ಶಿರಸಿ : ಬಸ್ ಗಳ ನಡುವೆ ಡಿಕ್ಕಿ ; 13 ಜನರಿಗೆ ಗಾಯ

ಶಿರಸಿ: ಸಾರಿಗೆ ಸಂಸ್ಥೆಯ ಬಸ್ ಹಾಗೂ ಖಾಸಗಿ ಬಸ್ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದ ಪರಿಣಾಮ ಚಾಲಕ-ನಿರ್ವಾಹಕ ಸೇರಿ 13 ಜನರು ಗಾಯಗೊಂಡ ಘಟನೆ ಉತ್ತರ ಕನ್ನಡ ಜಿಲ್ಲೆಯ ಶಿರಸಿ ತಾಲೂಕಿನ ಇಸಳೂರು ಸಮೀಪ ಭಾನುವಾರ ಬೆಳಿಗ್ಗೆ ಸಂಭವಿಸಿದೆ. ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಶಿರಸಿಯಿಂದ ಅಕ್ಕಿ ಆಲೂರು ಕಡೆಗೆ ಹೊರಟಿದ್ದ ಸಾರಿಗೆ ಸಂಸ್ಥೆ ಬಸ್‌ ಹಾಗೂ … Continued

ಪಟಾಕಿ ಗೋದಾಮಿನಲ್ಲಿ ಸ್ಫೋಟ: 9 ಮಂದಿ ಸಾವು, ಹಲವರಿಗೆ ಗಾಯ

ಚೆನ್ನೈ : ತಮಿಳುನಾಡಿನ ಕೃಷ್ಣಗಿರಿ ಜಿಲ್ಲೆಯಲ್ಲಿ ಪಟಾಕಿ ಸಂಗ್ರಹ ಗೋದಾಮಿನಲ್ಲಿ ಸಂಭವಿಸಿದ ಸ್ಫೋಟದಲ್ಲಿ ಸುಮಾರು 9 ಜನರು ಸಾವಿಗೀಡಾಗಿದ್ದಾರೆ ಮತ್ತು 10 ಮಂದಿ ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ. ಶನಿವಾರ ಬೆಳಿಗ್ಗೆ 9 ಗಂಟೆ ಸುಮಾರಿಗೆ ಈ ದುರಂತ ಸಂಭವಿಸಿದೆ. ಮೃತರನ್ನು ಗೋಡೌನ್ ಮಾಲೀಕ ರವಿ, ಅವರ ಪತ್ನಿ ಜಯಶ್ರೀ, ಅವರ ಪುತ್ರಿ ರುತಿಕಾ ಮತ್ತು ಮಗ … Continued

ಎರಡು ಬಸ್‌ಗಳು ಮುಖಾಮುಖಿ ಡಿಕ್ಕಿ: 12 ಸಾವು, ಹಲವರಿಗೆ ಗಾಯ

ಬೆರ್ಹಾಂಪುರ: ಒಡಿಶಾದ ಗಂಜಾಂ ಜಿಲ್ಲೆಯಲ್ಲಿ ಮದುವೆ ಸಮಾರಂಭವೊಂದರ ಬಸ್ ಮತ್ತೊಂದು ಬಸ್‌ಗೆ ಮುಖಾಮುಖಿ ಡಿಕ್ಕಿ ಹೊಡೆದ ಪರಿಣಾಮ 12 ಮಂದಿ ಮೃತಪಟ್ಟಿದ್ದು, ಏಳು ಮಂದಿ ಗಾಯಗೊಂಡಿದ್ದಾರೆ ಎಂದು ಪೊಲೀಸರು ಸೋಮವಾರ ತಿಳಿಸಿದ್ದಾರೆ. ಬೆರ್ಹಾಂಪುರದಿಂದ ಸುಮಾರು 35 ಕಿ.ಮೀ ದೂರದಲ್ಲಿರುವ ಬರ್ಹಾಂಪುರ-ತಪ್ತಪಾಣಿ ರಸ್ತೆಯ ದಿಗಪಹಂಡಿ ಪ್ರದೇಶದ ಬಳಿ ಭಾನುವಾರ ತಡರಾತ್ರಿ ಈ ಅಪಘಾತ ಸಂಭವಿಸಿದ್ದು, ಮದುವೆ ದಿಬ್ಬಣದ … Continued

