ಮಣಿಪುರ | ಸರ್ಕಾರ ರಚಿಸಲು 44 ಶಾಸಕರು ಸಿದ್ಧ ; ರಾಜ್ಯಪಾಲರ ಭೇಟಿ ಬಳಿಕ ಬಿಜೆಪಿ ನಾಯಕನ ಹೇಳಿಕೆ

ಇಂಫಾಲ : ಮಣಿಪುರದಲ್ಲಿ ಹೊಸ ಸರ್ಕಾರ ರಚಿಸಲು 44 ಶಾಸಕರು ಸಿದ್ಧರಿದ್ದಾರೆ ಎಂದು ಬಿಜೆಪಿ ಶಾಸಕ ಥೋಕ್ಚೋಮ್ ರಾಧೇಶ್ಯಾಮ ಸಿಂಗ್ ಅವರು ಬುಧವಾರ ರಾಜ್ಯಪಾಲ ಅಜಯಕುಮಾರ ಭಲ್ಲಾ ಅವರನ್ನು ಭೇಟಿ ಮಾಡಿದ ನಂತರ ಹೇಳಿದ್ದಾರೆ. ರಾಧೆಶ್ಯಾಮ ಸಿಂಗ್‌ ಮತ್ತು ಇತರ ಒಂಬತ್ತು ಶಾಸಕರು ಬುಧವಾರ ರಾಜಭವನದಲ್ಲಿ ರಾಜ್ಯಪಾಲರನ್ನು ಭೇಟಿಯಾದರು. “ಜನರ ಇಚ್ಛೆಯಂತೆ 44 ಶಾಸಕರು ಸರ್ಕಾರ … Continued

ಬಿರೇನ್ ಸಿಂಗ್ ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಿದ ಕೆಲವೇ ದಿನಗಳಲ್ಲಿ ಮಣಿಪುರದಲ್ಲಿ ರಾಷ್ಟ್ರಪತಿ ಆಳ್ವಿಕೆ ಜಾರಿ

ನವದೆಹಲಿ: ಎನ್ ಬಿರೇನ್ ಸಿಂಗ್ ಅವರು ರಾಜೀನಾಮೆ ನೀಡಿದ ಮೂರು ದಿನಗಳ ನಂತರವೂ ಮುಖ್ಯಮಂತ್ರಿ ಸ್ಥಾನಕ್ಕೆ ಯಾವುದೇ ಒಮ್ಮತ ಮೂಡದ ಕಾರಣ ಮಣಿಪುರವನ್ನು ರಾಷ್ಟ್ರಪತಿ ಆಳ್ವಿಕೆ ಜಾರಿ ಮಾಡಲಾಗಿದೆ. ರಾಜ್ಯ ವಿಧಾನಸಭೆಯನ್ನು ತಾತ್ಕಾಲಿಕವಾಗಿ ಅಮಾನತಿನಲ್ಲಿ ಇಡಲಾಗಿದೆ. ಭಾನುವಾರ ಮುಖ್ಯಮಂತ್ರಿ ಸ್ಥಾನಕ್ಕೆ ಎನ್ ಬಿರೇನ್ ಸಿಂಗ್ ರಾಜೀನಾಮೆ ನೀಡಿದ ಹಿನ್ನೆಲೆಯಲ್ಲಿ ಸೋಮವಾರದಿಂದ ಆರಂಭವಾಗಬೇಕಿದ್ದ ಬಜೆಟ್ ಅಧಿವೇಶನವನ್ನು ರಾಜ್ಯಪಾಲ … Continued

ಮಣಿಪುರದ ಮುಂದಿನ ಮುಖ್ಯಮಂತ್ರಿ ಯಾರು? ಐದಾರು ಹೆಸರುಗಳು ಮುಂಚೂಣಿಯಲ್ಲಿ…

ಮಣಿಪುರದ ಮುಖ್ಯಮಂತ್ರಿ ಸ್ಥಾನಕ್ಕೆ ಭಾನುವಾರ ಎನ್. ಬಿರೇನ್ ಸಿಂಗ್ ಅವರ ಹಠಾತ್ ಮತ್ತು ಅನಿರೀಕ್ಷಿತ ರಾಜೀನಾಮೆ ನೀಡಿದ ನಂತರ ಮಣಿಪುರದ ಮುಂದಿನ ಮುಖ್ಯಮಂತ್ರಿ ಯಾರಾಗಬಹುದು ಹಲವು ಹೆಸರುಗಳು ಮೆನ್ನೆಲೆಗೆ ಬಂದಿವೆ. ಹಿಂಸಾಚಾರ ಪೀಡಿತ ರಾಜ್ಯದ ಮುಂದಿನ ಮುಖ್ಯಮಂತ್ರಿಯಾಗಿ ಯಾರು ಅಧಿಕಾರ ಸ್ವೀಕರಿಸುತ್ತಾರೆ ಎಂಬ ಪ್ರಶ್ನೆಗಳು ಎದ್ದಿವೆ. ಭಾರತೀಯ ಜನತಾ ಪಕ್ಷ (ಬಿಜೆಪಿ) ಇನ್ನೂ ಅಧಿಕೃತ ಹೇಳಿಕೆ … Continued

