ಮಂಗಳೂರು : ಮೊಬೈಲ್‌ ಫೋನ್‌ ವಿಚಾರಕ್ಕೆ ಜಗಳ ; ಅಣ್ಣನನ್ನೇ ಚಾಕುವಿನಿಂದ ಇರಿದು ಕೊಂದ ತಮ್ಮ

ಮಂಗಳೂರು : ಮೊಬೈಲ್‌ ಫೋನ್‌ ವಿಚಾರವಾಗಿ ಉಂಟಾದ ಜಗಳ ವಿಕೋಪಕ್ಕೆ ತಿರುಗಿ, ತಮ್ಮ ತನ್ನ ಅಣ್ಣನನ್ನು ಚಾಕುವಿನಿಂದ ಇರಿದು ಕೊಲೆ ಮಾಡಿದ ಘಟನೆ ಮಂಗಳೂರಿನ ಕೊಟ್ಟಾರ ಕ್ರಾಸ್‌ ಸಮೀಪ ಭಾನುವಾರ ತಡರಾತ್ರಿ ನಡೆದಿದೆ ಎಂದು ವರದಿಯಾಗಿದೆ. ಮೃತ ವ್ಯಕ್ತಿಯನ್ನು 40 ವರ್ಷದ ಅಡಿವಪ್ಪ ಎಂದು ಗುರುತಿಸಲಾಗಿದ್ದು, ಆರೋಪಿ 36 ವರ್ಷದ ತಮ್ಮ ರಾಜು ಎಂದು ಪೊಲೀಸರು … Continued

ಮಂಗಳೂರು : ವಂದೇ ಮಾತರಂಗೆ ಅಪಮಾನ ಆರೋಪ ; ಸೋನಿಯಾ ಗಾಂಧಿ ವಿರುದ್ಧ ದೂರು

ಮಂಗಳೂರು: ಸ್ವಾತಂತ್ರ್ಯೋತ್ಸವದಂದು ಕಾಂಗ್ರೆಸ್‌ ಪ್ರಧಾನ ಕಚೇರಿಯಲ್ಲಿ ನಡೆದ ‘ವಂದೇ ಮಾತರಂ’ ಗಾಯನಕ್ಕೆ ಸಂಬಂಧಿಸಿದ ವಿವಾದ ತೀವ್ರಗೊಂಡಿದ್ದು, ಬಿಜೆಪಿ ನಾಯಕರು ಕಾಂಗ್ರೆಸ್‌ ನಾಯಕಿ ಸೋನಿಯಾ ಗಾಂಧಿ ವಿರುದ್ಧ ಮಂಗಳೂರಿನ ಉರ್ವಾ ಪೊಲೀಸ್‌ ಠಾಣೆಯಲ್ಲಿ ಭಾನುವಾರ ದೂರು ದಾಖಲಿಸಿದ್ದಾರೆ. ಸೋನಿಯಾ ಗಾಂಧಿ ವಂದೇ ಮಾತರಂಗೆ (Vande Mataram Row) ಅಪಮಾನ ಮಾಡಿದ್ದಾರೆಂದು ಆರೋಪಿಸಿ ಈ ದೂರು ನೀಡಲಾಗಿದೆ. ರಾಷ್ಟ್ರೀಯ … Continued

