ದತ್ತಪೀಠದ ಹೋಮ ನಡೆಯುವ ಪವಿತ್ರ ಜಾಗದಲ್ಲಿ ಮಾಂಸಾಹಾರ ಮಾಡಿದ ಆರೋಪ: ವ್ಯಾಪಕ ಆಕ್ರೋಶ, ತಪ್ಪಿತಸ್ಥರ ಮೇಲೆ ಕ್ರಮಕ್ಕೆ ಆಗ್ರಹ

ಚಿಕ್ಕಮಗಳೂರು: ಬಾಬಾ ಬುಡನ್‌ಗಿರಿಯಲ್ಲಿರುವ ವಿವಾದಿತ ದತ್ತಪೀಠ ಪ್ರದೇಶ ಮತ್ತೆ ಸುದ್ದಿಯಾಗಿದೆ. ದತ್ತಪೀಠದ ಹೋಮ-ಹವನ ನಡೆಯುವ ಪವಿತ್ರ ಜಾಗದಲ್ಲಿ ಮಾಂಸದೂಟ ಮಾಡಲಾಗಿದೆ ಎಂಬ ಆರೋಪ ಕೇಳಿ ಬಂದಿದೆ. ವಿವಾದಿತ ಜಾಗದಲ್ಲಿ ಕೋರ್ಟ್ ಆದೇಶ ಉಲ್ಲಂಘಿಸಿದ್ದು, ಹೋಮ-ಹವನ ನಡೆಯುವ ತಾತ್ಕಾಲಿಕ ಶೆಡ್‌ನಲ್ಲಿ ಮಾಂಸದೂಟ ಮಾಡಲಾಗಿದೆ ಎಂಬ ಮಾತು ಕೇಳಿ ಬಂದಿದೆ. ವಿವಾದಿತ ಗೋರಿ ಬಳಿ ಕಿಡಿಗೇಡಿಗಳು ಮಾಂಸದೂಟ ಮಾಡಿದ್ದಾರೆ … Continued