ಮಂಡ್ಯ : ವೃದ್ಧ ಭಿಕ್ಷುಕಿ ನಿಧನ: ಮೃತಳ ಮನೆಯಲ್ಲಿ ಮೂಟೆಗಳಲ್ಲಿ ತುಂಬಿದ್ದ ಕಂತೆ ಕಂತೆ ಹಣ ಪತ್ತೆ…!

ಮಂಡ್ಯ: ಭಿಕ್ಷಾಟನೆ ಮಾಡಿ ಜೀವನ ಸಾಗಿಸುತ್ತಿದ್ದ ವೃದ್ಧೆಯೊಬ್ಬರು ವಯೋಸಹಜ ಕಾಯಿಲೆಯಿಂದ ಮೃತಪಟ್ಟಿದ್ದು, ಅವರ ಮನೆಯನ್ನು ಶೋಧಿಸಿದಾಗ ಬರೋಬ್ಬರಿ 8 ಲಕ್ಷ ರೂಪಾಯಿಗೂ ಅಧಿಕ ನಗದು ಹಣ ಪತ್ತೆಯಾದ ಘಟನೆ  ಮಂಡ್ಯದ ಗುತ್ತಲು ಬಡಾವಣೆಯಲ್ಲಿ ನಡೆದಿದೆ ಎಂದು ವರದಿಯಾಗಿದೆ. ಮೃತ ವೃದ್ಧೆಯನ್ನು ನೂರ್ ಎಂದು ಗುರುತಿಸಲಾಗಿದೆ.  ಮಂಡ್ಯ ನಗರದ ಗುತ್ತಲು ಬಡಾವಣೆಯ ನಿವಾಸಿಯಾಗಿದ್ದ ನೂರ್ (ಹೆಸರು) ಎಂಬ … Continued

ಬಿಜೆಪಿ ಶಾಸಕರ ಪುತ್ರಿಯಿಂದ ಮಹಿಳಾ ಪೊಲೀಸ್ ಅಧಿಕಾರಿಗೆ ಕಪಾಳಮೋಕ್ಷ : ಪ್ರಕರಣ ದಾಖಲು ; ಶಾಸಕರಿಂದ ಕ್ಷಮೆಯಾಚನೆ

ಬೆಂಗಳೂರು: ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲೂಕಿನ ಆರತಿ ಉಕ್ಕಡ ದೇವಸ್ಥಾನದಲ್ಲಿ ವಿಶೇಷ ಭದ್ರತಾ ಕರ್ತವ್ಯದಲ್ಲಿದ್ದ ಮಹಿಳಾ ಪೊಲೀಸ್ ಸಬ್‌ಇನ್‌ಸ್ಪೆಕ್ಟರ್‌ (ಪಿಎಸ್‌ಐ) ಮೇಲೆ ಬಿಜೆಪಿ ಶಾಸಕ ಬಿ.ಎಸ್. ಸುರೇಶ್‌ ಗೌಡ ಅವರ ಪುತ್ರಿ ಐಶ್ವರ್ಯ ಹಲ್ಲೆ ನಡೆಸಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ಆಗಸ್ಟ್‌ 12ರಂದು ರಾತ್ರಿ ಸುಮಾರು 8:15ಕ್ಕೆ ದೇವಸ್ಥಾನದ ಆವರಣದಲ್ಲೇ ಈ ಘಟನೆ ನಡೆದಿದೆ ಎನ್ನಲಾಗಿದೆ. … Continued

ಮಳೆ ಕೊರತೆ : ಏಷ್ಯಾದ ಮೊದಲ ಜಲವಿದ್ಯುತ್ ಸ್ಥಾವರ ಶಿವನಸಮುದ್ರದಲ್ಲಿ ವಿದ್ಯುತ್ ಉತ್ಪಾದನೆ ಸಂಪೂರ್ಣ ಸ್ಥಗಿತ

