ಹುಬ್ಬಳ್ಳಿ- ಧಾರವಾಡ ಮಹಾನಗರ ಪಾಲಿಕೆ ; ನೂತನ ಮೇಯರ್‌ ಆಗಿ ದುರ್ಗಮ್ಮ ಬಿಜವಾಡ, ಉಪಮೇಯರ್ ಆಗಿ ರತ್ನಾಭಾಯಿ ಆಯ್ಕೆ

ಹುಬ್ಬಳ್ಳಿ : ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆಯ ಮೇಯರ್‌ ಆಗಿ ಬಿಜೆಪಿಯ ದುರ್ಗಮ್ಮ ಬಿಜವಾಡ ಹಾಗೂ ಉಪಮೇಯರ್ ಆಗಿ  ರತ್ನಾಬಾಯಿ ನಾಝರೆ ಆಯ್ಕೆಯಾಗಿದ್ದಾರೆ. ಶನಿವಾರ ಪಾಲಿಕೆಯ ಸಭಾಭವನದಲ್ಲಿ ನಡೆದ ಚುನಾವಣೆ ಪ್ರಕ್ರಿಯೆಯಲ್ಲಿ ಕೈ ಎತ್ತುವ ಮೂಲಕ ಮತದಾನ ನಡೆದು ಇಬ್ಬರೂ ಆಯ್ಕೆಯಾದರು.  ಬಿಜೆಪಿ ಅಭ್ಯರ್ಥಿಗಳ ಪರವಾಗಿ ಸಂಸದರಾದ ಪ್ರಲ್ಹಾದ ಜೋಶಿ, ಎಂ. ನಾಗರಾಜ್, ಶಾಸಕರಾದ ಅರವಿಂದ್ … Continued

ವಿಡಿಯೋ | ಮುಂಬೈ ಮಳೆ : ಮೇಯರ್ ಕಣ್ಣೆದುರೇ ಮ್ಯಾನ್‌ಹೋಲ್‌ಗೆ ಬಿದ್ದ ವ್ಯಕ್ತಿ ; ಅಧಿಕಾರಿಗಳಿಗೆ ಸಸ್ಪೆಂಡ್‌ ವಾರ್ನಿಂಗ್‌ ನೀಡಿದ ತಾವ್ಡೆ

ಮುಂಬೈ: ಮುಂಬೈನ ದಾದರ್ ಮತ್ತು ಇತರ ತಗ್ಗು ಪ್ರದೇಶಗಳಲ್ಲಿ ಮುಂಗಾರು ಮಳೆಯ ಅಬ್ಬರ ಜೋರಾಗಿದ್ದು, ಬುಧವಾರ ಬೆಳಿಗ್ಗೆ ಮಳೆಯ ಪರಿಸ್ಥಿತಿಯ ಪರಿಶೀಲನೆಗೆ ನಗರ ಸಂಚಾರ ನಡೆಸಿದ ಮುಂಬೈ ಮೇಯರ್ ರಿತು ತಾವ್ಡೆ ಅವರ ಕಣ್ಣೆದುರೇ ಪೌರಕಾರ್ಮಿಕನೊಬ್ಬ ತೆರೆದ ಮ್ಯಾನ್‌ಹೋಲ್‌ಗೆ (ಒಳಚರಂಡಿ) ಬಿದ್ದ ಆಘಾತಕಾರಿ ಘಟನೆ ನಡೆದಿದೆ. ಇದರಿಂದ ತೀವ್ರ ಆಕ್ರೋಶಗೊಂಡ ಮೇಯರ್, ಸ್ಥಳದಲ್ಲಿದ್ದ ಹಿರಿಯ ಅಧಿಕಾರಿಗಳನ್ನು … Continued