ವಾಲಿಬಾಲ್ ಆಡುತ್ತಿದ್ದಾಗ ಏಕಾಏಕಿ ಕುಸಿದು ಬಿದ್ದು 10ನೇ ತರಗತಿ ವಿದ್ಯಾರ್ಥಿ ಸಾವು

ಮಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯ ಸುರತ್ಕಲ್ ಸಮೀಪದ ಸುರಿಂಜೆ ಗ್ರಾಮದಲ್ಲಿ ಸ್ನೇಹಿತರೊಂದಿಗೆ ವಾಲಿಬಾಲ್ ಆಡುತ್ತಿದ್ದ ವೇಳೆ 15 ವರ್ಷದ ಬಾಲಕ ಏಕಾಏಕಿ ಕುಸಿದು ಬಿದ್ದು ಮೃತಪಟ್ಟಿರುವ ದುರ್ಘಟನೆ ನಡೆದಿದೆಎಂದು ವರದಿಯಾಗಿದೆ. ಮೃತ ಬಾಲಕನನ್ನು ಲಿಖಿತ್ ಅಮೀನ್ ಎಂದು ಗುರುತಿಸಲಾಗಿದ್ದು, ಆತ ಸುರಿಂಜೆಯ ಕೋಟೆ ಬೊಳ್ಳಾರು ಸರ್ಕಾರಿ ಪ್ರೌಢಶಾಲೆಯ ಎಸ್‌ಎಸ್‌ಎಲ್‌ಸಿ (10ನೇ ತರಗತಿ) ವಿದ್ಯಾರ್ಥಿ. ಸುರಿಂಜೆ … Continued

ಮಂಗಳೂರು : ಬೆಳ್ಳಂಬೆಳಿಗ್ಗೆ ರೌಡಿಶೀಟರ್ ಕೊಲೆ

ಮಂಗಳೂರು: ನಗರದ ಹೊರವಲಯದ‌ ತೊಕ್ಕೊಟ್ಟು ಬಳಿ ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಕೊಚ್ಚಿ ರೌಡಿ ಶೀಟರನನ್ನು ಕೊಲೆ ಮಾಡಿದ ಘಟನೆ ಶುಕ್ರವಾರ ಬೆಳ್ಳಬೆಳಿಗ್ಗೆ ನಡೆದಿದ್ದು, ತೊಕ್ಕೊಟ್ಟು ಫ್ಲೈ ಓವರ್ ಬ್ರಿಜ್ ಮೇಲೆ ಹತ್ಯೆ ಮಾಡಲಾಗಿದೆ ಎಂದು ವರದಿಯಾಗಿದೆ. ಮೃತನನ್ನು 46 ವರ್ಷದ ರೌಡಿಶೀಟರ್ ಆರಿಫ್ ಯಾನೆ ಟಾಬ್ಲೆಟ್ ಆರಿಫ್ ಎಂದು ಗುರುತಿಸಲಾಗಿದೆ. ಆರಿಫ್ ಯಾನೆ ಟಾಬ್ಲೆಟ್ ಆರಿಫ್, ಮುಳ್ಳುಗುಡ್ಡೆ … Continued

ಕಪ್ಪೆಕೆರೆ ಸೇರಿ ಮೂವರು ಸಾಧಕರು ಯಕ್ಷಮಂಗಳ ಪ್ರಶಸ್ತಿಗೆ ಆಯ್ಕೆ, ಕೃಷ್ಣಪ್ರಕಾಶರಿಗೆ ಕೃತಿ ಪ್ರಶಸ್ತಿ

ಮಂಗಳೂರು : ಮಂಗಳೂರು ವಿಶ್ವವಿದ್ಯಾನಿಲಯದ ಡಾ.ಪಿ.ದಯಾನಂದ ಪೈ ಮತ್ತು ಪಿ.ಸತೀಶ ಪೈ ಯಕ್ಷಗಾನ ಅಧ್ಯಯನ ಕೇಂದ್ರದ 2025-26ನೇ ಸಾಲಿನ ಯಕ್ಷಮಂಗಳ ಪ್ರಶಸ್ತಿಗೆ ಯಕ್ಷಗಾನ ರಂಗದ ಹಿರಿಯ ಭಾಗವತರಾದ ಕಪ್ಪೆಕೆರೆ ಸುಬ್ರಾಯ ಭಾಗವತ, ಯಕ್ಷಗಾನ ಗುರುಗಳಾದ ಮಾಂಬಾಡಿ ಸುಬ್ರಹ್ಮಣ್ಯ ಭಟ್, ಹಿರಿಯ ಯಕ್ಷಗಾನ ಅರ್ಥಧಾರಿ ಜಬ್ಬಾರ್ ಸಮೊ ಆಯ್ಕೆಯಾಗಿದ್ದಾರೆ. ಯಕ್ಷಮಂಗಳ ಕೃತಿ ಪ್ರಶಸ್ತಿಗೆ ಕೃಷ್ಣಪ್ರಕಾಶ ಉಳಿಯತ್ತಾಯ ಅವರ … Continued

