ಮರವಂತೆ : ಸಮುದ್ರಕ್ಕೆ ಉರುಳಿದ ಕಾರು- ಓರ್ವನ ಸಾವು, ಇನ್ನೋರ್ವ ನಾಪತ್ತೆ

ಉಡುಪಿ:ಜಿಲ್ಲೆಯ ಬೈಂದೂರು ತಾಲೂಕಿನ ಮರವಂತೆ ಸಮುದ್ರಕ್ಕೆ ಕಾರೊಂದು ಉರುಳಿ ಬಿದ್ದು, ಓರ್ವ ಮೃತಪಟ್ಟಿದ್ದು, ಇನ್ನೋರ್ವ ಸಮುದ್ರದಲ್ಲಿ ನಾಪತ್ತೆಯಾದ ಘಟನೆ ನಡೆದಿದೆ. ನಾಪತ್ತೆಯಾದವನಿಗೆ ಹುಡುಕಾಟ ನಡೆಯುತ್ತಿದೆ. ಮರವಂತೆಯ ಮಾರಸ್ವಾಮಿ ದೇವಸ್ಥಾನದ ಬಳಿ ಕಳೆದ ರಾತ್ರಿ ರಾಷ್ಟ್ರೀಯ ಹೆದ್ದಾರಿ ಮೇಲಿನಿಂದ ಕಾರು ಸಮುದ್ರಕ್ಕೆ ಬಿದ್ದಿದೆ. ಆ ಕಾರಿನಲ್ಲಿ ನಾಲ್ವರಿದ್ದರು. ಓರ್ವ ಕಾರಿನೊಳಗೆ ಮೃತಪಟ್ಟಿದ್ದು, ಮತ್ತೊಬ್ಬರು ಸಮುದ್ರ ನೀರಲ್ಲಿ ನಾಪತ್ತೆಯಾಗಿದ್ದಾರೆ. … Continued