ವೀಡಿಯೊ…| ನೆನಪಿಡುವ ಪ್ರೇಮಕಥೆ ! ಒಂದೇ ಸಮಾರಂಭದಲ್ಲಿ ಇಬ್ಬರು ಯುವತಿಯರನ್ನು ಮದುವೆಯಾದ ವರ…!

ಹೈದರಾಬಾದ್‌ : ಅಪರೂಪದ ಮತ್ತು ಅಚ್ಚರಿಯ ಘಟನೆಯೊಂದರಲ್ಲಿ, ತೆಲಂಗಾಣದ ಕೊಮಾರಂ ಭೀಮ್ ಆಸಿಫಾಬಾದ್ ಜಿಲ್ಲೆಯ ವ್ಯಕ್ತಿಯೊಬ್ಬರು ಇತ್ತೀಚೆಗೆ ಇಬ್ಬರು ಮಹಿಳೆಯರನ್ನು ಒಂದೇ ಸಮಾರಂಭದಲ್ಲಿ ವಿವಾಹವಾಗಿದ್ದಾರೆ…! ಲಿಂಗಾಪುರ ಮಂಡಲದ ಗುಮ್ನೂರ್ ಗ್ರಾಮದಲ್ಲಿ ನಡೆದ ಮದುವೆಯಲ್ಲಿ ವರ ಸೂರ್ಯದೇವ ಎಂಬವರು ಲಾಲದೇವಿ ಮತ್ತು ಜಲ್ಕರಿ ದೇವಿ ಎಂಬ ಇಬ್ಬರು ಯುವತಿಯರನ್ನು ಇಬ್ಬರನ್ನು ಒಂದೇ ಸಮಾರಂಭದಲ್ಲಿ ಮದುವೆಯಾಗಿದ್ದಾರೆ. ಸೂರ್ಯದೇವ ಅವರು … Continued

ಮದುವೆಯ ಮೊದಲ ರಾತ್ರಿಯೇ ಶವವಾಗಿ ಪತ್ತೆಯಾದ ನವದಂಪತಿ…!

ಅಯೋಧ್ಯೆ : ಉತ್ತರ ಪ್ರದೇಶದ ಅಯೋಧ್ಯೆಯಲ್ಲಿ ಆಘಾತಕಾರಿ ಘಟನೆಯೊಂದು ಬೆಳಕಿಗೆ ಬಂದಿದ್ದು, ಮದುವೆಯ ಮೊದಲ ರಾತ್ರಿಯಂದು ನವದಂಪತಿ ತಮ್ಮ ಕೋಣೆಯಲ್ಲಿ ಶವವಾಗಿ ಪತ್ತೆಯಾಗಿದ್ದಾರೆ. ಈ ಆಘಾತಕಾರಿ ಘಟನೆಯಿಂದಾಗಿ ಮದುವೆಯ ಸಂಭ್ರಮವು ಶೋಕಾಚರಣೆಯಾಗಿ ಮಾರ್ಪಟ್ಟಿತು. ಅಯೋಧ್ಯೆ ಕ್ಯಾಂಟ್ ಪೊಲೀಸ್ ಠಾಣೆ ವ್ಯಾಪ್ತಿಯ ಸಾದತ್ ಗಂಜ್ ಪ್ರದೇಶದ ಪ್ರದೀಪ ಎಂಬವರು ಶನಿವಾರ ಶಿವಾನಿ ಅವರನ್ನು ವಿವಾಹವಾಗಿದ್ದರು ಎಂದು ಪೊಲೀಸರು … Continued

