ಮಂಗಳೂರು | ಸೆಮಿನಾರ್ ತಪ್ಪಿಸಿಕೊಳ್ಳಲು ಆಸ್ಪತ್ರೆಗೆ ಬಾಂಬ್ ಬೆದರಿಕೆ ಕರೆ ಮಾಡಿ ಕೊನೆಗೂ ಸಿಕ್ಕಿಬಿದ್ದ ವೈದ್ಯಕೀಯ ವಿದ್ಯಾರ್ಥಿನಿ…!

 ಮಂಗಳೂರು : ದೇರಳಕಟ್ಟೆಯ ಖಾಸಗಿ ಆಸ್ಪತ್ರೆಯಲ್ಲಿ ನಡೆದ ಬಾಂಬ್ ಬೆದರಿಕೆ ಪ್ರಕರಣ ನಾಟಕೀಯ ತಿರುವು ಪಡೆದುಕೊಂಡಿದ್ದು, ವಿಚಾರ ಸಂಕಿರಣವನ್ನು ತಪ್ಪಿಸಿಕೊಳ್ಳಲು ಹುಸಿ ಕರೆ ಮಾಡಿದ ಆರೋಪದ ಮೇಲೆ ಸ್ನಾತಕೋತ್ತರ (ಪಿಜಿ) ವೈದ್ಯಕೀಯ ವಿದ್ಯಾರ್ಥಿನಿಯನ್ನು ಉಳ್ಳಾಲ ಪೊಲೀಸರು ಬಂಧಿಸಿದ್ದಾರೆ ಎಂದು ವರದಿಯಾಗಿದೆ. ಜೂನ್ 4 ರಂದು ಬೆಳಿಗ್ಗೆ 8:45 ರ ಸುಮಾರಿಗೆ ಆಸ್ಪತ್ರೆಯ ಆವರಣದಲ್ಲಿ ಬಾಂಬ್ ಇಡಲಾಗಿದೆ … Continued

ಮಂಗಳೂರು | ಗುಡ್ಡ ಕುಸಿದು ಅನಾಹುತ ; ಬಾಲಕಿ ಸೇರಿ ಇಬ್ಬರು ಸಾವು, ಅವಶೇಷಗಳಡಿ ಸಿಲುಕಿರುವ ಮೂವರ ರಕ್ಷಣೆಗೆ ಪ್ರಯತ್ನ

ಮಂಗಳೂರು: ನಿರಂತರವಾಗಿ ಸುರಿಯುತ್ತಿರುವ ಭಾರೀ ಮಳೆಗೆ ದಕ್ಷಿಣ ಕನ್ನಡದ ಹಲvew ಅನಾಹುತಗಳು ಸಂಭವಿಸಿವೆ. ಕೆಲವೆಡೆ ಗುಡ್ಡ ಕುಸಿತ (Landslide) ಉಂಟಾಗಿದೆ. ಮಳೆ ಸಂಬಂಧಿ ಅನಾಹುತದಲ್ಲಿ ಇಬ್ಬರು ಮೃತಪಟ್ಟಿದ್ದಾರೆ. ದೇರಳಕಟ್ಟೆ ಮೊಂಟೆಪದವಿನ ಪಂಬದ ಹಿತ್ಲುವಿನಲ್ಲಿ ಗುಡ್ಡ ಕುಸಿದು ಮಣ್ಣು ಮನೆಗಳ ಮೇಲೆ ಬಿದ್ದಿದೆ. ಮನೆಗಳ ಅಡಿಯಲ್ಲಿ ಒಂದೇ ಕುಟುಂಬದ ಸಿಲುಕಿಕೊಂಡಿದ್ದಾರೆ. ಅವರಲ್ಲಿ ಓರ್ವ ಮಹಿಳೆ ಸಾವಿಗೀಡಾಗಿದ್ದಾರೆ. ಓರ್ವರನ್ನು … Continued

