ಮಣಿಪಾಲ | ಹಣಕ್ಕಾಗಿ ತಾಯಿಯ ಕತ್ತು ಹಿಸುಕಿ ಕೊಲೆ ಮಾಡಿದ ಮಗ : ಮರಣೋತ್ತರ ಪರೀಕ್ಷೆಯಿಂದ ಪ್ರಕರಣ ಬೆಳಕಿಗೆ

ಉಡುಪಿ : ಮಗನೊಬ್ಬ ಹಣಕ್ಕಾಗಿ ಹೆತ್ತ ತಾಯಿಯನ್ನೇ ಕತ್ತು ಹಿಸುಕಿ ಕೊಲೆ ಮಾಡಿದ ಘಟನೆ ಮಣಿಪಾಲ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ ಎಂದು ವರದಿಯಾಗಿದೆ. ಪದ್ಮಾಬಾಯಿ(45) ಎಂದು ಗುರುತಿಸಲಾದ ಮಹಿಳೆ ಕೊಲೆಯಾಗಿದ್ದು, ಮಗ ಈಶ ನಾಯಕ್‌ (26) ಕೊಲೆ ಆರೋಪಿಯಾಗಿದ್ದಾನೆ. ಜೂ.18ರಂದು ರಾತ್ರಿ ಪದ್ಮಾಬಾಯಿ ಸೊಂಟ ನೋವಿನಿಂದ ಉಡುಪಿ ಜಿಲ್ಲಾ ಸರಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆಗಾಗಿ ದಾಖಲಾಗಿದ್ದರು. ಅಂದು … Continued

ರೈಲಿನಲ್ಲಿ ಯುವತಿಗೆ ಲೈಂಗಿಕ ಕಿರುಕುಳ: 20 ಗಂಟೆಯೊಳಗೆ ಭಟ್ಕಳದಲ್ಲಿ ಆರೋಪಿ ಬಂಧನ

ಉಡುಪಿ: ಬೆಂಗಳೂರು-ಮುರುಡೇಶ್ವರ ರೈಲಿನಲ್ಲಿ ಪ್ರಯಾಣಿಸುತ್ತಿದ್ದ ಯುವತಿಯೊಂದಿಗೆ ಅನುಚಿತವಾಗಿ ವರ್ತಿಸಿದ ಆರೋಪದ ಮೇಲೆ ಮಣಿಪಾಲ ಪೊಲೀಸರು ಭಟ್ಕಳ ಮೂಲದ ವ್ಯಕ್ತಿಯನ್ನು ಬಂಧಿಸಿದ್ದಾರೆ. ಸಂತ್ರಸ್ತೆ ನೀಡಿದ ಫೋಟೋ ಆಧರಿಸಿ ಅಪರಾಧ ನಡೆದ ೨೦ ಗಂಟೆಯೊಳಗೆ ಬಂಧಿಸಿದ್ದಾರೆ. ಭಟ್ಕಳದ ಶುರೈಮ್‌ (22) ಬಂಧಿತ ವ್ಯಕ್ತಿ. ಬೆಂಗಳೂರಿನ ಐಟಿ ಕಂಪನಿಯಲ್ಲಿ ಕೆಲಸ ಮಾಡುತ್ತಿರುವ ಉಡುಪಿ ಮೂಲದ ಯುವತಿ ಎರಡು ದಿನಗಳ ಹಿಂದೆ … Continued