ಬೆಂಗಳೂರು | ದಾಂಪತ್ಯ ಜೀವನಕ್ಕೆ ಕಾಲಿಟ್ಟ ಬಿಜೆಪಿ ಸಂಸದ ತೇಜಸ್ವಿ ಸೂರ್ಯ

ಬೆಂಗಳೂರು: ಬೆಂಗಳೂರಿನ ಯುವ ಬಿಜೆಪಿ ಸಂಸದ ತೇಜಸ್ವಿ ಸೂರ್ಯ ಭರತನಾಟ್ಯ ಹಾಗೂ ಸಂಗೀತ ಕಲಾವಿದೆ ಶಿವಶ್ರೀ ಸ್ಕಂದಪ್ರಸಾದ ಅವರ ಜೊತೆ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ. ಕನಕಪುರ ರಸ್ತೆಯ ರೆಸಾರ್ಟ್ ನಲ್ಲಿ ಮದುವೆ ನಡೆದಿದ್ದು, ಸಂಸದ ತೇಜಸ್ವಿ ಸೂರ್ಯ, ಚೆನ್ನೈ ಮೂಲದ ಗಾಯಕಿ ಶಿವಶ್ರೀ ಸ್ಕಂದಪ್ರಸಾದ ಅವರು ಗುರುವಾರ ಬೆಳಿಗ್ಗೆ ಶುಭ ಮೂಹರ್ತದಲ್ಲಿ ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದಾರೆ. … Continued

ಮದುವೆ ಆಮಂತ್ರಣ ಕಾರ್ಡ್‌ ನಲ್ಲಿ ವಧು-ವರರ ಜನ್ಮ ದಿನಾಂಕ ಮುದ್ರಿಸುವುದನ್ನು ಕಡ್ಡಾಯ ಮಾಡಿದ ರಾಜಸ್ಥಾನ ಸರ್ಕಾರ…! ಯಾಕೆಂದರೆ…

ಜೈಪುರ: ಬಾಲ್ಯವಿವಾಹಗಳನ್ನು ತಡೆಗಟ್ಟುವ ಸಲುವಾಗಿ ರಾಜಸ್ಥಾನ ಸರ್ಕಾರವು ವಧು-ವರರ ವಯಸ್ಸಿನ ಪುರಾವೆಗಳನ್ನು ಸಂಬಂಧಪಟ್ಟ ಕುಟುಂಬಗಳಿಂದ ಪಡೆಯುವಂತೆ ಮತ್ತು ಆಮಂತ್ರಣ ಪತ್ರಿಕೆಯಲ್ಲಿ ವಧು-ವರ ಇಬ್ಬರ ಜನ್ಮದಿನಾಂಕವನ್ನು ಮುದ್ರಿಸುವಂತೆ ಮುದ್ರಣಾಲಯಗಳಿಗೆ ಸೂಚಿಸಿದೆ. ಅಲ್ಲದೆ, ಬಾಲ್ಯ ವಿವಾಹಗಳು ಮತ್ತು ಬಾಲ್ಯ ವಿವಾಹ ನಿಷೇಧ ಕಾಯ್ದೆಯ ಪ್ರಚಲಿತ ಕಾನೂನಿನ ವಿರುದ್ಧ ಜಾಗೃತಿ ಮೂಡಿಸಲು ಹಲ್ವಾಯಿಗಳು, ಪಂಡಿತರು, ಟೆಂಟ್ ಹೌಸ್‌ಗಳು, ಬ್ಯಾಂಡ್ ಟ್ರೂಪ್‌ಗಳು, … Continued

ಕುಡಿದ ಅಮಲಿನಲ್ಲಿ ವಧುವಿನ ಬದಲು ಗೆಳೆಯನ ಕೊರಳಿಗೆ ಮಾಲೆ ಹಾಕಿದ ವರ…! ಕೋಪದಿಂದ ಮದುವೆ ರದ್ದುಗೊಳಿಸಿದ ವಧು…!!

ಬರೇಲಿ : ಮದ್ಯದ ಅಮಲಿನಲ್ಲಿದ್ದ ವರನೊಬ್ಬ ಮದುವೆಯ ಮಾಲೆಯನ್ನು ವಧುವಿನ ಕೊರಳಿಗೆ ಹಾಕುವ ಬದಲು ತನ್ನ ಸ್ನೇಹಿತನ ಕೊರಳಿಗೆ ಹಾಕಿರುವ ಆಘಾತಕಾರಿ ಘಟನೆ ನಡೆದಿದೆ. ಉತ್ತರ ಪ್ರದೇಶದ ಬರೇಲಿಯಲ್ಲಿ ನಡೆದ ವಿವಾಹ ಕಾರ್ಯಕ್ರಮದಲ್ಲಿ ಈ ವಿಲಕ್ಷಣ ಘಟನೆ ನಡೆದಿರುವುದು ಬೆಳಕಿಗೆ ಬಂದಿದೆ. ವರ ಕುಡಿದಿದ್ದನ್ನು ಕಂಡು ಕೋಪಗೊಂಡ ವಧು, ಆತನನ್ನು ಮದುವೆಯಾಗಲು ನಿರಾಕರಿಸಿ ಮದುವೆಯನ್ನು ರದ್ದುಗೊಳಿಸಿದ್ದಾಳೆ. … Continued