ದಕ್ಷಿಣ ಕನ್ನಡದಲ್ಲಿ ಸರಣಿ ಹತ್ಯೆ ; ಇಬ್ಬರು ಹಿರಿಯ ಪೊಲೀಸ್‌ ಅಧಿಕಾರಿಗಳ ಎತ್ತಂಗಡಿ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ (Dakshina Kannada) ನಡೆದ ಸಾಲು ಸಾಲು ಹತ್ಯೆಗಳ ಬಳಿಕ ಇಬ್ಬರು ಐಪಿಎಸ್‌ ಅಧಿಕಾರಿಗಳನ್ನು ಸರ್ಕಾರ ಎತ್ತಂಗಡಿ ಮಾಡಿದೆ. ಮಂಗಳೂರು ಪೊಲೀಸ್ ಕಮಿಷನರ್ ಅನುಪಮ್ ಅಗರ್ವಾಲ್ ಹಾಗೂ ದಕ್ಷಿಣ ಕನ್ನಡ ಪೊಲೀಸ್‌ ವರಿಷ್ಠಾಧಿಕಾರಿ ಯತೀಶ್.ಎನ್ ಅವರನ್ನು ಸರ್ಕಾರ ಏಕಕಾಲಕ್ಕೆ ವರ್ಗಾವಣೆ ಮಾಡಿ‌ ಸರ್ಕಾರ ಆದೇಶ ಹೊರಡಿಸಿದೆ. ಮಂಗಳೂರು ನೂತನ ಪೊಲೀಸ್ ಆಯುಕ್ತರಾಗಿ … Continued

ಸುಹಾಸ ಶೆಟ್ಟಿ ಕೊಲೆ ಪ್ರಕರಣ ; ಮತ್ತೆ ಮೂವರು ಆರೋಪಿಗಳ ಬಂಧನ

ಮಂಗಳೂರು : ಕೆಲವು ದಿನಗಳ ಹಿಂದೆ ಬಜ್ಪೆಯಲ್ಲಿ ಬರ್ಬರವಾಗಿ ಕೊಲೆಯಾದ ಸುಹಾಸ ಶೆಟ್ಟಿ ಹತ್ಯೆ (Suhas Shetty) ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತೆ ಮೂವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತರನ್ನು ಕಳವಾರಿನ ಅಜರುದ್ದೀನ್ ಆಲಿಯಾಸ್ ಅಜರ್ ಆಲಿಯಾಸ್ ಅಜ್ಜು(29), ಬಜ್ಪೆ ನಿವಾಸಿ ಅಬ್ದುಲ್ ಖಾದರ್ ಆಲಿಯಾಸ್ ನೌಫಲ್(24), ವಾಮಂಜೂರಿನ ನೌಷದ್ ಆಲಿಯಾಸ್ ಚೊಟ್ಟೆ ನೌಷದ್(39) ಎಂದು ಗುರುತಿಸಲಾಗಿದೆ. … Continued

 ಮಂಗಳೂರು | ಸುಹಾಸ ಶೆಟ್ಟಿ ಕೊಲೆ ಪ್ರಕರಣ: 8 ಜನರ ಬಂಧನ

ಮಂಗಳೂರು: ಗುರುವಾರ ನಡೆದ ಸುಹಾಸ ಶೆಟ್ಟಿ ಕೊಲೆಗೆ ಸಂಬಂಧಿಸಿದಂತೆ ಎಂಟು ಜನರನ್ನು ಬಂಧಿಸಲಾಗಿದ್ದು, ಅವರ ಹಿನ್ನೆಲೆ ಸೇರಿದಂತೆ ಇತರ ಮಾಹಿತಿ ಸಂಗ್ರಹಿಸುತ್ತಿರುವುದಾಗಿ ಗೃಹ ಸಚಿವ ಡಾ.ಜಿ.ಪರಮೇಶ್ವರ ತಿಳಿಸಿದರು. ಮಂಗಳೂರಿನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಆರೋಪಿಗಳನ್ನು ಈಗಾಗಲೇ ಬಂಧಿಸಲಾಗಿದೆ. ಅವರ ಹಿನ್ನೆಲೆ, ಘಟನೆಗೆ ಕಾರಣವಾದ ಅಂಶಗಳ ಬಗ್ಗೆ ತನಿಖೆ ನಡೆಸಲಾಗುತ್ತಿದೆ ಎಂದು ತಿಳಿಸಿದರು. ಅಬ್ದುಲ್ ಸಫ್ವಾನ್, ನಿಯಾಜ್, … Continued