ಮಂಡ್ಯ: ರಾಜ್ಯದಲ್ಲಿ ಮುಂಗಾರು ಮಳೆ ಕೊರತೆಯಿಂದಾಗಿ ಕಾವೇರಿ ನದಿಯಲ್ಲಿ ನೀರಿನ ಹರಿವು ತೀವ್ರವಾಗಿ ಕಡಿಮೆಯಾಗಿರುವುದರಿಂದ ಕರ್ನಾಟಕದ ಐತಿಹಾಸಿಕ ಹಾಗೂ ಏಷ್ಯಾದ ಮೊದಲ ಜಲವಿದ್ಯುತ್ ಸ್ಥಾವರವಾದ ಶಿವನಸಮುದ್ರ ಜಲವಿದ್ಯುತ್ ಕೇಂದ್ರ ಕಳೆದ ಕೆಲ ದಿನಗಳಿಂದ ವಿದ್ಯುತ್ ಉತ್ಪಾದನೆಯನ್ನು ಸಂಪೂರ್ಣವಾಗಿ ಸ್ಥಗಿತಗೊಳಿಸಿದೆ. ಮಂಡ್ಯ ಜಿಲ್ಲೆಯ ಮಳವಳ್ಳಿ ತಾಲ್ಲೂಕಿನಲ್ಲಿರುವ ಶತಮಾನಕ್ಕೂ ಹೆಚ್ಚಿನ ಅವಧಿಯ ಇತಿಹಾಸ ಹೊಂದಿರುವ ಜಲವಿದ್ಯುತ್ ಕೇಂದ್ರದಲ್ಲಿ ವಿದ್ಯುತ್ … Continued

ಮಗ ಉದಯನಿಧಿ ಸನಾತನ ಧರ್ಮ ವಿರೋಧಿ ಹೇಳಿಕೆ ಬೆನ್ನಲ್ಲೇ ಕರ್ನಾಟಕದ ದೇಗುಲಗಳಿಗೆ ಭೇಟಿ ನೀಡಿದ ತಾಯಿ ದುರ್ಗಾ ಸ್ಟಾಲಿನ್…

ಮೈಸೂರು/ಮಂಡ್ಯ : ತಮಿಳುನಾಡಿನ ಮಾಜಿ ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರ ಪತ್ನಿ ದುರ್ಗಾ ಸ್ಟಾಲಿನ್ ಅವರು ಮೈಸೂರಿನ ಪ್ರಸಿದ್ಧ ಶ್ರೀ ಚಾಮುಂಡೇಶ್ವರಿ ದೇವಸ್ಥಾನಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದ್ದಾರೆ. ಅವರು ಮಂಡ್ಯ ಜಿಲ್ಲೆಯ ಪ್ರಸಿದ್ಧ ನಿಮಿಷಾಂಬಾ ದೇಗುಲಕ್ಕೂ ಭೇಟಿ ನೀಡಿ ಪ್ರಾರ್ಥಿಸಿದ್ದಾರೆ. ಮೈಸೂರಿನ ಅಧಿದೇವತೆ ತಾಯಿ ಚಾಮುಂಡೇಶ್ವರಿ ಸನ್ನಿಧಿಗೆ ಭೇಟಿ ನೀಡಿದ ದುರ್ಗಾ ಸ್ಟಾಲಿನ್ … Continued

ಮೂರು ಬಸ್‌ಗಳ ನಡುವೆ ಡಿಕ್ಕಿ : ಇಬ್ಬರು ಸಾವು, 30ಕ್ಕೂ ಹೆಚ್ಚು ಮಂದಿಗೆ ಗಾಯ

ಮಂಡ್ಯ : ಮಂಡ್ಯ ಜಿಲ್ಲೆಯಲ್ಲಿ ಭಾನುವಾರ ನಡೆದ ಮೂರು ಬಸ್ಸುಗಳು ಡಿಕ್ಕೆ ಹೊಡೆದ ಭೀಕರ ಅಪಘಾತದಲ್ಲಿ ಇಬ್ಬರು ಮೃತಪಟ್ಟು, 30ಕ್ಕೂ ಹೆಚ್ಚು ಮಂದಿ ಗಾಯಗೊಂಡ ಘಟನೆ ನಡೆದಿದೆ ಎಂದು ವರದಿಯಾಗಿದೆ. ಹತ್ತು ಮಂದಿ ಗಂಬೀರವಾಗಿ ಗಾಯಗೊಂಡಿದ್ದಾರೆ ಎಂದು ಹೇಳಲಾಗಿದೆ. ಮಂಡ್ಯ ಜಿಲ್ಲೆಯ ಬಚನಹಳ್ಳಿ ಬಳಿ ಮೂರು ಕೆಎಸ್‌ಆರ್‌ಟಿಸಿ (KSRTC) ಬಸ್‌ಗಳ ನಡುವೆ ಸರಣಿ ಡಿಕ್ಕಿ ಸಂಭವಿಸಿದೆ. … Continued

