ಮಗ ಉದಯನಿಧಿ ಸನಾತನ ಧರ್ಮ ವಿರೋಧಿ ಹೇಳಿಕೆ ಬೆನ್ನಲ್ಲೇ ಕರ್ನಾಟಕದ ದೇಗುಲಗಳಿಗೆ ಭೇಟಿ ನೀಡಿದ ತಾಯಿ ದುರ್ಗಾ ಸ್ಟಾಲಿನ್…

ಮೈಸೂರು/ಮಂಡ್ಯ : ತಮಿಳುನಾಡಿನ ಮಾಜಿ ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರ ಪತ್ನಿ ದುರ್ಗಾ ಸ್ಟಾಲಿನ್ ಅವರು ಮೈಸೂರಿನ ಪ್ರಸಿದ್ಧ ಶ್ರೀ ಚಾಮುಂಡೇಶ್ವರಿ ದೇವಸ್ಥಾನಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದ್ದಾರೆ. ಅವರು ಮಂಡ್ಯ ಜಿಲ್ಲೆಯ ಪ್ರಸಿದ್ಧ ನಿಮಿಷಾಂಬಾ ದೇಗುಲಕ್ಕೂ ಭೇಟಿ ನೀಡಿ ಪ್ರಾರ್ಥಿಸಿದ್ದಾರೆ. ಮೈಸೂರಿನ ಅಧಿದೇವತೆ ತಾಯಿ ಚಾಮುಂಡೇಶ್ವರಿ ಸನ್ನಿಧಿಗೆ ಭೇಟಿ ನೀಡಿದ ದುರ್ಗಾ ಸ್ಟಾಲಿನ್ … Continued

ಮೂರು ಬಸ್‌ಗಳ ನಡುವೆ ಡಿಕ್ಕಿ : ಇಬ್ಬರು ಸಾವು, 30ಕ್ಕೂ ಹೆಚ್ಚು ಮಂದಿಗೆ ಗಾಯ

ಮಂಡ್ಯ : ಮಂಡ್ಯ ಜಿಲ್ಲೆಯಲ್ಲಿ ಭಾನುವಾರ ನಡೆದ ಮೂರು ಬಸ್ಸುಗಳು ಡಿಕ್ಕೆ ಹೊಡೆದ ಭೀಕರ ಅಪಘಾತದಲ್ಲಿ ಇಬ್ಬರು ಮೃತಪಟ್ಟು, 30ಕ್ಕೂ ಹೆಚ್ಚು ಮಂದಿ ಗಾಯಗೊಂಡ ಘಟನೆ ನಡೆದಿದೆ ಎಂದು ವರದಿಯಾಗಿದೆ. ಹತ್ತು ಮಂದಿ ಗಂಬೀರವಾಗಿ ಗಾಯಗೊಂಡಿದ್ದಾರೆ ಎಂದು ಹೇಳಲಾಗಿದೆ. ಮಂಡ್ಯ ಜಿಲ್ಲೆಯ ಬಚನಹಳ್ಳಿ ಬಳಿ ಮೂರು ಕೆಎಸ್‌ಆರ್‌ಟಿಸಿ (KSRTC) ಬಸ್‌ಗಳ ನಡುವೆ ಸರಣಿ ಡಿಕ್ಕಿ ಸಂಭವಿಸಿದೆ. … Continued