ಮುಂಬೈ ಮೇಯರ್ ಆಗಿ ರಿತು ತಾವ್ಡೆ ಅವಿರೋಧವಾಗಿ ಆಯ್ಕೆ

ಮುಂಬೈ: ದೇಶದ ಅತ್ಯಂತ ಶ್ರೀಮಂತ ಮಹಾನಗರ ಪಾಲಿಕೆಯಾದ ಬೃಹನ್‌ ಮುಂಬೈ ಮಹಾನಗರ ಪಾಲಿಕೆ (BMC)ಯಲ್ಲಿ ಕಳೆದ ನಾಲ್ಕು ವರ್ಷಗಳಿಂದ ನಡೆಯುತ್ತಿದ್ದ ಆಡಳಿತಾಧಿಕಾರಿಗಳ ಆಡಳಿತಕ್ಕೆ ತೆರೆ ಬಿದ್ದಿದೆ. ಬಿಜೆಪಿ ಪಾಲಿಕೆ ಸದಸ್ಯರಾದ ರಿತು ತಾವ್ಡೆ ಅವರು ಮುಂಬೈನ ನೂತನ ಮೇಯರ್ ಆಗಿ ಮತ್ತು ಶಿವಸೇನೆಯ (ಶಿಂದೆ ಬಣ) ಸಂಜಯ ಘಾಡಿ ಅವರು ಉಪಮೇಯರ್ ಆಗಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. … Continued

ಹೆತ್ತ ತಾಯಿಯ ಹುಡುಕಾಟಕ್ಕಾಗಿ 40 ವರ್ಷಗಳ ನಂತರ ಭಾರತಕ್ಕೆ ಬಂದ ನೆದರ್ಲ್ಯಾಂಡ್ಸ್ ನಗರದ ಮೇಯರ್…!

ನಾಗಪುರ: ಅದು 1985ರ ಫೆಬ್ರವರಿ ತಿಂಗಳು. ಮಹಾರಾಷ್ಟ್ರದ ನಾಗಪುರದ ಅಂಬಾಜರಿ ರಸ್ತೆಯಲ್ಲಿರುವ ‘ಮಾತೃ ಸೇವಾ ಸಂಘ’ದ ಮುಂದೆ 21 ವರ್ಷದ ಯುವತಿಯೊಬ್ಬಳು ತನ್ನ ಮೂರೇ ದಿನದ ಕಂದಮ್ಮನನ್ನು ಬಿಟ್ಟು ನಾಪತ್ತೆಯಾಗಿದ್ದರು. ಅವಿವಾಹಿತೆಯಾಗಿದ್ದ ಆಕೆಗೆ ಅಂದು ಅಸಹಾಯಕತೆ ಮತ್ತು ಸಾಮಾಜಿಕ ಒತ್ತಡಗಳೇ ದೊಡ್ಡದಾಗಿದ್ದರಿಂದ ಆಕೆ ಹೀಗೆ ಮಾಡಿದ್ದಿರಬಹುದು. ಇಂದು ಅದೇ ಮಗು 40 ವರ್ಷಗಳ ನಂತರ ದೂರದ … Continued

ತಿರುವನಂತಪುರಂ ಮಹಾನಗರ ಪಾಲಿಕೆ ಮೇಯರ್ ಆಗಿ ಬಿಜೆಪಿಯ ವಿ.ವಿ. ರಾಜೇಶ ಆಯ್ಕೆ ; 45 ವರ್ಷಗಳ ಎಡರಂಗದ ಆಡಳಿತಕ್ಕೆ ತೆರೆ

ತಿರುವನಂತಪುರಂ: ಕೇರಳದ ರಾಜಧಾನಿಯಲ್ಲಿ ಬಿಜೆಪಿಯ ಪ್ರಮುಖ ಮುಖಗಳಲ್ಲಿ ಒಬ್ಬರಾದ ಹಿರಿಯ ನಾಯಕ ವಿ.ವಿ. ರಾಜೇಶ ಅವರು ಶುಕ್ರವಾರ ತಿರುವನಂತಪುರಂ ಮಹಾನಗರ ಪಾಲಿಕೆಯ ನೂತನ ಮೇಯರ್ ಆಗಿ ಪ್ರಮಾಣ ವಚನ ಸ್ವೀಕರಿಸಿದರು. ಇತ್ತೀಚೆಗೆ ನಡೆದ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಬಿಜೆಪಿ ಐತಿಹಾಸಿಕ ಜಯ ಸಾಧಿಸಿತ್ತು. ಒಟ್ಟು 101 ಸ್ಥಾನಗಳ ಪೈಕಿ 50 ಸ್ಥಾನಗಳನ್ನು ಗೆಲ್ಲುವ ಮೂಲಕ ಏಕೈಕ … Continued

