ವೀಡಿಯೊ..| ಮದುವೆ ಸಮಾರಂಭಕ್ಕೆ ಅನಿರೀಕ್ಷಿತವಾಗಿ ಬಂದ ಬೃಹತ್‌ ಖಡ್ಗಮೃಗ ; ಜನರಿಗೆ ಅಚ್ಚರಿ-ಗಾಬರಿ…!

ನೇಪಾಳದಲ್ಲಿ ನಡೆದ ಅಚ್ಚರಿಯ ವಿದ್ಯಮಾನವೊಂದರಲ್ಲಿ ಖಡ್ಗಮೃಗವೊಂದು ಮದುವೆ ಕಾರ್ಯಕ್ರಮಕ್ಕೆ ಅನಿರೀಕ್ಷಿತ ಅತಿಥಿಯಾಗಿ ಆಗಮಿಸುವ ಮೂಲಕ ಎಲ್ಲರಿಗೂ ಅಚ್ಚರಿ ಹಾಗೂ ಗಾಬರಿ ಎರಡನ್ನೂ ಉಂಟು ಮಾಡಿದೆ. ಈ ಘಟನೆ ಯುನೆಸ್ಕೋ ವಿಶ್ವ ಪರಂಪರೆಯ ತಾಣವಾದ ಚಿಟ್ವಾನ್ ರಾಷ್ಟ್ರೀಯ ಉದ್ಯಾನವನದ ಹೊಂದಿಕೊಂಡಿರುವ ಹಳ್ಳಿಯಲ್ಲಿ ಸಂಭವಿಸಿದೆ, ಈ ವಿಶ್ವ ಪರಂಪರೆ ತಾಣವು ಶ್ರೀಮಂತ ಜೀವವೈವಿಧ್ಯಕ್ಕೆ ಹೆಸರುವಾಸಿಯಾಗಿದೆ ಮತ್ತು 600 ಕ್ಕೂ … Continued

ಮದುಮಗನನ್ನು ಮದುವೆ ಮಂಟಪದಿಂದಲೇ ಅಪಹರಿಸಿದ ನೃತ್ಯಗಾರರ ತಂಡ…!

ಮದುವೆಯೊಂದರಲ್ಲಿ ಸಾಂಪ್ರದಾಯಿಕ ಸಂಭ್ರಮಾಚರಣೆಗೆಂದು ಕರೆಸಿದ್ದ ನೃತ್ಯ ತಂಡವು ವರನನ್ನು ಮಂಟಪದಿಂದಲೇ ಅಪಹರಿಸಿದ ಘಟನೆ ಬಿಹಾರದಲ್ಲಿ ನಡೆದಿದೆ. ಈ ಘಟನೆ ಶನಿವಾರ ಬೆಳಗಿನ ಜಾವ 2 ಗಂಟೆ ಸುಮಾರಿಗೆ ಬಿಹಾರದ ಗೋಪಾಲಗಂಜ್ ಜಿಲ್ಲೆಯಲ್ಲಿ ನಡೆದಿದೆ. ಘಟನೆ ಸ್ಥಳದಲ್ಲಿದ್ದ ಜನರ ಪ್ರಕಾರ, “ಲೌಂಡಾ ನಾಚ್ ಪಾರ್ಟಿ” – ಸಾಮಾನ್ಯವಾಗಿ ಮದುವೆಗಳಿಗೆ ನೇಮಿಸಿಕೊಳ್ಳುವ ಸಾಂಪ್ರದಾಯಿಕ ನೃತ್ಯ ತಂಡವಾಗಿದ್ದು, ಈ ನೃತ್ಯ … Continued

ವೀಸಾ ಅವಧಿ ಮುಗಿದದ್ದು ಗೊತ್ತಿದ್ರೂ ಆಶ್ರಯ ; ಪಾಕ್ ಮಹಿಳೆ ಜೊತೆ ಮದುವೆಯಾಗಿದ್ದನ್ನು ಮುಚ್ಚಿಟ್ಟ ಸಿಆರ್‌ಪಿಎಫ್ ಜವಾನ ಕೆಲಸದಿಂದ ವಜಾ

