ಫೆಬ್ರವರಿ 18ರಿಂದ ಎರಡು ದಿನಗಳ ಮಂಗಳೂರು ಲಿಟ್‌ಫೆಸ್ಟ್‌

ಮಂಗಳೂರು: ಭಾರತ ಫೌಂಡೇಶನ್‌ ಆಶ್ರಯದಲ್ಲಿ ಫೆಬ್ರವರಿ 18-19 ರಂದು ಎರಡು ದಿನಗಳ ಕಾಲ ಮಂಗಳೂರಿನ ಟಿಎಂಎ ಪೈ ಇಂಟರ್‌ನ್ಯಾಷನಲ್‌ ಕನ್ವೆನ್ಷನ್‌ ಸೆಂಟರ್‌ನಲ್ಲಿ ಮಂಗಳೂರು ಲಿಟ್‌ ಫೆಸ್ಟ್‌ನ ಐದನೇ ಆವೃತ್ತಿ ಮಂಗಳೂರು ಸಾಹಿತ್ಯ ಸಮ್ಮೇಳನ ನಡೆಯಲಿದೆ. ಎರಡು ದಿನಗಳ ಈ ಸಮ್ಮೇಳನ ʼಭಾರತದ ಪರಿಕಲ್ಪನೆʼ (ʼThe Idea of Bharath) ಎಂಬ ಥೀಮ್‌ನಡಿಯಲ್ಲಿ ನಡೆಯಲಿದೆ. ಈ ಕುರಿತು … Continued

ಕಲುಷಿತ ಆಹಾರ ಸೇವನೆ: ಅಸ್ವಸ್ಥಗೊಂಡ ಮಂಗಳೂರು ನರ್ಸಿಂಗ್ ಕಾಲೇಜಿನ 173 ವಿದ್ಯಾರ್ಥಿನಿಯರು

ಮಂಗಳೂರು : ಕಲುಷಿತ ಆಹಾರ ಸೇವನೆಯಿಂದ ನಗರದ ನರ್ಸಿಂಗ್ ಕಾಲೇಜೊಂದರ 173 ಮಂದಿ ವಿದ್ಯಾರ್ಥಿನಿಯರು ಅಸ್ವಸ್ಥಗೊಂಡ ಘಟನೆ ಶಕ್ತಿನಗರದ ಹಾಸ್ಟೆಲ್‌’ನಲ್ಲಿ ಸೋಮವಾರ ನಡೆದ ವರದಿಯಾಗಿದೆ. ವಿದ್ಯಾರ್ಥಿನಿಯರ ಆರೋಗ್ಯದಲ್ಲಿ ಚೇತರಿಕೆ ಕಂಡು ಬಂದಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ವಿದ್ಯಾರ್ಥಿನಿಯರು ಸೇವಿಸಿದ್ದ ಹಾಸ್ಟೆಲ್’ನ ಆಹಾರ ಪದಾರ್ಥಗಳ ಮಾದರಿಗಳನ್ನು ಪರೀಕ್ಷೆಗಾಗಿ ಮೈಸೂರಿನ ಆಹಾರ ಸುರಕ್ಷತಾ ಸಂಸ್ಥೆಯ ಪ್ರಯೋಗಾಲಯಕ್ಕೆ ಕಳುಹಿಸಲಾಗಿದೆ. ಹಾಸ್ಟೆಲ್‌’ನ … Continued

ಸುಲಿಗೆ ಯತ್ನದ ಆರೋಪ: ಹಿಂದೂ ಮಹಾಸಭಾದ ರಾಜ್ಯಾಧ್ಯಕ್ಷನ ಬಂಧನ

ಮಂಗಳೂರು: ಚಿನ್ನ ಮತ್ತು ನಗದು ಬೇಡಿಕೆ ಈಡೇರದಿದ್ದರೆ ಉದ್ಯಮಿಯೊಬ್ಬರ ಖಾಸಗಿ ಮಾಹಿತಿ ಸೋರಿಕೆ ಮಾಡುವುದಾಗಿ ಬೆದರಿಕೆ ಹಾಕಿದ ಆರೋಪದ ಮೇಲೆ ಹಿಂದೂ ಮಹಾಸಭಾದ ಕರ್ನಾಟಕ ರಾಜ್ಯಾಧ್ಯಕ್ಷ ರಾಜೇಶ್ ಪವಿತ್ರನ್ ಅವರನ್ನು ಸುರತ್ಕಲ್ ಪೊಲೀಸರು ಬಂಧಿಸಿದ್ದಾರೆ. ಕೋವೂರು ನಿವಾಸಿ ಸುರೇಶ ಎಂಬವರು ಪೊಲೀಸರಿಗೆ ನೀಡಿದ ದೂರಿನಲ್ಲಿ ತಾವು ಮತ್ತು ಪವಿತ್ರನ್ ಸುರತ್ಕಲ್‌ನಲ್ಲಿ ಪಾಲುದಾರಿಕೆ ಆಧಾರದ ಮೇಲೆ ವ್ಯಾಪಾರ … Continued

