ಮಂಗಳೂರು : ನಾಲ್ವರು ಮಕ್ಕಳಿಗೆ ಜನ್ಮ ನೀಡಿದ ಮಹಾತಾಯಿ…!

ಮಂಗಳೂರು : ನಗರದ ಕಂಕನಾಡಿಯ ಫಾದರ್ ಮುಲ್ಲರ್ ಆಸ್ಪತ್ರೆಯಲ್ಲಿ ಮಹಿಳೆಯೊಬ್ಬರು ನಾಲ್ಕು ಮಕ್ಕಳಿಗೆ ಜನ್ಮ ನೀಡಿದ್ದಾರೆ. ವೈದ್ಯರ ತಂಡ ಶಸ್ತ್ರಚಿಕಿತ್ಸೆ ಮೂಲಕ ಹೆರಿಗೆ ಮಾಡಿಸಿದ್ದು, ತಾಯಿ ಮಕ್ಕಳು ಆರೋಗ್ಯವಾಗಿದ್ದಾರೆ ಎಂದು ವೈದ್ಯರು ತಿಳಿಸಿದ್ದಾರೆ. ತೆಲಂಗಾಣ ರಾಜ್ಯದ ತೇಜ ಎಂಬುವವರ ಪತ್ನಿ ಬಾನೋತ್ ದುರ್ಗಾ ಅವರು ನಾಲ್ವರು ಶಿಶುಗಳಿಗೆ ಜನ್ಮ ನೀಡಿದ ಮಹಾತಾಯಿಯಾಗಿದ್ದಾರೆ. ದುರ್ಗಾ ಅವರು ಎರಡು … Continued

4 ಲಕ್ಷ ರೂ. ಲಂಚ ಪಡೆದ ಆರೋಪ ; ಕಂದಾಯ ನಿರೀಕ್ಷಕ ಲೋಕಾಯುಕ್ತ ಬಲೆಗೆ

ಮಂಗಳೂರು : ಆಸ್ತಿಯೊಂದರ ಪಹಣಿಯಲ್ಲಿ ವಾರಸುದಾರರ ಹೆಸರು ಸೇರ್ಪಡೆ ಮಾಡಲು 4 ಲಕ್ಷ ರೂ.ಗಳ ಲಂಚ ಪಡೆದ ಆರೋಪದ ಮೇಲೆ ಕಂದಾಯ ನಿರೀಕ್ಷಕ ಜಿ.ಎಸ್.ದಿನೇಶ ಅವರನ್ನು ಗುರುವಾರ (ಡಿ.19) ಲೋಕಾಯುಕ್ತ ಪೊಲೀಸರು ಬಂಧಿಸಿದ್ದಾರೆ. ವ್ಯಕ್ತಿಯೊಬ್ಬರು ಮೃತಪಟ್ಟ ಅಜ್ಜಿಯ ಹೆಸರಿನಲ್ಲಿದ್ದ ಆಸ್ತಿಯ ಪಹಣಿಯಲ್ಲಿ ವಾರಸುದಾರರ ಹೆಸರನ್ನು ಸೇರಿಸಲು ಕಳೆದ ವರ್ಷ ಮುಲ್ಕಿ ತಾಲೂಕು ತಹಶೀಲ್ದಾರ ಕಚೇರಿಗೆ ಅರ್ಜಿ … Continued

ಮಂಗಳೂರು : ಕಾಂಗ್ರೆಸ್ ವಿಧಾನ ಪರಿಷತ್ ಸದಸ್ಯ ಐವನ್ ಡಿಸೋಜಾ ಮನೆ ಮೇಲೆ ಕಲ್ಲು ತೂರಾಟ

ಮಂಗಳೂರು : ಕಾಂಗ್ರೆಸ್ ನಾಯಕ ಹಾಗೂ ವಿಧಾನಪರಿಷತ್ ಸದಸ್ಯ ಐವನ್​ ಡಿಸೋಜಾ ಅವರ ಮನೆ ಮೇಲೆ ಬುಧವಾರ ರಾತ್ರಿ ಕಲ್ಲು ತೂರಾಟ ನಡೆಸಲಾಗಿದೆ. ಬುಧವಾರ ರಾತ್ರಿ ಸುಮಾರು 11 ಗಂಟೆಗೆ ಘಟನೆ ನಡೆದಿದೆ ಎನ್ನಲಾಗಿದಗ್ದು, ಈ ವೇಳೆ ಐವನ್ ಡಿಸೋಜಾ ಬೆಂಗಳೂರಿನಲ್ಲಿ ಪಕ್ಷದ ಸಭೆಗೆ ಹೋಗಿದ್ದರು. ಸುಮಾರು 5 ರಿಂದ 6 ಜನರ ಗುಂಪು ರಾತ್ರಿ … Continued

