ಅರವಿಂದ ಕೇಜ್ರಿವಾಲ್, ಇತರ ಎಎಪಿ ನಾಯಕರ ವಿರುದ್ಧ ನ್ಯಾಯಾಂಗ ನಿಂದನೆ ಪ್ರಕ್ರಿಯೆ ಆರಂಭ

ನವದೆಹಲಿ: ದೆಹಲಿ ಮದ್ಯ ನೀತಿ ಹಗರಣಕ್ಕೆ ಸಂಬಂಧಿಸಿದಂತೆ ಸಾಮಾಜಿಕ ಜಾಲತಾಣಗಳಲ್ಲಿ ತಮ್ಮ ವಿರುದ್ಧ ಅವಹೇಳನಕಾರಿ ಅಭಿಯಾನ ನಡೆಸಿದ ಆರೋಪದ ಮೇಲೆ ಆಮ್ ಆದ್ಮಿ ಪಕ್ಷದ (AAP) ನಾಯಕರುಗಳಾದ ಅರವಿಂದ ಕೇಜ್ರಿವಾಲ್, ಮನೀಶ್ ಸಿಸೋಡಿಯಾ ಮತ್ತು ಇತರರ ವಿರುದ್ಧ ದೆಹಲಿ ಹೈಕೋರ್ಟ್‌ನ ನ್ಯಾಯಮೂರ್ತಿ ಸ್ವರ್ಣ ಕಾಂತ ಶರ್ಮಾ ಅವರು ಗುರುವಾರ ನ್ಯಾಯಾಂಗ ನಿಂದನೆ ಪ್ರಕ್ರಿಯೆಯನ್ನು ಪ್ರಾರಂಭಿಸಿದ್ದಾರೆ ಎಂದು … Continued

ದೆಹಲಿ ಅಬಕಾರಿ ನೀತಿ ಪ್ರಕರಣ: ಮಾಜಿ ಸಿಎಂ ಕೇಜ್ರಿವಾಲ್, ಮಾಜಿ ಡಿಸಿಎಂ ಸಿಸೋಡಿಯಾ ಖುಲಾಸೆ

ನವದೆಹಲಿ : ದೆಹಲಿಯ ವಿವಾದಿತ ಅಬಕಾರಿ ನೀತಿ ಹಗರಣಕ್ಕೆ ಸಂಬಂಧಿಸಿದ ಭ್ರಷ್ಟಾಚಾರದ ಆರೋಪದಿಂದ ಮಾಜಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಮತ್ತು ಮಾಜಿ ಉಪಮುಖ್ಯಮಂತ್ರಿ ಮನೀಶ ಸಿಸೋಡಿಯಾ ಸೇರಿ ಸೇರಿ ಎಲ್ಲಾ 23 ಆರೋಪಿಗಳನ್ನು ದೆಹಲಿ ನ್ಯಾಯಾಲಯ ಶುಕ್ರವಾರ ಖುಲಾಸೆಗೊಳಿಸಿದೆ. “ಅಬಕಾರಿ ನೀತಿಯಲ್ಲಿ ಯಾವುದೇ ರೀತಿಯ ಪಿತೂರಿ ಅಥವಾ ಕ್ರಿಮಿನಲ್ ಉದ್ದೇಶ ಕಂಡುಬಂದಿಲ್ಲ” ಎಂದು ನ್ಯಾಯಾಲಯವು ತನ್ನ … Continued

ದೆಹಲಿ ವಿಧಾನಸಭೆ ಚುನಾವಣೆ ; ಆಮ್‌ ಆದ್ಮಿ ಪಾರ್ಟಿಗೆ ಆಘಾತ ; ಪಕ್ಷದ ಮುಖ್ಯಸ್ಥ ಅರವಿಂದ ಕೇಜ್ರಿವಾಲ್‌, ಮಾಜಿ ಡಿಸಿಎಂ ಸಿಸೋಡಿಯಾಗೆ ಸೋಲು