ಮಣಿಪಾಲ ಪೈ ಕುಟುಂಬದ ಹಿರಿಯ ಚೇತನ, ಉದಯವಾಣಿ ಸಂಸ್ಥಾಪಕ ಟಿ. ಮೋಹನದಾಸ್ ಪೈ ಇನ್ನಿಲ್ಲ

ಉಡುಪಿ: ಮಣಿಪಾಲದ ಪೈ ಕುಟುಂಬದ ಹಿರಿಯರು, ‘ಉದಯವಾಣಿ’ ಸಂಸ್ಥಾಪಕರಾಗಿದ್ದ ತೋನ್ಸೆ ಮೋಹನದಾಸ್ ಪೈ (89) ಅಸೌಖ್ಯದಿಂದ ಭಾನುವಾರ, ಜುಲೈ31ರಂದು ಮಣಿಪಾಲದ ಆಸ್ಪತ್ರೆಯಲ್ಲಿ ನಿಧನರಾದರು. ಮೃತರು ತಮ್ಮಂದಿರಾದ ಡಾ.ಟಿ.ರಾಮದಾಸ್ ಪೈ, ಟಿ.ನಾರಾಯಣ ಪೈ, ಟಿ.ಅಶೋಕ್ ಪೈ, ತಂಗಿಯರಾದ ವಸಂತಿ ಆರ್. ಶೆಣೈ, ಜಯಂತಿ ಪೈ, ಇಂದುಮತಿ ಪೈ, ಆಶಾ ಪೈ, ಸಹೋದರ ಟಿ.ಸತೀಶ್ ಯು. ಪೈ ಅವರನ್ನು … Continued

ನಡು ರಸ್ತೆಯಲ್ಲಿ ಹೊತ್ತಿ ಉರಿದ ಬಸ್…!

ಉಡುಪಿ: ನಡುರಸ್ತೆಯಲ್ಲಿ ಖಾಸಗಿ ಬಸ್  ನಡು ರಸ್ತೆಯಲ್ಲಿ ಹೊತ್ತಿ ಉರಿದ ಘಟನೆ ಮಣಿಪಾಲದಲ್ಲಿ ಬುಧವಾರ ಮುಂಜಾನೆ ನಡೆದಿದೆ. ಖಾಸಗಿ ಬಸ್ ಬಳ್ಳಾರಿಯ ಕೊಟ್ಟೂರಿನಿಂದ ಮಂಗಳೂರಿಗೆ ಹೋಗುತ್ತಿತ್ತು. ಮಣಿಪಾಲದ ಟೈಗರ್ ಸರ್ಕಲ್ ಬಳಿ ಬರುತ್ತಿದ್ದಂತೆ ಬಸ್‌ ಹೊತ್ತಿ ಉರಿದಿದೆ. ಶಾರ್ಟ್ ಸರ್ಕ್ಯೂಟ್ ನಿಂದ ಬಸ್ಸಿಗೆ ಬೆಂಕಿ ಹೊತ್ತಿಕೊಂಡಿದೆ ಎನ್ನಲಾಗಿದೆ. ಪ್ರಾರಂಭದಲ್ಲಿ ಚಾಲಕನ ಸ್ಥಳದಲ್ಲಿ ಬೆಂಕಿ ಕಾಣಿಸಿಕೊಂಡಿತ್ತು. ತಕ್ಷಣ … Continued

ಮಣಿಪಾಲ ಎಂಐಟಿಯಲ್ಲಿ  10 ದಿನದಲ್ಲಿ 770 ವಿದ್ಯಾರ್ಥಿಗಳಿಗೆ ಕೊರೊನಾ  

ಉಡುಪಿ: ಮಣಿಪಾಲದ ಎಂಐಟಿ ಕಾಲೇಜಿನ ವಿದ್ಯಾರ್ಥಿಗಳಲ್ಲಿ ಹೆಚ್ಚಿದ ಸೋಂಕಿನಿಂದಾಗಿ ಉಡುಪಿ ಜಿಲ್ಲೆಯಲ್ಲಿ ಏಕದಿನದ ಕೊರೋನಾ ಸೋಂಕಿತರ ಸಂಖ್ಯೆಯಲ್ಲಿ ಏರಿಕೆಯಾಗುತ್ತಿದ್ದು, ಶುಕ್ರವಾರ 210ಕ್ಕೆ ಏರಿಕೆಯಾಗಿದೆ. ಶುಕ್ರವಾರ ಒಂದೇ ದಿನ ಎಂಐಟಿ 184 ವಿದ್ಯಾರ್ಥಿಗಳಲ್ಲಿ ಕೊರೋನಾ ವೈರಸ್ ಪತ್ತೆಯಾಗಿದೆ. 10-12 ದಿನಗಳಲ್ಲಿ ಸುಮಾರು 770 ವಿದ್ಯಾರ್ಥಿಗಳಲ್ಲಿ ಸೋಂಕು ಪತ್ತೆಯಾಗಿದೆ. ಎರಡುವಾರದ ಹಿಂದೆ ಎಂಐಟಿಯಲ್ಲಿ ಆಫ್’ಲೈನ್ ಎಂಜಿನಿಯರಿಂಗ್ ತರಗತಿಗಳನ್ನು ಆರಂಭವಾಗಿದ್ದವು. … Continued