರೋಗ್ಯ ಪೀಡಿತ ಎರಡು ತಿಂಗಳ ಶಿಶುವಿನ ಜೀವ ಉಳಿಸಲು ಉಕ್ಕಿ ಹರಿಯುತ್ತಿದ್ದ ಹೊಳೆ ದಾಟಲು ಜೋವದ ಹಂಗು ತೊರೆದು ತೋರಿದ ಧೈರ್ಯದ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ಭಾರಿ ವೈರಲ್ ಆಗಿದೆ. ಮಂಡಿ ಜಿಲ್ಲೆಯ ಸುಧಾರ ಪಂಚಾಯತ ವ್ಯಾಪ್ತಿಯ ಚೌಹರ್ಘಾಟಿಯಲ್ಲಿ ಈ … Continued

ಭೂ ಕುಸಿತದಿಂದ ಗ್ರಾಮವೇ ನಾಶವಾದ್ರೂ ಅಪಾಯದ ಬಗ್ಗೆ ಮಧ್ಯರಾತ್ರಿ ಎಚ್ಚರಿಸಿ 67 ಜನರ ಜೀವ ಉಳಿಸಿದ ನಾಯಿ..!

ನವದೆಹಲಿ: ಮುಂಗಾರು ಮಳೆ ಆರಂಭವಾಗುತ್ತಿದ್ದಂತೆ, ಭಾರತದ ವಿವಿಧ ಭಾಗಗಳಲ್ಲಿ ಭೂ ಕುಸಿತ, ಹಠಾತ್ ಪ್ರವಾಹ ಮತ್ತು ಮೇಘಸ್ಫೋಟಗಳು ಸಂಭವಿಸುತ್ತಿವೆ. ಇದರ ಮಧ್ಯೆ ಹಿಮಾಚಲ ಪ್ರದೇಶದ ನಾಯಿಯೊಂದು ಅನೇಕರ ಜೀವ ಉಳಿಸುವ ಕೆಲಸ ಮಾಡುವ ಮೂಲಕ ಸುದ್ದಿಯಲ್ಲಿದೆ. ಹಿಮಾಚಲ ಪ್ರದೇಶದ ಮಂಡಿ ಜಿಲ್ಲೆಯ ಸಿಯಾಥಿ ಗ್ರಾಮದಲ್ಲಿ ಭೀಕರ ಭೂಕುಸಿತ ಸಂಭವಿಸುವ ಕೆಲವೇ ಕ್ಷಣಗಳ ಮೊದಲು, ಹಳ್ಳಿಯ ನಾಯಿಯೊಂದು … Continued

ಕಳೆದುಹೋಗಿ 25 ವರ್ಷಗಳ ನಂತರ ಹಿಮಾಚಲ ಪ್ರದೇಶದಲ್ಲಿ ಪತ್ತೆಯಾದ ಬಳ್ಳಾರಿ ಜಿಲ್ಲೆಯ ಮಹಿಳೆ …!

ಬಳ್ಳಾರಿ: ಸುಮಾರು 25 ವರ್ಷಗಳ ನಂತರ ಮನೆಯವರ ಸಂಪರ್ಕವಿಲ್ಲದೆ ನಾಪತ್ತೆಯಾಗಿದ್ದ ಮಹಿಳೆಯೊಬ್ಬರು ಕೊನೆಗೂ ಪತ್ತೆಯಾಗಿದ್ದಾರೆ…! ಮೂಲತಃ ಬಳ್ಳಾರಿ ತಾಲೂಕಿನ ಕುರುವಳ್ಳಿ ಗ್ರಾಮದವರಾದ ಸಾಕಮ್ಮ ಎಂಬ ಮಹಿಳೆ ಹಿಮಾಚಲ ಪ್ರದೇಶದ ಮಂಡಿಯಲ್ಲಿ ಪತ್ತೆಯಾಗಿದ್ದು,ಅವರನ್ನು ಈಗ ಕರೆತರಲಾಗಿದೆ. 20 ವರ್ಷಗಳಿಗೂ ಹೆಚ್ಚು ಕಾಲ ಮನೆ ಬಿಟ್ಟು ಹೋಗಿದ್ದ ಬಳ್ಳಾರಿ ಮೂಲದ ಸಾಕವ್ವ ಪತ್ತೆಯಾಗಿದ್ದು, ಡಿಸೆಂಬರ್ 24ರಂದು ಸಂಜೆ ಬೆಂಗಳೂರಿನ … Continued

ಮಂಡಿ ಲೋಕಸಭಾ ಕ್ಷೇತ್ರದಿಂದ ಆಯ್ಕೆ ಪ್ರಶ್ನಿಸಿ ಅರ್ಜಿ : ಬಿಜೆಪಿ ಸಂಸದೆ ಕಂಗನಾ ರಣಾವತ್ ಗೆ ಹೈಕೋರ್ಟ್ ನೋಟಿಸ್