 ನವದೆಹಲಿ : ದೆಹಲಿ ವಿಧಾನಸಭೆ ಚುನಾವಣೆಯಲ್ಲಿ ಆಮ್ ಆದ್ಮಿ ಪಕ್ಷದ ಮುಖ್ಯಸ್ಥ ಹಾಗೂ ದೆಹಲಿಯ ಮಾಜಿ ಮುಖ್ಯಮಂತ್ರಿ ಅರವಿಂದ ಕೆಜ್ರಿವಾಲ್ ಅವರು ಸೋಲನುಭವಿಸಿದ್ದಾರೆ. ಎಎಪಿ ಮುಖ್ಯಸ್ಥ ಮತ್ತು ದೆಹಲಿಯ ಮಾಜಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರು ಅಣ್ಣಾ ಹಜಾರೆ ನೇತೃತ್ವದ ಭ್ರಷ್ಟಾಚಾರ ವಿರೋಧಿ ಆಂದೋಲನದಿಂದ ಪ್ರವರ್ಧಮಾನಕ್ಕೆ ಏರಿದ ಅರವಿಂದ ಕೇಜ್ರಿವಾಲ್‌ ಅವರು ಮಾಜಿ ಮುಖ್ಯಮಂತ್ರಿಯ ಸಾಹಿಬ್‌ … Continued

ಅರವಿಂದ ಕೇಜ್ರಿವಾಲ್‌, ಸಿಸೊಡಿಯಾಗೆ ಹೊಸ ಸಂಕಷ್ಟ ; ದೆಹಲಿ ಮದ್ಯನೀತಿ ಪ್ರಕರಣದಲ್ಲಿ ಇ.ಡಿ.ವಿಚಾರಣೆಗೆ ಕೇಂದ್ರದ ಒಪ್ಪಿಗೆ

ನವದೆಹಲಿ: ದೆಹಲಿ ಚುನಾವಣೆಗೆ ಮುನ್ನ ಆಮ್ ಆದ್ಮಿ ಪಕ್ಷದ (ಎಎಪಿ) ಮುಖ್ಯಸ್ಥ ಹಾಗೂ ದೆಹಲಿ ಮಾಜಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್‌ಗೆ ಹೊಸ ಸಂಕಷ್ಟ ಎದುರಾಗಿದೆ. ಕೇಂದ್ರ ಗೃಹ ಸಚಿವಾಲಯವು ಈಗ ರದ್ದಾಗಿರುವ ಮದ್ಯ ನೀತಿ ಹಗರಣಕ್ಕೆ ಸಂಬಂಧಿಸಿದ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಅರವಿಂದ ಕೇಜ್ರಿವಾಲ್‌ ಅವರನ್ನು ವಿಚಾರಣೆಗೆ ಒಳಪಡಿಸಲು ಜಾರಿ ನಿರ್ದೇಶನಾಲಯಕ್ಕೆ ಅನುಮತಿ ನೀಡಿದೆ. … Continued

ಇ.ಡಿ., ಸಿಬಿಐ ಎರಡೂ ಪ್ರಕರಣಗಳಲ್ಲಿ ಮನೀಶ ಸಿಸೋಡಿಯಾಗೆ ಸುಪ್ರೀಂ ಕೋರ್ಟ್ ಜಾಮೀನು

ನವದೆಹಲಿ: ದೆಹಲಿ ಅಬಕಾರಿ ನೀತಿ ಪ್ರಕರಣಕ್ಕೆ ಸಂಬಂಧಿಸಿದಂತೆ ಆಮ್ ಆದ್ಮಿ ಪಕ್ಷದ (ಎಪಿಪಿ) ನಾಯಕ ಹಾಗೂ ದೆಹಲಿಯ ಮಾಜಿ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಅವರಿಗೆ ಸುಪ್ರೀಂ ಕೋರ್ಟ್ ಶುಕ್ರವಾರ ಜಾಮೀನು ನೀಡಿದೆ. ದೆಹಲಿಯ ಮಾಜಿ ಉಪಮುಖ್ಯಮಂತ್ರಿ ಸಿಸೋಡಿಯಾ ಅವರ ವಿರುದ್ಧ ಸಿಬಿಐ ಮತ್ತು ಜಾರಿ ನಿರ್ದೇಶನಾಲಯ (ಇ ಡಿ) ಹೂಡಿದ್ದ ಪ್ರಕರಣಗಳೆರಡರಲ್ಲೂ ನ್ಯಾಯಮೂರ್ತಿಗಳಾದ ಬಿ.ಆರ್. ಗವಾಯಿ … Continued

