ಮಂಗಳೂರು : ಧಾರಾಕಾರ ಮಳೆಗೆ ಮನೆ ಮೇಲೆ ಮಣ್ಣು ಕುಸಿದು ಮೂವರು ಸಾವು

ಮಂಗಳೂರು : ನಗರದಲ್ಲಿ ಸುರಿಯುತ್ತಿರುವ ಭಾರಿ ಮಳೆಯಿಂದಾಗಿ ಕಂಕನಾಡಿ ಪೊಲೀಸ್ ಠಾಣೆ ವ್ಯಾಪ್ತಿಯ ನಾಗುರಿ ಪ್ರದೇಶದಲ್ಲಿ ಮನೆಯೊಂದರ ಮೇಲೆ ಗುಡ್ಡ ಕುಸಿದು ಬಿದ್ದು ಇಬ್ಬರು ಬಾಲಕಿಯರು ಸೇರಿದಂತೆ ಮೂವರು ಮೃತಪಟ್ಟ ಘಟನೆ ನಡೆದಿದೆ ಎಂದು ವರದಿಯಾಗಿದೆ. ಭೂಕುಸಿತ ಉಂಟಾದ ಪರಿಣಾಮ ಮಣ್ಣು ಕುಸಿದು ಮನೆ ಮೇಲೆ ಬಿದ್ದಿದೆ. ಪರಿಣಾಮ ಮನೆಯಲ್ಲಿದ್ದ ಆರು ಜನ ಮಣ್ಣಿನಡಿ ಸಿಲುಕಿಕೊಂಡಿದ್ದರು. … Continued

ಮಂಗಳೂರು : ಬೆಳ್ಳಂಬೆಳಿಗ್ಗೆ ರೌಡಿಶೀಟರ್ ಕೊಲೆ

ಮಂಗಳೂರು: ನಗರದ ಹೊರವಲಯದ‌ ತೊಕ್ಕೊಟ್ಟು ಬಳಿ ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಕೊಚ್ಚಿ ರೌಡಿ ಶೀಟರನನ್ನು ಕೊಲೆ ಮಾಡಿದ ಘಟನೆ ಶುಕ್ರವಾರ ಬೆಳ್ಳಬೆಳಿಗ್ಗೆ ನಡೆದಿದ್ದು, ತೊಕ್ಕೊಟ್ಟು ಫ್ಲೈ ಓವರ್ ಬ್ರಿಜ್ ಮೇಲೆ ಹತ್ಯೆ ಮಾಡಲಾಗಿದೆ ಎಂದು ವರದಿಯಾಗಿದೆ. ಮೃತನನ್ನು 46 ವರ್ಷದ ರೌಡಿಶೀಟರ್ ಆರಿಫ್ ಯಾನೆ ಟಾಬ್ಲೆಟ್ ಆರಿಫ್ ಎಂದು ಗುರುತಿಸಲಾಗಿದೆ. ಆರಿಫ್ ಯಾನೆ ಟಾಬ್ಲೆಟ್ ಆರಿಫ್, ಮುಳ್ಳುಗುಡ್ಡೆ … Continued

ಕಪ್ಪೆಕೆರೆ ಸೇರಿ ಮೂವರು ಸಾಧಕರು ಯಕ್ಷಮಂಗಳ ಪ್ರಶಸ್ತಿಗೆ ಆಯ್ಕೆ, ಕೃಷ್ಣಪ್ರಕಾಶರಿಗೆ ಕೃತಿ ಪ್ರಶಸ್ತಿ

