ಬಸ್‌ನಲ್ಲಿ ಪ್ರಯಾಣಿಸುವರು ಮಾಸ್ಕ್‌ ಧರಿಸಬೇಕು : ಸಾರಿಗೆ ಸಚಿವ ರಾಮಲಿಂಗಾರೆಡ್ಡಿ

ಬೆಂಗಳೂರು: ಕೇರಳದಲ್ಲಿ ಕೋವಿಡ್ ಉಪ ತಳಿ ಜೆಎನ್‌ 1 ಪತ್ತೆಯಾದ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಆರೋಗ್ಯ ಇಲಾಖೆ ಮಾರ್ಗಸೂಚಿಗಳನ್ನು ಹೊರಡಿಸಿದೆ. ಸಾಮಾನ್ಯವಾಗಿ ಹೆಚ್ಚು ಜನ ಸೇರುವಲ್ಲಿ ವೈರಾಣುಗಳು ಬಹುಬೇಗ ಹರಡುತ್ತವೆ. ಹೀಗಾಗಿ ಬಸ್‌ಗಳಲ್ಲಿ ಸೋಂಕು ಹರಡದಂತೆ ತಡೆಯುವ ನಿಟ್ಟಿನಲ್ಲಿ ಬಸ್‌ ಪ್ರಯಾಣಿಕರೆಲ್ಲರೂ ಮಾಸ್ಕ್‌ ಧರಿಸಿ ಸಂಚಾರ ಮಾಡಬೇಕು ಎಂದು ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ಸೂಚನೆ ನೀಡಿದ್ದಾರೆ. … Continued