ದೆಹಲಿ ಮದ್ಯ ನೀತಿ ಪ್ರಕರಣ : ಮನೀಶ್ ಸಿಸೋಡಿಯಾ ಜಾಮೀನು ಅರ್ಜಿ ವಜಾಗೊಳಿಸಿದ ಸುಪ್ರೀಂ ಕೋರ್ಟ್

ನವದೆಹಲಿ: ಆಮ್ ಆದ್ಮಿ ಪಕ್ಷದ ನಾಯಕ ಮನೀಶ್ ಸಿಸೋಡಿಯಾ ಅವರಿಗೆ ದೊಡ್ಡ ಹಿನ್ನಡೆಯಲ್ಲಿ, ದೆಹಲಿ ಮದ್ಯ ನೀತಿ ಪ್ರಕರಣಕ್ಕೆ ಸಂಬಂಧಿಸಿದ ಭ್ರಷ್ಟಾಚಾರ ಮತ್ತು ಹಣ ವರ್ಗಾವಣೆ ಪ್ರಕರಣಗಳಲ್ಲಿ ಅವರ ಜಾಮೀನು ಅರ್ಜಿಯನ್ನು ಸುಪ್ರೀಂ ಕೋರ್ಟ್ ಸೋಮವಾರ ವಜಾಗೊಳಿಸಿದೆ. ಪ್ರಕರಣದಲ್ಲಿ 338 ಕೋಟಿ ರೂಪಾಯಿಗಳ ಹಣದ ಜಾಡು “ತಾತ್ಕಾಲಿಕವಾಗಿ ಸ್ಥಾಪಿಸಲಾಗಿದೆ” ಎಂಬ ಆಧಾರದ ಮೇಲೆ ಸುಪ್ರೀಂ ಕೋರ್ಟ್ … Continued

ದೆಹಲಿ ಮದ್ಯ ನೀತಿ ಪ್ರಕರಣ : ಮನೆ ಇ.ಡಿ. ದಾಳಿ ನಡೆದ ಕೆಲವೇ ಗಂಟೆಗಳ ನಂತರ ಎಎಪಿ ನಾಯಕ ಸಂಜಯ ಸಿಂಗ್ ಬಂಧನ

ನವದೆಹಲಿ: ದೆಹಲಿ ಮದ್ಯ ನೀತಿಯ ತನಿಖೆಗೆ ಸಂಬಂಧಿಸಿದ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಆಮ್ ಆದ್ಮಿ ಪಕ್ಷ (AAP)ಕ್ಕೆ ಜಾರಿ ನಿರ್ದೇಶನಾಲಯವು ಶಾಕ್‌ ನೀಡಿದೆ. (ED). ಆಮ್‌ ಆದ್ಮಿ ಪಕ್ಷದ ರಾಜ್ಯಸಭಾ ಸದಸ್ಯ ಸಂಜಯ ಸಿಂಗ್ ಅವರನ್ನು ಇ.ಡಿ. ಇಂದು ಬುಧವಾರ (ಅಕ್ಟೋಬರ್‌ 4) ಬಂಧಿಸಿದೆ. ಬುಧವಾರ ಬೆಳಗ್ಗೆಯಿಂದಲೇ ಸಂಸದರ ದೆಹಲಿ ನಿವಾಸದಲ್ಲಿ ಶೋಧ ಕಾರ್ಯ … Continued