ಮಂಗಳೂರು: ಇಸ್ಲಾಂಗೆ ಮತಾಂತರಿಸಿ ಲೈಂಗಿಕ ಕಿರುಕುಳ-ಯುವತಿಯಿಂದ ದೂರು ದಾಖಲು

ಮಂಗಳೂರು: ವ್ಯಕ್ತಿಯೋರ್ವ ತನಗೆ ಲೈಂಗಿಕ ಕಿರುಕುಳ ನೀಡಿ ಅನ್ಯ ಧರ್ಮಕ್ಕೆ ಮತಾಂತರಗೊಳಿಸಿದ್ದಾನೆ ಎಂದು ಆರೋಪಿಸಿ ಯುವತಿಯೊಬ್ಬರು ನಗರದ ಮಹಿಳಾ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ಹಿಂದೂ ಯುವತಿಯನ್ನು ಇಸ್ಲಾಂಗೆ ಮತಾಂತರ ನಡೆಸಿ ಆಯೇಷಾ ಎಂದು ಹೆಸರು ಬದಲಿಸಲಾಗಿತ್ತು. ಮತಾಂತರದ ಬಳಿಕ ಯುವತಿಗೆ ಲೈಂಗಿಕ ಕಿರುಕುಳ ನೀಡಲಾಗಿದೆ ಎಂದು ದೂರಿನಲ್ಲಿ ಹೇಳಲಾಗಿದೆ. ಬಿಕರ್ನಕಟ್ಟೆಯಲ್ಲಿರುವ ಅಂಗಡಿಯೊಂದರಲ್ಲಿ ಕೆಲಸ ಮಾಡಿಕೊಂಡಿದ್ದಾಗ … Continued

ಬೆಳ್ತಂಗಡಿ ಬಿಜೆಪಿ ಶಾಸಕ ಹರೀಶ ಪೂಂಜಾ ಕಾರು ಅಡ್ಡಗಟ್ಟಿ ತಲವಾರ್‌ ಝಳಪಿಸಿದ ದುಷ್ಕರ್ಮಿಗಳು

ಮಂಗಳೂರು: ಬೆಳ್ತಂಗಡಿ ಬಿಜೆಪಿ ಶಾಸಕ ಹರೀಶ ಪೂಂಜಾ ಕಾರಿಗೆ ಅಡ್ಡಗಟ್ಟಿ ದುಷ್ಕರ್ಮಿಯೊಬ್ಬ ತಲವಾರು ಝಳಪಿಸಿದ ಘಟನೆ ಮಂಗಳೂರು ಹೊರವಲಯದ ಪರಂಗಿಪೇಟೆಯಲ್ಲಿ ನಡೆದ ಬಗ್ಗೆ ವರದಿಯಾಗಿದೆ. ನಿನ್ನೆ ರಾತ್ರಿ ಸುಮಾರು 11:30 ಗಂಟೆ ಶಾಸಕರು ತೆರಳುತ್ತಿದ್ದ ಕಾರು ಅಡ್ಡಗಟ್ಟಿ ಬೆದರಿಕೆ ಹಾಕಿದ್ದಾರೆ ಎಂದು ದೂರು ದಾಖಲಾಗಿದೆ. ಬೆಳ್ತಂಗಡಿಗೆ ಶಾಸಕ ಹರೀಶ ಪೂಂಜಾ ತನ್ನ ಕಾರನ್ನು ಬಿಟ್ಟು ಸಂಬಂಧಿಯೋರ್ವರ … Continued