ಮಂಗಳೂರು : ಮಂಗಳೂರು ವಿಶ್ವವಿದ್ಯಾನಿಲಯದ ಡಾ.ಪಿ.ದಯಾನಂದ ಪೈ ಮತ್ತು ಪಿ.ಸತೀಶ ಪೈ ಯಕ್ಷಗಾನ ಅಧ್ಯಯನ ಕೇಂದ್ರದ 2025-26ನೇ ಸಾಲಿನ ಯಕ್ಷಮಂಗಳ ಪ್ರಶಸ್ತಿಗೆ ಯಕ್ಷಗಾನ ರಂಗದ ಹಿರಿಯ ಭಾಗವತರಾದ ಕಪ್ಪೆಕೆರೆ ಸುಬ್ರಾಯ ಭಾಗವತ, ಯಕ್ಷಗಾನ ಗುರುಗಳಾದ ಮಾಂಬಾಡಿ ಸುಬ್ರಹ್ಮಣ್ಯ ಭಟ್, ಹಿರಿಯ ಯಕ್ಷಗಾನ ಅರ್ಥಧಾರಿ ಜಬ್ಬಾರ್ ಸಮೊ ಆಯ್ಕೆಯಾಗಿದ್ದಾರೆ. ಯಕ್ಷಮಂಗಳ ಕೃತಿ ಪ್ರಶಸ್ತಿಗೆ ಕೃಷ್ಣಪ್ರಕಾಶ ಉಳಿಯತ್ತಾಯ ಅವರ … Continued

ಮಂಗಳೂರು | ತಲಪಾಡಿಯಲ್ಲಿ ಭೀಕರ ರಸ್ತೆ ಅಪಘಾತ; 6 ಮಂದಿ ಸಾವು, ಹಲವರಿಗೆ ಗಾಯ

ಮಂಗಳೂರು : ಕೆ ಸಿರೋಡ್‌ ಸಮೀಪದ ತಲಪಾಡಿ ಟೋಲ್ ಗೇಟ್ ಬಳಿ ಗುರುವಾರ ಮಧ್ಯಾಹ್ನ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಆರು ಮಂದಿ ಮೃತಪಟ್ಟಿದ್ದಾರೆ ಎಂದು ವರದಿಯಾಗಿದೆ. ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ (ಕೆಎಸ್‌ಆರ್‌ಟಿಸಿ) ಬಸ್ ನಿಯಂತ್ರಣ ತಪ್ಪಿ ಬಸ್ ತಂಗುದಾಣ ಹಾಗೂ ಆಟೋ ರಿಕ್ಷಾಕ್ಕೆ ಡಿಕ್ಕಿ ಹೊಡೆದ ಪರಿಣಾಮ ಒಂದೇ ಕುಟುಂಬ ಐವರು … Continued

ಮಂಗಳೂರು | ಸತತ 7 ದಿನ 170 ಗಂಟೆಗಳ ಕಾಲ ಭರತನಾಟ್ಯ ಮಾಡಿ ವಿಶ್ವದಾಖಲೆ ಬರೆದ ರೆಮೋನಾ ಪಿರೇರಾ

ಮಂಗಳೂರು : ಮಂಗಳೂರಿನ ಸೇಂಟ್ ಅಲೋಶಿಯಸ್ ಡೀಮ್ಡ್ ಟು ಬಿ ವಿಶ್ವವಿದ್ಯಾಲಯದ ಬಿಎ ವಿದ್ಯಾರ್ಥಿನಿ ರೆಮೋನಾ ಎವೆಟ್ ಪಿರೇರಾ, 170 ಗಂಟೆಗಳ ಭರತನಾಟ್ಯದ ನೃತ್ಯ ಪ್ರದರ್ಶಿಸಿ ಗೋಲ್ಡನ್ ಬುಕ್ ಆಫ್ ವರ್ಲ್ಡ್ ರೆಕಾರ್ಡ್​ನಲ್ಲಿ ತಮ್ಮ ಹೆಸರು ದಾಖಲಿಸಿದ್ದಾರೆ. ಇದು ವಿಶ್ವದಲ್ಲೇ ಮೊದಲನೆಯದು. ಈ ದಾಖಲೆಯ ಪ್ರಯಾಣವು ಜುಲೈ 21 ರಂದು ಆರಂಭವಾಯಿತು. ಜುಲೈ 21 ರಂದು … Continued

ಸಾಲ ಕೊಡಿಸುವುದಾಗಿ ಉದ್ಯಮಿಗಳಿಗೆ ಕೋಟ್ಯಂತರ ರೂ. ವಂಚನೆ ; ಮಂಗಳೂರಿನ ವಂಚಕ ಅರೆಸ್ಟ್‌ ; ತಪ್ಪಿಸಿಕೊಳ್ಳಲು ಮನೆಯಲ್ಲೇ ನಿಗೂಢ ಕೋಣೆ ಪತ್ತೆ…!