ಮಂಗಳೂರು | ಎಂಆರ್ ಪಿಎಲ್ ಘಟಕದಲ್ಲಿ ವಿಷಾನಿಲ ಸೋರಿಕೆ ; ಇಬ್ಬರು ಸಾವು

ಮಂಗಳೂರು : ಎಂಆರ್‌ಪಿಎಲ್‌ ಘಟಕದಲ್ಲಿ ವಿಷಾನಿಲ ಅನಿಲ ಸೋರಿಕೆಯಾಗಿ ಇಬ್ಬರು ಕಾರ್ಮಿಕರು ಮೃತಪಟ್ಟಿದ್ದು, ಓರ್ವ ಅಸ್ವಸ್ಥಗೊಂಡಿರುವ ಘಟನೆ ಸಂಭವಿಸಿದೆ ಎಂದು ವರದಿಯಾಗಿದೆ. ಎಂಆರ್ ಪಿಎಲ್ ನ ಒಮ ಮತ್ತು ಎಸ್‌ (OM‌‌‌‌&S) ಘಟಕದ ಶೇಖರಣಾ ಪ್ರದೇಶದಲ್ಲಿ ಈ ಘಟನೆ ನಡೆದಿದೆ ಎನ್ನಲಾಗಿದೆ. ಮೃತರು ಪ್ರಯಾಗರಾಜ್‌ನ ದೀಪಚಂದ್ರ (33) ಮತ್ತು ಕೇರಳದ ಬಿಜಿಲ್‌ಪ್ರಸಾದ (33) ಎಂದು ಗುರುತಿಸಲಾಗಿದೆ. … Continued

ಮಂಗಳೂರು : ನಾಲ್ವರು ಮಕ್ಕಳಿಗೆ ಜನ್ಮ ನೀಡಿದ ಮಹಾತಾಯಿ…!

ಮಂಗಳೂರು : ನಗರದ ಕಂಕನಾಡಿಯ ಫಾದರ್ ಮುಲ್ಲರ್ ಆಸ್ಪತ್ರೆಯಲ್ಲಿ ಮಹಿಳೆಯೊಬ್ಬರು ನಾಲ್ಕು ಮಕ್ಕಳಿಗೆ ಜನ್ಮ ನೀಡಿದ್ದಾರೆ. ವೈದ್ಯರ ತಂಡ ಶಸ್ತ್ರಚಿಕಿತ್ಸೆ ಮೂಲಕ ಹೆರಿಗೆ ಮಾಡಿಸಿದ್ದು, ತಾಯಿ ಮಕ್ಕಳು ಆರೋಗ್ಯವಾಗಿದ್ದಾರೆ ಎಂದು ವೈದ್ಯರು ತಿಳಿಸಿದ್ದಾರೆ. ತೆಲಂಗಾಣ ರಾಜ್ಯದ ತೇಜ ಎಂಬುವವರ ಪತ್ನಿ ಬಾನೋತ್ ದುರ್ಗಾ ಅವರು ನಾಲ್ವರು ಶಿಶುಗಳಿಗೆ ಜನ್ಮ ನೀಡಿದ ಮಹಾತಾಯಿಯಾಗಿದ್ದಾರೆ. ದುರ್ಗಾ ಅವರು ಎರಡು … Continued