ಮಣಿಪುರ : ಮುಖ್ಯಮಂತ್ರಿ ಸ್ಥಾನಕ್ಕೆ ಬಿರೇನ್ ಸಿಂಗ್ ರಾಜೀನಾಮೆ

ಗುವಾಹತಿ : ಮಣಿಪುರ ಮುಖ್ಯಮಂತ್ರಿ ಎನ್. ಬಿರೇನ್ ಸಿಂಗ್ ಅವರು ಭಾನುವಾರ ರಾಜೀನಾಮೆ ನೀಡಿದ್ದಾರೆ. ರಾಜ್ಯದಲ್ಲಿ ಜನಾಂಗೀಯ ಹಿಂಸಾಚಾರ ಭುಗಿಲೆದ್ದ ಎರಡು ವರ್ಷಗಳ ನಂತರ ಅವರು ರಾಜೀನಾಮೆ ನೀಡಿದ್ದಾರೆ. ಅವರ ನಾಯಕತ್ವದ ವಿರುದ್ಧ ರಾಜ್ಯ ಬಿಜೆಪಿಯಲ್ಲಿನ ಭಿನ್ನಾಭಿಪ್ರಾಯ ಶಮನಗೊಳಿಸಲು ಅವರು ರಾಜೀನಾಮೆ ನೀಡಿದ್ದಾರೆ ಎಂದು ಹೇಳಲಾಗಿದೆ. ಸರ್ಕಾರವು ಕಾಂಗ್ರೆಸ್ ಅವಿಶ್ವಾಸ ನಿರ್ಣಯ ಮತ್ತು ಬಹುಮತ ಪರೀಕ್ಷೆಯ … Continued

ಆಘಾತಕಾರಿ ವೀಡಿಯೊ…| ಮಣಿಪುರದಲ್ಲಿ ಎಕೆ-47 ರೈಫಲ್‌ ಗಳನ್ನು ಹಿಡಿದು ಮೈದಾನದಲ್ಲಿ ಫುಟ್ಬಾಲ್ ಆಡಿದ ಆಟಗಾರರು..! ವೀಡಿಯೊ ವೈರಲ್

ಫುಟ್​ಬಾಲ್ ಪಂದ್ಯದ ವೇಳೆ ಆಟಗಾರರು ರೈಫಲ್ ಹಿಡಿದು ಕಣಕ್ಕಿಳಿದ ಘಟನೆ ನಡೆದಿದೆ. ಈ ವಿದ್ಯಮಾನ ಭಾರತದಲ್ಲಿಯೇ ನಡೆದಿದ್ದು, ನಡೆದಿರುವುದು ಮಣಿಪುರದಲ್ಲಿ ನಡೆದ ಫುಟ್​ಬಾಲ್ ಪಂದ್ಯದ ವೇಳೆ ತಂಡವೊಂದರ ಆಟಗಾರರು ಎಕೆ-47 ರೈಫಲ್‌ಗಳನ್ನು ಹಿಡಿದು ಮೈದಾನದಲ್ಲಿ ಕಾಣಿಸಿಕೊಂಡಿದ್ದಾರೆ. ಹಸಿರು ಫುಟ್‌ಬಾಲ್ ಜರ್ಸಿ, ಮೊಣಕಾಲು ಎತ್ತರದ ಸಾಕ್ಸ್ ಮತ್ತು ಶಾರ್ಟ್ಸ್ ಧರಿಸಿದ ವ್ಯಕ್ತಿಯೊಬ್ಬ ಧೂಳಿನ ಮೈದಾನದಲ್ಲಿ ಫುಟ್‌ಬಾಲ್ ಪಂದ್ಯಕ್ಕೆ … Continued

ಮಾಜಿ ಗೃಹ ಕಾರ್ಯದರ್ಶಿ ಅಜಯಕುಮಾರ ಭಲ್ಲಾ ಮಣಿಪುರದ ನೂತನ ರಾಜ್ಯಪಾಲ ; ಮಿಜೋರಾಂಗೆ ವಿ.ಕೆ. ಸಿಂಗ್ ನೇಮಕ