ನವದೆಹಲಿ: ಪಾಕಿಸ್ತಾನಿ ಮಹಿಳೆಯೊಂದಿಗಿನ ತಾನು ಮದುವೆಯಾಗಿದ್ದನ್ನು “ಮುಚ್ಚಿಟ್ಟಿದ್ದಕ್ಕಾಗಿ” ಕೇಂದ್ರ ಮೀಸಲು ಪೊಲೀಸ್ ಪಡೆಯು ತನ್ನ ಜವಾನ ಮುನೀರ್ ಅಹ್ಮದ್ ಅವರನ್ನು ಸೇವೆಯಿಂದ ವಜಾಗೊಳಿಸಿದೆ. ಅವರ ಕೃತ್ಯವು ರಾಷ್ಟ್ರೀಯ ಭದ್ರತೆಗೆ ಹಾನಿಕಾರಕವಾಗಿದೆ ಎಂದು ಕಂಡುಬಂದಿದೆ ಎಂದು ಅಧಿಕೃತ ಮೂಲಗಳು ಶನಿವಾರ ತಿಳಿಸಿವೆ. ಈ ಜವಾನನ್ನು ಕೊನೆಯದಾಗಿ ದೇಶದ ಪ್ರಮುಖ ಆಂತರಿಕ ಭದ್ರತಾ ಪಡೆ ಪ್ಯಾರಾಮಿಲಿಟರಿ ಸಿಆರ್‌ಪಿಎಫ್‌ (CRPF)ನ … Continued

ಪಹಲ್ಗಾಮ್ ದಾಳಿ | ಪಾಕ್‌ ಹುಡುಗಿ ಜತೆ ನಡೆಯಬೇಕಿದ್ದ ವಿವಾಹಕ್ಕೆ ಭಾರತದ ವರನಿಗೆ ಗಡಿಯಲ್ಲಿ ನೋ ಎಂಟ್ರಿ ; ದಿಬ್ಬಣ ವಾಪಸ್‌..

ನವದೆಹಲಿ: ಮಂಗಳವಾರ ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್‌ನಲ್ಲಿ ನಡೆದ ಭಯೋತ್ಪಾದಕ ದಾಳಿಯಿಂದ ಭಾರತ-ಪಾಕಿಸ್ತಾನ ಸಂಬಂಧಗಳನ್ನು ಹದಗೆಟ್ಟ ನಂತರ, ಭಾರತ- ಪಾಕಿಸ್ತಾನದ ವಧು-ವರರ ನಡುವೆ ನಡೆಯಬೇಕಿದ್ದ ಮದುವೆಯೊಂದು ಸ್ಥಗಿತಗೊಂಡಿದೆ. ರಾಜಸ್ಥಾನದ ಬಾರ್ಮರ್ ಜಿಲ್ಲೆಯ ಕುಟುಂಬವೊಂದರ ವರ ಪಾಕಿಸ್ತಾನದ ಯುವತಿಯ ಜೊತೆ ಮದುವೆ ನಿಶ್ಚಯವಾಗಿತ್ತು. ಏಪ್ರಿಲ್ 30 ರಂದು ನಿಗದಿಯಾಗಿದ್ದ ವಿವಾಹದ ಕಾರ್ಯಕ್ರಮಕ್ಕೆ ದಿಬ್ಬಣದೊಂದಿಗೆ ಗುರುವಾರ ವಾಘಾ-ಅಟ್ಟಾರಿ ಗಡಿಯನ್ನು … Continued

ಎರಡನೇ ಪತಿಗೆ ಡೈವೋರ್ಸ್‌ ನೀಡಿ, ಹಿಂದೂ ಧರ್ಮಕ್ಕೆ ಮತಾಂತರಗೊಂಡು 12ನೇ ತರಗತಿ ವಿದ್ಯಾರ್ಥಿಯನ್ನು ಮದುವೆಯಾದ 3 ಮಕ್ಕಳ ತಾಯಿ…!

ಅಮ್ರೋಹಾ : 30 ವರ್ಷದ ಮಹಿಳೆಯೊಬ್ಬರು ಹಿಂದೂ ಧರ್ಮಕ್ಕೆ ಮತಾಂತರಗೊಂಡು 12 ನೇ ತರಗತಿಯ ವಿದ್ಯಾರ್ಥಿನಿಯನ್ನು ದೇವಾಲಯದ ಸಮಾರಂಭದಲ್ಲಿ ವಿವಾಹವಾದ ವಿದ್ಯಮಾನ ಉತ್ತರ ಪ್ರದೇಶದ ಅಮ್ರೋಹಾ ಜಿಲ್ಲೆಯಲ್ಲಿ ನಡೆದಿದೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ. ಹಸನ್‌ಪುರದ ವೃತ್ತ ಅಧಿಕಾರಿ ದೀಪಕುಮಾರ ಪಂತ್ ಅವರ ಪ್ರಕಾರ, ಶಿವಾನಿ ಎಂಬ ಮಹಿಳೆಯನ್ನು ಈ ಹಿಂದೆ ಶಬ್ನಮ್ ಎಂದು ಕರೆಯಲಾಗುತ್ತಿತ್ತು.ಈ … Continued

ವೀಡಿಯೊ…| ನೆನಪಿಡುವ ಪ್ರೇಮಕಥೆ ! ಒಂದೇ ಸಮಾರಂಭದಲ್ಲಿ ಇಬ್ಬರು ಯುವತಿಯರನ್ನು ಮದುವೆಯಾದ ವರ…!