ವಿಜಯಪುರ ಮಹಾನಗರ ಪಾಲಿಕೆ ಇದೇ ಮೊದಲ ಬಾರಿಗೆ ಬಿಜೆಪಿ ತೆಕ್ಕೆಗೆ

ವಿಜಯಪುರ: ಗುಮ್ಮಟ ನಗರ ಎಂದೇ ಖ್ಯಾತಿ ಪಡೆದ ವಿಜಯಪುರ ಮಹಾನಗರ ಪಾಲಿಕೆ ಮೊದಲ ಬಾರಿಗೆ ಬಿಜೆಪಿ ತೆಕ್ಕೆಗೆ ಸೇರಿದೆ. ಬಿಜೆಪಿ ಸದಸ್ಯರಾದ ಎಂ.ಎಸ್. ಕರಡಿ ಮೇಯರ್ ಹಾಗೂ ಬಿಜೆಪಿ ಬೆಂಬಲಿತ ಪಕ್ಷೇತರ ಸದಸ್ಯೆ ಸುಮಿತ್ರಾ ಜಾಧವ ಉಪಮೇಯರ್ ಆಗಿ ಆಯ್ಕೆಯಾಗಿದ್ದಾರೆ. ಜನವರಿ, ಫೆಬ್ರುವರಿಯಲ್ಲಿ ನಡೆದ ವಿಜಯಪುರ ಮಹಾನಗರ ಪಾಲಿಕೆಯ 22ನೇ ಮೇಯರ್ ಹಾಗೂ ಉಪ ಮೇಯರ್ … Continued

ಬೆಳಗಾವಿ ಮಹಾನಗರ ಪಾಲಿಕೆ : ಮಂಗೇಶ ನೂತನ ಮೇಯರ್‌, ವಾಣಿ ಜೋಶಿ ಉಪಮೇಯರ್

ಬೆಳಗಾವಿ: ಬೆಳಗಾವಿ ಮಹಾನಗರ ಪಾಲಿಕೆಯ ಮೇಯರ್ ಆಗಿ ಮಂಗೇಶ ಪವಾರ್ ಮತ್ತು ಉಪಮೇಯರ್ ವಾಣಿ ಜೋಶಿ ಆಯ್ಕೆಯಾಗಿದ್ದಾರೆ. ಮಹಾಪೌರ ಸ್ಥಾನ ಸಾಮಾನ್ಯ ಹಾಗೂ ಉಪಮಹಾಪೌರ ಸ್ಥಾನ ಸಾಮಾನ್ಯ ಮಹಿಳೆಗೆ ಮೀಸಲಾಗಿತ್ತು. ಮಹಾಪೌರರಾಗಿ ಆಯ್ಕೆಯಾದ ಮಂಗೇಶ ಪವಾರ್ 41ನೇ ವಾರ್ಡಿನ ಸದಸ್ಯರು ಹಾಗೂ ಮರಾಠಿ ಭಾಷಿಕರು. ಉಪಮಹಾಪೌರರಾಗಿ ಆಯ್ಕೆಯಾದ ಕನ್ನಡ ಭಾಷಿಕ ವಾಣಿ ವಿಲಾಸ ಜೋಶಿ 43ನೇ … Continued

ಚಂಡೀಗಢ ಮೇಯರ್ ಚುನಾವಣೆ | ಬಿಜೆಪಿ ಅಭ್ಯರ್ಥಿಯ ಅಚ್ಚರಿಯ ಗೆಲುವು ; ಬಹುಮತ ಇದ್ರೂ ಮಂಡಿಯೂರಿದ ಎಎಪಿ-ಕಾಂಗ್ರೆಸ್‌ ಮೈತ್ರಿಕೂಟ…!