ಸೇತುವೆಯಿಂದ ಬಸ್ ಬಿದ್ದು 22 ಮಂದಿ ಸಾವು, ಹಲವರಿಗೆ ಗಾಯ

ಭೋಪಾಲ್: ಮಧ್ಯಪ್ರದೇಶದ ಖಾರ್ಗೋನೆಯಲ್ಲಿ ಇಂದು, ಮಂಗಳವಾರ ಬಸ್ ಸೇತುವೆಯಿಂದ ಕೆಳಗೆ ಬಿದ್ದು ಕನಿಷ್ಠ 22 ಜನರು ಸಾವಿಗೀಡಾಗಿದ್ದಾರೆ ಮತ್ತು ಹಲವರು ಗಾಯಗೊಂಡಿದ್ದಾರೆ ಎಂದು ರಾಜ್ಯ ಗೃಹ ಸಚಿವ ನರೋತ್ತಮ ಮಿಶ್ರಾ ಹೇಳಿದ್ದಾರೆ. 50 ಜನರಿದ್ದ ಬಸ್ ಇಂದೋರ್‌ಗೆ ತೆರಳುತ್ತಿದ್ದಾಗ ಖಾರ್ಗೋನ್‌ನ ದಸಂಗ ಗ್ರಾಮದಲ್ಲಿ ಸೇತುವೆಯಿಂದ ಕೆಳಗೆ ಬಿದ್ದಿದೆ. ಸ್ಥಳೀಯ ಗ್ರಾಮಸ್ಥರ ಸಹಾಯದಿಂದ ತುರ್ತು ಸೇವೆಗಳು ರಕ್ಷಣಾ … Continued

ಕಾರ್‌- ಕೆಎಸ್​​ಆರ್​​ಟಿಸಿ ಬಸ್​ ಡಿಕ್ಕಿ: ಸ್ಥಳದಲ್ಲೇ ಇಬ್ಬರ ಸಾವು, ಹಲವರಿಗೆ ಗಾಯ

ತುಮಕೂರು: ಕೆಎಸ್‌ಆರ್‌ಟಿಸಿ ಬಸ್ ಮತ್ತು ಕಾರ್ ಮಧ್ಯೆ ಸಂಭವಿಸಿದ ಡಿಕ್ಕಿಯಲ್ಲಿ ಕಾರಿನಲ್ಲಿದ್ದ ಇಬ್ಬರು ಸ್ಥಳದಲ್ಲಿಯೇ ಮೃತಪಟ್ಟ ಘಟನೆ ಗುಬ್ಬಿ ತಾಲೂಕಿನ ನಿಟ್ಟೂರು ಹೋಬಳಿ ಶಿವಸಂದ್ರ ಗೇಟ್ ಬಳಿಯ ರಾಷ್ಟ್ರೀಯ ಹೆದ್ದಾರಿಯಲ್ಲಿ ಸೋಮವಾರ ಬೆಳಿಗ್ಗೆ ನಡೆದ ಬಗ್ಗೆ ವರದಿಯಾಗಿದೆ. ಮೃತರನ್ನು ಚಿಕ್ಕನಾಯಕನಹಳ್ಳಿಯ ಗಿರೀಶ್ (32) ಹಾಗೂ ಮಾನ್ಯ (17) ಎಂದು ಗುರುತಿಸಲಾಗಿದೆ. ತುಮಕೂರು ಕಡೆಯಿಂದ ತೆರಳಿದ್ದ ಬಸ್, … Continued

ಬೀದರ್‌ ಬ್ರಿಮ್ಸ್‌ ಜಿಲ್ಲಾಸ್ಪತ್ರೆಯಲ್ಲೇ ಎರಡು ಗ್ಯಾಂಗ್‌ ನಡುವೆ ಮಾರಾಮಾರಿ; ಆಸ್ಪತ್ರೆಯಲ್ಲಿದ್ದ ಚೇರ್‌, ವೈದ್ಯಕೀಯ ಉಪಕರಣಗಳಿಂದಲೂ ಹಲ್ಲೆ..!

