ಮಂಗಳೂರು : ಮೊಬೈಲ್‌ ಫೋನ್‌ ವಿಚಾರಕ್ಕೆ ಜಗಳ ; ಅಣ್ಣನನ್ನೇ ಚಾಕುವಿನಿಂದ ಇರಿದು ಕೊಂದ ತಮ್ಮ

ಮಂಗಳೂರು : ಮೊಬೈಲ್‌ ಫೋನ್‌ ವಿಚಾರವಾಗಿ ಉಂಟಾದ ಜಗಳ ವಿಕೋಪಕ್ಕೆ ತಿರುಗಿ, ತಮ್ಮ ತನ್ನ ಅಣ್ಣನನ್ನು ಚಾಕುವಿನಿಂದ ಇರಿದು ಕೊಲೆ ಮಾಡಿದ ಘಟನೆ ಮಂಗಳೂರಿನ ಕೊಟ್ಟಾರ ಕ್ರಾಸ್‌ ಸಮೀಪ ಭಾನುವಾರ ತಡರಾತ್ರಿ ನಡೆದಿದೆ ಎಂದು ವರದಿಯಾಗಿದೆ. ಮೃತ ವ್ಯಕ್ತಿಯನ್ನು 40 ವರ್ಷದ ಅಡಿವಪ್ಪ ಎಂದು ಗುರುತಿಸಲಾಗಿದ್ದು, ಆರೋಪಿ 36 ವರ್ಷದ ತಮ್ಮ ರಾಜು ಎಂದು ಪೊಲೀಸರು … Continued

ಮಂಗಳೂರು : ವಂದೇ ಮಾತರಂಗೆ ಅಪಮಾನ ಆರೋಪ ; ಸೋನಿಯಾ ಗಾಂಧಿ ವಿರುದ್ಧ ದೂರು

ಮಂಗಳೂರು: ಸ್ವಾತಂತ್ರ್ಯೋತ್ಸವದಂದು ಕಾಂಗ್ರೆಸ್‌ ಪ್ರಧಾನ ಕಚೇರಿಯಲ್ಲಿ ನಡೆದ ‘ವಂದೇ ಮಾತರಂ’ ಗಾಯನಕ್ಕೆ ಸಂಬಂಧಿಸಿದ ವಿವಾದ ತೀವ್ರಗೊಂಡಿದ್ದು, ಬಿಜೆಪಿ ನಾಯಕರು ಕಾಂಗ್ರೆಸ್‌ ನಾಯಕಿ ಸೋನಿಯಾ ಗಾಂಧಿ ವಿರುದ್ಧ ಮಂಗಳೂರಿನ ಉರ್ವಾ ಪೊಲೀಸ್‌ ಠಾಣೆಯಲ್ಲಿ ಭಾನುವಾರ ದೂರು ದಾಖಲಿಸಿದ್ದಾರೆ. ಸೋನಿಯಾ ಗಾಂಧಿ ವಂದೇ ಮಾತರಂಗೆ (Vande Mataram Row) ಅಪಮಾನ ಮಾಡಿದ್ದಾರೆಂದು ಆರೋಪಿಸಿ ಈ ದೂರು ನೀಡಲಾಗಿದೆ. ರಾಷ್ಟ್ರೀಯ … Continued

ಸಕಲೇಶಪುರ : ರೈಲ್ವೆ ಹಳಿ ಮೇಲೆ ಗುಡ್ಡ ಕುಸಿತ ; ಬೆಂಗಳೂರು-ಮಂಗಳೂರು ಮಾರ್ಗದ ರೈಲುಗಳ ಸಂಚಾರ ಸ್ಥಗಿತ