ಡಿಸಿಎಂ ಡಿಕೆ ಶಿವಕುಮಾರ ಬೆಂಗಾವಲು ವಾಹನ ಪಲ್ಟಿ

ಮಂಡ್ಯ: ಮೈಸೂರಿನಲ್ಲಿ ನಡೆದ ಕಾಂಗ್ರೆಸ್ ಸಾಧನಾ ಸಮಾವೇಶ ಕಾರ್ಯಕ್ರಮ ಮುಗಿಸಿ ಬೆಂಗಳೂರಿಗೆ ವಾಪಸ್ಸಾಗುತ್ತಿದ್ದಾಗ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ ಅವರ ಬೆಂಗಾವಲು ವಾಹನ ಅಪಘಾತಕ್ಕೀಡಾದ ಘಟನೆ ನಡೆದಿದೆ. ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣ ವ್ಯಾಪ್ತಿಯ ಎಕ್ಸ್‌ಪ್ರೆಸ್ ಹೈವೇಯ ಗೌಡಹಳ್ಳಿ ಟಿಎಂ ಹೊಸೂರು ಬಳಿಯ ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ ಹೈವೆಯಲ್ಲಿ ಈ ಘಟನೆ ನಡೆದಿದೆ. ಮೈಸೂರಿನಲ್ಲಿ ಕಾಂಗ್ರೆಸ್‌ ಕಾರ್ಯಕ್ರಮ ಮುಗಿಸಿ ಬೆಂಗಳೂರಿಗೆ … Continued

ವೀಡಿಯೊ…| ಶ್ರೀರಂಗಪಟ್ಟಣ : ಫೋಟೊಕ್ಕೆ ಪೋಸ್ ನೀಡುವಾಗ ಸೇತುವೆಯಿಂದ ನದಿಗೆ ಬಿದ್ದು ಕೊಚ್ಚಿ ಹೋದ ವ್ಯಕ್ತಿ

ಮಂಡ್ಯ : ಮಂಡ್ಯ ಜಿಲ್ಲೆಯಲ್ಲಿ ಪಿಕ್ನಿಕ್ ವೇಳೆ ಕಾವೇರಿ ನದಿ ಬಳಿ ಫೋಟೋ ತೆಗೆದುಕೊಳ್ಳಲು ಹೋಗಿ ನಿರ್ಮಾಣ ಹಂತದಲ್ಲಿರುವ ಸೇತುವೆಯಿಂದ ಆಯತಪ್ಪಿ ಬಿದ್ದು ವ್ಯಕ್ತಿಯೊಬ್ಬರು ನಾಪತ್ತೆಯಾದ ಘಟನೆ ಶ್ರೀರಂಗಪಟ್ಟಣದಲ್ಲಿ ಬಳಿ ನಡೆದಿದೆ ಎಂದು ವರದಿಯಾಗಿದೆ. ಸಾಮಾಜಿಕ ಮಾಧ್ಯಮದಲ್ಲಿ ಈ ದುರಂತದ ವೀಡಿಯೊ ವೈರಲ್ ಆಗಿದ್ದು, ಆಯತಪ್ಪಿ ಬಿದ್ದ ನಂತರ ವ್ಯಕ್ತಿ ಕಾವೇರಿ ನದಿಯ ಬಲವಾದ ಪ್ರವಾಹದಲ್ಲಿ … Continued

ಸಕಾರಣವಿಲ್ಲದೆ ರಸ್ತೆಯಲ್ಲಿ ವಾಹನ ತಡೆಯುವಂತಿಲ್ಲ, ಕೀ ಕಸಿಯುವಂತಿಲ್ಲ : ಪೊಲೀಸರಿಗೆ ಡಿಜಿಪಿ ಖಡಕ್‌ ಸೂಚನೆ

