ಹೊನ್ನಾವರ: ಬಸ್ಸಿನಡಿ ಸಿಲುಕಿ ತಾಯಿ- ಮಗಳು ಸಾವು
ಹೊನ್ನಾವರ : ಮಂಗಳೂರಿನಿಂದ ಬೆಳಗಾವಿಗೆ ಹೋಗುತ್ತಿದ್ದ ಬಸ್ಸಿನಡಿ ಆಕ್ಟಿವಾ ಹೊಂಡಾ ಸಿಲುಕಿ ಸಂಭವಿಸಿದ ಭೀಕರ ಅಪಘಾತದಲ್ಲಿ ತಾಯಿ-ಮಗಳು ಮೃತಪಟ್ಟ ಘಟನೆ ಉತ್ತರ ಕನ್ನಡ ಜಿಲ್ಲೆಯ ಹೊನ್ನಾವರ ತಾಲೂಕಿನ ಮಂಕಿಯ ಗುಳದಕೇರಿ ಬಳಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಗುರುವಾರ ನಡೆದಿದೆ. ಮೃತರನ್ನು ಮುರ್ಡೇಶ್ವರದ ಮಾವಳ್ಳಿಯ ನಾಡವರಕೇರಿ ನಿವಾಸಿ ಸವಿತಾ ರಾಜು ಆಚಾರಿ(40) ಮತ್ತು ಮಗಳು ಅಂಕಿತಾ(17) ಎಂದು ಗುರುತಿಸಲಾಗಿದೆ. … Continued