ಶಿಮ್ಲಾ : ಮಂಡಿ ಲೋಕಸಭಾ ಸದಸ್ಯೆ ಕಂಗನಾ ರಣಾವತ್‌ ಅವರಿಗೆ ಹಿಮಾಚಲ ಪ್ರದೇಶ ಹೈಕೋರ್ಟ್ ಬುಧವಾರ ನೋಟಿಸ್ ನೀಡಿದೆ. ಕಿನ್ನೌರ್‌ನ ನಿವಾಸಿಯೊಬ್ಬರು ಲೋಕಸಭೆ ಸ್ಥಾನಕ್ಕೆ ಸಲ್ಲಿಸಿದ್ದ ತನ್ನ ನಾಮಪತ್ರಗಳನ್ನು ತಪ್ಪಾಗಿ ತಿರಸ್ಕರಿಸಲಾಗಿದೆ ಎಂಬ ಕಾರಣಕ್ಕೆ ಚುನಾವಣೆಯನ್ನು ರದ್ದುಗೊಳಿಸುವಂತೆ ಕೋರಿ ಅರ್ಜಿ ಸಲ್ಲಿಸಿದ್ದರು. ನೋಟಿಸ್ ನೀಡಿದ ನ್ಯಾಯಮೂರ್ತಿ ಜ್ಯೋತ್ಸ್ನಾ ರೇವಾಲ್ ಅವರು ಆಗಸ್ಟ್ 21 ರೊಳಗೆ ಉತ್ತರ … Continued

ನನ್ನ ಭೇಟಿಗೆ ಬರುವ ಜನರು ಆಧಾರ ಕಾರ್ಡ್‌ ತರಬೇಕು ಎಂದ ಸಂಸದೆ ಕಂಗನಾ ರಣಾವತ್‌ ; ಕಾಂಗ್ರೆಸ್‌ ಟೀಕೆ

ಶಿಮ್ಲಾ : ಹಿಮಾಚಲ ಪ್ರದೇಶದ ಮಂಡಿಯ ಬಿಜೆಪಿ ಸಂಸದೆ ಹಾಗೂ ಬಾಲಿವುಡ್ ನಟಿ ಕಂಗನಾ ರಣಾವತ್ ಅವರು ತಮ್ಮನ್ನು ಭೇಟಿಯಾಗಲು ಬರುವವರು ಕಡ್ಡಾಯವಾಗಿ ಆಧಾರ್​ ಕಾರ್ಡ್​ ತೆಗೆದುಕೊಂಡು ಬರಬೇಕು ಎಂದು ಹೇಳಿರುವುದು ಈಗ ಚರ್ಚೆಗೆ ಗ್ರಾಸವಾಗಿದೆ. ಸುದ್ದಿಗಾರರೊಂದಿಗೆ ಮಾತನಾಡಿದ ಕಂಗನಾ ರಣಾವತ್‌, ಯಾವುದೇ ಅನಾನುಕೂಲತೆ ಆಗದಂತೆ ನೋಡಿಕೊಳ್ಳಲು ಭೇಟಿಗೆ ಬರುವವರು ಆಧಾರ್​ ಕಾರ್ಡ್​ ತೆಗೆದುಕೊಂಡು ಬರಬೇಕು. … Continued

ವಿವಾದಕ್ಕೆ ಕಾರಣವಾದ ಕಂಗನಾ ರಣಾವತ್ ಕುರಿತ ಕಾಂಗ್ರೆಸ್ ನಾಯಕಿ ಇನ್ಸ್ಟಾಗ್ರಾಮ್ ಪೋಸ್ಟ್

ನವದೆಹಲಿ: ನಟಿ ಕಂಗನಾ ರಣಾವತ್ ಅವರ ಚುನಾವಣಾ ಪ್ರಚಾರದ ಕುರಿತು ಕಾಂಗ್ರೆಸ್ ನಾಯಕರೊಬ್ಬರು ಅವಹೇಳನಕಾರಿ ಪೋಸ್ಟ್ ಮಾಡಿದ್ದು ಹೊಸ ವಿವಾದಕ್ಕೆ ಕಾರಣವಾಗಿದ್ದು, ರಾಷ್ಟ್ರೀಯ ಮಹಿಳಾ ಆಯೋಗವು ರಾಜಕಾರಣಿ ವಿರುದ್ಧ ಕ್ರಮಕ್ಕೆ ಒತ್ತಾಯಿಸಿದೆ. ಕಾಂಗ್ರೆಸ್ ವಕ್ತಾರರಾದ ಸುಪ್ರಿಯಾ ಶ್ರಿನಾಟೆ ಅವರ ಇನ್‌ಸ್ಟಾಗ್ರಾಮ್ ಹ್ಯಾಂಡಲ್‌ನಿಂದ ಕಂಗನಾ ರಣಾವತ್ ಅವರ ಫೋಟೋದೊಂದಿಗೆ ಪೋಸ್ಟ್ ರಾಷ್ಟ್ರೀಯ ಚುನಾವಣೆಗೆ ವಾರಗಳ ಮೊದಲು ಬಂದಿದೆ. … Continued