ಹಿಂದೂ ಸಂಘಟನೆ ಕಾರ್ಯಕರ್ತ ಸುಹಾಸ ಶೆಟ್ಟಿ ಹತ್ಯೆ: ಇಂದು ದಕ್ಷಿಣ ಕನ್ನಡ ಬಂದ್

ಮಂಗಳೂರು : ಹಿಂದೂ ಸಂಘಟನೆ ಕಾರ್ಯಕರ್ತ ಸುಹಾಸ್‌ ಶೆಟ್ಟಿ ಹತ್ಯೆ ಖಂಡಿಸಿ ವಿಶ್ವ ಹಿಂದು ಪರಿಷತ್ ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಒಂದು ದಿನ ಬಂದ್‌ ಗೆ ಕರೆ ಕೊಟ್ಟಿದೆ. ಶುಕ್ರವಾರ ಬೆಳಗ್ಗೆ 6ರಿಂದ ಸಂಜೆ 6 ಗಂಟೆವರೆಗೂ ದಕ್ಷಿಣ ಕನ್ನಡ ಜಿಲ್ಲೆ ಬಂದ್​ಗೆ ಕರೆ ನೀಡಲಾಗಿದ್ದು ಹೋಟೆಲ್, ಅಂಗಡಿ ಮುಂಗಟ್ಟುಗಳು ಬಂದ್ ಆಗಿರಲಿವೆ. ಅದೇ ರೀತಿ, … Continued

ಮಂಗಳೂರು | ಮಾರಕಾಸ್ತ್ರಗಳಿಂದ ಕೊಚ್ಚಿ ಹಿಂದೂ ಕಾರ್ಯಕರ್ತ -ಕೊಲೆ ಪ್ರಕರಣದ ಆರೋಪಿಯ ಬರ್ಬರ ಹತ್ಯೆ

ಮಂಗಳೂರು: ನಗರದಲ್ಲಿ ಗುರುವಾರ ರಾತ್ರಿ ರೌಡಿಶೀಟರ್‌ ಬರ್ಬರ ಹತ್ಯೆ ನಡೆದಿದೆ. ಫಾಜಿಲ್‌ ಕೊಲೆ ಪ್ರಕರಣದ ಪ್ರಮುಖ ಆರೋಪಿ ಸುಹಾಸ ಶೆಟ್ಟಿ (Suhas Shetty) ಕೊಲೆಯಾದ ವ್ಯಕ್ತಿ. ಮಂಗಳೂರಿನ ಬಜಪೆ ಕಿನ್ನಿಪದವು ಬಳಿ ಘಟನೆ ನಡೆದಿದ್ದು, ದುಷ್ಕರ್ಮಿಗಳು ತಲ್ವಾರ್‌ಗಳಿಂದ ಹಲ್ಲೆ ನಡೆಸಿದ್ದರಿಂದ ಸುಹಾಸ್ ಶೆಟ್ಟಿ ತೀವ್ರ ರಕ್ತಸ್ರಾವದಿಂದ ಮೃತಪಟ್ಟಿದ್ದಾರೆ ಎಂದು ಹೇಳಲಾಗಿದೆ. ಸುಹಾಸ್ ಶೆಟ್ಟಿ ಈ ಹಿಂದೆ … Continued

ನಾನು ಭಾರತವನ್ನು ದ್ವೇಷಿಸುತ್ತೇನೆ…; ಮಂಗಳೂರು ವೈದ್ಯೆಯ ದೇಶ ವಿರೋಧಿ ಪೋಸ್ಟ್‌ ; ದೂರು ದಾಖಲು ; ಕೆಲಸದಿಂದಲೇ ವಜಾ