ಬೆಂಗಳೂರು : ಇತ್ತೀಚೆಗೆ ಮಂಡ್ಯ ಜಿಲ್ಲೆಯಲ್ಲಿ ಸಂಚಾರ ನಿಯಮ ಉಲ್ಲಂಘಿಸುವ ವಾಹನಗಳ ತಪಾಸಣೆ ವೇಳೆ ಅಪಘಾತಕ್ಕೀಡಾಗಿ ಮಗು ಸಾವಿಗೀಡಾದ ಘಟನೆ ನಡೆದ ಹಿನ್ನೆಲೆಯಲ್ಲಿ ರಸ್ತೆಯಲ್ಲಿ ಸಂಚಾರ ಪೊಲೀಸರ ವಾಹನ ತಪಾಸಣೆಗೆ ರಾಜ್ಯ ಪೊಲೀಸ್ ಮಹಾನಿರ್ದೇಶಕರು ಹಲವಾರು ಸೂಚನೆಗಳನ್ನು ನೀಡಿದ್ದಾರೆ. ಈ ಸಂಬಂಧ ಶನಿವಾರ ಸುತ್ತೋಲೆ ಹೊರಡಿಸಿರುವ ಡಿಜಿಪಿ-ಐಜಿಪಿ ಡಾ. ಎಂ.ಎ.ಸಲೀಂ, ಕಣ್ಣಿಗೆ ಕಾಣುವಂತೆ ಸಂಚಾರ ನಿಯಮ … Continued

ನಾಲೆಗೆ ಹಾರಿ ಒಂದೇ ಕುಟುಂಬದ ಮೂವರು ಆತ್ಮಹತ್ಯೆ

ಮಂಡ್ಯ: ಒಂದೇ ಕುಟುಂಬದ ಮೂವರು ವಿಷ ಸೇವಿಸಿ, ನಂತರ ವಿಸಿ ನಾಲೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಸೋಮವಾರ ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣದಲ್ಲಿ ನಡೆದಿದೆ ಎಂದು ವರದಿಯಾಗಿದೆ. ಮೃತರನ್ನು ಮಾಸ್ತಪ್ಪ, ಪತ್ನಿ ರತ್ನಮ್ಮ ಹಾಗೂ ಮಗಳು ಲಕ್ಷ್ಮೀ ಎಂದು ಗುರುತಿಸಲಾಗಿದ್ದು, ದಂಪತಿಯ ಮೃತದೇಹ ಪತ್ತೆ ಆಗಿದೆ. ಮಗಳ ಮೃತದೇಹಕ್ಕಾಗಿ ಶೋಧಕಾರ್ಯ ಮುಂದುವರಿದಿದೆ. ಮೃತರು ಶ್ರೀರಂಗಪಟ್ಟಣದ ಗಂಜಾಂ … Continued

ಮಂಡ್ಯ…| ಆಟದ ಗನ್ ಎಂದು ಭಾವಿಸಿ ಮಕ್ಕಳು ಆಟವಾಡುತ್ತಿದ್ದಾಗ ಅಸಲಿ ಗನ್‌ ನಿಂದ ಹಾರಿದ ಗುಂಡು; 3 ವರ್ಷದ ಬಾಲಕ ಸಾವು

ಮಂಡ್ಯ: ಅಣ್ಣ ತಮ್ಮ ಆಟವಾಡುತ್ತಿದ್ದಾಗ ಆಕಸ್ಮಿಕವಾಗಿ ಗುಂಡು ಸಿಡಿದು (Firing) 3 ವರ್ಷದ ಮಗು ಮೃತಪಟ್ಟ ಘಟನೆ ಮಂಡ್ಯ ಜಿಲ್ಲೆಯ ನಾಗಮಂಗಲ ತಾಲೂಕಿನ ದೊಂದೆಮಾದಿಹಳ್ಳಿಯ ಕೋಳಿ ಫಾರಂ ಒಂದರಲ್ಲಿ ಭಾನುವಾರ (ಫೆ. 16) ನಡೆದಿದೆ ಎಂದು ವರದಿಯಾಗಿದೆ. ಮಕ್ಕಳು ಅದು ನಿಜವಾದ ಬಂದೂಕು ಎಂದು ತಿಳಿಯದೆ ಆಟವಾಡುವ ಬಂದೂಕು ಎಂದು ತಿಳದು ಆಟವಾಡುತ್ತಿದ್ದಾಗ ಆಕಸ್ಮಿಕವಾಗಿ ಗುಂಡು … Continued