ದೆಹಲಿ ಮದ್ಯ ಹಗರಣ : ದೆಹಲಿ ಮಾಜಿ ಸಿಎಂ ಮನೀಶ ಸಿಸೋಡಿಯಾ, ಇತರರಿಂದ 52 ಕೋಟಿ ಮೌಲ್ಯದ ಆಸ್ತಿ ವಶ

ನವದೆಹಲಿ: ಆಮ್ ಆದ್ಮಿ ಪಕ್ಷದ (ಎಎಪಿ) ನಾಯಕ ಮತ್ತು ದೆಹಲಿಯ ಮಾಜಿ ಉಪಮುಖ್ಯಮಂತ್ರಿ ಮನೀಶ ಸಿಸೋಡಿಯಾ, ಅವರ ಪತ್ನಿ ಸೀಮಾ ಸಿಸೋಡಿಯಾ ಮತ್ತು ಇತರರಿಂದ 52 ಕೋಟಿ ರೂಪಾಯಿ ಮೌಲ್ಯದ ಆಸ್ತಿಯನ್ನು ಜಾರಿ ನಿರ್ದೇಶನಾಲಯ (ಇಡಿ) ಶುಕ್ರವಾರ ವಶಪಡಿಸಿಕೊಂಡಿದೆ. ದೆಹಲಿ ಅಬಕಾರಿ ನೀತಿ ಹಗರಣಕ್ಕೆ ಸಂಬಂಧಿಸಿದ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ದೆಹಲಿ ಹೈಕೋರ್ಟ್ ಮನೀಶ … Continued

ದೆಹಲಿ ಮದ್ಯ ನೀತಿ ಪ್ರಕರಣ: ಜೈಲಿನಲ್ಲಿರುವ ಮನೀಶ್ ಸಿಸೋಡಿಯಾ ಅವರನ್ನು ಬಂಧಿಸಿದ ಇ.ಡಿ.

ನವದೆಹಲಿ : ದೆಹಲಿ ಸರ್ಕಾರದ ಮದ್ಯ ನೀತಿಯಲ್ಲಿನ ಅಕ್ರಮ ಹಣ ವರ್ಗಾವಣೆಗೆ ಸಂಬಂಧಿಸಿದಂತೆ ದೆಹಲಿಯ ಮಾಜಿ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಅವರನ್ನು ಜಾರಿ ನಿರ್ದೇಶನಾಲಯ (ಇಡಿ) ಗುರುವಾರ ಬಂಧಿಸಿದೆ. ಇದೇ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಬಿಐ ಅವರನ್ನು ಬಂಧಿಸಿದ ನಂತರ ಸಿಸೋಡಿಯಾ ಈಗ ದೆಹಲಿಯ ತಿಹಾರ್ ಜೈಲಿನಲ್ಲಿದ್ದಾರೆ. ಅವರನ್ನು ಬಂಧಿಸುವ ಮೊದಲು, ಇ.ಡಿ. ಅವರನ್ನು ತಿಹಾರ್ ಜೈಲಿನೊಳಗೆ … Continued

ಸಚಿವ ಸ್ಥಾನಕ್ಕೆ ಮನೀಶ್ ಸಿಸೋಡಿಯಾ, ಸತ್ಯೇಂದ್ರ ಜೈನ್ ರಾಜೀನಾಮೆ : ಅಂಗೀಕರಿಸಿದ ಸಿಎಂ ಕೇಜ್ರಿವಾಲ್

ನವದೆಹಲಿ: ಜೈಲಿನಲ್ಲಿರುವ ಆಮ್ ಆದ್ಮಿ ಪಕ್ಷದ ನಾಯಕರಾದ ದೆಹಲಿ ಡಿಸಿಎಂ ಮನೀಶ್ ಸಿಸೋಡಿಯಾ ಮತ್ತು ಸಚಿವರಾದ ಸತ್ಯೇಂದ್ರ ಜೈನ್ ಅವರು ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದು, ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಅವರ ರಾಜೀನಾಮೆ ಅಂಗೀಕರಿಸಿದ್ದಾರೆ. ಎರಡು ವರ್ಷ ಅಥವಾ ಅದಕ್ಕಿಂತ ಹೆಚ್ಚು ಜೈಲು ಶಿಕ್ಷೆ ವಿಧಿಸಿದರೆ, ಸಿಸೋಡಿಯಾ ಮತ್ತು ಜೈನ್ ತಮ್ಮ ಸ್ಥಾನಗಳನ್ನು ಕಳೆದುಕೊಳ್ಳಬಹುದು … Continued