ಹಾಸನ: ಸಕಲೇಶಪುರ ತಾಲ್ಲೂಕಿನ ಯಡಕುಮರಿ ಮತ್ತು ಶಿರಿವಾಗಿಲು ರೈಲು ನಿಲ್ದಾಣಗಳ ನಡುವಿನ ರೈಲ್ವೆ ಹಳಿಯ ಮೇಲೆ ಶನಿವಾರ ರಾತ್ರಿ 8:45ರ ಸುಮಾರಿಗೆ ಭಾರಿ ಮಳೆಯಿಂದಾಗಿ ಭೂಕುಸಿತ ಸಂಭವಿಸಿದ್ದು, ಆ ಮಾರ್ಗದ ರೈಲು ಸಂಚಾರ ಸಂಪೂರ್ಣ ಅಸ್ತವ್ಯಸ್ತಗೊಂಡಿದೆ. ಘಟನೆ ಕುರಿತು ಮಾಹಿತಿ ನೀಡಿರುವ ನೈಋತ್ಯ ರೈಲ್ವೆಯ ಮುಖ್ಯ ಸಾರ್ವಜನಿಕ ಸಂಪರ್ಕ ಅಧಿಕಾರಿ ಮಂಜುನಾಥ ಕನಮಡಿ, “ಭೂಕುಸಿತ ಸಂಭವಿಸಿದ … Continued

ಮಂಗಳೂರು : ಧಾರಾಕಾರ ಮಳೆಗೆ ಮನೆ ಮೇಲೆ ಮಣ್ಣು ಕುಸಿದು ಮೂವರು ಸಾವು

ಮಂಗಳೂರು : ನಗರದಲ್ಲಿ ಸುರಿಯುತ್ತಿರುವ ಭಾರಿ ಮಳೆಯಿಂದಾಗಿ ಕಂಕನಾಡಿ ಪೊಲೀಸ್ ಠಾಣೆ ವ್ಯಾಪ್ತಿಯ ನಾಗುರಿ ಪ್ರದೇಶದಲ್ಲಿ ಮನೆಯೊಂದರ ಮೇಲೆ ಗುಡ್ಡ ಕುಸಿದು ಬಿದ್ದು ಇಬ್ಬರು ಬಾಲಕಿಯರು ಸೇರಿದಂತೆ ಮೂವರು ಮೃತಪಟ್ಟ ಘಟನೆ ನಡೆದಿದೆ ಎಂದು ವರದಿಯಾಗಿದೆ. ಭೂಕುಸಿತ ಉಂಟಾದ ಪರಿಣಾಮ ಮಣ್ಣು ಕುಸಿದು ಮನೆ ಮೇಲೆ ಬಿದ್ದಿದೆ. ಪರಿಣಾಮ ಮನೆಯಲ್ಲಿದ್ದ ಆರು ಜನ ಮಣ್ಣಿನಡಿ ಸಿಲುಕಿಕೊಂಡಿದ್ದರು. … Continued

ಮಂಗಳೂರು : ಬೆಳ್ಳಂಬೆಳಿಗ್ಗೆ ರೌಡಿಶೀಟರ್ ಕೊಲೆ

ಮಂಗಳೂರು: ನಗರದ ಹೊರವಲಯದ‌ ತೊಕ್ಕೊಟ್ಟು ಬಳಿ ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಕೊಚ್ಚಿ ರೌಡಿ ಶೀಟರನನ್ನು ಕೊಲೆ ಮಾಡಿದ ಘಟನೆ ಶುಕ್ರವಾರ ಬೆಳ್ಳಬೆಳಿಗ್ಗೆ ನಡೆದಿದ್ದು, ತೊಕ್ಕೊಟ್ಟು ಫ್ಲೈ ಓವರ್ ಬ್ರಿಜ್ ಮೇಲೆ ಹತ್ಯೆ ಮಾಡಲಾಗಿದೆ ಎಂದು ವರದಿಯಾಗಿದೆ. ಮೃತನನ್ನು 46 ವರ್ಷದ ರೌಡಿಶೀಟರ್ ಆರಿಫ್ ಯಾನೆ ಟಾಬ್ಲೆಟ್ ಆರಿಫ್ ಎಂದು ಗುರುತಿಸಲಾಗಿದೆ. ಆರಿಫ್ ಯಾನೆ ಟಾಬ್ಲೆಟ್ ಆರಿಫ್, ಮುಳ್ಳುಗುಡ್ಡೆ … Continued