ಡಿಸಿಎಂ ಡಿಕೆ ಶಿವಕುಮಾರ ಬೆಂಗಾವಲು ವಾಹನ ಪಲ್ಟಿ

ಮಂಡ್ಯ: ಮೈಸೂರಿನಲ್ಲಿ ನಡೆದ ಕಾಂಗ್ರೆಸ್ ಸಾಧನಾ ಸಮಾವೇಶ ಕಾರ್ಯಕ್ರಮ ಮುಗಿಸಿ ಬೆಂಗಳೂರಿಗೆ ವಾಪಸ್ಸಾಗುತ್ತಿದ್ದಾಗ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ ಅವರ ಬೆಂಗಾವಲು ವಾಹನ ಅಪಘಾತಕ್ಕೀಡಾದ ಘಟನೆ ನಡೆದಿದೆ. ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣ ವ್ಯಾಪ್ತಿಯ ಎಕ್ಸ್‌ಪ್ರೆಸ್ ಹೈವೇಯ ಗೌಡಹಳ್ಳಿ ಟಿಎಂ ಹೊಸೂರು ಬಳಿಯ ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ ಹೈವೆಯಲ್ಲಿ ಈ ಘಟನೆ ನಡೆದಿದೆ. ಮೈಸೂರಿನಲ್ಲಿ ಕಾಂಗ್ರೆಸ್‌ ಕಾರ್ಯಕ್ರಮ ಮುಗಿಸಿ ಬೆಂಗಳೂರಿಗೆ … Continued

ವೀಡಿಯೊ…| ಶ್ರೀರಂಗಪಟ್ಟಣ : ಫೋಟೊಕ್ಕೆ ಪೋಸ್ ನೀಡುವಾಗ ಸೇತುವೆಯಿಂದ ನದಿಗೆ ಬಿದ್ದು ಕೊಚ್ಚಿ ಹೋದ ವ್ಯಕ್ತಿ

ಮಂಡ್ಯ : ಮಂಡ್ಯ ಜಿಲ್ಲೆಯಲ್ಲಿ ಪಿಕ್ನಿಕ್ ವೇಳೆ ಕಾವೇರಿ ನದಿ ಬಳಿ ಫೋಟೋ ತೆಗೆದುಕೊಳ್ಳಲು ಹೋಗಿ ನಿರ್ಮಾಣ ಹಂತದಲ್ಲಿರುವ ಸೇತುವೆಯಿಂದ ಆಯತಪ್ಪಿ ಬಿದ್ದು ವ್ಯಕ್ತಿಯೊಬ್ಬರು ನಾಪತ್ತೆಯಾದ ಘಟನೆ ಶ್ರೀರಂಗಪಟ್ಟಣದಲ್ಲಿ ಬಳಿ ನಡೆದಿದೆ ಎಂದು ವರದಿಯಾಗಿದೆ. ಸಾಮಾಜಿಕ ಮಾಧ್ಯಮದಲ್ಲಿ ಈ ದುರಂತದ ವೀಡಿಯೊ ವೈರಲ್ ಆಗಿದ್ದು, ಆಯತಪ್ಪಿ ಬಿದ್ದ ನಂತರ ವ್ಯಕ್ತಿ ಕಾವೇರಿ ನದಿಯ ಬಲವಾದ ಪ್ರವಾಹದಲ್ಲಿ … Continued

ಸಕಾರಣವಿಲ್ಲದೆ ರಸ್ತೆಯಲ್ಲಿ ವಾಹನ ತಡೆಯುವಂತಿಲ್ಲ, ಕೀ ಕಸಿಯುವಂತಿಲ್ಲ : ಪೊಲೀಸರಿಗೆ ಡಿಜಿಪಿ ಖಡಕ್‌ ಸೂಚನೆ

ಬೆಂಗಳೂರು : ಇತ್ತೀಚೆಗೆ ಮಂಡ್ಯ ಜಿಲ್ಲೆಯಲ್ಲಿ ಸಂಚಾರ ನಿಯಮ ಉಲ್ಲಂಘಿಸುವ ವಾಹನಗಳ ತಪಾಸಣೆ ವೇಳೆ ಅಪಘಾತಕ್ಕೀಡಾಗಿ ಮಗು ಸಾವಿಗೀಡಾದ ಘಟನೆ ನಡೆದ ಹಿನ್ನೆಲೆಯಲ್ಲಿ ರಸ್ತೆಯಲ್ಲಿ ಸಂಚಾರ ಪೊಲೀಸರ ವಾಹನ ತಪಾಸಣೆಗೆ ರಾಜ್ಯ ಪೊಲೀಸ್ ಮಹಾನಿರ್ದೇಶಕರು ಹಲವಾರು ಸೂಚನೆಗಳನ್ನು ನೀಡಿದ್ದಾರೆ. ಈ ಸಂಬಂಧ ಶನಿವಾರ ಸುತ್ತೋಲೆ ಹೊರಡಿಸಿರುವ ಡಿಜಿಪಿ-ಐಜಿಪಿ ಡಾ. ಎಂ.ಎ.ಸಲೀಂ, ಕಣ್ಣಿಗೆ ಕಾಣುವಂತೆ ಸಂಚಾರ ನಿಯಮ … Continued