ಮಂಗಳೂರು : ಮಂಗಳೂರು ನಗರ ಪೊಲೀಸರು ಮಧ್ಯರಾತ್ರಿ ನಡೆಸಿದ ಕಾರ್ಯಾಚರಣೆಯಲ್ಲಿ ಜೆಪಿನಮೊಗರು ಪ್ರದೇಶದ ವಂಚಕ ರೋಹನ್ ಸಲ್ಡಾನಾ ಎಂಬಾತನನ್ನು ಬಂಧಿಸಿದ್ದಾರೆ. ಈತ ನಕಲಿ ಸಾಲ ಮತ್ತು ಭೂ ವ್ಯವಹಾರಗಳ ಮೂಲಕ ಶ್ರೀಮಂತ ಉದ್ಯಮಿಗಳಿಗೆ ಕೋಟ್ಯಂತರ ರೂಪಾಯಿ ವಂಚಿಸಿದ ಆರೋಪ ಹೊತ್ತಿದ್ದಾನೆ. ಪೊಲೀಸ್ ಆಯುಕ್ತ ಸುಧೀರಕುಮಾರ ರೆಡ್ಡಿ ಮತ್ತು ಸಹಾಯಕ ಪೊಲೀಸ್ ಆಯುಕ್ತ ರವೀಶ ನಾಯಕ ನೇತೃತ್ವದ … Continued

ಬೆಂಗಳೂರು-ಮಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಭೂಕುಸಿತ: ಸಂಚಾರ ಬಂದ್

ಮಂಗಳೂರು: ಭಾರೀ ಮಳೆಯ ಪರಿಣಾಮ ದಕ್ಷಿಣ ಕನ್ನಡದ ಕಡಬ ತಾಲ್ಲೂಕಿನ ರಾಷ್ಟ್ರೀಯ ಹೆದ್ದಾರಿ-75 ರಲ್ಲಿ ಭಾರಿ ಭೂಕುಸಿತ ಸಂಭವಿಸಿದೆ. ಈ ಹಿನ್ನೆಲೆಯಲ್ಲಿ ಬೆಂಗಳೂರು ಮತ್ತು ಮಂಗಳೂರು ನಡುವಿನ ಲಾರಿ, ಬಸ್, ಟ್ರಕ್​ಗಳ ಸಂಚಾರ ಸಂಪೂರ್ಣ ಬಂದ್ ಆಗಿದೆ. ಭೂ ಕುಸಿತದಿಂದ ಬೆಂಗಳೂರಿನಿಂದ ಧರ್ಮಸ್ಥಳ, ಕುಕ್ಕೆ ಸುಬ್ರಹ್ಮಣ್ಯಕ್ಕೆ ಸಂಚಾರಕ್ಕೆ ಯಾವುದೇ ಅಡಚಣೆಗಳು ಎದುರಾಗಿಲ್ಲ. ಆದರೆ, ಮಂಗಳೂರಿನಿಂದ ಬೆಂಗಳೂರಿಗೆ … Continued