ಮಂಗಳೂರು ಶಾಲಾ ವಿವಾದ : ಇಬ್ಬರು ಬಿಜೆಪಿ ಶಾಸಕರ ಮೇಲೆ ಪ್ರಕರಣ ದಾಖಲು

ಮಂಗಳೂರು: ನಗರದ ವೆಲೆನ್ಸಿಯಾ ಸಂತ ಜೆರೋಸಾ ಶಾಲಾ ಶಿಕ್ಷಕಿ ಹಿಂದೂ ಧರ್ಮದ ಬಗ್ಗೆ ಅವಹೇಳನ ಮಾಡಿದ್ದಾರೆಂಬ ಆರೋಪಿತ ಪ್ರಕರಣಕ್ಕೆ ಸಂಬಂಧಿಸಿದ ಪ್ರತಿಭಟನೆ ವೇಳೆ ಶಾಲಾ ಮಂಡಳಿಗೆ ಬೆದರಿಕೆ ಹಾಕಿದ್ದಾರೆಂಬ ಆರೋಪದ ಮೇಲೆ ಇಬ್ಬರು ಶಾಸಕರು ಹಾಗೂ ಇತರರ ವಿರುದ್ಧ ಪಾಂಡೇಶ್ವರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ ಎಂದು ವರದಿಯಾಗಿದೆ. ಶಿಕ್ಷಕಿ ಅಮಾನತಿಗೆ ಆಗ್ರಹಿಸಿ ಪ್ರತಿಭಟನೆ ನಡೆಸಿದ್ದ … Continued

ಖ್ಯಾತ ಕನ್ನಡ-ತುಳು ಸಾಹಿತಿ, ಜಾನಪದ-ಯಕ್ಷಗಾನ ವಿದ್ವಾಂಸ ಪ್ರೊ. ‌ಅಮೃತ ಸೋಮೇಶ್ವರ ಇನ್ನಿಲ್ಲ

ಮಂಗಳೂರು : ಕನ್ನಡದ ಖ್ಯಾತ ಸಾಹಿತಿ, ಜಾನಪದ ವಿದ್ವಾಂಸ ಹಾಗೂ ಯಕ್ಷಗಾನ ಪ್ರಸಂಗ ಕರ್ತೃ ಪ್ರೊ.ಅಮೃತ ಸೋಮೇಶ್ವರ (89) ಅವರು ಶನಿವಾರ (ಜನವರಿ 6) ಬೆಳಿಗ್ಗೆ ನಿಧನರಾದರು. ಅವರು ವಯೋಸಹಜವಾಗಿ ಶನಿವಾರ ಬೆಳಿಗ್ಗೆ ತಮ್ಮ ಸ್ವಗೃಹ ಸೋಮೇಶ್ವರದ ‘ಒಲುಮೆ’ಯಲ್ಲಿ ನಿಧನರಾದರು. ಅಮೃತ ಸೋಮೇಶ್ವರ ಅವರಿಗೆ ಪತ್ನಿ ನರ್ಮದಾ, ಮಕ್ಕಳಾದ ಚೇತನ ಸೋಮೇಶ್ವರ, ಜೀವನ ಸೋಮೇಶ್ವರ ಇದ್ದಾರೆ. … Continued