ನಾಲೆಗೆ ಹಾರಿ ಒಂದೇ ಕುಟುಂಬದ ಮೂವರು ಆತ್ಮಹತ್ಯೆ

ಮಂಡ್ಯ: ಒಂದೇ ಕುಟುಂಬದ ಮೂವರು ವಿಷ ಸೇವಿಸಿ, ನಂತರ ವಿಸಿ ನಾಲೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಸೋಮವಾರ ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣದಲ್ಲಿ ನಡೆದಿದೆ ಎಂದು ವರದಿಯಾಗಿದೆ. ಮೃತರನ್ನು ಮಾಸ್ತಪ್ಪ, ಪತ್ನಿ ರತ್ನಮ್ಮ ಹಾಗೂ ಮಗಳು ಲಕ್ಷ್ಮೀ ಎಂದು ಗುರುತಿಸಲಾಗಿದ್ದು, ದಂಪತಿಯ ಮೃತದೇಹ ಪತ್ತೆ ಆಗಿದೆ. ಮಗಳ ಮೃತದೇಹಕ್ಕಾಗಿ ಶೋಧಕಾರ್ಯ ಮುಂದುವರಿದಿದೆ. ಮೃತರು ಶ್ರೀರಂಗಪಟ್ಟಣದ ಗಂಜಾಂ … Continued

ಮಂಡ್ಯ…| ಆಟದ ಗನ್ ಎಂದು ಭಾವಿಸಿ ಮಕ್ಕಳು ಆಟವಾಡುತ್ತಿದ್ದಾಗ ಅಸಲಿ ಗನ್‌ ನಿಂದ ಹಾರಿದ ಗುಂಡು; 3 ವರ್ಷದ ಬಾಲಕ ಸಾವು

ಮಂಡ್ಯ: ಅಣ್ಣ ತಮ್ಮ ಆಟವಾಡುತ್ತಿದ್ದಾಗ ಆಕಸ್ಮಿಕವಾಗಿ ಗುಂಡು ಸಿಡಿದು (Firing) 3 ವರ್ಷದ ಮಗು ಮೃತಪಟ್ಟ ಘಟನೆ ಮಂಡ್ಯ ಜಿಲ್ಲೆಯ ನಾಗಮಂಗಲ ತಾಲೂಕಿನ ದೊಂದೆಮಾದಿಹಳ್ಳಿಯ ಕೋಳಿ ಫಾರಂ ಒಂದರಲ್ಲಿ ಭಾನುವಾರ (ಫೆ. 16) ನಡೆದಿದೆ ಎಂದು ವರದಿಯಾಗಿದೆ. ಮಕ್ಕಳು ಅದು ನಿಜವಾದ ಬಂದೂಕು ಎಂದು ತಿಳಿಯದೆ ಆಟವಾಡುವ ಬಂದೂಕು ಎಂದು ತಿಳದು ಆಟವಾಡುತ್ತಿದ್ದಾಗ ಆಕಸ್ಮಿಕವಾಗಿ ಗುಂಡು … Continued

8 ತಿಂಗಳ ಬಂಡೂರು ಟಗರು ಬರೋಬ್ಬರಿ ₹1.48 ಲಕ್ಷಕ್ಕೆ ಮಾರಾಟ ; ಏನಿದರ ವಿಶೇಷತೆ..?