ಮಂಗಳೂರು : ದಕ್ಷಿಣ ಕನ್ನಡದ ಮಂಗಳೂರಿನ ವೈದ್ಯೆಯೊಬ್ಬರು ದೇಶ ವಿರೋಧಿ ಪೋಸ್ಟ್ ಹಾಕಿದ್ದ ಹಿನ್ನೆಲೆಯಲ್ಲಿ ಮಂಗಳೂರು ಹೈಲ್ಯಾಂಡ್ ಆಸ್ಪತ್ರೆಯ ಹೆಚ್​ಆರ್ ಆಕೆಯ ವಿರುದ್ಧ ಪಾಂಡೇಶ್ವರ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ ಹಾಗೂ ಹೈಲ್ಯಾಂಡ್ ಆಸ್ಪತ್ರೆ ಆಕೆಯನ್ನು ವಜಾಗೊಳಿಸಿದೆ ಎಂದು ತಿಳಿದುಬಂದಿದೆ. ಮಂಗಳೂರಿನ ವೈದ್ಯೆ ಅಫೀಫಾ ಫಾತಿಮಾ ಎಂಬಾಕೆ ದೇಶ ವಿರೋಧಿ ಪೋಸ್ಟ್‌ ಹಾಕಿದ್ದು, ಸಾಮಾಜಿಕ ಜಾಲತಾಣದಲ್ಲಿ … Continued

ವೀಡಿಯೊ..| ಬಪ್ಪನಾಡು ಜಾತ್ರೆ ರಥೋತ್ಸವದ ವೇಳೆ ಮುರಿದುಬಿದ್ದ ತೇರು

ಮಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯ ಮುಲ್ಕಿ ಬಪ್ಪನಾಡು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ರಥೋತ್ಸವದ ವೇಳೆ ತೇರಿನ ಮೇಲ್ಭಾಗ ಕುಸಿದು ಬಿದ್ದ ಘಟನೆ ನಡೆದಿದೆ. ಆದರೆ ಅದೃಷ್ಟವಶಾತ್‌ ಘಟನೆಯಲ್ಲಿ ಯಾರಿಗೂ ಯಾವುದೇ ಅಪಾಯವಾಗಿಲ್ಲ. ಮುಲ್ಕಿ ಬಪ್ಪನಾಡು ಶ್ರೀದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ಜಾತ್ರಾ ಮಹೋತ್ಸವ ಅಂಗವಾಗಿ ಬ್ರಹ್ಮರಥೋತ್ಸವ ವೇಳೆ ದೇವರ ತೇರು ಮುರಿದು ಬಿದ್ದಿರುವ ಘಟನೆ ಶನಿವಾರ ಬೆಳಗಿನ … Continued

ಪ್ರಚೋದನಕಾರಿ ಹೇಳಿಕೆ : ಚಕ್ರವರ್ತಿ ಸೂಲಿಬೆಲೆ ವಿರುದ್ಧ ಎಫ್‌ ಐಆರ್‌

ಮಂಗಳೂರು : ಕಾಂಗ್ರೆಸ್ ನಾಯಕರೊಬ್ಬರು ನೀಡಿದ ದೂರಿನ ಹಿನ್ನಲೆಯಲ್ಲಿ ಯುವ ಬ್ರಿಗೇಡ್ ಸಂಸ್ಥಾಪಕ ಚಕ್ರವರ್ತಿ ಸೂಲಿಬೆಲೆ ವಿರುದ್ಧ ಉಳ್ಳಾಲ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ ಎಂದು ತಿಳಿದುಬಂದಿದೆ. ಮಾರ್ಚ್ 9 ರಂದು ವಿಎಚ್‌ಪಿ ಆಯೋಜಿಸಿದ್ದ ಕೊರಗಜ್ಜನ‌ ಆದಿಕ್ಷೇತ್ರಕ್ಕೆ ನಮ್ಮ‌ನಡೆ ಪಾದಯಾತ್ರೆಯ ಸಮಾರೋಪ ಸಮಾರಂಭದಲ್ಲಿ ಮಾತನಾಡುವಾಗ, ಅನ್ಯ ಧರ್ಮದ ಯುವತಿಯರನ್ನು ಪ್ರೀತಿಸಿ ಮದುವೆಯಾಗಿ ಎಂದು ಹಿಂದೂ ಯುವಕರಿಗೆ … Continued