ನವದೆಹಲಿ: ಕೇಂದ್ರದ ಮಾಜಿ ಗೃಹ ಕಾರ್ಯದರ್ಶಿ ಅಜಯಕುಮಾರ ಭಲ್ಲಾ ಅವರನ್ನು ಮಣಿಪುರದ ನೂತನ ರಾಜ್ಯಪಾಲರನ್ನಾಗಿ ನೇಮಿಸಲಾಗಿದೆ. ರಾಷ್ಟ್ರಪತಿ ಭವನದಿಂದ ಈ ನೇಮಕಾತಿಯನ್ನು ಹೊರಡಿಸಲಾಗಿದೆ. ಅಲ್ಲದೆ, ಮಾಜಿ ಕೇಂದ್ರ ಸಚಿವ ಹಾಗೂ ನಿವೃತ್ತ ಸೇನಾ ಮುಖ್ಯಸ್ಥ ಜನರಲ್ ವಿಜಯಕುಮಾರ ಸಿಂಗ್ (Vijay Kumar Singh) ಅವರನ್ನು ಮಿಜೋರಾಂನ ನೂತನ ರಾಜ್ಯಪಾಲರನ್ನಾಗಿ ನೇಮಿಸಲಾಗಿದೆ. ಕೇರಳ ರಾಜ್ಯಪಾಲ ಆರಿಫ್ ಮೊಹಮ್ಮದ್ … Continued

ಮಣಿಪುರದಲ್ಲಿ ಬಿರೇನ್ ಸಿಂಗ್ ಸರ್ಕಾರಕ್ಕೆ ಬೆಂಬಲ ಹಿಂಪಡೆದ ಬಿಜೆಪಿ ಮಿತ್ರಪಕ್ಷ ಎನ್‌ಪಿಪಿ

ನವದೆಹಲಿ: ಕಾನ್ರಾಡ್ ಸಂಗ್ಮಾ ನೇತೃತ್ವದ ನ್ಯಾಷನಲ್ ಪೀಪಲ್ಸ್ ಪಾರ್ಟಿ (ಎನ್‌ಪಿಪಿ) ಭಾನುವಾರ ಎನ್. ಬಿರೇನ್ ಸಿಂಗ್ ನೇತೃತ್ವದ ಬಿಜೆಪಿ ನೇತೃತ್ವದ ಮಣಿಪುರ ಸರ್ಕಾರಕ್ಕೆ ತನ್ನ ಬೆಂಬಲವನ್ನು ಹಿಂತೆಗೆದುಕೊಂಡಿದೆ ಮತ್ತು ಮಣಿಪುರದಲ್ಲಿ ಚಾಲ್ತಿಯಲ್ಲಿರುವ ಕಾನೂನು ಮತ್ತು ಸುವ್ಯವಸ್ಥೆಯ ಪರಿಸ್ಥಿತಿಯ ಬಗ್ಗೆ “ತೀವ್ರ ಕಳವಳ” ವ್ಯಕ್ತಪಡಿಸಿದೆ. ಎನ್‌ಪಿಪಿ ಮತ್ತು ಬಿಜೆಪಿ ರಾಷ್ಟ್ರೀಯ ಪ್ರಜಾಸತ್ತಾತ್ಮಕ ಒಕ್ಕೂಟ (ಎನ್‌ಡಿಎ) ಒಕ್ಕೂಟದ ಭಾಗವಾಗಿದೆ. … Continued

