ಚಿತ್ರದುರ್ಗ | ಆರತಕ್ಷತೆ ಭೋಜನದ ವೇಳೆ ಕುಡಿಯುವ ನೀರಿನ ವಿಚಾರಕ್ಕೆ ಜಗಳ ; ಮದುವೆಯೇ ರದ್ದಾಯ್ತು…!

ಚಿತ್ರದುರ್ಗ: ಮದುವೆ ಮಂಟಪದಲ್ಲಿ ಕುಡಿಯುವ ನೀರಿನ ವಿಚಾರಕ್ಕೆ ನಡೆದ ಗಲಾಟೆಯಿಂದಾಗಿ ಮದುವೆಯೇ ಮುರಿದು ಬಿದ್ದ ಘಟನೆ (Wedding Cancelled) ಚಿತ್ರದುರ್ಗ ಜಿಲ್ಲೆ ಹಿರಿಯೂರು ನಗರದಲ್ಲಿ ನಡೆದಿದೆ ಎಂದು ವರದಿಯಾಗಿದೆ. ದಾವಣಗೆರೆ ಜಿಲ್ಲೆ ಜಗಳೂರಿನ ವರ ಹಾಗೂ ತುಮಕೂರು ಜಿಲ್ಲೆ ಶಿರಾ ತಾಲೂಕಿನ ಚಿರತಹಳ್ಳಿಯ ವಧುವಿನ ವಿವಾಹ ಅರತಕ್ಷತೆ ಸಮಾರಂಭ ಹಿರಿಯೂರಿನ ಬಲಿಜ ಶ್ರೇಯಾ ಭವನದಲ್ಲಿ ಶನಿವಾರ … Continued

ಮದುವೆಯಾದ ಮಾರನೇ ದಿನವೇ ಗಂಡನ ಮನೆ ಲೂಟಿ ಹೊಡೆದು ನಗದು-ಚಿನ್ನಾಭರಣಗಳೊಂದಿಗೆ ಪರಾರಿಯಾದ ನವವಿವಾಹಿತೆ…!

ಲಕ್ನೋ : ಉತ್ತರ ಪ್ರದೇಶದ ಗೊಂಡಾದಲ್ಲಿ ನವವಿವಾಹಿತ ಮಹಿಳೆಯೊಬ್ಬಳು ಮದುವೆಯಾಗಿ ಐದು ದಿನಗಳ ನಂತರ ಗಂಡನ ಮನೆಯಿಂದ ನಗದು ಮತ್ತು ಚಿನ್ನಾಭರಣಗಳೊಂದಿಗೆ ಪರಾರಿಯಾದ ಘಟನೆ ನಡೆದಿದೆ. ಗೊಂಡಾದ ಬಸೋಲಿ ಗ್ರಾಮದಲ್ಲಿ ಈ ಘಟನೆ ನಡೆದಿದ್ದು, ದರೋಡೆ ನಡೆದ ರಾತ್ರಿ ನವವಿವಾಹಿತೆ ತನ್ನ ಅತ್ತೆ ಮಾವನಿಗೆ ಚಹಾ ನೀಡಿದ್ದಾಳೆ. ಮರುದಿನ ಬೆಳಿಗ್ಗೆ, ಮನೆಯಿಂದ 3.15 ಲಕ್ಷ ರೂ. … Continued

ಮದುವೆಯಾದ ಎರಡನೇ ದಿನಕ್ಕೆ ಮಗುವನ್ನು ಹೆತ್ತ ಮದುಮಗಳು…! ಕುಟುಂಬದಲ್ಲಿ ಅಲ್ಲೋಲ ಕಲ್ಲೋಲ

ಉತ್ತರ ಪ್ರದೇಶದ ಪ್ರಯಾಗ್‌ರಾಜ್ ಜಿಲ್ಲೆಯ ಮದುವೆಯ ಪ್ರಕರಣವೊಂದು ಕುಟುಂಬದಲ್ಲಿ ಅಲ್ಲೋಲ ಕಲ್ಲೋಲ ಸೃಷ್ಟಿ ಮಾಡಿದೆ. ಮದುವೆ ಬಹಳ ವೈಭವದಿಂದ ನಡೆಯಿತು. ಮತ್ತು ನವವಿವಾಹಿತರು ಎರಡು ದಿನಗಳನ್ನು ಒಟ್ಟಿಗೆ ಕಳೆದರು. ಆದರೆ, ಎರಡನೇ ದಿನ ಇದ್ದಕ್ಕಿದ್ದಂತೆ ವಧು ಆಸ್ಪತ್ರೆಗೆ ಹೋಗಬೇಕಾಐಇತು. ಹಾಗೂ ಅಲ್ಲಿ ಆಕೆ ಮಗುವಿಗೆ ಜನ್ಮ ನೀಡಿದ್ದಾಳೆ. ತಾಯಿ ಮತ್ತು ಮಗು ಇಬ್ಬರೂ ಸುರಕ್ಷಿತವಾಗಿದ್ದು, ಇಲ್ಲಿ … Continued

ಊಟ-ತಿಂಡಿಯ ಬಗ್ಗೆ ಮಂಟಪದಲ್ಲೇ ಮುರಿದುಬಿದ್ದ ಮದುವೆ ; ನಂತ್ರ ಪೊಲೀಸ್‌ ಠಾಣೆಯಲ್ಲಿ ನಡೆಯಿತು ವಿವಾಹ…!