ಮಂಡ್ಯ : ಮಂಡ್ಯ ಜಿಲ್ಲೆಯ ಬಂಡೂರು ತಳಿಯ ಟಗರು ದಾಖಲೆ ಬೆಲೆಗೆ ಮಾರಾಟವಾಗಿದೆ. 20 ಸಾವಿರ ರೂ.ಗಳಿಗೆ ಖರೀದಿ ಮಾಡಿದ್ದ ಬಂಡೂರು ಟಗರನ್ನು ಶಿವಮೊಗ್ಗ ಮೂಲದ ವ್ಯಕ್ತಿಯೊಬ್ಬರು ಬರೋಬ್ಬರಿ 1.48 ಲಕ್ಷ ರೂ.ಗಳನ್ನು ಕೊಟ್ಟು ಖರೀದಿ ಮಾಡಿದ್ದಾರೆ. ಬಂಡೂರು ತಳಿಯ ಟಗರು ಮಾಂಸಕ್ಕೆ ಹೆಚ್ಚು ಹೆಸರುವಾಸಿಯಾಗಿದೆ. ಇದರ ಮಾಂಸಕ್ಕೆ ಎಲ್ಲಿಲ್ಲದ ಬೇಡಿಕೆ. ಈ ಟಗರಿನ ವಯಸ್ಸು … Continued

ಪಾರ್ಸೆಲ್‌ ಬಂದಿದೆ ಎಂದು ಮನೆಗೆ ನುಗ್ಗಿ ಮರ ಕತ್ತರಿಸುವ ಯಂತ್ರದಿಂದ ವೃದ್ಧನ ಬರ್ಬರ ಹತ್ಯೆ

ಮಂಡ್ಯ: ಮರ ಕತ್ತರಿಸುವ ಯಂತ್ರದಿಂದ ವೃದ್ಧನನ್ನು ಕತ್ತರಿಸಿ ಬರ್ಬರವಾಗಿ ಹತ್ಯೆಗೈದಿರುವ ಭೀಕರ ಘಟನೆ ಮಂಡ್ಯದಲ್ಲಿ ನಡೆದಿದೆ ಎಂದು ವರದಿಯಾಗಿದೆ. ಜಿಲ್ಲೆಯ ಪಾಂಡವಪುರ ತಾಲೂಕಿನ ಕ್ಯಾತನಹಳ್ಳಿಯ ತೋಟದ ಮನೆಗೆ ಒಂಟಿ ಮನೆಗೆ ಮರ ಕತ್ತರಿಸೋ ಯಂತ್ರದ ಜೊತೆ ನುಗ್ಗಿದ ದರೋಡೆಕೋರ ಈ ಘೋರ ಕೃತ್ಯ ಎಸಗಿದ್ದಾನೆ. ಸಾವಿಗೀಡಾದ ವೃದ್ಧನನ್ನು ರಮೇಶ್ ಎಂದು ಗುರುತಿಸಲಾಗಿದೆ. ಅವರ ಪತ್ನಿ ಯಶೋಧಮ್ಮ … Continued

ವೀಡಿಯೊ..| ಮಂಡ್ಯ ; ಅಪರೂಪದ ವಿದ್ಯಮಾನ : ಮೂರು ಕರುಗಳಿಗೆ ಜನ್ಮ ನೀಡಿದ ಹಸು…!

ಮಂಡ್ಯ: ಸಾಮಾನ್ಯವಾಗಿ ಹಸುಗಳು ಒಂದು ಸಲಕ್ಕೆ ಒಂದೇ ಕರುವಿಗೆ ಜನ್ಮವನ್ನು ನೀಡುತ್ತವೆ. ಆದರೆ ಅಪರೂಪದ ವಿದ್ಯಮಾನದಲ್ಲಿ ಕೆಲವು ಕಡೆಗಳಲ್ಲಿ ಅವಳಿ ಕರುಗಳಿಗೆ ಜನ್ಮ ನೀಡಿದ ಉದಾಹರಣೆಗಳೂ ಇವೆ. ಆದರೆ ಹಸು ಮೂರು ಕರುಗಳಿಗೆ ಜನ್ಮ ನೀಡಿದ ವಿದ್ಯಮಾನ ಅಪರದಲ್ಲಿ ಅಪರೂಪದ ವಿದ್ಯಮಾನ ಎಂದೇ ಹೇಳಬಹುದು. ಮಂಡ್ಯ ಜಿಲ್ಲೆಯ ಪಾಂಡವಪುರ ತಾಲೂಕಿನ ಡಿಂಕಾ ಗ್ರಾಮದ ನಿವಾಸಿ ಕಂಠಿ … Continued