ಬೀದರ್‌: ಜಿಲ್ಲಾಸ್ಪತ್ರೆಯಲ್ಲೇ ಎರಡು ಗುಂಪುಗಳ ನಡುವೆ ಮಾರಾಮಾರಿ ನಡೆದಿದೆ. ಬ್ರಿಮ್ಸ್‌ನಲ್ಲಿ ಎರಡು ಗುಂಪುಗಳ ನಡುವೆ ನಡೆದ ಮಾರಾಮಾರಿಯಲ್ಲಿ ಆಸ್ಪತ್ರೆ ಬೆಡ್‌ ಮೇಲೆ ಮಲಗಿದ್ದವನ್ನೇ ಎಬ್ಬಿಸಿ ಹಲ್ಲೆ ನಡೆಸಲಾಗಿದೆ. ಎಮರ್ಜೆನ್ಸಿ ವಾರ್ಡ್‌ನಲ್ಲಿ ಟ್ರೀಟ್‌ಮೆಂಟ್‌ ಪಡೆಯುತ್ತಿದ್ದವನ ಮೇಲೆಯೂ ದಾಳಿ ನಡೆದಿದೆ ಎಂದು ಹೇಳಲಾಗಿದೆ. ಜಿಲ್ಲಾ ಪಂಚಾಯತ ಮಾಜಿ ಸದಸ್ಯ ಫಿರೋಜ್‌ ಖಾನ್‌ ಎಂಬವರ ಗುಂಪು ಹಾಗೂ ಮಹ್ಮದ್‌ ರೌಫ್‌, … Continued

ಖಾಸಗಿ ಬಸ್​ ಪಲ್ಟಿ: 5 ಮಂದಿ ಸಾವು, 25ಕ್ಕೂ ಹೆಚ್ಚು ಜನರಿಗೆ ಗಾಯ

ತುಮಕುರು: ಖಾಸಗಿ ಬಸ್ ಪಲ್ಟಿಯಾಗಿ 5 ಮಂದಿ ಮೃತಪಟ್ಟ ಘಟನೆ ತುಮಕೂರು ಜಿಲ್ಲೆಯ ಪಾವಗಡ ತಾಲೂಕಿನಲ್ಲಿ ಪಳವಳ್ಳಿ ಕಟ್ಟೆ ಮೇಲೆ ನಡೆದಿದೆ. ಶನಿವಾರ ಬೆಳಗ್ಗೆ ಈ ಅವಘಡ ಸಂಭವಿಸಿದ್ದು, ವೈ.ಎನ್. ಹೊಸಕೋಟೆಯಿಂದ ಪಾವಗಡಕ್ಕೆ ಬರುತ್ತಿದ್ದ ಖಾಸಗಿ ಬಸ್ ಪಲ್ಟಿಯಾಗಿದ್ದು, ಈ ಅಪಘಾತದಲ್ಲಿ5 ಮಂದಿ ಸಾವಿಗೀಡಾಗಿದ್ದು, 25ಕ್ಕೂ ಹೆಚ್ಚು ಜನರಿಗೆ ಗಾಯವಾಗಿದ್ದು, ಪಾವಗಡ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. … Continued

ಬೆಂಗಳೂರು ಆಹಾರ ಉತ್ಪಾದನೆ ಕಾರ್ಖಾನೆಯಲ್ಲಿ ಬಾಯ್ಲರ್ ಸ್ಫೋಟ: ಇಬ್ಬರ ಸಾವು, ಹಲವರಿಗೆ ಗಾಯ

ಬೆಂಗಳೂರು: ಬೆಂಗಳೂರು: ಬೆಂಗಳೂರಿನ ಆಹಾರ ಉತ್ಪಾದನೆ ಕಾರ್ಖಾನೆಯಲ್ಲಿ ಬಾಯ್ಲರ್ ಸ್ಫೋಟಗೊಂಡು ಇಬ್ಬರು ಮೃತಪಟ್ಟ ಘಟನೆ ಸೋಮವಾರ ನಡೆದ ವರದಿಯಾಗಿದೆ. ನಗರದ ಮಾಗಡಿ ರಸ್ತೆಯ 5ನೇ ಕ್ರಾಸ್ ನಲ್ಲಿ ಇರುವ ಎಂ ಎಂ ಫುಡ್ ಫ್ಯಾಕ್ಟರಿಯಲ್ಲಿ ಸ್ಫೋಟ ಸಂಭವಿಸಿದೆ. ಸೋಮವಾರ ಮಧ್ಯಾಹ್ನ 2 ಗಂಟೆ ಸುಮಾರಿಗೆ ನಡೆದಿರುವ ಘಟನೆಯಲ್ಲಿ ಸಜೀವವಾಗಿ ದಹನಗೊಂಡವರನ್ನು ಬಿಹಾರ ಮೂಲದ ಮನೀಷ ಮತ್ತು … Continued