ಕಪ್ಪೆಕೆರೆ ಸೇರಿ ಮೂವರು ಸಾಧಕರು ಯಕ್ಷಮಂಗಳ ಪ್ರಶಸ್ತಿಗೆ ಆಯ್ಕೆ, ಕೃಷ್ಣಪ್ರಕಾಶರಿಗೆ ಕೃತಿ ಪ್ರಶಸ್ತಿ

ಮಂಗಳೂರು : ಮಂಗಳೂರು ವಿಶ್ವವಿದ್ಯಾನಿಲಯದ ಡಾ.ಪಿ.ದಯಾನಂದ ಪೈ ಮತ್ತು ಪಿ.ಸತೀಶ ಪೈ ಯಕ್ಷಗಾನ ಅಧ್ಯಯನ ಕೇಂದ್ರದ 2025-26ನೇ ಸಾಲಿನ ಯಕ್ಷಮಂಗಳ ಪ್ರಶಸ್ತಿಗೆ ಯಕ್ಷಗಾನ ರಂಗದ ಹಿರಿಯ ಭಾಗವತರಾದ ಕಪ್ಪೆಕೆರೆ ಸುಬ್ರಾಯ ಭಾಗವತ, ಯಕ್ಷಗಾನ ಗುರುಗಳಾದ ಮಾಂಬಾಡಿ ಸುಬ್ರಹ್ಮಣ್ಯ ಭಟ್, ಹಿರಿಯ ಯಕ್ಷಗಾನ ಅರ್ಥಧಾರಿ ಜಬ್ಬಾರ್ ಸಮೊ ಆಯ್ಕೆಯಾಗಿದ್ದಾರೆ. ಯಕ್ಷಮಂಗಳ ಕೃತಿ ಪ್ರಶಸ್ತಿಗೆ ಕೃಷ್ಣಪ್ರಕಾಶ ಉಳಿಯತ್ತಾಯ ಅವರ … Continued

ಮಂಗಳೂರು | ತಲಪಾಡಿಯಲ್ಲಿ ಭೀಕರ ರಸ್ತೆ ಅಪಘಾತ; 6 ಮಂದಿ ಸಾವು, ಹಲವರಿಗೆ ಗಾಯ

ಮಂಗಳೂರು : ಕೆ ಸಿರೋಡ್‌ ಸಮೀಪದ ತಲಪಾಡಿ ಟೋಲ್ ಗೇಟ್ ಬಳಿ ಗುರುವಾರ ಮಧ್ಯಾಹ್ನ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಆರು ಮಂದಿ ಮೃತಪಟ್ಟಿದ್ದಾರೆ ಎಂದು ವರದಿಯಾಗಿದೆ. ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ (ಕೆಎಸ್‌ಆರ್‌ಟಿಸಿ) ಬಸ್ ನಿಯಂತ್ರಣ ತಪ್ಪಿ ಬಸ್ ತಂಗುದಾಣ ಹಾಗೂ ಆಟೋ ರಿಕ್ಷಾಕ್ಕೆ ಡಿಕ್ಕಿ ಹೊಡೆದ ಪರಿಣಾಮ ಒಂದೇ ಕುಟುಂಬ ಐವರು … Continued

ಮಂಗಳೂರು | ಸತತ 7 ದಿನ 170 ಗಂಟೆಗಳ ಕಾಲ ಭರತನಾಟ್ಯ ಮಾಡಿ ವಿಶ್ವದಾಖಲೆ ಬರೆದ ರೆಮೋನಾ ಪಿರೇರಾ

ಮಂಗಳೂರು : ಮಂಗಳೂರಿನ ಸೇಂಟ್ ಅಲೋಶಿಯಸ್ ಡೀಮ್ಡ್ ಟು ಬಿ ವಿಶ್ವವಿದ್ಯಾಲಯದ ಬಿಎ ವಿದ್ಯಾರ್ಥಿನಿ ರೆಮೋನಾ ಎವೆಟ್ ಪಿರೇರಾ, 170 ಗಂಟೆಗಳ ಭರತನಾಟ್ಯದ ನೃತ್ಯ ಪ್ರದರ್ಶಿಸಿ ಗೋಲ್ಡನ್ ಬುಕ್ ಆಫ್ ವರ್ಲ್ಡ್ ರೆಕಾರ್ಡ್​ನಲ್ಲಿ ತಮ್ಮ ಹೆಸರು ದಾಖಲಿಸಿದ್ದಾರೆ. ಇದು ವಿಶ್ವದಲ್ಲೇ ಮೊದಲನೆಯದು. ಈ ದಾಖಲೆಯ ಪ್ರಯಾಣವು ಜುಲೈ 21 ರಂದು ಆರಂಭವಾಯಿತು. ಜುಲೈ 21 ರಂದು … Continued