ಮಂಗಳೂರು : ಕರ್ಣಾಟಕ ಬ್ಯಾಂಕ್ ಹಿರಿಯ ಅಧಿಕಾರಿ ಶವವಾಗಿ ಪತ್ತೆ

ಮಂಗಳೂರು: ಚಾಕುವಿನಿಂದ ಇರಿದುಕೊಂಡು ಕರ್ನಾಟಕ ಬ್ಯಾಂಕಿನ ಹಿರಿಯ ಅಧಿಕಾರಿಯೊಬ್ಬರು ಬೋಂದೆಲ್ ನಲ್ಲಿರುವ ಅಪಾರ್ಟ್ ಮೆಂಟಿನಲ್ಲಿ ಅನುಮಾನಾಸ್ಪದ ರೀತಿಯಲ್ಲಿ ಸಾವಿಗೀಡಾದ ಘಟನೆ ಮಂಗಳೂರಿನಲ್ಲಿ ಗುರುವಾರ ನಡೆದಿದೆ ಎಂದು ವರದಿಯಾಗಿದೆ. ನಗರದ ಪಂಪ್‌ವೆಲ್‌ನಲ್ಲಿರುವ ಕರ್ಣಾಟಕ ಬ್ಯಾಂಕ್ ಪ್ರಧಾನ ಕಚೇರಿಯಲ್ಲಿ ಚೀಫ್ ಕಂಪ್ಲೇಂಟ್ ಆಫೀಸರ್(ಸಿಸಿಒ) ಆಗಿರುವ ವಾದಿರಾಜ ಕೆ.ಎ.(51) ಎಂಬವರು ಮೃತಪಟ್ಟ ವ್ಯಕ್ತಿ. ಅವರು ಪತ್ನಿ ಹಾಗೂ ಇಬ್ಬರು ಮಕ್ಕಳನ್ನು … Continued

ವಿಎಚ್‌ಪಿ ಮುಖಂಡನ ಮೇಲೆ ದಾಖಲಿಸಿರುವ ಎಫ್‌ಐಆರ್‌ಗೆ ಹೈಕೋರ್ಟ್‌ ಮಧ್ಯಂತರ ತಡೆ

ಬೆಂಗಳೂರು : ಕೋಮು ಸೌಹಾರ್ದತೆಗೆ ಧಕ್ಕೆ ತರುವ ಚಟುವಟಿಕೆಯಲ್ಲಿ ತೊಡಗಿರುವ ಆರೋಪದ ಮೇಲೆ ವಿಶ್ವ ಹಿಂದೂ ಪರಿಷತ್ ಮುಖಂಡ ಶರಣ ಪಂಪ್‌ವೆಲ್ ವಿರುದ್ಧ ಮಂಗಳೂರು ನಗರ ದಕ್ಷಿಣ ಠಾಣಾ ಪೊಲೀಸರು ದಾಖಲಿಸಿರುವ ಎಫ್‌ಐಆರ್‌ಗೆ ಹೈಕೋರ್ಟ್ ಮಧ್ಯಂತರ ತಡೆ ನೀಡಿದೆ. ಮಂಗಳೂರಿನ ಮಂಗಳಾದೇವಿ ಜಾತ್ರೆಯಲ್ಲಿ ಭಗವಾಧ್ವಜ ಕಟ್ಟಿರುವ ಹಿಂದೂಗಳ ಮಳಿಗೆಗಳಲ್ಲಿ ಮಾತ್ರವೇ ಹಿಂದೂ ಗ್ರಾಹಕರು ವ್ಯಾಪಾರ ಮಾಡಬೇಕು … Continued