ಸಚಿವರ ಮನೆಗಳ ಮೇಲೆ ದಾಳಿಯ ನಂತರ ಮಣಿಪುರ ಸಿಎಂ ಮನೆಗೆ ನುಗ್ಗಲು ಯತ್ನಿಸಿದ ಉದ್ರಿಕ್ತ ಗುಂಪು

ಇಂಫಾಲ: ಶನಿವಾರ ಜನರ ಗುಂಪು ಇಂಫಾಲದಲ್ಲಿರುವ ಮಣಿಪುರ ಮುಖ್ಯಮಂತ್ರಿ ಎನ್. ಬಿರೇನ್ ಸಿಂಗ್ ಅವರ ಖಾಸಗಿ ನಿವಾಸಕ್ಕೆ ನುಗ್ಗಲು ಪ್ರಯತ್ನಿಸಿದೆ. ನಂತರ ಗುಂಪನ್ನು ಚದುರಿಸಲು ಭದ್ರತಾ ಅಧಿಕಾರಿಗಳು ಅಶ್ರುವಾಯು ಶೆಲ್‌ಗಳನ್ನು ಸಿಡಿಸಿದ್ದಾರೆ ಎಂದು ವರದಿಯಾಗಿದೆ. ಘಟನೆಯ ಸಂದರ್ಭದಲ್ಲಿ ಮುಖ್ಯಮಂತ್ರಿ ಮುಖ್ಯಮಂತ್ರಿ ಎನ್. ಬಿರೇನ್ ಸಿಂಗ್ ತಮ್ಮ ನಿವಾಸದಲ್ಲಿ ಇರಲಿಲ್ಲ. ಸೋಮವಾರ ಜಿರಿಬಾಮ್‌ನಿಂದ ನಾಪತ್ತೆಯಾದ ಆರು ಮಂದಿಯಲ್ಲಿ … Continued

ಮಣಿಪುರದ ಜಿರಿಬಾಂನಲ್ಲಿ ಗುಂಡಿನ ಚಕಮಕಿ; 10 ಶಂಕಿತ ಕುಕಿ ಬಂಡುಕೋರರ ಸಾವು

ನವದೆಹಲಿ/ಇಂಫಾಲ್ : ಮಣಿಪುರದ ಜಿರಿಬಾಮ್ ಜಿಲ್ಲೆಯಲ್ಲಿ ಸೋಮವಾರ ಭದ್ರತಾ ಪಡೆಗಳು ನಡೆಸಿದ ಎನ್‌ಕೌಂಟರ್‌ನಲ್ಲಿ ಕನಿಷ್ಠ 10 ಶಂಕಿತ ಕುಕಿ ಬಂಡುಕೋರರನ್ನು ಹೊಡೆದುರುಳಿಸಲಾಗಿದೆ ಎಂದು ಮೂಲಗಳು ತಿಳಿಸಿವೆ. ಅಸ್ಸಾಂ ಗಡಿ ಜಿಲ್ಲೆಯಲ್ಲಿ ಶಂಕಿತ ಕುಕಿ ಉಗ್ರರು ನಡೆಸಿದ ದಾಳಿಯಲ್ಲಿ ಕೇಂದ್ರೀಯ ಮೀಸಲು ಪೊಲೀಸ್ ಪಡೆ (ಸಿಆರ್‌ಪಿಎಫ್) ಯೋಧ ಗಾಯಗೊಂಡಿದ್ದಾರೆ ಎಂದು ಮೂಲಗಳು ತಿಳಿಸಿವೆ. ಯೋಧನನ್ನು ಅಸ್ಸಾಂನ ಸಿಲ್ಚಾರ್ … Continued

ಮ್ಯಾನ್ಮಾರ್‌ನಿಂದ ಮಣಿಪುರ ಪ್ರವೇಶಿಸಿದ ಶಸ್ತ್ರಸಜ್ಜಿತ 900 ಕುಕಿ ಉಗ್ರಗಾಮಿಗಳು ; ಮಣಿಪುರ ಸರ್ಕಾರದ ಎಚ್ಚರಿಕೆ

ಇಂಫಾಲ್ : ಮ್ಯಾನ್ಮಾರ್‌ನಿಂದ ತರಬೇತಿ ಪಡೆದ 900 ಶಸ್ತ್ರಸಜ್ಜಿತ ಉಗ್ರಗಾಮಿಗಳು ಮಣಿಪುರದಲ್ಲಿ ಭಾರತದ ಭೂಪ್ರದೇಶವನ್ನು ಪ್ರವೇಶಿಸಿದ್ದಾರೆ ಎಂಬ ಗುಪ್ತಚರ ವರದಿಯನ್ನು ಭದ್ರತಾ ಮುಖ್ಯಸ್ಥರೊಂದಿಗೆ ಹಂಚಿಕೊಳ್ಳಲಾಗಿದೆ ಎಂದು ಮಣಿಪುರ ಸರ್ಕಾರದ ಭದ್ರತಾ ಸಲಹೆಗಾರ ಕುಲ್ದೀಪ್ ಸಿಂಗ್ ಹೇಳಿದ್ದಾರೆ. ಗಡಿ ಪ್ರದೇಶಗಳು ಸೇರಿದಂತೆ ಆಯಕಟ್ಟಿನ ಪ್ರದೇಶಗಳಲ್ಲಿ ರಾಜ್ಯ ಮತ್ತು ಕೇಂದ್ರ ಭದ್ರತಾ ಏಜೆನ್ಸಿಗಳ ಸಂಯೋಜಿತ ಪಡೆಗಳನ್ನು ಎಚ್ಚರಿಸಲಾಗಿದೆ ಎಂದು … Continued