ಹೈದರಾಬಾದ್‌ : ಅಪರೂಪದ ಮತ್ತು ಅಚ್ಚರಿಯ ಘಟನೆಯೊಂದರಲ್ಲಿ, ತೆಲಂಗಾಣದ ಕೊಮಾರಂ ಭೀಮ್ ಆಸಿಫಾಬಾದ್ ಜಿಲ್ಲೆಯ ವ್ಯಕ್ತಿಯೊಬ್ಬರು ಇತ್ತೀಚೆಗೆ ಇಬ್ಬರು ಮಹಿಳೆಯರನ್ನು ಒಂದೇ ಸಮಾರಂಭದಲ್ಲಿ ವಿವಾಹವಾಗಿದ್ದಾರೆ…! ಲಿಂಗಾಪುರ ಮಂಡಲದ ಗುಮ್ನೂರ್ ಗ್ರಾಮದಲ್ಲಿ ನಡೆದ ಮದುವೆಯಲ್ಲಿ ವರ ಸೂರ್ಯದೇವ ಎಂಬವರು ಲಾಲದೇವಿ ಮತ್ತು ಜಲ್ಕರಿ ದೇವಿ ಎಂಬ ಇಬ್ಬರು ಯುವತಿಯರನ್ನು ಇಬ್ಬರನ್ನು ಒಂದೇ ಸಮಾರಂಭದಲ್ಲಿ ಮದುವೆಯಾಗಿದ್ದಾರೆ. ಸೂರ್ಯದೇವ ಅವರು … Continued

ಮದುವೆಯ ಮೊದಲ ರಾತ್ರಿಯೇ ಶವವಾಗಿ ಪತ್ತೆಯಾದ ನವದಂಪತಿ…!

ಅಯೋಧ್ಯೆ : ಉತ್ತರ ಪ್ರದೇಶದ ಅಯೋಧ್ಯೆಯಲ್ಲಿ ಆಘಾತಕಾರಿ ಘಟನೆಯೊಂದು ಬೆಳಕಿಗೆ ಬಂದಿದ್ದು, ಮದುವೆಯ ಮೊದಲ ರಾತ್ರಿಯಂದು ನವದಂಪತಿ ತಮ್ಮ ಕೋಣೆಯಲ್ಲಿ ಶವವಾಗಿ ಪತ್ತೆಯಾಗಿದ್ದಾರೆ. ಈ ಆಘಾತಕಾರಿ ಘಟನೆಯಿಂದಾಗಿ ಮದುವೆಯ ಸಂಭ್ರಮವು ಶೋಕಾಚರಣೆಯಾಗಿ ಮಾರ್ಪಟ್ಟಿತು. ಅಯೋಧ್ಯೆ ಕ್ಯಾಂಟ್ ಪೊಲೀಸ್ ಠಾಣೆ ವ್ಯಾಪ್ತಿಯ ಸಾದತ್ ಗಂಜ್ ಪ್ರದೇಶದ ಪ್ರದೀಪ ಎಂಬವರು ಶನಿವಾರ ಶಿವಾನಿ ಅವರನ್ನು ವಿವಾಹವಾಗಿದ್ದರು ಎಂದು ಪೊಲೀಸರು … Continued