ಅಶೋಕ ಹಾಸ್ಯಗಾರ, ಬನಾರಿ, ಸಾಮಗ, ಸಿದ್ದಕಟ್ಟೆಗೆ ‘ಯಕ್ಷ ಮಂಗಳ ಪ್ರಶಸ್ತಿ’ ಪ್ರದಾನ

ಮಂಗಳೂರು : ಉಳ್ಳಾಲ ಯಕ್ಷಗಾನ ಕಲೆಗೆ ವಿಶೇಷ ಉತ್ತೇಜನವಿದೆ. ಯಕ್ಷಗಾನ ಸುಯೋಗವೆಂದರೆ ಎಂಜಿನಿಯರ್, ಡಾಕ್ಟರ್, ಶಿಕ್ಷಕರು ಮೊದಲಾದ ವಿವಿಧ ಕ್ಷೇತ್ರಗಳ ಆಸಕ್ತರ ಮೂಲಕ ಸಮೃದ್ಧವಾಗಿ ಬೆಳೆಯುತ್ತಿದೆ. ವಿದ್ಯಾವಂತರು ಸೃಜನಶೀಲತೆಗೆ ಒತ್ತು ಕೊಡುವಂತೆ ಪರಂಪರೆಯನ್ನೂ ಉಳಿಸಿಕೊಳ್ಳಬೇಕು ಎಂದು ಕರ್ನಾಟಕ ಯಕ್ಷಗಾನ ಅಕಾಡೆಮಿಯ ಅಧ್ಯಕ್ಷ ಡಾ. ತಲ್ಲೂರು ಶಿವರಾಮ ಶೆಟ್ಟಿ ಹೇಳಿದ್ದಾರೆ. ಮಂಗಳೂರು ವಿಶ್ವ ವಿದ್ಯಾಲಯದ ಡಾ.ಯು.ಆರ್ ರಾವ್ … Continued

ಅರ್ಧ ಸೇದಿ ಬಿಸಾಡಿದ್ದ ಬೀಡಿ ತುಂಡು ನುಂಗಿ 10 ತಿಂಗಳ ಮಗು ಸಾವು

ಮಂಗಳೂರು: ಅರ್ಧ ಸೇದಿ ಬಿಸಾಡಿದ್ದ ಬೀಡಿಯ ತುಂಡನ್ನು ನುಂಗಿ ಅಸ್ವಸ್ಥಗೊಂಡಿದ್ದ ಹತ್ತು ತಿಂಗಳ ಮಗವೊಂದು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದೆ ಎಂದು ವರದಿಯಾಗಿದೆ. ಅಡ್ಯಾರ್‌ನಲ್ಲಿ ವಾಸವಾಗಿದ್ದ ಬಿಹಾರ ಮೂಲದ ದಂಪತಿಯ 10 ತಿಂಗಳ ಮಗು ಅನೀಶಕುಮಾರ ಎಂಬ ಮಗು ಬೀಡಿ ಮೋಟು ನುಂಗಿತ್ತು ಎಂದು ಹೇಳಲಾಗಿದೆ. ಶನಿವಾರ ಅರ್ಧ ಸೇದಿ ಬಿಸಾಡಿದ್ದ ಬೀಡಿ ತುಂಡನ್ನು ಮಗು ನುಂಗಿ … Continued

ಭಾರಿ ಮಳೆಗೆ ಗುಡ್ಡ ಕುಸಿತ : ಶೃಂಗೇರಿ-ಮಂಗಳೂರು ರಸ್ತೆ ಸಂಚಾರ ಬಂದ್

ಚಿಕ್ಕಮಗಳೂರು : ರಾಜ್ಯದ ಪಶ್ಚಿಮ ಘಟ್ಟಗಳ ಪ್ರದೇಶದಲ್ಲಿ ಭಾರಿ ಮಳೆಯಾಗುತ್ತಿದ್ದು, ಹಲವೆಡೆ ಭೂ ಕುಸಿತಗಳು ಸಂಭವಿಸುತ್ತಿವೆ. ಜಿಲ್ಲೆಯ ಶೃಂಗೇರಿ ತಾಲೂಕಿನ ನೆಮ್ಮಾರು ಬಳಿಯ ರಾಷ್ಟ್ರೀಯ ಹೆದ್ದಾರಿ 169ರ ಒಂದೇ ಸ್ಥಳದಲ್ಲಿ ಪದೇಪದೇ ಗುಡ್ಡ ಕುಸಿಯುತ್ತಿದ್ದು, ಈ ಹಿನ್ನೆಲೆಯಲ್ಲಿ ಶೃಂಗೇರಿ-ಮಂಗಳೂರು ಮಾರ್ಗದ ರಸ್ತೆ ಸಂಚಾರವನ್ನು  ಬಂದ್ ಮಾಡಲಾಗಿದೆ. ನಿರಂತರವಾಗಿ ಸುರಿಯುತ್ತಿರುವ ಮಳೆಗೆ ನೆಮ್ಮಾರು ಗ್ರಾಮದ ಬಳಿ ಗುಡ್ಡ … Continued