ಸೂರತ್: ಸೂರತ್‌ನಲ್ಲಿ ನಡೆದ ಮದುವೆ ವೇಳೆ ಊಟ ಕಡಿಮೆ ಬಿದ್ದಿದೆ ಎಂಬ ಕಾರಣದಿಂದ ಹಠಾತ್ತನೆ ಸ್ಥಗಿತಗೊಂಡಿದ್ದ ಮದುವೆಯ ವಿಧಿವಿದಾನವನ್ನು ನಂತರ ಪೊಲೀಸರ ಮಧ್ಯಸ್ಥಿಕೆಯಲ್ಲಿ ಪೊಲೀಸ್ ಠಾಣೆಯಲ್ಲಿ ಮದುವೆ ಮಾಡಿಸಿದ ಘಟನೆ ಭಾನುವಾರ ಸೂರತ್‌ನ ವರಾಚಾ ಪ್ರದೇಶದಲ್ಲಿ ನಡೆದಿದೆ. ವರನ ಕುಟುಂಬವು ಮದುವೆ ಮುರಿದುಕೊಳ್ಳುವ ನಿರ್ಧಾರದ ವಿರುದ್ಧ ಪೊಲೀಸರನ್ನು ಮದುಮಗಳು ಸಂಪರ್ಕಿಸಿದ ನಂತರ ಪೊಲೀಸರು ಠಾಣೆಯಲ್ಲಿ ಮದುವೆ … Continued

ಇನ್‌ಸ್ಟಾಗ್ರಾಂ ಪ್ರಿಯತಮನ ಜೊತೆ ಮದುವೆಗೆ ಅಡ್ಡಿ: ಮಗುವನ್ನೇ ಕತ್ತು ಹಿಸುಕಿ ಸಾಯಿಸಿದ ತಾಯಿ…!

ನವದೆಹಲಿ: ಇನ್‌ಸ್ಟಾಗ್ರಾಂನಲ್ಲಿ ಪರಿಚಯವಾದ ವ್ಯಕ್ತಿಯನ್ನು ಮದುವೆಯಾಗಲು ಮಹಿಳೆಯೊಬ್ಬಳು ತನ್ನ ಐದು ವರ್ಷದ ಮಗಳನ್ನು ಕತ್ತು ಹಿಸುಕಿ ಕೊಂದ ಘಟನೆ ದೆಹಲಿಯಲ್ಲಿ ನಡೆದಿದೆ ಎಂದು ಪೊಲೀಸರು ಶನಿವಾರ ತಿಳಿಸಿದ್ದಾರೆ. ಶುಕ್ರವಾರ ಆಸ್ಪತ್ರೆಗೆ ಮಗುವನ್ನು ಕರೆತರುವಷ್ಟರಲ್ಲಿಯೇ ಅದು ಮೃತಪಟ್ಟಿರುವ ಬಗ್ಗೆ ದೀಪಚಂದ್ ಬಂಧು ಆಸ್ಪತ್ರೆಯಿಂದ ಪೊಲೀಸರಿಗೆ ಮಾಹಿತಿ ಲಭಿಸಿದ ನಂತರ ಈ ಪ್ರಕಣ ಬೆಳಕಿಗೆ ಬಂದಿದೆ. ಮಗುವಿನ ಕುತ್ತಿಗೆ … Continued

ತಾಳಿ ಕಟ್ಟುವ ವೇಳೆ ಮದುವೆಗೆ ನಿರಾಕರಿಸಿದ ವಧು : ಮಂಟಪದಲ್ಲೇ ಮುರಿದು ಬಿತ್ತು ಮದುವೆ…!

ಮಂಗಳೂರು : ಕೊನೆ ಕ್ಷಣದಲ್ಲಿ ವಧು ತಾಳಿ ಕಟ್ಟಿಸಿಕೊಳ್ಳಲು ನಿರಾಕರಿಸಿದ ನಂತರ ಮದುವೆ ಮಂಟಪದಲ್ಲೇ ಮದುವೆ ಮುರಿದು ಬಿದ್ದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಕಡಬ ತಾಲೂಕಿನ ಕೊಣಾಲು ಗ್ರಾಮದಲ್ಲಿ ಶುಕ್ರವಾರ (ಏಪ್ರಿಲ್‌ 26) ನಡೆದಿದೆ ಎಂದು ವರದಿಯಾಗಿದೆ. ಕೊಣಾಲು ಗ್ರಾಮದ ಕೋಲ್ಪೆಯ ಉಮೇಶ ಎಂಬವರ ವಿವಾಹವು ಬಂಟ್ವಾಳ ತಾಲೂಕು ಕುಳ ಗ್ರಾಮದ ಕಂಟ್ರಮಜಲು ಸರಸ್ವತಿ … Continued