ಬೆಂಗಳೂರು | ದಾಂಪತ್ಯ ಜೀವನಕ್ಕೆ ಕಾಲಿಟ್ಟ ಬಿಜೆಪಿ ಸಂಸದ ತೇಜಸ್ವಿ ಸೂರ್ಯ

ಬೆಂಗಳೂರು: ಬೆಂಗಳೂರಿನ ಯುವ ಬಿಜೆಪಿ ಸಂಸದ ತೇಜಸ್ವಿ ಸೂರ್ಯ ಭರತನಾಟ್ಯ ಹಾಗೂ ಸಂಗೀತ ಕಲಾವಿದೆ ಶಿವಶ್ರೀ ಸ್ಕಂದಪ್ರಸಾದ ಅವರ ಜೊತೆ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ. ಕನಕಪುರ ರಸ್ತೆಯ ರೆಸಾರ್ಟ್ ನಲ್ಲಿ ಮದುವೆ ನಡೆದಿದ್ದು, ಸಂಸದ ತೇಜಸ್ವಿ ಸೂರ್ಯ, ಚೆನ್ನೈ ಮೂಲದ ಗಾಯಕಿ ಶಿವಶ್ರೀ ಸ್ಕಂದಪ್ರಸಾದ ಅವರು ಗುರುವಾರ ಬೆಳಿಗ್ಗೆ ಶುಭ ಮೂಹರ್ತದಲ್ಲಿ ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದಾರೆ. … Continued

ಮದುವೆ ಆಮಂತ್ರಣ ಕಾರ್ಡ್‌ ನಲ್ಲಿ ವಧು-ವರರ ಜನ್ಮ ದಿನಾಂಕ ಮುದ್ರಿಸುವುದನ್ನು ಕಡ್ಡಾಯ ಮಾಡಿದ ರಾಜಸ್ಥಾನ ಸರ್ಕಾರ…! ಯಾಕೆಂದರೆ…

ಜೈಪುರ: ಬಾಲ್ಯವಿವಾಹಗಳನ್ನು ತಡೆಗಟ್ಟುವ ಸಲುವಾಗಿ ರಾಜಸ್ಥಾನ ಸರ್ಕಾರವು ವಧು-ವರರ ವಯಸ್ಸಿನ ಪುರಾವೆಗಳನ್ನು ಸಂಬಂಧಪಟ್ಟ ಕುಟುಂಬಗಳಿಂದ ಪಡೆಯುವಂತೆ ಮತ್ತು ಆಮಂತ್ರಣ ಪತ್ರಿಕೆಯಲ್ಲಿ ವಧು-ವರ ಇಬ್ಬರ ಜನ್ಮದಿನಾಂಕವನ್ನು ಮುದ್ರಿಸುವಂತೆ ಮುದ್ರಣಾಲಯಗಳಿಗೆ ಸೂಚಿಸಿದೆ. ಅಲ್ಲದೆ, ಬಾಲ್ಯ ವಿವಾಹಗಳು ಮತ್ತು ಬಾಲ್ಯ ವಿವಾಹ ನಿಷೇಧ ಕಾಯ್ದೆಯ ಪ್ರಚಲಿತ ಕಾನೂನಿನ ವಿರುದ್ಧ ಜಾಗೃತಿ ಮೂಡಿಸಲು ಹಲ್ವಾಯಿಗಳು, ಪಂಡಿತರು, ಟೆಂಟ್ ಹೌಸ್‌ಗಳು, ಬ್ಯಾಂಡ್ ಟ್ರೂಪ್‌ಗಳು, … Continued

ಕುಡಿದ ಅಮಲಿನಲ್ಲಿ ವಧುವಿನ ಬದಲು ಗೆಳೆಯನ ಕೊರಳಿಗೆ ಮಾಲೆ ಹಾಕಿದ ವರ…! ಕೋಪದಿಂದ ಮದುವೆ ರದ್ದುಗೊಳಿಸಿದ ವಧು…!!

ಬರೇಲಿ : ಮದ್ಯದ ಅಮಲಿನಲ್ಲಿದ್ದ ವರನೊಬ್ಬ ಮದುವೆಯ ಮಾಲೆಯನ್ನು ವಧುವಿನ ಕೊರಳಿಗೆ ಹಾಕುವ ಬದಲು ತನ್ನ ಸ್ನೇಹಿತನ ಕೊರಳಿಗೆ ಹಾಕಿರುವ ಆಘಾತಕಾರಿ ಘಟನೆ ನಡೆದಿದೆ. ಉತ್ತರ ಪ್ರದೇಶದ ಬರೇಲಿಯಲ್ಲಿ ನಡೆದ ವಿವಾಹ ಕಾರ್ಯಕ್ರಮದಲ್ಲಿ ಈ ವಿಲಕ್ಷಣ ಘಟನೆ ನಡೆದಿರುವುದು ಬೆಳಕಿಗೆ ಬಂದಿದೆ. ವರ ಕುಡಿದಿದ್ದನ್ನು ಕಂಡು ಕೋಪಗೊಂಡ ವಧು, ಆತನನ್ನು ಮದುವೆಯಾಗಲು ನಿರಾಕರಿಸಿ ಮದುವೆಯನ್ನು ರದ್ದುಗೊಳಿಸಿದ್ದಾಳೆ. … Continued