4 ಲಕ್ಷ ರೂ. ಲಂಚ ಪಡೆದ ಆರೋಪ ; ಕಂದಾಯ ನಿರೀಕ್ಷಕ ಲೋಕಾಯುಕ್ತ ಬಲೆಗೆ

ಮಂಗಳೂರು : ಆಸ್ತಿಯೊಂದರ ಪಹಣಿಯಲ್ಲಿ ವಾರಸುದಾರರ ಹೆಸರು ಸೇರ್ಪಡೆ ಮಾಡಲು 4 ಲಕ್ಷ ರೂ.ಗಳ ಲಂಚ ಪಡೆದ ಆರೋಪದ ಮೇಲೆ ಕಂದಾಯ ನಿರೀಕ್ಷಕ ಜಿ.ಎಸ್.ದಿನೇಶ ಅವರನ್ನು ಗುರುವಾರ (ಡಿ.19) ಲೋಕಾಯುಕ್ತ ಪೊಲೀಸರು ಬಂಧಿಸಿದ್ದಾರೆ. ವ್ಯಕ್ತಿಯೊಬ್ಬರು ಮೃತಪಟ್ಟ ಅಜ್ಜಿಯ ಹೆಸರಿನಲ್ಲಿದ್ದ ಆಸ್ತಿಯ ಪಹಣಿಯಲ್ಲಿ ವಾರಸುದಾರರ ಹೆಸರನ್ನು ಸೇರಿಸಲು ಕಳೆದ ವರ್ಷ ಮುಲ್ಕಿ ತಾಲೂಕು ತಹಶೀಲ್ದಾರ ಕಚೇರಿಗೆ ಅರ್ಜಿ … Continued

ಮಂಗಳೂರು : ಕಾಂಗ್ರೆಸ್ ವಿಧಾನ ಪರಿಷತ್ ಸದಸ್ಯ ಐವನ್ ಡಿಸೋಜಾ ಮನೆ ಮೇಲೆ ಕಲ್ಲು ತೂರಾಟ

ಮಂಗಳೂರು : ಕಾಂಗ್ರೆಸ್ ನಾಯಕ ಹಾಗೂ ವಿಧಾನಪರಿಷತ್ ಸದಸ್ಯ ಐವನ್​ ಡಿಸೋಜಾ ಅವರ ಮನೆ ಮೇಲೆ ಬುಧವಾರ ರಾತ್ರಿ ಕಲ್ಲು ತೂರಾಟ ನಡೆಸಲಾಗಿದೆ. ಬುಧವಾರ ರಾತ್ರಿ ಸುಮಾರು 11 ಗಂಟೆಗೆ ಘಟನೆ ನಡೆದಿದೆ ಎನ್ನಲಾಗಿದಗ್ದು, ಈ ವೇಳೆ ಐವನ್ ಡಿಸೋಜಾ ಬೆಂಗಳೂರಿನಲ್ಲಿ ಪಕ್ಷದ ಸಭೆಗೆ ಹೋಗಿದ್ದರು. ಸುಮಾರು 5 ರಿಂದ 6 ಜನರ ಗುಂಪು ರಾತ್ರಿ … Continued

ಮಂಗಳೂರು ಶಾಲಾ ವಿವಾದ : ಇಬ್ಬರು ಬಿಜೆಪಿ ಶಾಸಕರ ಮೇಲೆ ಪ್ರಕರಣ ದಾಖಲು

ಮಂಗಳೂರು: ನಗರದ ವೆಲೆನ್ಸಿಯಾ ಸಂತ ಜೆರೋಸಾ ಶಾಲಾ ಶಿಕ್ಷಕಿ ಹಿಂದೂ ಧರ್ಮದ ಬಗ್ಗೆ ಅವಹೇಳನ ಮಾಡಿದ್ದಾರೆಂಬ ಆರೋಪಿತ ಪ್ರಕರಣಕ್ಕೆ ಸಂಬಂಧಿಸಿದ ಪ್ರತಿಭಟನೆ ವೇಳೆ ಶಾಲಾ ಮಂಡಳಿಗೆ ಬೆದರಿಕೆ ಹಾಕಿದ್ದಾರೆಂಬ ಆರೋಪದ ಮೇಲೆ ಇಬ್ಬರು ಶಾಸಕರು ಹಾಗೂ ಇತರರ ವಿರುದ್ಧ ಪಾಂಡೇಶ್ವರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ ಎಂದು ವರದಿಯಾಗಿದೆ. ಶಿಕ್ಷಕಿ ಅಮಾನತಿಗೆ ಆಗ್ರಹಿಸಿ ಪ್ರತಿಭಟನೆ ನಡೆಸಿದ್ದ … Continued