ಚಂಡೀಗಢ: ಎಎಪಿ-ಕಾಂಗ್ರೆಸ್ ಮೈತ್ರಿಕೂಟಕ್ಕೆ ಬಹುಮತವಿದ್ದರೂ ಚಂಡೀಗಢದ ಮೇಯರ್ ಚುನಾವಣೆಯಲ್ಲಿ ಬಿಜೆಪಿ ಅಚ್ಚರಿಯ ಗೆಲುವು ಸಾಧಿಸಿದೆ. ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಹರ್‌ಪ್ರೀತ್ ಕೌರ್ ಬಬ್ಲಾ ಅವರು ಎಎಪಿಯ ಪ್ರೇಮ್ ಲತಾ ವಿರುದ್ಧ 19 -17 ಮತಗಳಿಂದ ಜಯಗಳಿಸಿದ್ದಾರೆ. ಚಂಡೀಗಢದ ಮೇಯರ್ ಚುನಾವಣೆಯಲ್ಲಿ ಬಿಜೆಪಿ ಮತ್ತು ಎಎಪಿ-ಕಾಂಗ್ರೆಸ್ ಮೈತ್ರಿಕೂಟದ ನಡುವೆ ಪೈಪೋಟಿ ಏರ್ಪಟ್ಟಿತ್ತು. ಚಂಡೀಗಢ ಮುನ್ಸಿಪಲ್ ಕಾರ್ಪೊರೇಷನ್‌ನ ಅಸೆಂಬ್ಲಿ … Continued

ಸುಪ್ರೀಂ ಕೋರ್ಟ್ ವಿಚಾರಣೆಗೂ ಮುನ್ನ ಚಂಡೀಗಢ ಮೇಯರ್ ಸ್ಥಾನಕ್ಕೆ ರಾಜೀನಾಮೆ ನೀಡಿದ ಬಿಜೆಪಿಯ ಮನೋಜ ಸೋಂಕರ್

ಚಂಡೀಗಢ : ಮತ ಎಣಿಕೆ ಪ್ರಕ್ರಿಯೆಯಲ್ಲಿನ ಅಕ್ರಮಗಳ ಕುರಿತು ಸುಪ್ರೀಂ ಕೋರ್ಟ್ ನಿಗದಿತ ವಿಚಾರಣೆ ನಡೆಸಲಿರುವ ಒಂದು ದಿನ ಮೊದಲು ಭಾರತೀಯ ಜನತಾ ಪಕ್ಷದ (ಬಿಜೆಪಿ) ನಾಯಕ ಮನೋಜ ಸೋಂಕರ್ ಅವರು ಭಾನುವಾರ ಚಂಡೀಗಢ ಮೇಯರ್ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ ಎಂದು ವರದಿಯಾಗಿದೆ. ಜನವರಿ 30 ರಂದು ನಡೆದ ಚಂಡೀಗಢ ಮೇಯರ್ ಚುನಾವಣೆಯಲ್ಲಿ ಬಿಜೆಪಿ ಅಂಚೆ … Continued

ಬೆಳಗಾವಿ ಪಾಲಿಕೆ ಮೇಯರ್‌, ಉಪಪೇಯರ್‌ ಸ್ಥಾನಕ್ಕೆ ಚುನಾವಣೆ : ಎರಡರಲ್ಲೂ ಬಿಜೆಪಿ ಗೆಲುವು

ಬೆಳಗಾವಿ: ಕುತೂಹಲ ಕೆರಳಿಸಿದ್ದ ಬೆಳಗಾವಿ ಮಹಾನಗರ ಪಾಲಿಕೆ ಮೇಯರ್‌ ಹಾಗೂ ಉಪ ಮೇಯರ್‌ ಚುನಾವಣೆಯಲ್ಲಿ ಬಿಜೆಪಿಯ ಸವಿತಾ ಕಾಂಬಳೆ ಮೇಯರ್ ಆಗಿ ಮತ್ತು ಆನಂದ ಚವ್ಹಾಣ ಉಪಮೇಯರ್ ಆಗಿ ಆಯ್ಕೆಯಾಗಿದ್ದಾರೆ. ಆ ಮೂಲಕ ಎರಡೂ ಸ್ಥಾನಗಳಲ್ಲಿಯೂ ಬಿಜೆಪಿ ಜಯಗಳಿಸಿದೆ. ಐದು ವರ್ಷದ ಬಳಿಕ ಪಾಲಿಕೆಯಲ್ಲಿ ಕನ್ನಡ ಭಾಷಿಕ ಸದಸ್ಯೆ ಮೇಯರ್ ಆಗಿ ಆಯ್ಕೆಯಾಗಿರುವುದು ಆಗಿರುವುದು ವಿಶೇಷವಾಗಿದೆ. … Continued