ವೈದ್ಯೆ ಜೊತೆ ದಾಂಪತ್ಯ ಜೀವನಕ್ಕೆ ಕಾಲಿಟ್ಟ ಕನ್ನಡ ಸಿನೆಮಾ ನಟ ಡಾಲಿ ಧನಂಜಯ

ಮೈಸೂರು : ಕನ್ನಡ ಸಿನೆಮಾ ನಟ ಡಾಲಿ ಧನಂಜಯ ಮತ್ತು ವೈದ್ಯೆ​ ಧನ್ಯತಾ ಭಾನುವಾರ ಸಪ್ತಪದಿ ತುಳಿದಿದ್ದಾರೆ. ಭಾನುವಾರ ಬೆಳಿಗ್ಗೆ 9:10 ರಿಂದ 10:10ರ ವರೆಗಿನ, ಸಂಕಷ್ಟ ಚತುರ್ದರ್ಶಿಯ ಶುಭ ಲಗ್ನದಲ್ಲಿ ಅವರು ವಿವಾಹವಾಗಿದ್ದಾರೆ. ಮೈಸೂರಿನ ವಸ್ತು ಪ್ರದರ್ಶನ ಮೈದಾನದಲ್ಲಿ ನಡೆದ ಅದ್ದೂರಿ ಮದುವೆ ಸಮಾರಂಭದಲ್ಲಿ ಡಾಲಿ ಧನಂಜಯ ಹಾಗೂ ಧನ್ಯತಾ ಇಬ್ಬರು ದಾಂಪತ್ಯ ಜೀವನಕ್ಕೆ … Continued

ವೀಡಿಯೊ…| ಮದುವೆ ಮೆರವಣಿಗೆ ವೇಳೆ ಕುದುರೆ ಮೇಲೆ ಬರುತ್ತಿದ್ದ ಮದುಮಗ ಹೃದಯಾಘಾತದಿಂದ ಸಾವು

ಭೋಪಾಲ್: ಮಧ್ಯಪ್ರದೇಶದ ಶಿಯೋಪುರ ಜಿಲ್ಲೆಯಲ್ಲಿ 27 ವರ್ಷದ ಮದುಮಗ ತನ್ನ ಮದುವೆಯ ಮೆರವಣಿಗೆಯಲ್ಲಿ ಕುದುರೆ ಮೇಲೆ ಬರುತ್ತಿರುವಾಗಲೇ ಅಲ್ಲಿಯೇ ಕುಸಿದು ಮೃತಪಟ್ಟಿದ್ದಾನೆ. ಶುಕ್ರವಾರ ರಾತ್ರಿ ಪ್ರದೀಪ ಜಾಟ್ ಎಂಬ ಮದುಮಗ ಜಾಟ್ ಹಾಸ್ಟೆಲಿನಲ್ಲಿ ಆಯೋಜಿಸಿದ್ದ ಮದುವೆಯ ಸ್ಥಳಕ್ಕೆ ಕುದುರೆ ಮೇಲೆ ಮೆರವಣಿಗೆಯಲ್ಲಿ ಬರುತ್ತಿರುವಾಗ ಈ ಘಟನೆ ನಡೆದಿದೆ. ಮದುವೆಯ ಸ್ಥಳಕ್ಕೆ ಕುದುರೆ ಸವಾರಿ ಮಾಡುವ ಮೊದಲು … Continued

ವೀಡಿಯೊಗಳು…| ಮದುವೆ ಮಂಟಪಕ್ಕೆ ನುಗ್ಗಿ ದಾಂಧಲೆ ಎಬ್ಬಿಸಿದ ಚಿರತೆ ; ಅರಣ್ಯ ಸಿಬ್ಬಂದಿ ಮೇಲೆ ದಾಳಿ-ಗಾಯ