ಕಚೇರಿಯಲ್ಲೇ ಆತ್ಮಹತ್ಯೆ ಮಾಡಿಕೊಂಡ ಮಂಗಳೂರು ಅಭಿವೃದ್ಧಿ ಪ್ರಾಧಿಕಾರ ಸಿಬ್ಬಂದಿ

ಮಂಗಳೂರು: ನೌಕರನೊಬ್ಬ ಮಂಗಳೂರು ನಗರಾಭಿವೃದ್ಧಿ ಪ್ರಾಧಿಕಾರ(ಮುಡಾ)ದ ಕಚೇರಿಯಲ್ಲಿಯೇ ಆತ್ಮಹತ್ಯೆ ಮಾಡಿಕೊಂಡ ಘಟನೆ ಶುಕ್ರವಾರ ನಡೆದಿದೆ. ಮಂಗಳೂರು ನಗರಾಭಿವೃದ್ಧಿ ಪ್ರಾಧಿಕಾರದ ಸಿಬ್ಬಂದಿ ಇಲ್ಲಿನ ಮುಡಾ ಕಚೇರಿ ಉರ್ವದ ಸ್ಟೋರ್ ರೂಂನಲ್ಲಿ ಜೂನ್ 2 ರಂದು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಆಘಾತಕಾರಿ ಘಟನೆ ನಡೆದಿದೆ. ಮೃತರನ್ನು ಪಡೀಲ ಮೂಲದ ಕೀರ್ತನ್ (30) ಎಂದು ಗುರುತಿಸಲಾಗಿದೆ. ಅವರು ಮಂಗಳೂರು … Continued

ಮಂಗಳೂರು: ಜ್ಯುವೆಲ್ಲರಿ ಅಂಗಡಿಯಲ್ಲಿ ಹಾಡಹಗಲೇ ಚೂರಿಯಿಂದ ಇರಿದು ಸಿಬ್ಬಂದಿ ಕೊಲೆ

ಮಂಗಳೂರು : ಜ್ಯುವೆಲ್ಲರಿ ಅಂಗಡಿಯ ಸಿಬ್ಬಂದಿಗೆ ಚೂರಿ ಇರಿದ ಕೊಲೆ ಮಾಡಿರುವ ಘಟನೆ ನಗರದ ಹಂಪನಕಟ್ಟೆ ಮಿಲಾಗ್ರಿಸ್ ಸಮೀಪ ಶುಕ್ರವಾರ ನಡೆದ ವರದಿಯಾಗಿದೆ. ಕೊಲೆಯಾದ ಸಿಬ್ಬಂದಿಯನ್ನು ಜುವೆಲ್ಲರಿ ಉದ್ಯೋಗಿ, ಅತ್ತಾವರ ನಿವಾಸಿ ರಾಘವೇಂದ್ರ (52) ಎಂದು ಹೇಳಲಾಗಿದೆ. ಮಧ್ಯಾಹ್ನ ಮುಸುಕು ಹಾಕಿಕೊಂಡು ಬಂದಿದ್ದ ವ್ಯಕ್ತಿ ಈ ಕೃತ್ಯ ಎಸಗಿದ್ದು, ಜ್ಯುವೆಲ್ಲರಿ ಮಾಲೀಕ ಊಟಕ್ಕೆಂದು ತೆರಳಿದ್ದಾಗ ಮುಸಕುಕುಧಾರಿ … Continued

ಮಂಗಳೂರು: ಅಪಾರ್ಟ್ಮೆಂಟಿನಲ್ಲಿ ದಂಪತಿ ಶವವಾಗಿ ಪತ್ತೆ

ಮಂಗಳೂರು: ಮಂಗಳೂರಿನ ಬಿಜೈನ ಅಪಾರ್ಟ್‌ಮೆಂಟ್‌ ಒಂದರಲ್ಲಿ ದಂಪತಿ ಶವವಾಗಿ ಪತ್ತೆಯಾಗಿದೆ. ಮೃತರನ್ನು ಬಿಜೈ ನಿವಾಸಿಗಳಾದ ನಿವೃತ್ತ ಕೆನರಾ ಬ್ಯಾಂಕ್ ಮ್ಯಾನೇಜರ್ ದಿನೇಶ್ ರಾವ್ (65) ಹಾಗೂ ಶೈಲಜಾ (64) ಎಂದು ಗುರುತಿಸಲಾಗಿದೆ. ಶೈಲಜಾ ಅವರು ಅನಾರೋಗ್ಯದ ಹಿನ್ನೆಲೆಯಲ್ಲಿ ಹಾಸಿಗೆ ಹಿಡಿದಿದ್ದರು. ಇವರನ್ನು ನೋಡಿಕೊಳ್ಳಲು ರಾತ್ರಿ ಮತ್ತು ಬೆಳಿಗ್ಗೆ ಹೊತ್ತಿನಲ್ಲಿ ಇಬ್ಬರು ಹೋಮ್ ನರ್ಸ್‌ಗಳು ಬಂದು ಹೋಗುತ್ತಿದ್ದರು. … Continued