ಸಾಲ ಕೊಡಿಸುವುದಾಗಿ ಉದ್ಯಮಿಗಳಿಗೆ ಕೋಟ್ಯಂತರ ರೂ. ವಂಚನೆ ; ಮಂಗಳೂರಿನ ವಂಚಕ ಅರೆಸ್ಟ್‌ ; ತಪ್ಪಿಸಿಕೊಳ್ಳಲು ಮನೆಯಲ್ಲೇ ನಿಗೂಢ ಕೋಣೆ ಪತ್ತೆ…!

ಮಂಗಳೂರು : ಮಂಗಳೂರು ನಗರ ಪೊಲೀಸರು ಮಧ್ಯರಾತ್ರಿ ನಡೆಸಿದ ಕಾರ್ಯಾಚರಣೆಯಲ್ಲಿ ಜೆಪಿನಮೊಗರು ಪ್ರದೇಶದ ವಂಚಕ ರೋಹನ್ ಸಲ್ಡಾನಾ ಎಂಬಾತನನ್ನು ಬಂಧಿಸಿದ್ದಾರೆ. ಈತ ನಕಲಿ ಸಾಲ ಮತ್ತು ಭೂ ವ್ಯವಹಾರಗಳ ಮೂಲಕ ಶ್ರೀಮಂತ ಉದ್ಯಮಿಗಳಿಗೆ ಕೋಟ್ಯಂತರ ರೂಪಾಯಿ ವಂಚಿಸಿದ ಆರೋಪ ಹೊತ್ತಿದ್ದಾನೆ. ಪೊಲೀಸ್ ಆಯುಕ್ತ ಸುಧೀರಕುಮಾರ ರೆಡ್ಡಿ ಮತ್ತು ಸಹಾಯಕ ಪೊಲೀಸ್ ಆಯುಕ್ತ ರವೀಶ ನಾಯಕ ನೇತೃತ್ವದ … Continued

ಬೆಂಗಳೂರು-ಮಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಭೂಕುಸಿತ: ಸಂಚಾರ ಬಂದ್

ಮಂಗಳೂರು: ಭಾರೀ ಮಳೆಯ ಪರಿಣಾಮ ದಕ್ಷಿಣ ಕನ್ನಡದ ಕಡಬ ತಾಲ್ಲೂಕಿನ ರಾಷ್ಟ್ರೀಯ ಹೆದ್ದಾರಿ-75 ರಲ್ಲಿ ಭಾರಿ ಭೂಕುಸಿತ ಸಂಭವಿಸಿದೆ. ಈ ಹಿನ್ನೆಲೆಯಲ್ಲಿ ಬೆಂಗಳೂರು ಮತ್ತು ಮಂಗಳೂರು ನಡುವಿನ ಲಾರಿ, ಬಸ್, ಟ್ರಕ್​ಗಳ ಸಂಚಾರ ಸಂಪೂರ್ಣ ಬಂದ್ ಆಗಿದೆ. ಭೂ ಕುಸಿತದಿಂದ ಬೆಂಗಳೂರಿನಿಂದ ಧರ್ಮಸ್ಥಳ, ಕುಕ್ಕೆ ಸುಬ್ರಹ್ಮಣ್ಯಕ್ಕೆ ಸಂಚಾರಕ್ಕೆ ಯಾವುದೇ ಅಡಚಣೆಗಳು ಎದುರಾಗಿಲ್ಲ. ಆದರೆ, ಮಂಗಳೂರಿನಿಂದ ಬೆಂಗಳೂರಿಗೆ … Continued