ಮದುವೆ ಮನೆಗೆ ಚಿರತೆಯೊಂದು ನುಗ್ಗಿ ಆತಂಕ ಸೃಷ್ಟಿಸಿದ ಘಟನೆ ಬುಧವಾರ ಲಕ್ನೋದ ಪಾರಾ ಪ್ರದೇಶದಲ್ಲಿ ನಡೆದಿದೆ. ಲಕ್ನೋ ನಗರದ ಬುದ್ಧೇಶ್ವರ ರಿಂಗ್ ರಸ್ತೆಯ ಎಂಎಂ ಲಾನ್‌ನಲ್ಲಿ ಬುಧವಾರ ರಾತ್ರಿ 11: 40 ರ ಸುಮಾರಿಗೆ ಈ ಆಘಾತಕಾರಿ ಘಟನೆ ಸಂಭವಿಸಿದ್ದು, ಮದುವೆಗೆ ಬಂದ ನೂರಾರು ಅತಿಥಿಗಳು ಗಾಬರಿಗೊಂಡು ಪಾರಾಗಲು ಸುರಕ್ಷಿತ ಸ್ಥಳಕ್ಕೆ ಓಡಿಹೋಗಿದ್ದಾರೆ. ಚಿರತೆ ದಾಳಿಯಿಂದ … Continued

ಸರಳವಾಗಿ ನಡೆದ ಬಿಲಿಯನೇರ್‌ ಗೌತಮ ಅದಾನಿ ಪುತ್ರನ ವಿವಾಹ ; ಸಾಮಾಜಿಕ ಕಾರ್ಯಗಳಿಗೆ 10,000 ಕೋಟಿ ರೂ. ದೇಣಿಗೆ

ನವದೆಹಲಿ:ಕಳೆದ ತಿಂಗಳು ಮಹಾ ಕುಂಭಮೇಳಕ್ಕೆ ಭೇಟಿ ನೀಡಿದ ಸಂದರ್ಭದಲ್ಲಿ ಅದಾನಿ ಗ್ರೂಪ್ ಅಧ್ಯಕ್ಷ ಗೌತಮ ಅದಾನಿ ತಮ್ಮ ಮಗನ ವಿವಾಹವನ್ನು “ಸರಳ ಮತ್ತು ಸಾಂಪ್ರದಾಯಿಕ ರೀತಿಯಲ್ಲಿ” ನಡೆಸಲಾಗುವುದು ಎಂದು ಹೇಳಿದ್ದರು. ಅವರ ಮಾತಿಗೆ ಬದ್ಧರಾಗಿ, ಅವರ ಮಗ ಜೀತ್ ಅದಾನಿ ಅವರ ವಿವಾಹವನ್ನು ಬಿಲಿಯನೇರ್‌ ಉದ್ಯಮಿ ಮದುವೆಯನ್ನು ಸರಳವಾಗಿ ನಡೆಸಿದ್ದಲ್ಲದೆ, ವಿವಿಧ ಸಾಮಾಜಿಕ ಕಾರ್ಯಗಳಿಗಗಾಗಿ 10,000 … Continued

ವೀಡಿಯೊ…| ಮದುವೆಯ ಮೆರವಣಿಗೆಗೆ ತಂದಿದ್ದ ಕುದುರೆಯ ಒದೆತಕ್ಕೆ ಸ್ಥಳದಲ್ಲೇ ಮೃತಪಟ್ಟ ಮಗು…!

ಕಾನ್ಪುರ : ಉತ್ತರ ಪ್ರದೇಶದ ಕಾನ್ಪುರದಲ್ಲಿ ಮದುವೆಯ ಸಂಭ್ರಮಾಚರಣೆ ವೇಳೆ ಅಪ್ರಾಪ್ತ ಮಗುವೊಂದು ಕುದುರೆ ಒದೆತದಿಂದ ಸಾವಿಗೀಡಾದ ಘಟನೆ ನಡೆದಿದೆ ಎಂದು ವರದಿಯಾಗಿದೆ. ಈ ಆಘಾತಕಾರಿ ಘಟನೆ ಕ್ಯಾಮರಾದಲ್ಲಿ ಸೆರೆಯಾಗಿದ್ದು, ಘಟನೆಯ ವೀಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ. ಆಟವಾಡುತ್ತ ಕುದುರೆಯ ಹಿಂಬದಿಗೆ ಬಂದ ಮಗುವಿಗೆ ಕುದುರೆ ಬಲವಾಗಿ ಒದ್ದಿದೆ, ಒದ್ದ ರಭಸಕ್ಕೆ ಸ್ಥಳದಲ್ಲೇ ಮಗುವಿನ ಪ್ರಾಣ … Continued