ನಸುಕಿನ ಜಾವ ಬೆಂಗಳೂರು, ಮಂಗಳೂರು, ಶಿರಸಿ ಸೇರಿ ರಾಜ್ಯದ ಹಲವೆಡೆ ಏಕಕಾಲಕ್ಕೆ ಎನ್‌ಐಎ ದಾಳಿ

ಬೆಂಗಳೂರು: ಗುರುವಾರ ನಸುಕಿನ ಜಾವ ಬೆಂಗಳೂರು, ಮಂಗಳೂರು, ಶಿರಸಿ ಸೇರಿದಂತೆ ರಾಜ್ಯದ ಹಲವೆಡೆ ರಾಷ್ಟ್ರೀಯ ತನಿಖಾ ದಳದ (NIA) ಅಧಿಕಾರಿಗಳು ಏಕಕಾಲಕ್ಕೆ ದಾಳಿ ನಡೆಸಿದ್ದಾರೆ. ಪಿಎಫ್​ಐ, ಎಸ್​ಡಿಪಿಐ ಪದಾಧಿಕಾರಿಗಳ ಮನೆಗಳು ಹಾಗೂ ಪಿಎಫ್​ಐ ಕಚೇರಿಗಳ ಮೇಲೆ ದಾಳಿ ನಡೆಸಲಾಗಿದೆ. ಕರ್ನಾಟಕದಲ್ಲಿ ಬೆಂಗಳೂರು, ಶಿವಮೊಗ್ಗ, ಮಂಗಳೂರು, ಉತ್ತರ ಕನ್ನಡ, ಕೊಪ್ಪಳ ಹಾಗೂ ಕಲಬುರಗಿ ಜಿಲ್ಲೆಗಳಲ್ಲಿ ದಾಳಿಗಳನ್ನು ನಡೆಸಲಾಗಿದೆ. … Continued

ಪೊಲೀಸರ ಮೇಲೆ ಹಲ್ಲೆಗೆ ಯತ್ನಿಸಿದ ರೌಡಿಶೀಟರ್‌: ಪೊಲೀಸರಿಂದ ಫೈರಿಂಗ್

ಮಂಗಳೂರು: ಪ್ರಕರಣವೊಂದಕ್ಕೆ ಸಂಬಂಧಿಸಿದಂತೆ ಮಹಜರಿಗೆ ತೆರಳುವ ವೇಳೆ ಪೊಲೀಸರ ಕೈಯಿಂದ ತಪ್ಪಿಸಿಕೊಳ್ಳಲು ಯತ್ನಿಸಿದ ರೌಡಿಶೀಟರ್ ಮೇಲೆ ಪೊಲೀಸರು ಫೈರಿಂಗ್ ನಡೆಸಿರುವ ಘಟನೆ ಕೊಣಾಜೆ‌ ಪೊಲೀಸ್ ಠಾಣಾ ವ್ಯಾಪ್ತಿಯ ಅಸೈಗೋಳಿ ಎಂಬಲ್ಲಿ ನಡೆದಿದೆ. ಘಟನೆಯಲ್ಲಿ ಇಬ್ಬರು ಪೊಲೀಸ್ ಸಿಬ್ಬಂದಿ ಸಹ ಗಾಯಗೊಂಡಿದ್ದಾರೆ. 14ಕ್ಕೂ ಹೆಚ್ಚು ಪ್ರಕರಣದ ಆರೋಪಿ ರೌಡಿಶೀಟರ್ ಮುಕ್ತಾರ್ ಎಂಬವರ ಮೇಲೆ ಪೊಲೀಸರು ಫೈರಿಂಗ್ ಮಾಡಿದ್ದಾರೆ. … Continued

ಮೀನುಗಾರರ ಬಲೆಗೆ ಬಿದ್ದ ಅಪರೂಪದ ಹಾರುವ ಮೀನು..!

ಮಂಗಳೂರು : ಅಪರೂಪದ ಎರಡು ಹಾರುವ ಮೀನುಗಳು ಮಂಗಳೂರಿನ ಮೀನುಗಾರರ ಬಲೆಗೆ ಬಿದ್ದಿದ್ದು, ಇದನ್ನು ಆಂಗ್ಲ ಭಾಷೆಯಲ್ಲಿ ಫ್ಲೈಯಿಂಗ್‌ ​ ಫಿಶ್​ ಎಂದು ಕರೆಯುತ್ತಾರೆ. ಮಂಗಳೂರಿನ ಮೀನುಗಾರರ ಬಲೆಗೆ ಅಪರೂಪದ ಹಾರುವ ಎರಡು ಮೀನುಗಳು ಬಿದ್ದಿವೆ. ಎರಡು ದಿನ ಹಿಂದೆ ದಕ್ಕೆಗೆ ಬಂದಿರುವ ಮೀನಿನ ರಾಶಿಯಲ್ಲಿ ಎರಡು ಹಾರುವ ಮೀನು ಸಿಕ್ಕಿವೆ ಎಂದು ಹೇಳಲಾಗಿದೆ. ತುಳುವಲ್ಲಿ … Continued